ಶಿವರಾಮ ಕಾರಂತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೧ ನೇ ಸಾಲು:
{{ವ್ಯಕ್ತಿ}} {{ಲೇಖಕ}}
* ಬದುಕಿನಲ್ಲಿ ಪರಮಾವಧಿ ತೃಪ್ತಿ ನೀಡುವುದು ತಾನು ಸರಿಯಾಗಿ ನಡೆದುಕೊಂಡಿದ್ದೇನೆ ಎಂಬ ಆತ್ಮವಿಶ್ವಾಸ
*ಸಾಹಿತಿಗಳಿಗೆ ಸಮಾಜದಲ್ಲಿ ಬೇರೇ ಪಾತ್ರವೇನೂ ಇಲ್ಲ. ಸಾಹಿತಿ ಲೋಕೋದ್ಧಾರಕ ಎಂಬ ಭಾವನೆ ಏನೂ ಬೇಡ. ಆತನೂ ನಿಮ್ಮ ಹಾಗೆ ಮನುಷ್ಯ. ಬದುಕಿನ ಬಗ್ಗೆ ತನ್ನ ಅನುಭವವನ್ನು ಮಾತ್ರ ಹೇಳುತ್ತಾನೆ. ಪರಿಹಾರ ಸೂಚಿಸುವುದಲ್ಲ. ಆತ ಬರೆದ ಮಾತ್ರಕ್ಕೆ ಮಹಾನುಭಾವ ಆಗೋಲ್ಲ. ಬರೆಯದವರೂ ದೊಡ್ಡ ಕೆಲಸಗಳನ್ನು ಮಾಡಿದ್ದಾರೆ.
*ಮರ ತಾನಾಗಿ ಬೆಳೆಯುತ್ತದೆ. ಆ ರೀತಿ ಮನುಷ್ಯ ಬೆಳೆಯಲಾರ. ನಮ್ಮ ಬದುಕು ಆರಂಭವಾಗುವುದಕ್ಕೆ ಸಾವಿರಾರು ವರ್ಷಗಳ ಮೊದಲೇ ಜೀವರಾಶಿ ಇಲ್ಲಿತ್ತು ಎಂಬುದನ್ನು ತಿಳಿದರೆ ಸಾಕು.
*ನಾನು ದೇವರನ್ನು ನಂಬುವುದಿಲ್ಲ. ಏಕೆಂದರೆ ನಾನು ನೋಡಿಲ್ಲ. ನನಗೆ ಯಾವುದು ಗೊತ್ತಿಲ್ಲವೋ ಅದನ್ನು ನಂಬುವುದಿಲ್ಲ. ರಾಮಕೃಷ್ಣ ಪರಮಹಂಸರು ನಂಬಿದ್ದರು. ಅದನ್ನು ತಪಸ್ಸಿನಿಂದ ಕಂಡುಕೊಂಡರು. ನನಗೆ ರಾಮ ಎಂದರೆ ರಾಜಾ ರವಿವರ್ಮ ಅವರ ಚಿತ್ರ. ಕೃಷ್ಣ ಎಂದರೆ ಗುಬ್ಬಿ ವೀರಣ್ಣನವರ ಕೃಷ್ಣಲೀಲಾ ನೆನಪಿಗೆ ಬರುತ್ತದೆ. ಒಳ್ಳೆಯ ಕೆಲಸ ಮಾಡಿದರೆ ಒಳ್ಳೆಯದಾಗುತ್ತದೆ ಎಂದು ನಾವು ನಂಬಿ ಬಂದಿದ್ದೇವೆ. ಆದರೆ, ಆ ರೀತಿ ಆಗಿಲ್ಲ. ನನಗೆ ಅನುಕೂಲವಾದಾಗ ಮಾತ್ರ ದೇವರನ್ನು ನಂಬುತ್ತೇನೆ ಎಂಬುದು ಸರಿಯಲ್ಲ.
|