ಗಾದೆಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
removed junk text
No edit summary
೧ ನೇ ಸಾಲು:
'''ಗಾದೆಗಳು''' - ಗಾದೆಗಳಿಗೆ ಕರ್ತೃಗಳಿಲ್ಲ. ಬಾಯಿಂದ ಬಾಯಿಗೆ ಹರಡಿದ ಸವಿ ಮಾತುಗಳು ಗಾದೆಗಳಾಗಿ ಹೊರಹೊಮ್ಮಿದವೆಂದು ಹೇಳುತ್ತಾರೆ.
 
==ವಿಷಯ ಪೋಣಿಕೆ==
__NOTOC__
[[##ಗಾದೆಗಳನ್ನು ಇಲ್ಲಿ ಪಟ್ಟಿ ಮಾಡಿರಿ|ಗಾದೆಗಳನ್ನು ಇಲ್ಲಿ ಪಟ್ಟಿ ಮಾಡಿರಿ]] <br />
<br />
[[#ಇ| ಇ ]] [[#ಎ| ಎ ]] [[#ಅ| ಅ ]] [[#ಒ| ಒ ]] [[#ಉ| ಉ ]] <br />
[[#ಕ| ಕ ]] [[#ಚ| ಚ ]] [[#ಟ| ಟ ]] [[#ತ| ತ ]] [[#ಪ| ಪ ]] <br />
[[#ಗ| ಗ ]] [[#ಜ| ಜ ]] [[#ಡ| ಡ ]] [[#ದ| ದ ]] [[#ಬ| ಬ ]] <br />
[[#ಯ| ಯ ]] [[#ರ| ರ ]] [[#ಲ| ಲ ]] [[#ವ| ವ ]] <br />
[[#ಸ| ಸ ]] [[#ಶ| ಶ ]] <br />
[[#ಹ| ಹ ]] [[#ಳ| ಳ ]] <br />
[[#ನ| ನ ]] [[#ಮ| ಮ ]] <br />
<br />
[[#ಗಾದೆಗಳ ಬಗ್ಗೆ ಇನ್ನೂ ಕೆಲವು ಪುಟಗಳು|ಗಾದೆಗಳ ಬಗ್ಗೆ ಇನ್ನೊಂದಿಷ್ಟು ಕೊಂಡಿಗಳು]] <br />
 
==ಗಾದೆಗಳನ್ನು ಇಲ್ಲಿ ಪಟ್ಟಿ ಮಾಡಿರಿ==
<poem>
ಸನ್ಯಾಸಿಗೆ ಯಾತರ ಕಳವಳ ಅಂದ್ರೆ ಅನ್ನದ್ದೊಂದೇ ಕಳವಳ.
ಸಿರಿ ಸೋಂಕಿದವರ ಪರಿ ಬೇರೆ
ಸೊಸೆಗೆ ಮನೆವಾಸ, ಅತ್ತೆಗೆ ಪರವಾಸ
ಸುಖೀವಂತ್ಗೆ ದುಕ್ಕ ಹೇಳುವತ್ಗೆ ಅಳೂದು ಬುಟ್ಬುಟ್ಟು ನನ್ನ ಕೂಡ್ಕೊ ಅಂದನಂತೆ
ಸ್ವಧರ್ಮ ತಪ್ಪುದ್ರೂ ಅಧರ್ಮ ಮಾಡಬಾರ್ದು
ಸುಳ್ಳು ದೇವರಿಗೆ ಕಳ್ಳ ಪೂಜಾರಿ.
ಸ್ವರ್ಗವೂ ತಪ್ಪಿತು ದುರ್ಗವೂ ತಪ್ಪಿತು
ಕುಂಬಾರನ ಮಗಳು ಲಾಭ ಬಂದ ಹೊರತು ಮಡಿಕೆ ಒಡೆಯುವುದಿಲ್ಲ.
ಕಾಗೆಗೆ ಯಜಮಾನನ ಸ್ಥಾನ ಕೊಟ್ಟರೆ ಮನೆ ತುಂಬಾ ಪಿಷ್ಟ.
ಇತರರ ಕಣ್ಣಿನ ಕಸ ಕಾಣುವುದು, ತನ್ನ ಕಣ್ಣಿನ ಕಸ ಕಾಣುವುದಿಲ್ಲ.
ತನ್ನ ಮೊಸರನ್ನು ಯಾರೂ ಹುಳಿ ಅನ್ನುವುದಿಲ್ಲ.
ನಾನು ಅಗೆಯುವಲ್ಲಿ ಕಲ್ಲು, ಅಜ್ಜ ಅಗೆಯುವಲ್ಲಿ ಮಣ್ಣು.
ದಡ್ಡ ಮನುಷ್ಯ ನೆಲಕ್ಕೆ ಭಾರ, ಅನ್ನಕ್ಕೆ ಖಾರ.
ದಡ್ಡನಿಗೆ ಹಗಲು ಕಳೆಯುವುದಿಲ್ಲ, ಒಳ್ಳೆಯವನಿಗೆ ರಾತ್ರಿ ಸಾಲುವುದಿಲ್ಲ.
ಹುಲಿಯ ಬಣ್ಣವನ್ನು ಮೆಚ್ಚಿ, ನರಿ ತನ್ನ ಕೂದಲನ್ನು ಭಸ್ಮ ಮಾಡಿಕೊಂಡಂತೆ.
ಬಾಯಲೆಲ್ಲಾ ವೇದಾಂತ, ಮಾಡುವುದೆಲ್ಲಾ ರಾದ್ಧಾಂತ.
ತಿನ್ನಲು, ಉಣ್ಣಲು ಇದ್ದರೆ ಯಾವತ್ತೂ ನೆಂಟರು.
ಶರೀರಕ್ಕೆ ಸುಖ, ಹೊಟ್ಟೆಗೆ ದುಃಖ.
ನೂರಾರು ರೋಗಿಗಳನ್ನು ಕೊಂದು ಒಬ್ಬ ವೈದ್ಯ ಆದಂತೆ !
ವಿವಿಧ ರೋಗಗಳಿಗೆ ಮದ್ದಿವೆ, ಹೊಟ್ಟೆ ಉರಿಗೆ ಮದ್ದಿಲ್ಲ.
ಅಡಿಕೆಕಾಯಿಯನ್ನು ಚೀಲದೊಳಗೆ ಹಾಕಬಹುದು, ಮರ ಆದ ನಂತರ ಹಾಕಬಹುದೇ?
ಲಾಭ ನೋಡಿ ಬಾಳೆ ಹಣ್ಣು ತಿಂದಂತೆ.
ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು.
ಕೋತಿ ಮೊಸರನ್ನ ತಿಂದು,ಮೇಕೆ ಬಾಯಿಗೆ ಒರೆಸಿದಂತೆ
ಹೆಣ್ಣು ತಿರುಗಿ ಕೆಟ್ಟಳು, ಗಂಡು ಕೂತು ಕೆಟ್ಟನು.
ಹತ್ತು ಮಕ್ಕಳ ತಾಯಿ ದಾರಿಯಲ್ಲಿ ಸಿಕ್ಕಿದ್ದನ್ನು ತಿಂದಂತೆ.
ತಾಯಿಯನ್ನು ಹೊಡೆಯಬಾರದು, ಗುಬ್ಬಿಯ ಗೂಡನ್ನು ತೆಗೆಯಬಾರದು.
ನಾಯಿಯು ನಮ್ಮನ್ನು ಕಚ್ಚಿದರೆ ನಾಯಿಯನ್ನು ಕಚ್ಚಲು ನಮ್ಮಿಂದ ಆಗುವುದೇ?
ಬೆಲ್ಲ ಇದ್ದಲ್ಲಿ ನೊಣ ತಿರುಗಾಡಿದಂತೆ.
ಹುಣಸೆ ಹುಳಿಯೆಂದು ಅಂಬಡೆ ತಿಂದ ಹಾಗೆ.
ಮೃತ್ಯು ಬಂದ ಮೇಲೆ ವೈದ್ಯ ಬಂದ.
ಶಸ್ತ್ರದಿಂದಾದ ಗಾಯ ಮಾಯುತ್ತದೆ, ನಾಲಿಗೆಯಿಂದಾದ ಗಾಯ ಮಾಯುವುದಿಲ್ಲ.
ಚರ್ಮ ಹೋದರೂ ಪರವಾಗಿಲ್ಲ, ಕಾಸು ಹೋಗಬಾರದು ಎಂದಂತೆ.
ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಹೇಳಿದ ಹಾಗೆ.
ರಾವಣನ ಮಾತಿಗೆ ಮನಸೋತವ, ರಾಮನ ಮಾತಿಗೆ ಜಾಣನಾಗುವನೇ?
ಮನೆಯೆಂಬ ಮರ ಮುರಿಯಬಾರದು, ಮನಸ್ಸೆಂಬ ಮಾರ್ಗ ಕತ್ತರಿಸಬಾರದು.
ದುಷ್ಟರ ಸಂಗದಿ ನೆರಳು ಕೊಯ್ಯದೆ ಬಿಡದು ಕೊರಳು.
ನೀನಾಗದೆ ರಣಹೇಡಿ, ಕೀರ್ತಿ ಪಡೆ ಪ್ರಾಣ ನೀಡಿ.
ನಿನ್ನಲ್ಲಿ ನೀ ಹುಡುಕು, ಅರಿಷಡ್ವರ್ಗಗಳ ಹೊರ ಹಾಕು.
ಸಜ್ಜನರ ಮಾತು ಸಿಹಿ, ದುರ್ಜನರ ತುತ್ತು ಕಹಿ.
ಬುದ್ಧಿ ಇದ್ದವನಲ್ಲಿ ಶ್ರದ್ಧೆ, ನಿದ್ದೆ ಬಾರದವನಲ್ಲಿ ವಿದ್ಯೆ.
ಉಗಮವಾಗದಿರಲಿ ಹಿಂಸೆ, ಹೆಚ್ಚಿಗೆಯಾಗದಿರಲಿ ಆಸೆ.
ನಾಳೆ ಎಂದವನಿಗೆ ಹಾಳು, ಇಂದೇ ಎಂದವನಿಗೆ ಬೀಳಾಗದು ಬಾಳು.
ಆಳಾಗದವ ಅರಸನಲ್ಲ, ಹಟ ಹಿಡಿದವ ಸಾಮ್ರಾಟನಲ್ಲ.
ಉಂಡಿದ್ದು ಹೊಟ್ಟೆಗಾಗಿ, ಮಾಡಿದ್ದು ಬಟ್ಟೆಗಾಗಿ.
ವಿಶ್ವಾಸಿ ನೀನಾಗು, ಘಾತುಕಕ್ಕೆ ಬಗ್ಗದೆ ಮುನ್ನುಗ್ಗು.
ಹೆಂಡತಿಯ ಮಾತು ಆಗದಿರಲಿ ಕೊಯ್ದುಕೊಳ್ಳುವಂತೆ ಕತ್ತು.
ಕಣ್ಣಿಗೆ ಕಂಡದ್ದೆಲ್ಲಾ ನುಣ್ಣಗಿರುವುದಿಲ್ಲ.
ನಿನ್ನದಲ್ಲ ಸರ್ವ ಆಸ್ತಿ, ಒಳ್ಳೆಯದಲ್ಲ ಗರ್ವ ಜಾಸ್ತಿ.
ಮನಸ್ಸು ಇಲ್ಲದಿದ್ದರೆ ಗಟ್ಟಿ, ಎಲ್ಲವೂ ಮೂರಾಬಟ್ಟಿ.
ಮಾಡಿ ಉಣ್ಣು ಬೇಡಿದಷ್ಟು, ತಗಾದೆ ಮಾಡದೇ ಉಣ್ಣು ನೀಡಿದಷ್ಟು.
ಒಣ ಮಾತು ಒಣಗಿದ ಹುಲ್ಲು, ಒಳ್ಳೆಯ ಮಾತು ಬೆಳ್ಳಗಿನ ಹಾಲು.
ತತ್ವದಲ್ಲಿ ಸತ್ವ ಹುಡುಕು, ವ್ಯಥೆಯಲ್ಲಿ ಕಥೆ ಹುಡುಕು.
ಇಲಿ ಸಿಕ್ಕರೆ ಬೆಕ್ಕು ಆಗುವುದು ಹುಲಿ.
ಕಾಗೆಯ ಕೈಯಲ್ಲಿ ಕೊಟ್ಟರೆ ಕಾರಭಾರ, ಅದು ಮಾಡುವುದೇ ಉಪಕಾರ?
ಹೋಗುವುದು ಮೂಡಿದ ಹೊತ್ತು, ಹೋಗೋದಿಲ್ಲ ಆಡಿದ ಮಾತು.
ದೈವ ಕಾಡುವುದು ವಿಧಿಗಾಗಿ, ನೀರು ಸಮುದ್ರ ಸೇರುವುದು ನದಿಗಾಗಿ.
ಬಡವರ ಕಣ್ಣೀರಿಗೆ ಕರುಣೆ ಬಂದೀತೆ ಬೆಣ್ಣೆಗೆ?
ಸಲುಗೆ ಕೊಟ್ಟರೆ ಸಾಕೂ ಹೆಗ್ಗಣವೂ ಸಹ ಏರುವುದು ಹೆಗಲಿಗೆ.
ಹುಟ್ಟಿದ ಮಗು ತರುವುದು ತೊಟ್ಟಲಿಗೆ ನಗು.
ಸ್ವಾರ್ಥ ಉಳಿಸಿದವ ಪಾಪಾತ್ಮ, ನಿಸ್ವಾರ್ಥ ಗಳಿಸಿದವ ಪುಣ್ಯಾತ್ಮ.
ಬೇಸರವಿರಬಾರದು, ಅವಸರ ಮಾಡಬಾರದು.
ಎಚ್ಚರ ತಪ್ಪಿ ಮಾತನಾಡಬಾರದು, ಹುಚ್ಚನಂತೆ ವರ್ತಿಸಬಾರದು.
ಬಿಡುಕು ಮಾತಿಗೆ ಮಾಡಿಕೊಳ್ಳದಿರು ಕೆಡುಕು.
ಹಾಲಿಗೆ ಹುಳಿ ಹಿಂಡಿದರೆ ಮೊಸರು, ಮಣ್ಣಿಗೆ ನೀರು ಹಾಕಿದರೆ ಕೆಸರು.
ಗದ್ದೆ ಸುಟ್ಟರೂ ಹಾಳಾಗದು ಗಾದೆ.
ನಿನ್ನಲ್ಲಿರುವ ಮಾನ ನಿನಗೆ ಕೊಡುವುದು ಬಹುಮಾನ.
ಮಾಟ ಮಾಡಿದೋನ ಮನೆ ಹಾಳು.
ಒಬ್ಬರ ಕೂಳು ಇನ್ನೊಬ್ಬರ ಕುತ್ತು.
ಒಳಿತಾಗಿ ಮುಗಿದಿದ್ದೆಲ್ಲವೂ ಒಳ್ಳೆಯದೇ.
ಹೊಳೆಯುವುದೆಲ್ಲಾ ಚಿನ್ನವಲ್ಲ.
ಓಡಿದವನಿಗೆ ಓಣಿ ಕಾಣಲಿಲ್ಲ, ಹಾಡಿದವನಿಗೆ ಹಾದಿ ಕಾಣಲಿಲ್ಲ.
ಬರಿಗೈಯವರ ಬಡಿವಾರ ಬಹಳ.
ಎಲ್ಲ ಕೆಡುಕಿಗೂ ಮೂಲ ಹೊಟ್ಟೆಕಿಚ್ಚು.
ಸ್ವರ್ಗದಲ್ಲಿ ಸೇವೆಗೈಯುವುದಕ್ಕಿಂತ ನರಕದಲ್ಲಿ ಆಳುವುದೇ ಲೇಸು.
ಅರೆಗೊಡದ ಅಬ್ಬರವೇ ಬಹಳ.
ಮರಿ ಮಾಡುವ ಮೊದಲೇ ಮೊಟ್ಟೆಗಳನ್ನು ಎಣಿಸಬೇಡ.
ಆಪತ್ತಿಗಾದವನೇ ನಿಜವಾದ ಗೆಳೆಯ.
ಇಂದಿನ ಸೋಲು ನಾಳಿನ ಗೆಲುವು.
ಧೈರ್ಯವಿದ್ದವನಿಗೆ ದೈವವೂ ಅನುಕೂಲ.
ದುಡ್ಡಿಗಿಂತ ದೊಡ್ಡ ಹೆಸರೇ ಉತ್ತಮ.
ಪ್ರಯತ್ನಕ್ಕೆ ಪರಮೇಶ್ವರನೂ ಸಹಾಯ ಮಾಡುವನು.
ಉತ್ತಮವಾದ ನಗು ನೇಸರನ ಮಗು.
ಸದಾಚಾರಣೆಯ ಉದಾಹರಣೆಯೇ ಉತ್ತಮವಾದ ಉಪದೇಶ.
ಪ್ರಾಮಾಣಿಕತೆಯಿಂದಲೇ ಪಾರಮಾರ್ಥ.
ಕರೆದುಣ್ಣುವ ಕೆಚ್ಚಲನ್ನು ಕೊರೆದುಂಡ ಹಾಗೆ.
ಉದ್ದುದ್ದ ಮಾತಿನವರ ಮೊಳಕೈ ಮೊಂಡ.
ಕಿಡಿ ಸಣ್ಣದಾದರೂ ಕಾಡೆಲ್ಲವನ್ನು ಸುಡುತ್ತದೆ.
ನೋಡಿ ನಡೆದವರಿಗೆ ಕೇಡಿಲ್ಲ.
ಕೃತಿ ಇಲ್ಲದ ಮಾತು ಕಸ ಬೆಳೆದ ತೋಟವಿದ್ದಂತೆ.
ಚಿಂತೆ ಮಾಡಿದರೆ ಸಂತೆ ಸಾಗೀತೆ?
ದುಡ್ಡನ್ನು ಕಾದಿಟ್ಟುಕೊಳ್ಳದವನು ಹಣವಂತನು ಹೇಗೆ ಆದಾನು?
ಮಕ್ಕಳ ಬಾಯಿಗೆ ಹಣ್ಣು ಕೊಟ್ಟು ಮಣ್ಣು ಬಿಡಿಸು.
ತಾಯಿ ಬೇಕು ಇಲ್ಲವೇ ಬಾಯಿ ಬೇಕು.
ಸೀರಿಗೇಡಿಗೆ ಸೀರೆ ಉಡಿಸಿದರೆ ಕೆರಿ ದಂಡಿ ಮ್ಯಾಗ ನಿಂತು ಕೇಕೆ ಹಾಕಿದಳು.
ಪೀತಾಂಬರ ಉಟ್ಟರೂ ಕೊತ್ತಂಬರಿ ಮಾರೋದು ತಪ್ಪಲಿಲ್ಲ.
ಪೇಚಾಟದಲ್ಲಿ ಬಿದ್ದವನಿಗೆ ಪೀಕಲಾಟವೇ ಗತಿ.
ಹಾರುವನ ತೊತ್ತಾಗಬೇಡ ಗಾಣಿಗನ ಎತ್ತಾಗಬೇಡ.
ಮಂತ್ರಕ್ಕಿಂತ ಉಗುಳೇ ಹೆಚ್ಚು.
ಹಂಪಿಗೆ ಹೋಗುವುದಕ್ಕಿಂತ ಕೊಂಪೆಯಲ್ಲಿರುವುದೇ ಲೇಸು.
ಎಡಗಣ್ಣು ಹೊಡೆದರೆ ನಾರಿಗೆ ಶುಭ.
ಊಟವೆಂದರೆ ಊರು ಬಿಟ್ಟುಹೋದಂತೆ.
ಎಲ್ಲ ಮುಗಿದ ಮೇಲೆ ತೀರ್ಥಯಾತ್ರೆಗೆ ಹೊರಟಂತೆ.
ಒಗ್ಗಟ್ಟಿಲ್ಲದ ಊರಲ್ಲಿ ಒಪ್ಪತ್ತೂ ಇರಬೇಡ.
ಒಕ್ಕಣ್ಣ ತನಗೆ ಹತ್ತು ಕಣ್ಣು ಅಂತಿದ್ನಂತೆ.
ಕಣ್ಣಿಗೂ ಮೂಗಿಗೂ ಮೂರು ಗಾವುದ.
ಕಲಹವೇ ಕೇಡಿಗೆ ಮೂಲ.
ಊರೇ ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಮುಚ್ಚಿದಂತೆ.
ಮಾತಿಗೆ ಸಿಕ್ಕಿದರೆ ಮಳೆಗೆ ಸಿಕ್ಕಂತೆ.
ನಾಲಿಗೆಯಿಂದ ಕೆಳಗೆ ಬಿದ್ದರೆ ನರಕ.
ವೇದ ಸುಳ್ಳಾದರು ಗಾದೆ ಸುಳ್ಳಾಗದು.
ಅಡಿಕೆಗೆ ಹೋದ ಮಾನ ಆನೆ ಕೊಟ್ಟರು ಬರಲ್ಲ.
ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ.
ಎತ್ತು ಏರಿಗೆಳೀತು, ಕೋಣ ನೀರಿಗೆಳೀತು.
ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರಂತೆ.
ಕೈ ಕೆಸರಾದರೆ ಬಾಯಿ ಮೊಸರು.
ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ತ?
ಹೆಣ್ಣಿಗೆ ಹಟವಿರಬಾರದು, ಗಂಡಿಗೆ ಚಟವಿರಬಾರದು.
ಮಾತು ಬೆಳ್ಳಿ, ಮೌನ ಬಂಗಾರ.
ಮಾತು ಮನೆ ಮುರಿತು, ತೂತು ಓಲೆ ಕೆಡಿಸಿತು.
ಮಂಗ ಮೊಸರು ತಿಂದು ಮೇಕೆ ಬಾಯಿಗೆ ಸವರಿದ ಹಾಗಾಯಿತು.
ಮನೆಗೆ ಮಾರಿ, ಊರಿಗೆ ಉಪಕಾರಿ.
ಆಳಾಗಬಲ್ಲವನು ಅರಸನಾಗಬಲ್ಲ.
ಊರಿಗೆ ದೊರೆ ಆದರೂ ತಾಯಿಗೆ ಮಗನೆ.
ಹೆತ್ತವರಿಗೆ ಹೆಗ್ಗಣ ಮುದ್ದು.
ಊರೆಲ್ಲ ದೋಚಿಕೊಂಡು ಹೋದಮೇಲೆ ದೊಡ್ಡಿ (ಕೋಟೆ) ಬಾಗಿಲು ಹಾಕಿದರಂತೆ.
ಗಿಡವಾಗಿ ಬಗ್ಗದ್ದು, ಮರವಾಗಿ ಬಗ್ಗೀತೇ?
ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ.
ಮನಸಿದ್ದರೆ ಮಾರ್ಗ.
ಅಡ್ಡಗೋಡೆಯ ಮೇಲೆ ದೀಪ ಇಟ್ಟ ಹಾಗೆ.
ಆರಕ್ಕೇರಲಿಲ್ಲ, ಮೂರಕ್ಕೀಳಿಯಲಿಲ್ಲ.
ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ.
ಅಕ್ಕಿ ಮೇಲೆ ಆಸೆ ನೆಂಟರ ಮೇಲೆ ಇಷ್ಟ.
ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡಂತೆ.
ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ.
ಬೆಕ್ಕು ಕಣ್ಮುಚ್ಚಿ ಹಾಳು ಕುಡಿದರೆ ಜಗತ್ತಿಗೆ ಗೊತ್ತಾಗಲ್ವಾ?
ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ.
ಬೆಳ್ಳಗಿರೋದೆಲ್ಲ ಹಾಲಲ್ಲ, ಹೊಳೆಯೋದೆಲ್ಲ ಚಿನ್ನ ಅಲ್ಲ.
ಹತ್ತು ಕಟ್ಟೋ ಕಡೆ ಒಂದು ಮುತ್ತು ಕಟ್ಟು.
ಜಲ ಶೋಧಿಸಿ ನೀರು ತರ್ಬೇಕು, ಕುಲ ಶೋಧಿಸಿ ಹೆಣ್ಣು ತರ್ಬೇಕು.
ಚಿಂತೆ ಇಲ್ಲದವನಿಗೆ ಸನ್ತೇಲು ನಿದ್ದೆ.
ದೇವರು ವರ ಕೊಟ್ಟರು ಪೂಜಾರಿ ಕೊಡೆಬೇಕಲ್ಲ.
ಹನುಮಂತಾನೆ ಬಾಲ ಕಡಿತಿರುವಾಗ, ಇವನ್ಯಾವನೋ ಶಾವಿಗೆ ಕೇಳಿದನಂತೆ.
ತುಂಬಿದ ಕೊಡ ತುಳುಕುವುದಿಲ್ಲ.
ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ.
ಹನಿ ಹನಿ ಸೇರಿದರೆ ಹಳ್ಳ, ತೆನೆ ತೆನೆ ಸೇರಿದರೆ ಬಳ್ಳ.
ನಾಯಿನ ಕರೆದುಕೊಂಡು ಹೋಗಿ ಸಿಂಹಾಸಾನದ ಮೇಲೆ ಕೂರಿಸಿದ ಹಾಗಯ್ತು.
ಹುಚ್ಚರ ಮದುವೆಯಲ್ಲಿ ಉನ್ಡೋನೆ ಜಾಣ.
ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು.
ಹಾಸಿಗೆ ಇದ್ದಷ್ಟು ಕಾಲು ಚಾಚು
ಬೀದೀಲಿ ಹೊಗೊ ಮಾರೀನ ಮನೆಗೆ ಕರೆದಂಗೆ
ಮಾಡಿದುಣ್ಣೊ ಮಾರಾಯ
ಉಪ್ಪ ತಿಂದ ಮೇಲೆ ನೀರು ಕುಡಿಯಲೇ ಬೆಕು
ಯಾರದೊ ದುಡ್ಡಿನಲ್ಲಿ ಯೆಲ್ಲಮನ್ನ ಜಾತ್ರೆ
ಆಗೊದೆಲ್ಲ ವೊಳ್ಳೆದಕ್ಕೆ
ಗಂಡ-ಹೆಂಡಿರ ಜಗಳ ತಿಂದು ಮಲುಗೊ ವರೆಗೆ
ಕಾಲಕ್ಕೆ ತಕ್ಕಂತೆ ನಡಿಯಬೇಕು, ತಾಳಕ್ಕೆ ತಕ್ಕಂತೆ ಕುಣಿಯಬೇಕು
ಅನ್ನ ಹಾಕಿದ ಮನೆಗೆ ಕನ್ನ ಹಕಬೇಡ
ಮಾರಿ ಕಣ್ಣು ಹೋರಿ ಮ್ಯಾಲೆ, ಕಟುಕನ್ ಕಣ್ಣು ಕುರಿ ಮ್ಯಾಲೆ.
ಪಾಲಿಗೆ ಬಂದದ್ದೆ ಪರಮಾನ್ನ.
ಸಾವಿರ ಸುಳ್ಳು ಹೇಲಿ ಒಂದು ಮದುವೆ ಮಾಡು
ಕಳ್ಳನ ನಂಬಿದ್ರು ಕುಳ್ಳನ ನಂಬಬೇಡ
ನೆಲಕ್ಕೆ ಬಿದ್‍ದ್ರೂ ಮೀಸೆ ಮಣ್ಣಾಗಿಲ್ಲ
ಯಾವ ಹುತ್ತದಲ್ಲಿ ಯಾವ ಹಾವು ಇರುತ್ತೊ
ದೇವರು ಒಲಿದರೂ ಪೂಜಾರಿ ಒಲಿಯೊಲ್ಲ.
ನಮ್ಮ ದೇವರ ಸತ್ಯ ನಮಗೆ ಗೊತ್ತು.
ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ.
ಕೈ ಕೆಸರಾದರೆ ಬಾಯಿ ಮೊಸರು.
ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ.
ರೋಗಿ ಬಯಸಿದ್ದು ಹಾಲು-ಅನ್ನ ವೈದ್ಯ ಹೇಳಿದ್ದು ಹಾಲು-ಅನ್ನ
ಕಳ್ಳನಿಗೊಂದು ಪಿಳ್ಳೆ ನೆವ
ಕುಣಿಯಲಾರದವಳು ನೆಲ ಡೊಂಕು ಅಂದಳಂತೆ
ಹೋದೆಯಾ ಪಿಶಾಚಿ ಅಂದ್ರೆ ಬಂದೆಯಾ ಗವಾಕ್ಷೀಲಿ
ಹೋದ ಪುತ್ತ ಬಂದ ಪುತ್ತ ಪುಟ್ಟನ ಕಾಲಿಗೆ ನೀರಿಲ್ಲ
ಶಿವ ಪೂಜೇಲಿ ಕರಡಿ ಬಿಟ್ಟಂಗೆ
ಸೋದರ ಮಾವನ ಚಾಳು ತುಂಡಪುಂಡರ ಪಾಲು
ನೆಂಟರೆಲ್ಲ ಖರೆ, ಕಂಟಲೆ ಚೀಲಕ್ಕೆ ಕೈ ಹಾಕಬೇಡ
ಅಂಗೈ ಹುಣ್ಣಿಗೆ ಕನ್ನಡಿ ಯಾಕೆ
ಅಕ್ಕ ಸತ್ತರೆ ಅಮಾಸೆ ನಿಲ್ಲದು, ಅಣ್ಣ ಸತ್ತರೆ ಹುಣ್ಣಿಮೆ ನಿಲ್ಲದು
ಹುಣ್ಣಿಮೆ ಬರುವನಕ ಅಮಾಸೆ ನಿಲ್ಲದು, ಅಮಾಸೆ ಬರುವನಕ ಹುಣ್ಣಿಮೆ ನಿಲ್ಲದು
ಎತ್ತೂ ಕೋಣಕ್ಕೆ ಎರಡು ಕೋಡು, ನಮ್ಮ ಅಯ್ಯಂಗಾರ್ಗೆ ಮೂರು ಕೋಡು
ಹಗೆ ಮಾತು ಆತುಕೊಂಡ, ತುಟಿ ಬಿಚ್ಚದೆ ಕೂತುಕೊಂಡ
ಮಕ ನೋಡಿ ಮಾರು ಹೋದ, ಗುಣ ನೋಡಿ ದೂರ ಹೋದ
ಅಪ್ಪಂತೋನಿಗೆ ಇಪ್ಪತ್ತೊಂದು ಕಾಯಿಲೆ
ಅಟ್ಟಿಕ್ಕಿದೋಳಿಗಿನ್ನ ಬೊಟ್ಟಿಕ್ಕಿದೋಳು ಹೆಚ್ಚು
ಅಪ್ಪಂತೋನಿಗೆ ಇಪ್ಪತ್ತೊಂದು ಕಾಯಿಲೆ
ಅಯ್ಯೋ ಅಂದವರಿಗೆ ಆರು ತಿಂಗಳು ಆಯಸ್ಸು ಕಮ್ಮಿ
ಪಾಪ ಅಂದ್ರೆ ಕರ್ಮ ಬರ್ತದೆ
ಅರಸು ಆದೀಕ (=ಆದಾಯ) ತಿಂದ, ಪರದಾನಿ ಹೂಸು ಕುಡಿದ
ಆಳು ಮೇಲೆ ಆಳು ಬಿದ್ದು ದೋಣು ಬರಿದಾಯ್ತು
ಇಟ್ಟುಕೊಂಡಾಕಿ ಇರೂತನ ಕಟ್ಟಿಕೊಂಡಾಕಿ ಕಡೀತನ
ಇತ್ತಿತ್ತ ಬಾ ಅಂದ್ರೆ ಇದ್ದ ಮನೇನೂ ಕಿತ್ತುಕೊಂಡ
ಹರುವಯ್ಯನ ಎಲೆ ಇಂಬ, ಒಕ್ಕಲಿಗನ ಮನೆ ಇಂಬ
ಗವುಜಿ ಗದ್ದಲ ಏನೂ ಇಲ್ಲ, ಗೋವಿಂದ ಭಟ್ಟ ಬಾವೀಲಿ ಬಿದ್ದ
ಇದ್ದವರು ಇದ್ದಹಾಗೆ ಸಿದ್ಧಾ ದೇವಿಗೆ ಸಿಡಿಲು ಬಡೀತು
ಅಂದು ಬಾ ಅಂದ್ರೆ ಮಿಂದು ಬಂದ
ಹಣ ಇದ್ದೋರಿಗೆ ಏನೆಲ್ಲ, ಗುಣ ಇದ್ದೋರಿಗೆ ಏನಿಲ್ಲ
ಹಣ ಇಲ್ದೋರು ಎದ್ದೂ ಬಿದ್ದಂಗೆ, ಗುಣ ಇಲ್ದೋರು ಇದ್ದೂ ಇಲ್ದಂಗೆ
ಅಜ್ಜ! ಮದುವೆ ಅಂದ್ರೆ ನನಗೋ ಅಂದ
ಅಕ್ಕ ನನ್ನವಳಾದ್ರೆ ಬಾವ ನನ್ನವನೇನು
ಅಕ್ಕನ ಹಗೆ ಬಾವನ ನೆಂಟು
ಅಕ್ಕರೆಯ ಅಕ್ಕ ಬಂದಾಗೇ ಸಕ್ಕರೆಯೆಲ್ಲ ಕಹಿ ಆಯ್ತು
ಅಕ್ಕ ಬರಬೇಕು ಅಕ್ಕಿ ಮುಗೀಬಾರದು
ನೀರೆ ನಿನ್ನ ಮಾತು ನಿಜವೇನೆ ನೀರ ಕಡಿದರೆ ಬೆಣ್ಣೆ ಬಂದಾದೇನೆ
ಅಕ್ಕಿಯ ಮೇಗಳ ಆಸೆ, ನೆಂಟರ ಮೇಗಳ ಬಯಕೆ
ಅಕ್ಕಿ ಸರಿಯಾಗ ಬಾರದು ಅಕ್ಕನ ಮಕ್ಕಳು ಬಡವಾಗ ಬಾರದು
ಅಗಸನ ಬಡಿವಾರವೆಲ್ಲ ಹೆರರ ಬಟ್ಟೆ ಮೇಲೆ
ಅಗಸರ ಕತ್ತೆ ಕೊಂಡು ಹೋಗಿ, ಡೊಂಬರಿಗೆ ತ್ಯಾಗ ಹಾಕಿದ ಹಾಗೆ
ಹಳ್ಳೀ ದೇವರ ತಲೆ ಒಡೆದು, ದಿಲ್ಲೀ ದೇವರ ಹೊಟ್ಟೆ ಹೊರೆದ ಹಾಗೆ
ಅಜ್ಜಿಗೆ ಅರಿವೆಯ ಚಿಂತೆ, ಮಗಳಿಗೆ ಗಂಡನ ಚಿಂತೆ, ಮೊಮ್ಮಗಳಿಗೆ ಕಜ್ಜಾಯದ ಚಿಂತೆ
ಅಜ್ಜಿ ಸಾಕಿದ ಮಗ ಬೊಜ್ಜಕ್ಕೂ ಬಾರದು
ಅಡವಿಯ ದೊಣ್ಣೆ ಪರದೇಸಿಯ ತಲೆ
ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ
ಅತಿ ಆಸೆ ಗತಿಗೇಡು
ಅತ್ಯಾಶ ಬಹುದುಃಖಾಯ ಅತಿ ಸರ್ವತ್ರ ವರ್ಜಯೇತ್
ಅತಿ ಸ್ನೇಹ ಗತಿ ಕೇಡು
ಅರ್ತಿಗೆ ಬಳೆ ತೊಟ್ಟು ಕೈ ಕೊಡವಿದರೆ ಹೋದೀತೆ
ಅತ್ತೆ ಒಡೆದ ಪಾತ್ರೆಗೆ ಬೆಲೆ ಇಲ್ಲ
ಅನ್ಯಾಯದಿಂದ ಗಳಿಸಿದ್ದು ಅಸಡ್ಡಾಳಾಗಿ ಹೋಯ್ತು
ಅಬದ್ಧಕ್ಕೆ ಅಪ್ಪಣೆಯೇ ಅಂದ್ರೆ ಬಾಯಿಗೆ ಬಂದಷ್ಟು
ಅರಗಿನಂತೆ ತಾಯಿ, ಮರದಂತೆ ಮಕ್ಕಳು
ಅಮ್ಮನ ಮನಸ್ಸು ಬೆಲ್ಲದ ಹಾಗೆ, ಮಗಳ ಮನಸ್ಸು ಕಲ್ಲಿನ ಹಾಗೆ
ಅರಮನೆಯ ಮುಂದಿರಬೇಡ, ಕುದರೆಯ ಹಿಂದಿರಬೇಡ
ಅರಸನ ಕುದರೆ ಲಾಯದಲ್ಲೆ ಮುಪ್ಪಾಯಿತು
ಅರೆಪಾವಿನವರ ಅಬ್ಬರ ಬಹಳ
ಅಲ್ಪರ ಸಂಗ ಅಭಿಮಾನ ಭಂಗ
ಅಳಿವುದೇ ಕಾಯ ಉಳಿವುದೇ ಕೀರ್ತಿ
ಆವು ಕಪ್ಪಾದ್ರೆ ಹಾಲು ಕಪ್ಪೇನು
ಆಗರಕ್ಕೆ ಹೋಗಿ ನನ್ನ ಗಂಡ ಗೂಬೆ ತಂದ
ಆಗೋ ಪೂಜೆ ಆಗುತ್ತಿರಲಿ ಊದೋ ಶಂಖ ಊದಿ ಬಿಡುವ
ಆಚಾರ್ಯರಿಗೆ ಮಂತ್ರಕ್ಕಿಂತ ಉಗುಳು ಜಾಸ್ತಿ
ಆಡಿ ತಪ್ಪ ಬೇಡ ಓಡಿ ಸಿಕ್ಕ ಬೇಡ
ಆಡುತ್ತಾ ಆಡುತ್ತಾ ಭಾಷೆ, ಹಾಡುತ್ತಾ ಹಾಡುತ್ತಾ ರಾಗ
ಆಡೋದು ಮಡಿ ಉಂಬೋದು ಮೈಲಿಗೆ
ಓದೋದು ಕಾಶಿ ಖಂಡ, ತಿನ್ನೋದು ಮಶಿ ಕೆಂಡ
ಆನೆ ಮೆಟ್ಟಿದ್ದೇ ಸಂದು, ಸೆಟ್ಟಿ ಕಟ್ಟಿದ್ದೇ ಪಟ್ಟಣ
ಆಪತ್ತಿಗೆ ಹರಕೆ, ಸಂಪತ್ತಿಗೆ ಮರವು
ಆರು ಯತ್ನ ತನ್ನದು, ಏಳನೇದು ದೇವರಿಚ್ಛೆ
ಹಾಕೋದು ಬಿತ್ತೋದು ನನ್ನಿಚ್ಛೆ; ಆಗೋದು ಹೋಗೋದು ದೇವರಿಚ್ಛೆ
ಆಲಸ್ಯಂ ಅಮೃತಂ ವಿಷಂ
ಆಲಸಿ-ಮುಂಡೇದ್ಕೆ ಎರಡು ಖರ್ಚು, ಲೋಭಿ-ಮುಂಡೇದ್ಕೆ ಮೂರು ಖರ್ಚು
ಆಸೆ ಹೆಚ್ಚಿತು ಆಯಸ್ಸು ಕಮ್ಮಿ ಆಯಿತು
ಆಸೆಗೆ ಕೊನೆಯಿಲ್ಲ
ಆಷಾಡದ ಗಾಳಿ ಬೀಸಿ ಬೀಸಿ ಬಡಿವಾಗ, ಹೇಸಿ ನನ್ನ ಜೀವ ಹೆಂಗಸಾಗಬಾರದೇ
ಹೆತ್ತವರಿಗೆ ಅಂಬಲಿ ಬಿಡದಿದ್ದರೂ, ಹಂಬಲ ಬಿಡದಿದ್ದರೆ ಸಾಕು
ಹೊಟ್ಟೆ ಉರಿದು ಕೊಳ್ಳೋದು ಒಂದೇಯ, ಹೊಟ್ಟೆ ಇರಿದು ಕೊಳ್ಳೋದು ಒಂದೇಯ
ಹೇಳಿಕೆ ಮಾತು ಕೇಳಿ ಹೆಂಡ್ರನ್ನ ಬಿಟ್ಟ
ಸಾದೆತ್ತಿಗೆ ಎರಡು ಹೇರು (ಹೊರೆ)
ಹೆತ್ತವರು ಹೆಸರಿಕ್ಕ ಬೇಕು
ಓಡಿ ಹೋಗೊಳು ಮೊಸರಿಗೆ ಹೆಪ್ಪು ಹಾಕ್ತಾಳ
ಕಣ ಕಾಯಬಹುದು, ಹೆಣ ಕಾಯಾಕೆ (ಬೇಸರದಿಂದ ಹೊತ್ತು ಕಳೆಯಲಿಕ್ಕೆ) ಆಗೊದಿಲ್ಲ
ಕತೆ ಹೇಳೋಕೆ ಹ್ಞುಂ-ಗುಟ್ಟೋರಿರಬೇಕು, ನೆಟ್ಟಗೆ ಬಾಳೋಕೆ ಛೀ-ಗುಟ್ಟೋರಿರಬೇಕು
ಕಳ್ಳನ ಮನಸ್ಸು ಹುಳ್ಳಗೆ
ಸಂತೆ ಸೇರೋಕೆ ಮೊದಲು ಗಂಟು ಕಳ್ಳರು ಸೇರಿದರು
ಅಪ್ಪನ ಮನೇಲಿ ಸೈ ಅನ್ನಿಸಿಕೊಂಡೋಳು, ಅತ್ತೆ ಮನೇಲೂ ಸೈ ಅನ್ನಿಸಿಕೊಣ್ತಾಳೆ
ಅನ್ನ ಇಕ್ಕಿ ಸಾಕು ಅನ್ನಿಸ ಬಹುದು, ದುಡ್ಡು ಕೊಟ್ಟು ಸಾಕು ಅನ್ನಿಸೋಕಾಗಲ್ಲ
ಹೆಂಡ್ರನ್ನ ಸಸಾರ (=ತಾತ್ಸಾರ) ಮಾಡಿದ್ರೆ ಸಂಸಾರ ನಿಸ್ಸಾರವಾಗ್ತದೆ
ಹಾಲಿಲ್ಲ ಬಟ್ಟಲಿಲ್ಲ ಗುಟುಕ್ ಅಂದ
ಕೊಡೋದು ಕೊಳ್ಳೋದು ಗಂಡಂದು, ಮಜ ಮಾಡೋದು ಹೆಂಡ್ರುದ್ದು
ಅಂಕೆ ಇಲ್ಲದ ಚತುರೆ, ಲಗಾಮು ಇಲ್ಲದ ಕುದುರೆ
ಊರಿಗಾಗದ ಗೌಡ, ಮೇಲೆರಗುವ ಗಿಡುಗ
ರೊಂಡಿಗೆ ಏಟು ಬಿದ್ರೆ ಮೊಂಡಿಗೆ ಮುಲಾಮು ಹಚ್ಚಿದರು
ಯೋಗ ಇದ್ದಷ್ಟೇ ಭೋಗ
ಹಾಕ್ಮಣೆ, ನೂಕ್ಮಣೆ, ಯಾಕ್ಮಣೆ
ತೇಗಿ ತೇಗಿ ಬೀಗಿ ಬಿದ್ದ
ತಾಮ್ರದ ನಾಣ್ಯ ತಾಯಿ ಮಕ್ಕಳನ್ನ ಕೆಡಿಸ್ತು
ಮುದ್ದು ಮುದ್ದು ತೊಗಲೆ ಬಿದ್ದು ಬಿದ್ದು ನಗಲೆ
ಹೌದಪ್ಪನ ಮನೇಲಿ ಹೌದಪ್ಪ, ಇಲ್ಲಪ್ಪನ ಮನೇಲಿ ಇಲ್ಲಪ್ಪ
ಹೋದ ಬದುಕಿಗೆ ಹನ್ನೆರಡು ದೇವರು
ಹೋದ್ರೆ ಒಂದು ಕಲ್ಲು, ಬಂದ್ರೆ ಒಂದು ಹಣ್ಣು
ಆದ್ರೆ ಒಂದು ಅಡಿಕೆ ಮರ, ಹೋದ್ರೆ ಒಂದು ಗೋಟಡಿಕೆ
ಹೋದಾ ಪುಟ್ಟಾ, ಬಂದಾ ಪುಟ್ಟಾ, ಪುಟ್ಟನ ಕಾಲಿಗೆ ನೀರಿಲ್ಲ
ಇಕ್ಕಲಾರದ ಕೈ ಎಂಜಲು
ಇಕ್ಕುವಳು ನಮ್ಮವಳಾದ್ರೆ ಕೊಟ್ಟಿಗೆಯಲ್ಲಾದರೂ ಉಣಲಕ್ಕು
ಇಕ್ಕೇರಿ ತನಕ ಬಳಗ, ಮಾನ ಮುಚ್ಚಲಿಕ್ಕೆ ಅರಿವೆ ಇಲ್ಲ
ಹೆಸರಿಗೆ ಹೊನ್ನ ಹೆಗ್ಗಡೆ, ಎಸರಿಗೆ ಅಕ್ಕಿ ಇಲ್ಲ
ಇಡೀ ಮುಳುಗಿದರೂ ಮೂಗು ಮೇಲೆ
ಇದ್ದ ಊರ ಸುದ್ದಿ ಇದ್ದಲ್ಲಿ ತೆಗೆಯ ಬಾರದು, ಬೇವೂರ ಸುದ್ದಿ ಹೋದಲ್ಲಿ ತೆಗೆಯ ಬಾರದು
ಇದ್ದದ್ದು ಹೇಳಿದರೆ ಹದ್ದಿನಂತ ಮೋರೆ ಆಯಿತು
ನಿಜ ಆಡಿದರೆ ನಿಷ್ಠೂರ
ಇದ್ದದ್ದು ಹೋಯಿತು ಮದ್ದಿನ ಗುಣದಿಂದ
ಇದ್ದಲ್ಲಿ ಗವುಡ ಹೋದಲ್ಲಿ ಕಿವುಡ
ತನ್ನೂರಲಿ ರಂಗ, ಪರೂರಲಿ ಮಂಗ
ಇಬ್ಬರ ನ್ಯಾಯ, ಮೂರನೇಯವನಿಗೆ ಆದಾಯ
ಇಲ್ಲದ ಬದುಕು ಮಾಡಿ ಇಲಿಗೆ ಚಣ್ಣ ಹೊಲಿಸಿದರು
ಇಲಿಯ ವ್ಯಾಜ್ಯಕ್ಕೆ ಬೆಕ್ಕು ಸಾಕ್ಷಿ
ಇಲಿ ಹೆಚ್ಚಿದವೆಂದು, ಮನೆಗೆ ಉರಿ ಇಡ ಬಾರದು
ಎಡದ ನೆತ್ತಿಗೆ ಬಡಿದರೆ ಬಲದ ನೆತ್ತಿಗೆ ತಾಕಿತು
ಯಾರದೋ ದುಡ್ಡು; ಎಲ್ಲಮ್ಮನ ಜಾತ್ರೆ
ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು
ಮದುವೆ ಮಡಿನೋಡು ಮನೆ ಕಟ್ಟಿ ನೋಡು
ಇಲಿಯಾಗಿ ನೂರುದಿನ ಬಾಳೋದಕ್ಕಿಂತ ಹುಲಿಯಾಗಿ ಮೂರು ದಿನ ಬಾಳೋದು ಲೇಸು
ಮಾತು ಬೆಳ್ಳಿ, ಮೌನ ಬಂಗಾರ
ಕೈ ಕೆಸರಾದ್ರೆ ಬಾಯಿ ಮೊಸರು
ಸಂಸಾರಿ ಸಾವಾಸ ಮಾಡಿ ಸನ್ಯಾಸಿ ಕೆಟ್ಟ
ಮಾತು ಮನೆ ಮುರೀತು, ತೂತು ಒಲೆ ಕೆಡಿಸ್ತು
ಕುಂತು ತಿಂದರೆ, ಕುಡಿಕೆ ಹೊನ್ನೂ ಸಾಲದು
ಮುತ್ತು ಒಡೆದರೆ ಹೋಯ್ತು, ಮಾತು ಆಡಿದರೆ ಹೋಯ್ತು
ತುಂಬಿದ ಕೊಡ, ತುಳುಕೋದಿಲ್ಲ
ಕಾಮಾಲೆ ಕಣ್ಣೊನಿಗೆ ಕಂಡಿದ್ದೆಲ್ಲ ಹಳದಿ ನೇ
ಮದುವೆಯಾಗೋ ಗುಂಡ ಅಂದ್ರೆ ನೀನೇ ನನ್ನ ಹೆಂಡ್ತಿ ಅಂದ
ಮಾಡೋದು ದುರಾಚಾರ, ಮನೆ ಮುಂದೆ ಬೃಂದಾವನ
ಮನೆಗೆ ಬೆಂಕಿ ಬಿದ್ದಾಗ ಬಾವಿ ತೋಡಿದರಂತೆ
ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ
ಮೂರ್ತಿ ಚಿಕ್ಕದಾದ್ರು ಕೀರ್ತಿ ದೊಡ್ಡದು
ಹಾಳೂರಿಗೆ ಉಳಿದವನೇ ಗೌಡ
ಹಿರೀಅಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ
ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು
ಜನ ಮರುಳೋ ಜಾತ್ರೆ ಮರುಳೋ
ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ
ಕಾರ್ಯವಾಸಿ ಕತ್ತೆ ಕಾಲು ಕಟ್ಟು
ಕೆಟ್ಟ ಮೇಲೆ ಬುದ್ಧಿ ಬಂತು, ಅಟ್ಟ ಮೇಲೆ ಒಲೆ ಉರಿಯಿತು
ಕೊಂಕಣ ಸುತ್ತಿ ಮೈಲಾರಕ್ಕೆ ಬಂದ ಹಾಗೆ
ಕೋಪದಲ್ಲಿ ಕುಯ್ದ ಮೂಗು ಶಾಂತಿಯಲ್ಲಿ ಬಂದೀತೇ
ಕೋತಿ ತಾನೂ ಕೆಡೋದಲ್ದೆ ವನಾನೂ ಕೆಡಿಸ್ತು
ಕೊಟ್ಟದ್ದು ತನಗೆ; ಬಚ್ಚಿಟ್ಟದ್ದು ಪರರಿಗೆ
ಕೊಟ್ಟೋನು ಕೋಡಂಗಿ, ಇಸ್ಕೊಂಡೋನು ಈರಭದ್ರ
ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಂಡ
ಕುಂಬಾರಂಗೆ ವರುಷ; ದೊಣ್ಣೆಗೆ ನಿಮಿಷ
ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿಸಿದರು
ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
ಕೈಯಲ್ಲಿ ಶರಣಾರ್ಥಿ, ಕಂಕುಳಲ್ಲಿ ದೊಣ್ಣೆ
ನಾಯಿ ಬೊಗಳಿದರೆ ದೇವಲೋಕ ಹಾಳೇನು
ನಾಯಿ ಬಾಲ ಡೊಂಕು
ಓದಿ ಓದಿ ಮರುಳಾದ ಕೂಚು ಭಟ್ಟ
ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು
ಪಾಪಿ ಸಮುದ್ರ ಹೊಕ್ರೂ ಮೊಣಕಾಲುದ್ದ ನೀರು
ರಾಮೆಶ್ವರಕ್ಕೆ ಹೋದ್ರೂ ಶನೀಶ್ವರನ ಕಾಟ ತಪ್ಪಲಿಲ್ಲ
ಸಾವಿರ ಸುಳ್ಳು ಹೇಳಿ ಒಂಡು ಮಡುವೆ ಮಾಡು
ಬೇಲಿನೆ ಎದ್ದು ಹೊಲ ಮೇಯಿತಂತೆ
ಭಂಗಿ ದೇವರಿಗೆ ಹೆಂಡಗುಡುಕ ಪೂಜರಿ
ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ
ಎತ್ತು ಈಯಿತು ಅನ್ದರೆ ಕೊಟ್ಟಿಗೆಗೆ ಕಟ್ಟು ಎನ್ದರಂತೆ
ಗಂಡ ಹೆಂಡಿರ ಜಗಳ ಉನ್ಡು ಮಲಗೊ ತನಕ
ಹಿಡಿದ ಕೆಲಸ ಕೈ ಹತ್ತಲ್ಲ, ತಿಂದ ಅನ್ನ ಮೈ ಹತ್ತಲ್ಲ
ಮೇಲೆ ಬಿದ್ದು ಬಂದೋಳು ಮೂರು ಕಾಸಿಗೂ ಕಡೆ
ಮೂರೂ ಬಿಟ್ಟೋಳು ಊರಿಗೆ ದೊಡ್ಡೋಳು
ಕೋತಿಯಂಥೋನು ಕೆಣಕಿದ, ಮೂತಿಗೆ ಹೆಟ್ಟಿಸಿಕೊಂಡು ತಿಣಕಿದ
ಮುಳ್ಳಿನಿಂದ ಮುಳ್ಳು ತೆಗೆ, ಹಗೆಯಿಂದ ಹಗೆ ತೆಗೆ
ಆನೆಯಂಥದೂ ಮುಗ್ಗರಿಸ್ತದೆ
ಚರ್ಮ ಸುಕ್ಕಾದ್ರೆ ಮುಪ್ಪು, ಕರ್ಮ ಮುಕ್ಕಾದ್ರೆ ಮುಕ್ತಿ
ಹೊಟ್ಟೆ ತುಂಬಿದೋರಿಗೆ ಹುಡುಗಾಟ, ಹೊಟ್ಟೆಗಿಲ್ಲದೋರಿಗೆ ಮಿಡುಕಾಟ
ಹೆರಿಗೆ ಬೇನೆ ಕೆಲ ಗಂಟೆ ಗಂಟ, ಬಂಜೆ ಬೇನೆ ಬದುಕಿನ ಗಂಟ
ಕಟ್ಟಿದ ಕೆರೆಗೆ ಕೋಡಿ ತಪ್ಪಲ್ಲ, ಹುಟ್ಟಿದ ಮನೆಗೆ ಬೇರೆ(ಪಾಲಗುವುದು) ತಪ್ಪಲ್ಲ
ದುಡ್ಡಿಗೆ ದುಡ್ಡು ಗಂಟು ಹಾಕಿದ್ಯೋ? ಬೆನ್ನಿಗೆ ಹೊಟ್ಟೆ ಅಂಟು ಹಾಕಿದ್ಯೋ?
ಬಿಮ್ಮಗಿದ್ದಾಗ ಹಮ್ಮು, ಬಿಮ್ಮು ತಪ್ಪಿದಾಗ ದಮ್ಮು
ಊರು ಬಾವಿಗೆ ಬಿದ್ದರೂ, ಊರ ಬಾಯಿಗೆ ಬೀಳಬಾರದು
ವಶಗೆಡದೆ ಹಸಗೆಡಲ್ಲ
ಯಜಮಾನಿಲ್ಲದ ಮನೆ ಮೇಟಿ ಇಲ್ಲದ ಕಣ ಎರಡೂ ಒಂದೆ
ಯಾರೂ ಇಲ್ಲದ ಊರಿಗೆ ಹೋಗಿ ನೀರು ಮಜ್ಜಿಗೆ ಬಯಸಿದಂತೆ
ಯೋಗಿ ತಂದದ್ದು ಯೋಗಿಗೆ, ಭೋಗಿ ತಂದದ್ದು ಭೋಗಿಗೆ
ಯಾರೂ ಇಲ್ಲದ ಮನೆಗೆ ನಾನು ಜೋಗಪ್ಪ ಅಂದ
ಯಾವ ಕಾಲ ತಪ್ಪಿದರೂ ಸಾವು ಕಾಲ ತಪ್ಪದು
ಯಸಗಾತಿಗೆ ದೋಸೆ ಕೊಡೊ ಹೊತ್ತಿಗೆ, ಮೂಸಿಮೂಸಿ ಮೂಗಿನ ಕೆಳಗೆ ಹಾಕಿದ್ಲು
ಯುಕ್ತಿಯ ಮಾತು ಮಕ್ಕಳಿಂದಾದರೂ ತಿಳುಕೊ
ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮುದ್ದೆ ಉಣ್ತಾ ಮಜ್ಜಿಗೆ ಓಡಾಟ
ಯೋಗ್ಯತೆ ಅರಿಯದ ದೊರೆ ರೋಗ ಅರಿಯದ ವೈದ್ಯ ಒಂದೇ
ರಟ್ಟೆ ಮುರಿದು ರೊಟ್ಟಿ ತಿನ್ನು ಕಟ್ಟೆ ಹಾಕಿ ಅನ್ನ ಉಣ್ಣು
ರಸ ಬೆಳೆದು ಕಸ ತಿನ್ನಬೇಡ, ಹಸ ಕಟ್ಟಿ ಮೊಸರಿಗೆ ಪರದಾಡಬೇಡ
ರಾಗ ನೆನೆಪಾದಾಗ ತಾಳ ಮರೆತು ಹೋಯಿತಂತೆ
ರಾಗಿ ಇದ್ರೆ ರಾಗ ರಾಗಿ ಇಲ್ದಿದ್ರೆ ರೋಗ
ರಾಗಿಕಲ್ಲು ತಿರುಗುವಾಗ ರಾಜ್ಯವೆಲ್ಲಾ ನೆಂಟರು
ರಾಜ ಇರೋತನಕ ರಾಣಿ ಭೋಗ
ರಾತ್ರಿ ಕಂಡ ಬಾವೀಲಿ ಹಗಲು ಬಿದ್ದಂಗೆ
ರಾಮ ಅನ್ನೋ ಕಾಲದಲ್ಲಿ ರಾವಣ ಬುದ್ಧಿ
ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ
ಲಕ್ಕಿ ಸೊಪ್ಪಾದರೂ ಲೆಕ್ಕದ ಮುದ್ದೆ ಉಣಬೇಕು
ಲಂಚ ಕೊಟ್ಟು ಮಂಚ ಏರು ವಂಚನೆ ಮಾಡಿ ಕೈಲಾಸ ಏರು
ಲಾಭವಿಲ್ಲದ ವ್ಯಾಪಾರ ಕತ್ತೆ ಮೈ ಪರಚಿದಂಗೆ
ಲಿಂಗ ಹರಿದ ಮೇಲೆ ಜಂಗಮನ ಹಂಗೇನು
ಲೋಕ ತಿಳಿಯಬೇಕು ಲೆಕ್ಕ ಕಲಿಯಬೇಕು
ವಿನಾಶ ಕಾಲಕ್ಕೆ ವಿಪರೀತ ಬುದ್ಧಿ
ವ್ಯಾಪಾರಕ್ಕೆ ನಿಮಿಷ ಬೇಸಾಯಕ್ಕೆ ವರುಷ
ಶಿವರಾತ್ರಿ ಮನೆಗೆ ಏಕಾದಶಿ ಬಂದಂಗೆ
ಶಿವಾ ಅರಿಯದ ಸಾವು ಇಲ್ಲ ಮನಾ ಅರಿಯದ ಪಾಪ ಇಲ್ಲ
ಶೀಲವಂತರ ಓಣೀಲಿ ಕೋಳಿ ಮಾಯ ಆದವಂತೆ
ಶೆಟ್ಟಿ ಸುಂಗಾರ ಆಗೋದರೊಳಗೆ ಪಟ್ಟಣ ಹಾಳಾಯ್ತು
ಸಡಗರದಲ್ಲಿ ಮದುವೆ ಮಾಡಿ ಈ ಹೆಣ್ಣು ಯಾರು ಅಂದಳಂತೆ ಅತ್ತೆ
ಸತ್ತ ಮೇಲಿನ ಸೊರ್ಗಕ್ಕಿಂತ ಇದ್ದ ನರಲೋಕ ವಾಸಿ
ಸತ್ತವರಿಗೆ ಸಂಗವಿಲ್ಲ ಕೆಟ್ಟವರಿಗೆ ನೆಂಟರಿಲ್ಲ
ಸತ್ತೋರ ಮಕ್ಕಳು ಇದ್ದೋರ ಕಾಲ್ದಸೀಲಿ
ಸಮಯಕ್ಕಾದ ಹುಲ್ಲು ಕಡ್ಡಿ ಸಹಸ್ರ ಹೊನ್ನು
ಸಮಯಕ್ಕಾದವನೆ ನೆಂಟ ಕೆಲಸಕ್ಕಾದವನೆ ಬಂಟ
ಸಮಯಕ್ಕೆ ಬಾರದ ಬುದ್ಧಿ ಸಾವಿರ ಇದ್ದರೂ ಲದ್ಧಿ
ಸಮುದ್ರದ ನೆಂಟಸ್ತನ ಉಪ್ಪಿಗೆ ಬಡತನ
ಸವತಿ ಸಣ್ಣವಳಲ್ಲ ದಾಯಾದಿ ಚಿಕ್ಕವನಲ್ಲ
ಸಂತೆ ಕಟ್ಟೋಕು ಮೊದಲೇ ಸೇರಿದರು ಗಂಟು ಕಳ್ಳರು
ಸಂತೇಲಿ ಮಂತ್ರ ಹೇಳಿದಂಗೆ
ಸಂದೀಲಿ ಸಮಾರಾಧನೆ ಮಾಡ್ದಂಗೆ
ಸಾಯ್ತಿನಿ ಸಾಯ್ತಿನಿ ಅಂತ ಸಾವಿರ ಕೋಳಿ ತಿಂದನಂತೆ
ಸಾಯೋ ತನಕ ಶನಿ ಕಾಟ ಆದ್ರೆ ಬಾಳೋದು ಯಾವಾಗ
ಸಾಯೋ ಮುಂದೆ ಸಕ್ಕರೆ ತುಪ್ಪ ತಿನಿಸಿದರಂತೆ
ಸಾಲ ಅಂದ್ರೆ ಶೂಲ, ಕಾಲ ಅಂದ್ರೆ ಯಮ
ಸಾಲಗಾರನ ಮನೆಗೆ ಸವುದೆ ಹೊತ್ತರೆ ಮೇಲಣ ಬಡ್ಡಿಗೆ ಸಮವಾಯಿತು
ಸಾಲಗಾರ ಸುಮ್ಮನಿದ್ದರೂ ಸಾಕ್ಷಿದಾರ ಸುಮ್ಮನಿರ
ಸಾವಿರ ಕುದರೆ ಸರದಾರ ಮನೇ ಹೆಣ್ತಿಗೆ ಪಿಂಜಾರ
ಸಾವಿರ ಕೊಟ್ಟರೂ ಸವತಿ ಮನೆ ಬೇಡ
ಸಾವಿರ ಸಲ ಗೋವಿಂದ ಅಂದರು, ಒಬ್ಬ ದಾಸಯ್ಯನಿಗೆ ಭಿಕ್ಷೆ ನೀಡಲಿಲ್ಲ
ಸಾವಿರ ವರ್ಷ ಸಾಮು ಮಾಡಿ ಸಾಯೋ ಮುದುಕಿ ಸೊಂಟ ಮುರಿದ
ಸುಳ್ಳು ದೇವರಿಗೆ ಕಳ್ಳ ಪೂಜಾರಿ
ಸುಂಕದೋನ ಹತ್ರ ಸುಖದುಃಖ ಹೇಳಿಕೊಂಡ ಹಾಗೆ
ಸೂಜಿಯಷ್ಟು ಬಾಯಿ ಗುಡಾಣದಷ್ಟು ಹೊಟ್ಟೆ
ಸೆಟ್ಟಿ ಸಾಲ ಸತ್ತ ಮೇಲೆ ತಿಳೀತು
ಸೊಕ್ಕಿದ್ದು ಉಕ್ತದೆ ಉಕ್ಕಿದ್ದು ಒಲೆಗೆ ಹಾರ್ತದೆ
ಹಗಲು ಅರಸನ ಕಾಟ ಇರುಳು ದೆವ್ವದ ಕಾಟ
ಹಗ್ಗ ತಿನ್ನೋ ಹನುಮಂತ ರಾಯನಿಗೆ ಜ್ವಾಳದ ಶಾವಿಗೆ ಎಷ್ಟು ಕೊಟ್ಟೀಯ
ಹಗ್ಗ ಹರಿಯಲಿಲ್ಲ ಕೋಲು ಮುರಿಯಲಿಲ್ಲ
ಹಗೆಯೋನ ಕೊಲ್ಲಾಕೆ ಹಗಲೇನು ಇರುಳೇನು
ಹಣ್ಣು ತಿಂದೋನು ನುಣುಚಿ ಕೊಂಡ ಸಿಪ್ಪೆ ತಿಂದೋನು ಸಿಗ್ಹಾಕೊಂಡ
ಹಣ ಅಂದ್ರೆ ಹೆಣವೂ ಬಾಯಿ ಬಿಡ್ತದೆ
ಹಣ್ಣೆಲೆ ಉದುರುವಾಗ ಚಿಗುರೆಲೆ ನಗುತಿತ್ತು
ಹತ್ತು ಕಟ್ಟುವಲ್ಲಿ ಒಂದು ಮುತ್ತು ಕಟ್ಟು
ಹತ್ತರೊಟ್ಟಿಗೆ ಹನ್ನೊಂದು ಜಾತ್ರೆಯೊಟ್ಟಿಗೆ ಗೋವಿಂದು
ಹತ್ತು ತಿಂಗಂಳ ಪುಟ್ಟ ಹಟ್ಟೆಲ್ಲಾ ಹೆಜ್ಜೆ
ಹತ್ತು ಮಕ್ಕಳ ತಾಯಾದರೂ ಸತ್ತ ಮಗನ್ನ ಮರೆಯೊದಿಲ್ಲ
ಹತ್ತು ಜನಕ್ಕೆ ಬಿದ್ದ ನ್ಯಾಯ ಬೇಗ ಸಾಯಕಿಲ್ಲ
ಹದ ಬಂದಾಗ ಅರಗಬೇಕು ಬೆದೆ ಬಂದಾಗ ಬಿತ್ತಬೇಕು
ಹರಿದಿದ್ದೇ ಹಳ್ಳ ನಿಂತಿದ್ದೇ ತೀರ್ಥ
ಹರೆ ಬಡಿದರೂ ಮದುವೆ ಮೊರ ಬಡಿದರೂ ಮದುವೆ
ಹರೆಯಕ್ಕೆ ಬಂದಾಗ ಹಂದಿನೂ ಚಂದ
ಹಲವು ದೇವರ ಮಾಡಿ ಹಾರುವಯ್ಯ ಕೆಟ್ಟ
ಹಲ್ಲುಬಿದ್ದ ಮುದುಕಿ ಎಲ್ಲಿ ಬಿದ್ದರೇನು
ಹಸಿದ ಹೊಟ್ಟೆ ತೋರಿಸಿದರೆ ಮಸೆದ ಕತ್ತಿ ತೋರಿಸಿದರು
ಹಸಿದು ಹಲಸಿನ ಹಣ್ಣು ತಿನ್ನು ಉಂಡು ಮಾವಿನ ಹಣ್ಣು ತಿನ್ನು
ಹಳೆ ಮನೆಗೆ ಹೆಗ್ಗಣ ಸೇರಿಕೊಂಡಂಗೆ
ಹಂದಿ ತನ್ನ ಚಂದಕ್ಕೆ ವೃಂದಾವನ ಆಡ್ಕೊಣ್ತು
ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ
ಹಾರುವರ ಕೇರೀಲಿ ಹಬ್ಬ ಆದ್ರೆ ಮೂಳನಾಯಿಗೇನು ಓಡಾಟ
ಹಾಲಪ್ಪ ಅಂತ ಹೆಸರಿದ್ದರೂ ಮಜ್ಜಿಗೆಗೆ ಗತಿ ಇಲ್ಲ
ಹಾಲಿದ್ದಾಗ ಹಬ್ಬ ಮಾಡು ಹಲ್ಲಿದ್ದಾಗ ಕಡಲೆ ತಿನ್ನು
ಹಾಲು ಕುಡಿದ ಮಕ್ಕಳೇ ಬದುಕಲಿಲ್ಲ ವಿಷ ಕುಡಿದ ಮಕ್ಕಳು ಬದುಕ್ಯಾರೆ
ಹಾಲು ಮಾರಿದ್ದು ಹಾಲಿಗೆ ನೀರು ಮಾರಿದ್ದು ನೀರಿಗೆ
ಹಾವೂ ಸಾಯಲಿಲ್ಲ ಕೋಲು ಮುರೀಲಿಲ್ಲ
ಹಾಳೂರಿಗೆ ಉಳಿದೋನೇ ಗೌಡ, ಬೆಂಗಳೂರಿಗೆ ಬಂದೋನೇ ಬಹದ್ದೂರ
ಹಿಟ್ಟು ಹಳಸಿತ್ತು ನಾಯೂ ಹಸಿದಿತ್ತು
ಹಿತವಿಲ್ಲದ ಗಂಡ ಹಿಂದಿದ್ದರೇನು ಮುಂದಿದ್ದರೇನು
ಹಿತ್ತಲ ಗಿಡ ಮದ್ದಲ್ಲ ಹತ್ತರ ಮಾತು ರುಚಿಯಲ್ಲ
ಹಿರಿಯಕ್ಕನ ಚಾಳಿ ಮನೆಮಕ್ಕಳಿಗೆಲ್ಲ
ಹುಟ್ಟಿದ ಮನೆ ಹೋಳಿಹುಣ್ಣಿಮೆ ಕೊಟ್ಟ ಮನೆ ಶಿವರಾತ್ರಿ
ಹುಟ್ಟಿದಾಗ ಬಂದದ್ದು ಹೂತಾಗ ಹೋದೀತೇನು
ಹುಟ್ಟು ಗುಣ ಸುಟ್ಟರೂ ಹೊಗೊದಿಲ್ಲ
ಹುಣಸೆ ಮರ ಮುಪ್ಪಾದರೂ ಹುಳಿ ಮುಪ್ಪಲ್ಲ
ಹುತ್ತ ಬಡಿದರೆ ಹಾವು ಸಾಯುವುದೇ
ಹುಬ್ಬೆ ಮಳೇಲಿ ಬಿತ್ತಿದರೆ ಹುಲ್ಲೂ ಇಲ್ಲ ಕಾಳೂ ಇಲ್ಲ
ಹುಳ್ಳಿಕಾಳೂ ತಿನ್ನೊ ಮುಕ್ಕ ಒಬ್ಬಟ್ಟಿನ ಹೂರ್ಣ ಕೇಳಿದಂಗೆ
ಹೆಡ್ಡಾಳಾದ್ರೂ ದೊಡ್ಡಾಳು ಮೇಲು
ಹೆಣ್ಣು ಚಂದ ಕಣ್ಣು ಕುರುಡು ಅಂದಂಗೆ
ಹೆಣು ಮಕ್ಕಳು ಇದ್ದ ಮನೆ ಕನ್ನಡಿಯಂಗೆ
ಹೆತ್ತ ಅಮ್ಮನ್ನ ತಿನ್ನೋಳು ಅತ್ತೆಯಮ್ಮನ್ನ ಬಿಟ್ಟಾಳ
ಹೇಳೊದು ವೇದ ಹಾಕೊದು ಗಾಳ
ಹೊಟ್ಟೆ ತುಂಬಿದ ಮೇಲೆ ಹುಗ್ಗಿ ಮುಳ್ಳು ಮುಳ್ಳು
ಗಾಳಿ ಬಂದಾಗ ತೂರಿಕೊ, ಧಾರಣೆ ಬಂದಾಗ ಮಾರಿಕೊ
ಹೊರೆ ಹೊತ್ತುಕೊಂಡು ಗ್ರಹಗತಿ ಕೇಳ್ದಂದೆ
ಕಂಗಾಲಾದರೂ ಹಂಗಾಳಾಗಬಾರದು
ಕೊಣನಿಗೆ ಕೊಸೆಯೋ ಸಂಕಟ, ಎಮ್ಮೆಗೆ ಈಯೋ ಸಂಕಟ
ನಿಯತ್ತಿಲ್ಲದೋರಿಗೆ ಬರಕತ್ತಿಲ್ಲ
ನಾಯಿಗೆ ಕೆಲಸಿಲ್ಲ, ನಿಲ್ಲೋಕೆ ಹೊತ್ತಿಲ್ಲ
ನಡತೆ ಕಲಿಯೋದು ಏರುಬಂಡೆ ನಡತೆ ಕೆಡೋದು ಜಾರುಬಂಡೆ
ಎಂಟು ವರ್ಷಕ್ಕೆ ನನ್ನ ಮಗ ದಂಟಾದ
ಡಾವರ (=ನೀರಡಿಕೆ) ಹತ್ತಿದಾಗ ದೇವರ ಧ್ಯಾನ
ದಾಯವಾಗಿ(=ದಾನವಾಗಿ) ಸಿಕ್ಕಿದರೆ, ನನಗೆ ಒಂದಿರಲಿ ನಮ್ಮಪ್ಪನಿಗೆ ಒಂದಿರಲಿ
ಮುಲಾಜಿಗೆ ಬಸುರಾಗಿ ಹೇರೋಕೆ ತಾವಿಲ್ಲ
ಪ್ರದಕ್ಷಿಣೆ ಹಾಕಿದರೆ ಪ್ರಯೋಜನವಿಲ್ಲ, ದಕ್ಷಿಣೆ ಹಾಕಿದರೇಯ ತೀರ್ಥ ಸಿಗೋದು
ತೇದು ಇಕ್ಕಿದೋಳಿಗಿಂತ ಸಾದು ಇಕ್ಕಿದೋಳು ಹೆಚ್ಚು
ಬಾಯ್ ತೆವಲು ತೀರಿಸಿಕೊಳ್ಳೋಕೆ ಎಲೆ ಅಡಿಕೆ ಬೇಕು, ಮೈ ತೆವಲು ತೀರಿಸಿಕೊಳ್ಳೋಕೆ ಒಡಂಬಡಿಕೆ ಬೇಕು
ತೂತು ಗತ್ತಲೇಲಿ ತಾತನ ಮದುವೆ
ತುತ್ತು ತೂಕ ಕೆಡಿಸಿತು, ಕುತ್ತು ಜೀವ ಕೆಡಿಸಿತು
ತಾಳ ತಪ್ಪಿದ ಬಾಳು, ತಾಳಲಾರದ ಗೋಳು
ಅವರವರ ತಲೆಗೆ ಅವರವರದೇ ಕೈ
ಡಂಬು (=ಬೂಟಾಟಿಕೆ) ನನ್ನ ಕೇಳು, ಡಬ್ಬು ನನ್ನ ಹೆಂಡ್ರನ್ನ ಕೇಳು
ಉಂಡ ಮನೆ ಜಂತೆ ಎಣಿಸಬಾರದು
ಬೆಳ್ಳಯ್ಯ ಕಾಕಾ ಅರಿವಯ್ಯ ಮೂಕ
ಕ್ರಮ ಕಾಣದ ನಾಯಿ ಕಪಾಳೆ ನೆಕ್ತು
ಸೊಪ್ಪುಸೆದೆ ತಿನ್ನೋರ ಒಪ್ಪ ನೋಡು, ತುಪ್ಪತೊಗೆ ತಿನ್ನೋರ ರಂಪ ನೋಡು
ಎಲ್ಲರ ಹಲ್ಲೊಳಗೆ ನುರಿದು ಹೋಗೋದಕ್ಕಿಂತ ಒಣಗಿದ ಹುಲ್ಲೊಳಗೆ ಉರಿದು ಹೋಗೋದು ವಾಸಿ
ಹಣ ಎರವಲು ತಂದು ಮಣ ಉರುವಲು ಕೊಂಡ
ಸಮಯಕ್ಕಿಲ್ಲದ ನೆರವು ಸಾವಿರ ಇದ್ದರೂ ಎರವು (ಅನ್ಯ)
ಉಂಡದ್ದು ಊಟ ಆಗಲಿಲ್ಲ, ಕೊಂಡದ್ದು ಕೂಟ ಆಗಲಿಲ್ಲ
ಉಪ್ಪಿಕ್ಕಿದವರನ್ನು ಮುಪ್ಪಿನ ತನಕ ನೆನೆ
ಎಂಥೆಂಥ ದೇವರಿಗೇ ಅಂತರಾಟ ಆಗಿರುವಾಗ ಕಾಲ್ಮುರುಕ ದೇವರಿಗೆ ಕೈಲಾಸವೇ
ಹೊಳೆಗೆ ಸುರಿದರೂ ಅಳೆದು ಸುರಿ
ಹೆಂಡ್ರ ಅವಾಂತರ ತಡಿಲಾರದೆ ಗಂಡ ದೇಶಾಂತರ ಹೋದ
ಉಂಬಾಗ ಉಡುವಾಗ ಊರೆಲ್ಲ ನೆಂಟರು
ಉಂಬೋಕೆ ಉಡೋಕೆ ಅಣ್ಣಪ್ಪ ಕೆಲಸಕ್ಕಷ್ಟೇ ಇಲ್ಲಪ್ಪ
ಉಗಿದರೆ ತುಪ್ಪ ಕೆಡುತ್ತದೆ, ನುಂಗಿದರೆ ಗಂಟಲು ಕೆಡುತ್ತದೆ
ಉಡೋಕೆ ಇಲ್ಲದವ ಮೈಲಿಗೆಗೆ ಹೇಸ, ಉಂಬೋಕೆ ಇಲ್ಲದವ ಎಂಜಲಿಗೆ ಹೇಸ
ಉತ್ತಮನು ಎತ್ತ ಹೋದರೂ ಶುಭವೇ
ಉತ್ತಮ ಹೊಲ ಮಧ್ಯಮ ವ್ಯಾಪಾರ ಕನಿಷ್ಠ ಚಾಕರಿ
ಕೃಷಿತೋನಾಸ್ತಿ ದುರ್ಭಿಕ್ಷಂ
ಉದ್ಯೋಗವೇ ಗಂಡಸಿಗೆ ಲಕ್ಷಣ
ಉರಿಯೋ ಬೆಂಕೀಲಿ ಎಣ್ಣೆ ಹೊಯಿದ ಹಾಗೆ
ಊರು ದೂರಾಯಿತು ಕಾಡು ಹತ್ತರಾಯಿತು
ಊರೆಲ್ಲ ಸೂರೆ ಆದ ಮೇಲೆ ಬಾಗಿಲ ಮುಚ್ಚಿದರು
ಎಡವಿದ ಕಾಲು ಎಡವುದು ಹೆಚ್ಚು
ಎರಡು ದಾಸರ ನಂಬಿ ಕುರುಡು ದಾಸ ಕೆಟ್ಟ
ಎರಡೂ ಕೈ ತಟ್ಟಿದರೆ ಸದ್ದು
ಎಲ್ಲರೂ ಪಾಲಕೀಲಿ ಕೂತರೆ ಹೊರೋರು ಯಾರು
ಎಲ್ಲಾ ಬಣ್ಣ ಮಸಿ ನುಂಗಿತು
ಏರಿದವ ಇಳಿದಾನು
ಏಳರಲ್ಲಿ ಬರಲೋ? ಎಪ್ಪತ್ತರಲ್ಲಿ ಬರಲೋ?
ಒಂದು ಕಣ್ಣೀಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ
ಕಂಡದ್ದು ಕಾಣೆ ಉತ್ತಮ ಕಂಡದ್ದು ಕಂಡೆ ಮಧ್ಯಮ, ಕಾಣದ್ದು ಕಂಡೆ ಅಧಮ
ಒಕ್ಕಣ್ಣರ ನಾಡಿಗೆ ಹೋದ್ರೆ ಒಂದು ಕಣ್ಣು ಮುಚ್ಚಿ ನಡೆಯಬೇಕು
ಒಂಡಂಬಡಿಕೆ ಇಂದ ಆಗದು ದಡಂಬಡಿಕೆ ಇಂದ ಆದೀತೇ
ನಯಶಾಲಿ ಆದವನು ಜಯಶಾಲಿ ಆದಾನು
ಒಂದು ಹೊತ್ತು ಉಂಡವ ಯೋಗಿ ಎರಡು ಹೊತ್ತು ಉಂಡವ ಭೋಗಿ ಮೂರು ಹೊತ್ತು ಉಂಡವ ರೋಗಿ ನಾಲ್ಕು ಹೊತ್ತು ಉಂಡವ ಎತ್ತುಕೊಂಡು ಹೋಗಿ
ಒಲ್ಲದ ಗಂಡಗೆ ಬೆಣ್ಣೇಲಿ ಕಲ್ಲು
ಬಾಯಲ್ಲಿ ಬೆಲ್ಲ ಕರುಳು ಕತ್ತರಿ
ಬಾಯಲ್ಲಿ ಬಸಪ್ಪ ಹೊಟ್ಟೆಯಲ್ಲಿ ವಿಷಪ್ಪ
ಕಂಡವರ ಮಕ್ಕಳನ್ನು ಬಾವಿಯಲ್ಲಿ ದೂಡಿ ಆಳ ನೋಡಿದ ಹಾಗೆ
ಬೀದೀ ಕೂಸು ಬೆಳೀತು ಕೋಣೇ ಕೂಸು ಕೊಳೀತು
ಕಚ್ಚುವ ನಾಯಿ ಬೊಗಳದು ಬೊಗಳುವ ನಾಯಿ ಕಚ್ಚದು
ಕಡು ಕೋಪ ಬಂದಾಗ ತಡಕೊಂಡವನೇ ಜಾಣ
ಕಣ್ಣಾರೆ ಕಂಡರೂ ಪರಾಂಬರಿಸಿ ನೋಡು
ಕಪ್ಪರ ತಿಪ್ಪೇಲಿಟ್ಟರೆ ತನ್ನ ವಾಸನೆ ಬಿಟ್ಟೀತೇ
ಕಬ್ಬು ಡೊಂಕಾದ್ರೆ ಸವಿ ಡೊಂಕೇ
ಕಲ್ಲು ಇದ್ದಾಗ ನಾಯಿ ಇಲ್ಲ ನಾಯಿ ಇದ್ದಾಗ ಕಲ್ಲು ಇಲ್ಲ
ಕಳ್ಳನ ಹೆಜ್ಜೆ ಕಳ್ಳನೇ ಬಲ್ಲ
ಹಣ ಇಲ್ಲದವ ಹೆಣಕ್ಕಿಂತ ಕಡೆ
ಕಿಡಿಯಿಂದ ಕಾಡ ಸುಡ ಬಹುದು
ಕೀರ್ತಿಯೇ ಕೈಲಾಸ ಅಪಕೀರ್ತಿಯೇ ನರಕ
ಕೀಲು ಸಣ್ಣದಾದರೂ ಗಾಲಿ ನಡೆಸುತ್ತದೆ
ಕುರುಡು ಕಣ್ಣಿಗಿಂತ ಮೆಳ್ಳೆ ಗಣ್ಣು ವಾಸಿ
ಕೂತು ಉಣ್ಣೋನಿಗೆ ಕುಡಿಕೆ ಹೊನ್ನು ಸಾಲದು
ಕೆಡುವ ಕಾಲಕ್ಕೆ ಬುದ್ಧಿ ಇಲ್ಲ ಮರಣ ಕಾಲಕ್ಕೆ ಮದ್ದಿಲ್ಲ
ಕೈಗೆ ಬಂದ ತುತ್ತು ಬಾಯಿಗೆ ಇಲ್ಲ
ಕೊಡಲಿ ಕಾವು ಕುಲಕ್ಕೆ ಸಾವು
ಬಿದ್ದರೂ ಮೀಸೆ ಮಣ್ಣಾಗಲಿಲ್ಲ
ಅಡಿಗೆ ಬಿದ್ಫರೂ ಮೀಸೆ ಮೇಲೆ
ನೀರಿಳಿಯದ ಗಂಟಲಲ್ಲಿ ಕಡುಬು ತುರುಕಿದಂತೆ
ಬಂಟರ ಅಬ್ಬರ ಸೇವಿನ ಗೊಬ್ಬರ
ಊರಿಗೆ ಬಂದ ನೀರೆ ನೀರಿಗೆ ಬಾರದಿರುತ್ತಾಳೆಯೇ?
ಸರಿಸುಮಾರಾಗಿ ಸಮಾನಾರ್ಥಕ ಗಾದೆಗಳು
ಧರ್ಮಕ್ಕೆ ದಟ್ಟಿ ಕೊಟ್ಟರೆ ಹಿತ್ತಲಿಗೆ ಹೋಗಿ ಮೊಳ ಹಾಕಿದರು
ಧರ್ಮಕ್ಕೆ ಕೊಟ್ಟ ಆಕಳ ಹಲ್ಲು ಎಣಿಸಿದರು
ಆಕಳು ದಾನಕ್ಕೆ ಕೊಟ್ರೆ, ಹಲ್ಲು ಹಿಡಿದು ನೊಡಿದ್ರಂತೆ.
ಮಳೆ ಹುಯ್ದರೆ ಕೇಡಲ್ಲ; ಮಗ ಉಂಡರೆ ಕೇಡಲ್ಲ
ಮಘೆ ಮಳೆ ಬಂದಷ್ಟೂ ಒಳ್ಳೇದು, ಮನೆ ಮಗ ಉಂಡಷ್ಟೂ ಒಳ್ಳೇದು
ಓದಿ ಓದಿ ಮರುಳಾದ ಕೂಚು ಭಟ್ಟ; ಓದದೆ ಅನ್ನ ಕೊಟ್ಟ ನಮ್ಮ ರೈತ
ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆಯೇ ಮೇಲು
ಕಾಸಿಗೆ ತಕ್ಕ ಕಜ್ಜಾಯ.
ಕಂತೆಗೆ ತಕ್ಕ ಬೊಂತೆ
ದಕ್ಷಿಣೆಗೆ ತಕ್ಕ ಪ್ರದಕ್ಷಿಣೆ
ಅಗ್ಗದ ಮಾಲು;ಮುಗ್ಗಿದ ಜೋಳ
ಹರಯದಲ್ಲಿ ಹಂದಿ ಕೂಡ ಚೆನ್ನಾಗಿರುತ್ತೆ.
ಹೆತ್ತೋರ್ಗೆ ಹೆಗ್ಗಣ ಮುದ್ದು, ಕಟ್ಗೊಂಡೋರ್ಗೆ ಕೋಡಂಗಿ ಮುದ್ದು.
ಪಾಪಿ ಸಮುದ್ರ ಹೊಕ್ಕರೂ ಮೊಳಕಾಲುದ್ದ ನೀರು
ರಾಮೇಶ್ವರಕ್ಕೆ ಹೋದರೂ ಶನೇಶ್ವರನ ಕಾಟ ತಪ್ಪಲಿಲ್ಲ
ನಮಸ್ಕಾರ ಮಾಡಲು ಹೋಗಿ ದೇವಸ್ಥಾನದ ಗೋಪುರ ತಲೇ ಮೇಲೆ ಬಿತ್ತು
ಊರು ಸುಟ್ಟರೂ ಹನುಮಂತರಾಯ ಹೊರಗೆ
ನಮಾಜು ಮಾಡಲು ಹೋಗಿ ಮಸೀದಿ ಕೆಡವಿಕೊಂಡ ಹಾಗೆ
ಮಾಡಿದ್ದುಣ್ಣೋ ಮಹರಾಯ
ಉಪ್ಪು ತಿಂದವನು ನೀರು ಕುಡಿಯಲೇ ಬೇಕು
ತಾ ಮಾಡಿದ್ದು ಉತ್ತಮ, ಮಗ ಮಾಡಿದ್ದು ಮಧ್ಯಮ, ಆಳು ಮಾಡಿದ್ದು ಹಾಳು
ಅಟ್ಟ ಮೇಲೆ ಒಲೆ ಉರಿಯಿತು, ಕೆಟ್ಟ ಮೇಲೆ ಬುದ್ಧಿ ಬಂತು
ಊರು ಸೂರೆ ಹೋದ ಮೇಲೆ ಕೋಟೆ ಬಾಗಿಲು ಹಾಕಿದರಂತೆ
ಹಾವು ಸಾಯಬಾರದು , ಕೋಲು ಮುರೀಬಾರದು
ಅಕ್ಕಿ ಮೇಲೆ ಆಸೆ, ನೆಂಟರ ಮೆಲೆ ಪ್ರೀತಿ
ಬಲ್ಲವನೇ ಬಲ್ಲ ಬೆಲ್ಲದ ರುಚಿಯ
ಕತ್ತೆಗೇನು ಗೊತ್ತು ಕಸ್ತೂರಿ ವಾಸನೆ
ತೋಟ ಶೃಂಗಾರ, ಒಳಗೆ ಗೋಣಿ ಸೊಪ್ಪು
ಹೊರಗೆ ಥಳುಕು, ಒಳಗೆ ಹುಳುಕು
ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡ್ಕಂಡನಂತೆ
ಕಳ್ಳನ ಮನಸ್ಸು ಹುಳ್ಳ ಹುಳ್ಳಗೆ
ಹುಣಿಸೆ ಮುಪ್ಪಾದರೂ ಹುಳಿ ಮುಪ್ಪೆ ? ಆಕಳು ಕಪ್ಪಾದರೂ ಹಾಲು ಕಪ್ಪೆ ?
ಕಬ್ಬು ಡೊಂಕಾದರೆ ಸಿಹಿ ಡೊಂಕೆ ?
ಕೋಣನ ಮುಂದೆ ಕಿನ್ನರಿ ಬಾರಿಸಿದಂತೆ
ಗೋರ್ಕಲ್ಲ ಮೇಲೆ ಮಳೆಗರೆದಂತೆ
ಸುಂಕದವನ ಮುಂದೆ ಸುಖದುಃಖವೇ
ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ
ರೋಗಿ ಬಯಸಿದ್ದು ಹಾಲು ಅನ್ನ ವೈದ್ಯರು ಹೇಳಿದ್ದು ಹಾಲು ಅನ್ನ
ಕುರುಡರ ರಾಜ್ಯದಲ್ಲಿ ಒಕ್ಕಣ್ಣನೇ ರಾಜ
ಊರಿಗೆಲ್ಲಾ ಒಬ್ಬಳೇ ಪದ್ಮಾವತಿ
ಹಾಳೂರಿಗೆ ಉಳಿದವನೇ ಗೌಡ
ಅಳಿದೂರಿಗೆ ಉಳಿದವನೇ ಗೌಡ
ತನ್ನ ಓಣೀಲಿ ನಾಯಿಯೇ ಸಿಂಹ
ಯಾರದೋ ದುಡ್ಡು; ಎಲ್ಲಮ್ಮನ ಜಾತ್ರೆ
ಗಾಳಿ ಬಂದಾಗ ತೂರಿಕೋ
ಹುಚ್ಚುಮುಂಡೆ ಮದುವೇಲಿ ಉಂಡವನೇ ಜಾಣ
ಕೊಟ್ಟವನು ಕೋಡಂಗಿ; ಇಸ್ಕೊಂಡೋನು ಈರಭದ್ರ
ಕಾಸಿದ್ರೆ ಕೈಲಾಸ
ದುಡ್ಡೇ ದೊಡ್ಡಪ್ಪ,ಬುದ್ಧಿ ಅದರಪ್ಪ
ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ
ಓತಿಕ್ಯಾತಕ್ಕೆ ಬೇಲಿ ಗೂಟ ಸಾಕ್ಷಿ
ಪುರಾಣ ಹೇಳೊಕೆ; ಬದನೆಕಾಯಿ ತಿನ್ನೋಕೆ
ಹೇಳೋದು ಶಾಸ್ತ್ರ, ಹಾಕೋದು ಗಾಣ
ಹೇಳೋದು ಶಾಸ್ತ್ರ,ತಿನ್ನೋದು ಬದನೆಕಾಯಿ
ನೂರು ಜನಿವಾರ ಒಟ್ಟಿಗಿರಬಹುದು; ಮೂರು ಜಡೆ ಒಟ್ಟಿಗಿರುವುದಿಲ್ಲ
ಹೆಣ್ಣಿಗೆ ಹೆಣ್ಣೇ ವೈರಿ
ಗಾಯದ ಮೇಲೆ ಬರೆ ಎಳೆದಂತೆ
ಹುಣ್ಣಿನ ಮೇಲೆ ಉಪ್ಪು ಸವರಿದಂತೆ
ಅತಿ ಆಸೆ ಗತಿ ಕೇಡು
ವಿನಾಶ ಕಾಲೇ ವಿಪರೀತ ಬುದ್ಧಿ
ಆಸೆಯೇ ದು:ಖಕ್ಕೆ ಮೂಲ
ಅತಿಯಾದರೆ ಅಮೃತವೂ ವಿಷ
ಓಲೆ ಆಸೆಗೆ ಬೆಕ್ಕು ಮೂಗುತಿ ಕಳಕೊಂಡಿತು
ಅತಿ ಸ್ನೇಹ ಗತಿ ಕೆಡಿಸಿತು
ಹೊಳೆಯಲ್ಲಿ ಹುಣಿಸೇ ಹಣ್ಣು ಕಿವಿಚಿದಂತೆ
ನೀರಿನಲ್ಲಿ ಹೋಮ ಮಾಡಿದಂತೆ
ಅಟ್ಟದ ಮೇಲಿಂದ ಬಿದ್ದವನಿಗೆ ದಡಿಗೆ ತಗೊಂಡು ಹೇರಿದರಂತೆ
ತೋಳ ಬಿದ್ದರೆ ಆಳಿಗೊಂದು ಕಲ್ಲು
ಮೆತ್ತಗಿದ್ದಲ್ಲಿ ಮತ್ತೊಂದು ಗುದ್ದಲಿ
ನಿಸ್ಸಹಾಯಕರ ಮೇಲೆ ಹುಲ್ಲುಕಡ್ಡಿ ಸಹ ಭುಸುಗುಡುತ್ತದೆ
ಮೆತ್ತಗಿದ್ದವರನ್ನು ಮೊಣಕೈಯಲ್ಲಿ ಗುದ್ದಿದರು
ಕೈ ತೋರಿಸಿ ಅವಲಕ್ಷಣ ಅನ್ನಿಸಿಕೊಂಡರಂತೆ
ಅಂಗೈ ತೋರಿಸಿ ಅವಲಕ್ಷಣ ಅಂತ ಅನ್ನಿಸಿಕೊಂಡರಂತೆ
ಇರಲಾರದೆ ಇರುವೆ ಬಿಟ್ಟುಕೊಂಡು ಕಿರುಗೂರಿಗೆ ಹೋದರಂತೆ ಕಣಿ ಕೇಳುವುದಕ್ಕೆ
ದಾರಿಯಲ್ಲಿ ಹೋಗುತ್ತಿದ್ದ ಮಾರಿಯನ್ನು ಕರೆದು ಮನೆಗೆ ಸೇರಿಸಿಕೊಂಡಂತೆ
ಬೀದೀಲಿ ಹೋಗೋ ಮಾರೀನ ಮನೆ ಹೊಕ್ಕು ಹೋಗು ಅಂದಂತಾಯ್ತು
ಕೊಚ್ಚೆ ಮೇಲೆ ಕಲ್ಲು ಹಾಕಿದಂತೆ
ಸಲಿಗೆ ಕೊಟ್ಟ ಸೊಣಗ ಸಟ್ಟುಗ ನೆಕ್ಕಿತಂತೆ
ಇತ್ತತ್ತ ಬಾ ಅಂದ್ರೆ ಇದ್ದ ಮನೆ ಕಿತ್ಕೊಂಡರು
ಅಯ್ಯೋ ಪಾಪ ಅಂದ್ರೆ ಅರ್ಧ ಆಯುಸ್ಸು
ಬಡವನ ಸಿಟ್ಟು ದವಡೆಗೆ ಮೂಲ
ಬಡವನ ಕೋಪ ದವಡೆಗೆ ಮೂಲ
ಬಡವ ನೀ ಮಡಗಿದ ಹಾಗಿರು
ಕುದಿಯುವ ಎಣ್ಣೆಯಿಂದ ಕಾದ ತವದ ಮೇಲೆ ಬಿದ್ದ ಹಾಗೆ
ಬಾಣಲೆಯಿಂದ ಬೆಂಕಿಗೆ
ಕುರಿ ಕಾಯೋದಕ್ಕೆ ತೋಳನನ್ನು ಕಳಿಸಿದರಂತೆ
ಬೇಲಿಯೇ ಎದ್ದು ಹೊಲ ಮೇಯ್ದಂತೆ
ಕಾಡಿಗೆ ಹೋಗೋ ವಯಸ್ಸಿನಲ್ಲಿ ಬ್ರಾಹ್ಮಣ ಓಂ ಕಲಿತ
ನನ್ನ ಮಗ ಎಂಟು ವರ್ಷಕ್ಕೆ ದಂಟು ಎಂದ
ಬೆಳೆಯುವ ಪೈರು ಮೊಳಕೆಯಲ್ಲಿ
ಮೂರು ವರ್ಷಕ್ಕೆ ಬಂದಿದ್ದು ಮೂವತ್ತು ವರ್ಷಕ್ಕೆ ಬಂತು
ಯಥಾ ರಾಜಾ ತಥಾ ಪ್ರಜಾ
ನೂಲಿನಂತೆ ಸೀರೆ; ತಾಯಿಯಂತೆ ಮಗಳು
ಸಂಕಟ ಬಂದಾಗ ವೆಂಕಟರಮಣ
ಕಾರ್ಯವಾಸಿ ಕತ್ತೆ ಕಾಲು ಕಟ್ಟು
ಉಗುರಿನಲ್ಲಿ ಹೋಗೋ ಚಿಗುರಿಗೆ ಕೊಡಲಿ ಏಕೆ ?
ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ
ಆಕಾಶ ನೋಡೊದಕ್ಕೆ ನೂಕುನುಗ್ಗಲೆ ?
ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?
ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು
ಬೆಳ್ಳಗಿರೋದೆಲ್ಲ ಹಾಲಲ್ಲ
ಅಲ್ಪರ ಸಂಗ ಅಭಿಮಾನ ಭಂಗ
ಸಗಣಿಯವನೊಡನೆ ಸ್ನೇಹಕ್ಕಿಂತ ಗಂಧದವನ ಜೊತೆ ಗುದ್ದಾಟ ಮೇಲು
ಸಗಣಿಯವನ ಸರಸಕ್ಕಿಂತ, ಗಂಧದವನ ಗುದ್ದಾಟ ಮೇಲು
ಅಲ್ಪ ವಿದ್ಯಾ ಮಹಾಗರ್ವಿ
ಅಂಬಲಿ ಕುಡಿಯುವವನಿಗೆ, ಮೀಸೆ ಹಿಡಿಯುವವನೊಬ್ಬ
ಗಂಜಿ ಕುಡಿಯೋನಿಗೆ,ಮೀಸೆ ಹಿಡಿಯುವವನೊಬ್ಬ
ತುಂಬಿದ ಕೊಡ ತುಳುಕುವುದಿಲ್ಲ
ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ತದೆಯೆ ?
ನರಿ ಕೂಗು ಗಿರಿ ಮುಟ್ಟುತ್ತದೆಯೆ ?
ಕೈ ಕೆಸರಾದರೆ ಬಾಯಿ ಮೊಸರು
ದುಡಿಮೆಯೇ ದುಡ್ಡಿನ ತಾಯಿ
ಕಾಯಕವೇ ಕೈಲಾಸ
ಆಳಾಗಬಲ್ಲವನು ಅರಸಾಗಬಲ್ಲ
ಕಷ್ಟ ಪಟ್ಟರೆ ಫಲವುಂಟು
ದುಡಿಮೆಯೇ ದೇವರು
ಕುಂಬಾರನಿಗೆ ವರುಷ; ದೊಣ್ಣೆಗೆ ನಿಮಿಷ
ಗಿಣಿ ಸಾಕಿ ಗಿಡುಗದ ಕೈಗೆ ಕೊಟ್ಟರು
ಚಿತ್ತಾರದ ಅಂದವನ್ನು ಮಸಿ ನುಂಗಿತು
ಸಾವಿರ ಚಿತ್ತಾರ ಮಸಿ ನುಂಗಿತು
ಕದ ತಿನ್ನೋವನಿಗೆ ಹಪ್ಪಳ ಈಡಲ್ಲ
ರಾವಣಾಸುರನ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ
ಸಮುದ್ರ ದಾಟಿದವನಿಗೆ ಹಸುವಿನ ಹೆಜ್ಜೆ ದೊಡ್ಡದೆ
ಮಾತು ಆಡಿದರೆ ಹೋಯಿತು; ಮುತ್ತು ಒಡೆದರೆ ಹೋಯಿತು
ಮಾತು ಬೆಳ್ಳಿ; ಮೌನ ಬಂಗಾರ
ಮಾತು ಮನೆ ಕೆಡಿಸಿತು; ತೂತು ಒಲೆ ಕೆಡಿಸಿತು
ಊಟ ಬಲ್ಲವನಿಗೆ ರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲ
ಒಂದು ಹೊತ್ತು ತಿನ್ನೋವ್ನು ಯೋಗಿ, ಎರಡು ಹೊತ್ತು ತಿನ್ನೋವ್ನು ಭೋಗಿ, ಮೂರು ಹೊತ್ತು ತಿನ್ನೋವ್ನು ರೋಗಿ, ನಾಕು ಹೊತ್ತು ತಿನ್ನೋವ್ನ ಎತ್ಕೊಂಡು ಹೋಗಿ
ಹೊತ್ತಿಗಿಲ್ಲದ ಗಾದೆ, ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ.
ಆದ ಕೆಲಸಕ್ಕೆ ಅತ್ತೆಗಳು ಬಂದಂತೆ
ಊಟಕ್ಕಿಲ್ಲದ ಉಪ್ಪಿನಕಾಯಿ ..ಕ್ಕೆ ಸಮಾನ
ಹಲ್ಲಿದ್ದಾಗ ಕಡ್ಲೆ ಇಲ್ಲ; ಕಡ್ಲೆ ಇದ್ದಾಗ ಹಲ್ಲಿಲ್ಲ
ಚೆಲ್ಲಿದ ಹಾಲಿಗೆ ಅತ್ತು ಪ್ರಯೋಜನವಿಲ್ಲ
ಬಂದ ದಾರಿಗೆ ಸುಂಕವಿಲ್ಲ
ತಾಯಿಗಿಂತ ಬಂಧುವಿಲ್ಲ; ಉಪ್ಪಿಗಿಂತ ರುಚಿಯಿಲ್ಲ
ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ತೂಗಬಲ್ಲುದು
ಕಣ್ಣರಿಯದಿದ್ದರೂ ಕರುಳರಿಯುತ್ತದೆ
ಬೆರಳು ತೋರಿಸಿದರೆ ಹಸ್ತ ನುಂಗಿದರಂತೆ
ಉಸ್ ಎಂದರೆ ಉಸಳಿ ಬೇಡಿದ್ದನಂತೆ
ಮನೆ ತುಂಬ ಮುತ್ತಿದ್ದರೆ ...ಗೂ ಪೋಣಿಸಿಕೊಂಡರಂತೆ
ಮುತ್ತು ಹೆಚ್ಚಾಯ್ತು ಅಂತ ಎಲ್ಲೆಲ್ಲಿಗೋ ತೊಟ್ರಂತೆ.
ಗಂಧ ಹೆಚ್ಚಾಯ್ತು ಅಂತ ಎಲ್ಲೆಲ್ಲಿಗೂ ಬಳಿದುಕೊಂಡರಂತೆ
ಅತ್ತ ದರಿ; ಇತ್ತ ಪುಲಿ
ಬಿಸಿ ತುಪ್ಪ; ನುಂಗೋದಕ್ಕೂ ಆಗೊಲ್ಲ; ಉಗುಳೋದಕ್ಕೂ ಆಗೊಲ್ಲ
ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ
ಮನೇಗೆ ಬೆಂಕಿ ಬಿದ್ದಾಗ ಭಾವಿ ತೋಡಕ್ಕೆ ಶುರು ಮಾಡಿದರಂತೆ
ಸಂತೆ ಹೊತ್ತಿಗೆ ಮೂರು ಮೊಳ ನೇದ ಹಾಗೆ
ಎತ್ತು ಈಯಿತು ಅಂದರೆ ಕೊಟ್ಟಿಗೆಗೆ ಕಟ್ಟು ಅಂದರಂತೆ
ಆತುರಗಾರನಿಗೆ ಬುದ್ಧಿ ಮಟ್ಟ
ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು
ತನಗೇ ಜಾಗವಿಲ್ಲ; ಕೊರಳಲ್ಲಿ ಡೋಲು ಬೇರೆ
ಉಣ್ಣೋಕಿಲ್ಲದಿದ್ದರೂ ಸಣ್ಣಕ್ಕಿ ಅನ್ನ ತಿಂದರು ; ಉಡೋಕಿಲ್ಲದಿದ್ದರೂ ಪಟ್ಟೆ ಸೀರೆ ಉಟ್ಟರು
ನದೀನೇ ನೋಡದೆ ಇರೋನು ಸಮುದ್ರ ವರ್ಣನೆ ಮಾಡಿದ ಹಾಗೆ
ಐದು ಕುರುಡರು ಆನೆಯನ್ನು ಬಣ್ಣಿಸಿದ ಹಾಗೆ
ಅಲ್ಪನಿಗೆ ಐಶ್ವರ್ಯ ಬಂದ್ರೆ ಅರ್ಧ ರಾತ್ರೀಲಿ ಕೊಡೆ ಹಿಡಿದನಂತೆ
ಸಣ್ಣವರ ನೆರಳು ಉದ್ದವಾದಾಗ ಸೂರ್ಯನಿಗೂ ಮುಳುಗುವ ಕಾಲ
ಮಂತ್ರಕ್ಕಿಂತ ಉಗುಳೇ ಜಾಸ್ತಿ
ಮೂಗಿಗಿಂತ ಮೂಗುತಿ ಭಾರ
ಇಬ್ಬರ ಜಗಳ ಮೂರನೆಯವನಿಗೆ ಲಾಭ
ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು.
ಕೋಣನೆರಡುಂ ಹೋರೆ ಗಿಡುವಿಂಗೆ ಮಿತ್ತು (ರಾಘವಾಂಕ)
ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು
ಏತಿ ಅಂದರೆ ಪ್ರೇತಿ ಅಂದಂತೆ
ಓದುವಾಗ ಓದು; ಆಡುವಾಗ ಆಡು
ಓದಿ ಬರೆಯೋ ಕಾಲದಲ್ಲಿ ಆಡಿ ಮಣ್ಣು ಹುಯ್ಕೊಂಡರು
ಕೈಯ್ಯಲ್ಲೆ ಬೆಣ್ಣೆ ಇಟ್ಟುಕೊಂಡು,ತುಪ್ಪಕ್ಕೆ ಊರೆಲ್ಲ ಅಲೆದರಂತೆ
ಕಂಕುಳಲ್ಲಿ ಮಗು ಇಟ್ಟುಕೊಂಡು ಊರೆಲ್ಲ ಹುಡುಕಿದರಂತೆ
ಊರಿಗೆ ಉಪಕಾರಿ, ಮನೆಗೆ ಮಾರಿ
ಮನೆಗೆ ಮಾರಿ, ಪರರಿಗೆ ಉಪಕಾರಿ
ತಮ್ಮನೇಲಿ ಹೆಗ್ಗಣ ಸತ್ತು ಬಿದ್ದಿದ್ದರೂ ಬೇರೇ ಮನೇ ಸತ್ತ ನೊಣದ ಕಡೆಗೆ ಬೆಟ್ಟು ಮಾಡಿದರು
ತನ್ನ ಎಲೇಲಿ ಕತ್ತೆ ಸತ್ತು ಬಿದ್ದಿದ್ರೆ , ಪಕ್ಕದ ಎಲೇಲಿ ನೊಣ ಹೊಡೆಯಕ್ಕೆ ಹೋದ
ಕೋತಿಗೆ ಹೆಂಡ ಕುಡಿಸಿದಂತೆ
ಮಂಗನ ಕೈಗೆ ಮಾಣಿಕ್ಯ ಕೊಟ್ಟ ಹಾಗೆ
ಹೆಂಡ ಕುಡಿದ ಕಪಿಗೆ ಚೇಳು ಕಡಿದ ಹಾಗೆ
ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡರು
ಅಮ್ಮನವರು ಪಟ್ಟಕ್ಕೆ ಬಂದಾಗ,ಅಯ್ಯನವರು ಚಟ್ಟಕ್ಕೇರಿದರು
ಕೆಲಸವಿಲ್ಲದ ಬಡಗಿ ಮಗುವಿನ ... ಕೆತ್ತಿದ
ಕೆಲಸವಿಲ್ಲದ ಕುಂಬಾರ ಮಕ್ಕಳ ಅಂ.. ತಟ್ಟಿದ
ಕೆಲಸವಿಲ್ಲದ ಆಚಾರಿ ಮಗನ ತಲೆ ಕೆತ್ತಿದನಂತೆ
ಆರಕ್ಕೆ ಹೆಚ್ಚಿಲ್ಲ; ಮೂರಕ್ಕೆ ಕಡಿಮೆಯಿಲ್ಲ
ಆರಕ್ಕೇರಲ್ಲ, ಮೂರಕ್ಕಿಳಿಯಲ್ಲ
ಕಳ್ಳನ ಹೆಂಡತಿ ಎಂದಿದ್ದರೂ ...ಯೆ
ಕಳ್ಳನ ಹೆಂಡತಿ ಎಂದಿದ್ದರೂ ಮುಂ..
ಶರಣರ ಬದುಕನ್ನು ಅವರ ಮರಣದಲ್ಲಿ ನೋಡು
ಅಯ್ಯಾ ಎಂದರೆ ಸ್ವರ್ಗ; ಎಲವೋ ಎಂದರೆ ನರಕ
ಸಜ್ಜನರ ಸಂಗ ಹೆಜ್ಜೇನು ಸವಿದಂತೆ
ಈಸಿ ನೋಡು , ಇದ್ದು ಜೈಸಿ ನೋಡು
ಹೂವಿನ ಜೊತೆ ದಾರ ಮುಡಿಯೇರಿತು
ಹೂವಿನಿಂದ ನಾರಿಗೂ ಸ್ವರ್ಗ
ಗೆದ್ದೆತ್ತಿನ ಬಾಲ ಹಿಡಿದ ಹಾಗೆ
ಆರು ದೋಸೆ ಕೊಟ್ರೆ ಅತ್ತೆ ಕಡೆ, ಮೂರು ದೋಸೆ ಕೊಟ್ರೆ ಸೊಸೆ ಕಡೆ
ಆರು ದೋಸೆ ಕೊಟ್ರೆ ಅತ್ತೆ ಕಡೇ,ಮೂರು ದೋಸೆ ಕೊಟ್ರೆ ಮಾವನ ಕಡೆ
ನಾಯಿ ಬಾಲ ಡೊಂಕು
ನಾಯಿ ಬಾಲಕ್ಕೆ ದೆಬ್ಬೆ ಕಟ್ಟಿದ ಹಾಗೆ
ಜಟ್ಟಿ ಜಾರಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ
ಜಟ್ಟಿ ಜಾರಿದರೆ ಅದೂ ಒಂದು ಪಟ್ಟು
ಮುದಿ ... ಮಹಾ ಪತಿವ್ರತೆ (ವೃದ್ಧ ನಾರೀ ಪತಿವ್ರತಾ)
ಸೂಳೆ ಮುಪ್ಪಾಗಿ ಗೊರವಿತ್ತಿಯಾದಳು
ಕಂಕುಳಲ್ಲಿ ದೊಣ್ಣೆ; ಕೈಯಲ್ಲಿ ಶರಣಾರ್ಥಿ
ಬಾಯಲ್ಲಿ ಬೆಣ್ಣೆ;ಬಗಲಲ್ಲಿ ದೊಣ್ಣೆ.
ಕೂರೆಗೆ ಹೆದರಿ ಸಂತೆಯಲ್ಲಿ ಸೀರೆ ಬಿಚ್ಚಿದರಂತೆ
ಕೂರೆಗೆ ಹೆದರಿ ಸೀರೆ ಬಿಚ್ಚೆಸೆದರು
ಕಾಸು ಕೊಟ್ಟು ಬ್ರಹ್ಮೇತಿ ತಗೊಂಡರು
ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡ ಹಾಗೆ
ಹೆಂಗಸರ ಬುದ್ಧಿ ಮೊಣಕಾಲ ಕೆಳಗೆ
ಹೆಂಗಸರ ಬುದ್ಧಿ ಸೊಂಟದಿಂದ ಕೆಳಗೆ
ಹಾಡ್ತಾ ಹಾಡ್ತಾ ರಾಗ; ಉಗುಳ್ತಾ ಉಗುಳ್ತಾ ರೋಗ
ಹಾಡ್ತಾ ಹಾಡ್ತಾ ರಾಗ , ನರಳ್ತಾ ನರಳ್ತಾ ರೋಗ
ಹೊಸ ವೈದ್ಯನಿಗಿಂತ ಹಳೆ ರೋಗಿಯೇ ಮೇಲು
ಹೊಸ ಡಾಕ್ಟರ್‌ಗಿಂತ ಹಳೇ ಕಾಂಪೌಂಡರ್ ವಾಸಿ
ಉರಿಯೋ ಗಾಯಕ್ಕೆ ಉಪ್ಪು ಸವರಿದಂತೆ
ಕುರು ಮೇಲೆ ಬರೆ ಎಳೆದ ಹಾಗೆ
ಸಮುದ್ರದ ನೆಂಟಸ್ತನ ; ಉಪ್ಪಿಗೆ ಬಡತನ
ಸಮುದ್ರದ ಮದ್ಯೆ ಇದ್ದರೂ ಉಪ್ಪಿಗೆ ಬರವಂತೆ
ಇತರೆ
ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿದ್ರು
ರೇಶ್ಮೆ ಶಾಲಿನಲ್ಲಿ ಸುತ್ತಿದ ಚಪ್ಪಲಿ ಏಟು
ಉಪ್ಪು ತಿಂದ ಮನೆಗೆ ಎರಡು ಬಗೆಯ ಬಂದ
ಅಡಿಕೆ ಕದ್ದ ಮಾನ ಆನೆ ಕೊಟ್ರೂ ಬರೊಲ್ಲ
ಅಲ್ಲುಂಟೆ, ಇಲ್ಲುಂಟೆ, ಕಲ್ಲಲ್ಲುಂಟೆ, ಶಿವದಾನ.
ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು.
(ಅವರು) ಚಾಪೆ ಕೆಳಗೆ ತೂರಿದರೆ (ನೀನು) ರಂಗೋಲಿ ಕೆಳಗೆ ತೂರು.
ವೇದ ಸುಳ್ಳಾದ್ರು ಗಾದೆ ಸುಳ್ಳಲ್ಲ.
ಬೆಂಕಿ ಇಲ್ಲದೆ ಹೊಗೆ ಏಳಲ್ಲ
ಹಿತ್ತಲ ಗಿಡ ಮದ್ದಲ್ಲ
ಇರುಳು ಕಂಡ ಭಾವೀಲಿ ಹಗಲು ಬಿದ್ದರು
ಒಲಿದರೆ ನಾರಿ ಮುನಿದರೆ ಮಾರಿ
ರಾತ್ರಿ ಎಲ್ಲ ರಾಮಾಯಣ ಕೇಳಿ, ಬೆಳಗಾಗೆದ್ದು ರಾಮಂಗೂ ಸೀತೆಗೂ ಏನು ಸಂಬಂಧ ಅಂದ್ರಂತೆ
ಕಳ್ಳನ್ನ ನಂಬಿದ್ರೂ ಕುಳ್ಳನ್ನ ನಂಬಬಾರದು
ಮೋಟಾಳಿಗೊಂದು ಚೋಟಾಳು
ಮಳ್ಳೀ ಮಳ್ಳಿ ಮಂಚಕ್ಕೆ ಎಷ್ಟು ಕಾಲು ಅಂದ್ರೆ, ಮೂರು ಮತ್ತೊಂದು ಅಂದ್ಲಂತೆ
ಹಾಲಿನಲ್ಲಿ ಹುಳಿ ಹಿಂಡಿದಂತೆ
ಕೂತು ತಿನ್ನುವವನಿಗೆ ಕುಡಿಕೆ ಹಣ ಸಾಲದು
ದೇವರು ವರ ಕೊಟ್ಟರೂ ಪೂಜಾರಿ ವರ ಕೊಡ
ಚಂಡಾಲ ದೇವರಿಗೆ ಚಪ್ಪಲಿ ಸೇವೆ
ಹೆಂಡ ಕುಡಿಯುವ ದೇವರಿಗೆ ಹೇ.. ತಿನ್ನುವ ಪೂಜಾರಿ
ಹನುಮಂತರಾಯ ಹಗ್ಗ ತಿನ್ನುವಾಗ ಪೂಜಾರಿ ಶಾವಿಗೆ ಬೇಡಿದನಂತೆ
ಬಡವರ ಮನೆ ಊಟ ಚೆನ್ನ, ದೊಡ್ಡವರ ಮನೆ ನೋಟ ಚೆನ್ನ
ಎತ್ತಿಗೆ ಜ್ವರ ಬಂದ್ರೆ, ಎಮ್ಮೆಗೆ ಬರೆ ಎಳೆದರಂತೆ
ಶಂಖದಿಂದ ಬಿದ್ದರೆ ತೀರ್ಥ
ಈಚಲ ಮರದ ಕೆಲಗೆ ಕುಳಿತು ಮಜ್ಜಿಗೆ ಕುಡಿದ ಹಾಗೆ
ಬಾಯಿ ಬಿಟ್ಟರೆ ಬಣ್ಣಗೇಡು
ಮದುವೆ ಮಾಡಿ ನೋಡು, ಮನೆ ಕಟ್ಟಿ ನೋಡು
ಅಜ್ಜಿಗೆ ಅರಿವೆ ಚಿಂತೆ ಮೊಮ್ಮಗಳಿಗೆ ಮಿಂ..ನ ಚಿಂತೆ
ಗಂಡ ಹೆಂಡಿರ ಜಗಳ ಉಂಡು ಮಲಗುವ ತನಕ
ಊರಿಗೆ ಬಂದವಳು ನೀರಿಗೆ ಬಾರದೇ ಇರುವಳೇ?
ಶಿವಪೂಜೇಲಿ ಕರಡಿ/ಕರಡಿಗೆ ಬಿಟ್ಟ ಹಾಗೆ
ಇದ್ದದ್ದು ಇದ್ದ ಹಾಗೆ ಹೇಳಿದ್ರೆ, ಎದ್ದು ಬಂದು ಎದೆಗೆ ಒದ್ದನಂತೆ
ಒಕ್ಕಣ್ಣನ ರಾಜ್ಯದಲ್ಲಿ ಒಂದು ಕಣ್ಣು ಮುಚ್ಚಿಕೊಂಡು ನಡಿ
ಅಡುಗೆ ಮಾಡಿದವಳಿಗಿಂತ ಬಡಿಸಿದವಳೇ ಮೇಲು
ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು
ಸೀರೆ ಗಂಟು ಬಿಚ್ಚೋವಾಗ ದಾರದ ನಂಟು ಯಾರಿಗೆ ಬೇಕು?
ಕುಡಿಯೋ ನೀರಿನಲ್ಲಿ ಬೆರಳಾಡಿಸೋ ಬುದ್ಧಿ (ಕುಡಿಯೋ ನೀರಿನಲ್ಲಿ ... ಅದ್ದುವ ಬುದ್ಧಿ)
ಮೀಸೆ ಬಂದಾಗ ದೇಶ ಕಾಣದು ಮೊ.. ಬಂದಾಗ ನೆಲ ಕಾಣದು
ಅನುಕೂಲ ಸಿಂಧು; ಅಭಾವ ವೈರಾಗ್ಯ
ಹತ್ತಾರು ಜನ ಓಡಾಡೋ ಕಡೇಲಿ ಹುಲ್ಲು ಬೆಳೆಯೊಲ್ಲ
ಎಲ್ಲಾರ ಮನೇ ದೋಸೇನೂ ತೂತು
ಅತ್ತೆ ಮೇಲಿನ ಕೋಪ ಕೊತ್ತಿ ಮೇಲೆ
ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಂಡಂತೆ
ಮಾಡಿದೋರ ಪಾಪ ಆಡಿದೋರ ಬಾಯಲ್ಲಿ
ದುರ್ಭಿಕ್ಷದಲ್ಲಿ ಅಧಿಕ ಮಾಸ ಬಂದಂತೆ
ಹೋದೆಯಾ ಪಿಶಾಚಿ ಅಂದರೆ ಬಂದೆ ಗವಾಕ್ಷೀಲಿ ಅಂದಂತೆ
ಹೌದಪ್ಪನ ಚಾವಡಿಯಲ್ಲಿ ಅಲ್ಲಪ್ಪನನ್ನು ಕೇಳುವವರಾರು ?
ಹೊಳೆ ನೀರಿಗೆ ದೊಣೆನಾಯ್ಕನ ಅಪ್ಪಣೆ ಏಕೆ ?
ರಂಗನ ಮುಂದೆ ಸಿಂಗನೆ ? ಸಿಂಗನ ಮುಂದೆ ಮಂಗನೆ ?
ಜಾಣನಿಗೆ ಮಾತಿನ ಪೆಟ್ಟು; ದಡ್ಡನಿಗೆ ದೊಣ್ಣೆಯ ಪೆಟ್ಟು
ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು
ಮೇಲೆ ಬಿದ್ದ ಸೂಳೆ ಮೂರು ಕಾಸಿಗೂ ಬೇಡ
ಬಿರಿಯಾ ಉಂಡ ಬ್ರಾಹ್ಮಣ ಭಿಕ್ಷೆ ಬೇಡಿದ
ತೋಳ ಹಳ್ಳಕ್ಕೆ ಬಿದ್ದರೆ ಆಳಿಗೊಂದು ಕಲ್ಲು
ಅಂಕೆ ಇಲ್ಲದ ಕಪಿ ಲಂಕೆ ಸುಟ್ಟಿತು
ಬೆಟ್ಟ ಅಗೆದು ಇಲಿ ಹಿಡಿದಂತೆ
ಇಲಿ ಬಂತು ಎಂದರೆ ಹುಲಿ ಬಂತು ಎಂದರು
ಇಡಿಯ ಮುಳುಗಿದವನಿಗೆ ಚಳಿಯೇನು?ಮಳೆಯೇನು?
ಬೆಕ್ಕಿಗೆ ಚೆಲ್ಲಾಟ: ಇಲಿಗೆ ಪ್ರಾಣಸಂಕಟ
ಕೋಣೆಯ ಕೂಸು ಕೊಳೆಯಿತು; ಓಣಿಯ ಕೂಸು ಬೆಳೆಯಿತು
ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದಂತೆ
ಸತ್ಯಕ್ಕೆ ಸಾವಿಲ್ಲ; ಸುಳ್ಳಿಗೆ ಸುಖವಿಲ್ಲ
ದೇವಸ್ಥಾನದಲ್ಲಿ ಊದಿನ ಕಡ್ಡಿ ಹಚ್ಚದಿದ್ದರೂ ಚಿಂತೆಯಿಲ್ಲ; ... ಬಿಡಬೇಡ
ಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆ ಬಂತು
ಸಂಸಾರ ಗುಟ್ಟು; ವ್ಯಾಧಿ ರಟ್ಟು
ಮದುವೇಲಿ ಗಂಡು, ಸ್ಮಶಾನ ಯಾತ್ರೇಲಿ ಹೆಣವಾಗೋ ಬಯಕೆ
ಐದು ಬೆರಳೂ ಒಂದೇ ಸಮ ಇರೋಲ್ಲ
ಕೋಪದಲ್ಲಿ ಕೊಯ್ದ ಮೂಗು ಶಾಂತವಾದ ಮೇಲೆ ಬರುತ್ತದೆಯೆ ?
ಮುಖ ನೋಡಿ ಮಣೆ ಹಾಕು
ದೀಪದ ಕೆಳಗೆ ಯಾವತ್ತೂ ಕತ್ತಲೇ
ಕುರಿ ಕೊಬ್ಬಿದಷ್ಟೂ ಕುರುಬನಿಗೇ ಲಾಭ
ತಮ್ಮ ಕೋಳಿ ಕೂಗಿದ್ದರಿಂದಲೇ ಬೆಳಗಾಯಿತು ಎಂದುಕೊಂಡರು
ಮಂತ್ರಕ್ಕೆ ಮಾವಿನ ಕಾಯಿ ಉದುರುತ್ತದೆಯೆ ?
ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ
ಎಂಜಲು ಕೈಯಲ್ಲಿ ಕಾಗೆ ಓಡಿಸದ ಬುದ್ಧಿ
ಸಾವಿರ ಕುದುರೆ ಸರದಾರ, ಮನೆ ಹೆಂಡತಿ ಕಾಸ್ತಾರ
ಆಪತ್ತಿಗಾದವನೇ ನೆಂಟ
ಶಂಖದಿಂದ ಬಂದರೇ ತೀರ್ಥ
ಹನಿಹನಿಗೂಡಿದರೆ ಹಳ್ಳ; ತೆನೆತೆನೆಗೂಡಿದರೆ ಬಳ್ಳ
ಎಲ್ಲಾ ಜಾಣ; ತುಸ ಕೋಣ
ಕಟ್ಟಿಕೊಂಡವಳು ಕಡೇ ತನಕ; ಇಟ್ಟುಕೊಂಡವಳು ಇರೋ ತನಕ
ಕೆಟ್ಟ ಕಾಲ ಬಂದಾಗ ಕಟ್ಟಿಕೊಂಡವಳೂ ಕೆಟ್ಟವಳು
ನವಿಲನ್ನು ನೋಡಿ ಕೆಂಬೂತ ಪುಕ್ಕ ಕೆದರಿತಂತೆ
ಅಂತೂ ಇಂತೂ ಕುಂತಿ ಮಕ್ಕಳಿಗೆ ರಾಜ್ಯವಿಲ್ಲ
ಅಂಕೆಯಲ್ಲಿದ್ದ ಹೆಣ್ಣು, ಮಜ್ಜಿಗೆಯಲ್ಲಿದ್ದ ಬೆಣ್ಣೆ ಕೆಡೊಲ್ಲ
ಇದ್ದೋರು ಮೂರು ಜನರಲ್ಲಿ ಕದ್ದೋರು ಯಾರು ?
ಮುಳುಗುತ್ತಿರುವವನಿಗೆ ಹುಲ್ಲು ಕಡ್ಡಿಯೂ ಆಸರೆ
ಹುಲ್ಲಿನ ಬಣವೇಲಿ ಸೂಜಿ ಹುಡುಕಿದ ಹಾಗೆ
ಹೆದರುವವರ ಮೇಲೆ ಕಪ್ಪೆ ಎಸೆದಂತೆ
ಹೊಳೆ ದಾಟಿದ ಮೇಲೆ ಅಂಬಿಗನ ಹಂಗೇಕೆ ಎಂದರಂತೆ
ಅಕ್ಕ ಸತ್ತರೆ ಅಮಾವಾಸ್ಯೆ ನಿಲ್ಲುತ್ತದೆಯೆ ?
ಅಕ್ಕಸಾಲಿ ಅಕ್ಕನ ಚಿನ್ನಾನೂ ಬಿಡ
ಅರವತ್ತಕ್ಕೆ ಅರಳು ಮರಳು
ಜನ ಮರುಳೋ ಜಾತ್ರೆ ಮರುಳೋ
ಕುಂಟನಿಗೆ ಎಂಟು ಚೇಷ್ಟೆ, ಕುರುಡನಿಗೆ ನಾನಾಚೇಷ್ಟೆ
ಬೊಗಳುವ ನಾಯಿ ಕಚ್ಚುವುದಿಲ್ಲ
ಕೈಗೆಟುಕದ ದ್ರಾಕ್ಷಿ ಹುಳಿ
ಕೊಂಕಣ ಸುತ್ತಿ ಮೈಲಾರಕ್ಕೆ ಬಂದರು
ದುಷ್ಟರಿಂದ ದೂರವಿರು
ಒಂದು ಕಣ್ಣಿಗೆ ಬೆಣ್ಣೆ; ಮತ್ತೊಂದು ಕಣ್ಣಿಗೆ ಸುಣ್ಣ
ಕಂಡೋರ ಮಕ್ಕಳನ್ನು ಭಾವಿಗೆ ತಳ್ಳಿ ಆಳ ನೋಡುವ ಬುದ್ಧಿ
ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ
ಹಂಗಿನ ಅರಮನೆಗಿಂತಾ ಗುಡಿಸಿಲೇ ಮೇಲು
ಮುಸುಕಿನೊಳಗೆ ಗುದ್ದಿಸಿಕೊಂಡಂತೆ
ಕದ್ದು ತಿಂದ ಹಣ್ಣು, ಪಕ್ಕದ ಮನೆ ಊಟ ಎಂದೂ ಹೆಚ್ಚು ರುಚಿ
ಮಿಂಚಿಹೋದ ಕಾರ್ಯಕ್ಕೆ ಚಿಂತಿಸಿ ಫಲವೇನು ?
ಹಳೆ ಚಪ್ಪಲಿ, ಹೊಸಾ ಹೆಂಡತಿ ಕಚ್ಚೊಲ್ಲ
ರವಿ ಕಾಣದ್ದನ್ನು ಕವಿ ಕಂಡ
ಕೆಟ್ಟು ಪಟ್ಟಣ ಸೇರು
ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ ?
ಕಾಲಿನದು ಕಾಲಿಗೆ; ತಲೆಯದು ತಲೆಗೆ
ವಿದ್ಯೆ ಇಲ್ಲದವನು ಹದ್ದಿಗಿಂತಲೂ ಕಡೆ
ಕನ್ನಡಿ ಒಳಗಿನ ಗಂಟು ಕೈಗೆ ದಕ್ಕೀತೆ ?
ಅತ್ತೆಗೊಂದು ಕಾಲ; ಸೊಸೆಗೊಂದು ಕಾಲ
ಗಣೇಶನನ್ನು ಮಾಡಲು ಹೋಗಿ ಅವರ ಅಪ್ಪನನ್ನು ಮಾಡಿದಂತೆ
ಮಾಡಬಾರದ್ದು ಮಾಡಿದರೆ ಆಗಬಾರದ್ದೇ ಆಗುತ್ತೆ
ನರಿಗೆ ಹೇಳಿದರೆ ನರಿ ತನ್ನ ಬಾಲಕ್ಕೆ ಹೇಳಿತಂತೆ
ಮಹಡಿ ಹತ್ತಿದ ಮೇಲೆ ಏಣಿ ಒದ್ದ ಹಾಗೆ
ಹುಟ್ಟಿಸಿದ ದೇವರು ಹುಲ್ಲು ಮೇಯಿಸುತ್ತಾನೆಯೆ ?
ಕೊಟ್ಟಿದ್ದು ತನಗೆ; ಬಚ್ಚಿಟ್ಟದ್ದು ಪರರಿಗೆ
ಮದುವೆಯಾಗೋ ಗುಂಡ ಅಂದರೆ ನೀನೇ ನನ್ನ ಹೆಂಡತಿಯಾಗು ಅಂದ ಹಾಗೆ
ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
ತಾನೂ ತಿನ್ನ; ಪರರಿಗೂ ಕೊಡ
ಗಂಡಸಿಗೇಕೆ ಗೌರಿ ದು:ಖ ?
ನಗುವ ಹೆಂಗಸು, ಅಳುವ ಗಂಡಸು ಇಬ್ಬರನ್ನೂ ನಂಬಬಾರದು
ಗುಡ್ಡ ಕಡಿದು ಹಳ್ಳ ತುಂಬಿಸಿ ನೆಲ ಸಮ ಮಾಡಿದ ಹಾಗೆ
ಹನುಮಂತನೇ ಹಗ್ಗ ತಿನ್ನುವಾಗ ಪೂಜಾರಿಗೆ ಶ್ಯಾವಿಗೆ ಬೇಕಂತೆ
ರತ್ನ ತಗೊಂಡು ಹೋಗಿ ಗಾಜಿನ ತುಂಡಿಗೆ ಹೋಲಿಸಿದರು
ಗಾಜಿನ ಮನೇಲಿರೋವ್ರು ಅಕ್ಕಪಕ್ಕದ ಮನೇ ಮೇಲೆ ಕಲ್ಲೆಸೆಯಬಾರದು
ಉಂಡೂ ಹೋದ; ಕೊಂಡೂ ಹೋದ
ಎಲೆ ಎತ್ತೋ ಜಾಣ ಅಂದರೆ ಉಂಡೋರೆಷ್ಟು ಮಂದಿ ಅಂದನಂತೆ
ಕೋತಿ ತಾನು ಮೊಸರನ್ನ ತಿಂದು ಮೇಕೆ ಬಾಯಿಗೆ ಒರೆಸಿತಂತೆ
ಹಾಡಿದ್ದೇ ಹಾಡಿದ ಕಿಸಬಾಯಿ ದಾಸ
ಹಸಿ ಗೋಡೆ ಮೇಲೆ ಹರಳು ಎಸೆದಂತೆ
ಊರು ಹೋಗು ಅನ್ನುತ್ತೆ; ಕಾಡು ಬಾ ಅನ್ನುತ್ತೆ
ಕಾಮಾಲೆ ಕಣ್ಣಿನವನಿಗೆ ಲೋಕವೆಲ್ಲಾ ಹಳದಿಯಂತೆ
ಕಳೆದುಕೊಂಡ ವಸ್ತುವನ್ನು ಕಳೆದುಹೋದ ಜಾಗದಲ್ಲೇ ಹುಡುಕು
ಲಂಘನಮ್ ಪರಮೌಷಧಮ್
ಹಾಲು ಕುಡಿದ ಮಕ್ಕಳೇ ಬದುಕೊಲ್ಲ; ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತವೇ ?
ಗಾಳಿ ಗುದ್ದಿ ಮೈ ಕೈ ನೋಯಿಸಿಕೊಂಡಂತೆ
ತಲೆ ಗಟ್ಟಿ ಇದೆ ಅಂತ ಕಲ್ಲಿಗೆ ಹಾಯಬಾರದು
ಹಳೇ ಗಂಡನ ಪಾದವೇ ಗತಿ
ಹಬ್ಬದ ದಿನವೂ ಹಳೇ ಗಂಡನೇ ?
ಕಳ್ಳನಿಗೊಂದು ಪಿಳ್ಳೆ ನೆವ
ಅಳೋ ... ಮೇಲೆ ಗಳು ಬಿತ್ತು
ಸನ್ಯಾಸಿ ಬೆಕ್ಕು ಸಾಕಿದ ಹಾಗೆ
ತನ್ನ ಬೆನ್ನು ತಾನೇ ತಟ್ಟಿಕೊಂಡ ಹಾಗೆ
ಪಕ್ಕದ ಮನೇಗೆ ಬಿದ್ದ ಬೆಂಕಿ ಬಿಸಿ ತನ್ನ ಮನೇಗೆ ಬೀಳೋವರೆಗೂ ತಾಕಲ್ಲ
ಹುಚ್ಚು ಮನಸಿಗೆ ಹತ್ತು ಹಲವು ಮುಖಗಳು
ಶೆಟ್ಟಿ ಶೃಂಗಾರ ಆಗೋದ್ರಲ್ಲಿ ಪಟ್ಣ ಕೆಡ್ತು
ಅತ್ತೂ ಕರೆದೂ ಔತಣ ಮಾಡಿಸಿಕೊಂಡಂತೆ
ಕರೆಯದವರ ಮನೆಗೆ ಕಳಸಗಿತ್ತಿಯಾಗು
ಹಂಚಿದವರಿಗೆ ಹಲ್ಲು ಬಾಯಿ
ಕುಣೀಲಾರದ ಸೂಳೆ ನೆಲ ಡೊಂಕು ಅಂದ್ಳಂತೆ
ಬಿಡಿಯಕ್ಕೆ ಬಸಿರಾದರೆ ಹಡೆಯೋದು ಕಷ್ಟ
ದಾಕ್ಷಿಣ್ಯಕ್ಕೆ ಬಸಿರಾಗೋದು
ಪ್ರಥಮ ಚುಂಬನೇ ದಂತ ಭಗ್ನಮ್
ಹೊಸದರಲ್ಲಿ ಅಗಸ ಗೋಣಿಯನ್ನು ಎತ್ತಿ ಎತ್ತಿ ಒಗೆದನಂತೆ
ಕೋತಿ ತಾನು ಕೆಡೋದಲ್ದೆ ವನ ಎಲ್ಲ ಕೆಡಿಸಿತಂತೆ
ಕೈಲಾಗದೋನು ಮೈ ಪರಚಿಕೊಂಡ
ಕಜ್ಜಿ ಹೋದರೂ ಕಡಿತ ಹೋಗಲಿಲ್ಲ
ಆನೆ ದಾನ ಮಾಡಿದವನು ಸರಪಣಿಗೆ ಜಗಳಾಡುವನೆ ?
ಎತ್ತು ಹೊರಬಲ್ಲ ಭಾರವನ್ನು ಕರು ಹೊರಬಲ್ಲುದೆ ?
ದೊಡ್ಡವರು ಹೇಳಿದ ಹಾಗೆ ಮಾಡು; ಮಾಡಿದ ಹಾಗೆ ಮಾಡಬೇಡ
ಏತಿ ಅಂದರೆ ಪ್ರೇತಿ
ದಂಡಿಗೆ ಹೆದರಲಿಲ್ಲ, ದಾಳಿಗೆ ಹೆದರಲಿಲ್ಲ, ಇನ್ನು ನಿನ್ನ ಗಳಗಂಟೆಗೆ
ಶುಭ ನುಡಿಯೋ ಸೋಮ ಅಂದರೆ ಗೂಬೆ ಕಾಣ್ತಲ್ಲೋ ಮಾಮ ಅಂದ ಹಾಗೆ
ಹಲವು ಸಲ ಸಾಯುವವನು ಹೇಡಿ,ವೀರಯೋಧನಿಗೊಂದೇ ಸಲ ಸಾವು
ನಮ್ಮ ದೇವರ ಸತ್ಯ ನಮಗೆ ಗೊತ್ತಿಲ್ಲವೇ ?
ಮುಟ್ಟಿದೋರ ಮೇಲೆ ಬಿಟ್ಟೆ ನನ್ನ ಪ್ರಾಣ
ಮಾಡೋರನ್ನು ಕಂಡರೆ ನೋಡು ನನ್ನ ಸಿರೀನ
ಮೊಲ ಎಬ್ಬಿಸಿ ...ಕ್ಕೆ ಕೂತರು
ಹುಟ್ತಾ ಹುಟ್ತಾ ಅಣ್ಣ ತಮ್ಮಂದಿರು; ಬೆಳೀತಾ ಬೆಳೀತಾ ದಾಯಾದಿಗಳು
ಮಗೂನ ಚಿವುಟೋದು, ತೊಟ್ಟಿಲು ತೂಗೋದು
ತಾನು ಮಾಡುವುದು ಉತ್ತಮ; ಮಗ ಮಾಡುವುದು ಮಧ್ಯಮ; ಆಳು ಮಾಡುವುದು ಹಾಳು
ವೈದ್ಯರ ಹತ್ತಿರ, ವಕೀಲರ ಹತ್ತಿರ ಸುಳ್ಳು ಹೇಳಬೇಡ
ಆನೆಗೆ ಚಡ್ಡಿ ಹೊಲಿಸಿದ ಹಾಗೆ
ಕಪ್ಪೆ ತಕ್ಕಡೀಲಿ ಹಾಕಿದ ಹಾಗೆ
ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು
ಕೋತಿ ಕಜ್ಜಾಯ ಹಂಚಿದ ಹಾಗೆ.
ಕಬ್ಬಿಣ ಕಾದಿರುವಾಗಲೇ ಬಡಿಯಬೇಕು
ಅರ್ಧ ಆದ ಕೆಲಸವನ್ನು ಅರಸನಿಗೂ ತೋರಿಸಬೇಡ
ಅತ್ತೆ ಒಡೆದ ಪಾತ್ರೆಗೆ ಬೆಲೆಯಿಲ್ಲ
ಬೇಲಿಯೇ ಎದ್ದು ಹೊಲ ಮೇದಂತೆ
ಪಾಪಿ ಧನ ಪ್ರಾಯಶ್ಚಿತ್ತಕ್ಕೆ
ಒಂದು ಒಳ್ಳೇ ಮಾತಿಗೆ ಸುಳ್ಳೇ ಪ್ರಧಾನ
ಪಾಲಿಗೆ ಬಂದದ್ದು ಪಂಚಾಮೃತ
ಕಂಡ ಕಳ್ಳ ಜೀವ ಸಹಿತ ಬಿಡ
ಕಂಡ ಮನೆಗೆ ಕಳ್ಳ ಬಂದ , ಉಂಡ ಮನೆಗೆ ನೆಂಟ ಬಂದ
ನೀರಿಳಿಯದ ಗಂಟಲೊಳ್ ಕಡುಬಂ ತುರುಕಿದಂತಾಯ್ತು (ಮುದ್ದಣ)
ಮಕ್ಕಳಿಲ್ಲದ ಮನೆಯಲ್ಲಿ ಅಜ್ಜ ಅಂಬೆಗಾಲಿಟ್ಟ
ಅಜ್ಜಿ ನೂತದ್ದೆಲ್ಲಾ ಅಜ್ಜನ ಉಡಿದಾರಕ್ಕೆ.
ಮಕ್ಕಳಿಸ್ಕೂಲ್ ಮನೇಲಲ್ವೇ? (ಕೈಲಾಸಂ)
'ಕೋ' ಅನ್ನೋದು ಕುಲದಲ್ಲಿಲ್ಲ ,'ತಾ' ಅನ್ನೋದು ತಾತರಾಯನ ಕಾಲದ್ದು
ದೇವನೊಬ್ಬ ನಾಮ ಹಲವು
ಸದಾಶಿವನಿಗೆ ಅದೇ ಧ್ಯಾನ
ಬಡ ದೇವರನ್ನು ಕಂಡರೆ ಬಿಲ್ಪತ್ರೇನೂ 'ಭುಸ್' ಅಂತಂತೆ
ಬೆಂದ ಮನೆಗೆ ಹಿರಿದದ್ದೇ ಲಾಭ
ಸಂದೀಲಿ ಸಮಾರಾಧನೆ
ಎದ್ದರೆ ಆಳಲ್ಲ
ತೂಕಡಿಸುವವನಿಗೆ ಹಾಸಿಗೆ ಹಾಸಿ ಕೊಟ್ಟ ಹಾಗೆ
ಪಾಂಡವರು ಪಗಡೆಯಾಡಿ ಕೆಟ್ಟರು ; ಹೆಣ್ಣುಮಕ್ಕಳು ಕವಡೆಯಾಡಿ ಕೆಟ್ಟರು
ಮಾಡೋದು ಅನಾಚಾರ ; ಮನೆ ಮುಂದೆ ಬೃಂದಾವನ
ಉರಿಯೋ ಬೆಂಕಿಗೆ ತುಪ್ಪ ಸುರಿದ ಹಾಗೆ
ಗಾಣಿಗಿತ್ತಿ ಅಯ್ಯೋ ಅಂದರೆ ನೆತ್ತಿ ತಂಪಾದೀತೇ?
ಮೊದಲಿದ್ದವಳೇ ವಾಸಿ ಎಬ್ಬಿಸಿದರೆ ಉಣ್ಣೋಳು
ಗುಂಪಿನಲ್ಲಿ ಗೋವಿಂದ
ನಾಯೀನ ತಗೊಂಡು ಹೋಗಿ ಸಿಂಹಾಸನದ ಮೇಲೆ ಕೂರಿಸಿದರೆ ... ಕಂಡು ಇಳಿಬಿತ್ತು
ಚೇಳಿಗೊಂದೇ ಬಸಿರು ; ಬಾಳೆಗೊಂದೇ ಗೊನೆ
ಹೀನ ಸುಳಿ ಬೋಳಿಸಿದರೂ ಹೋಗೋದಿಲ್ಲ
ಮಾಡಿದರೆ ಮನೆ ; ಹೂಡಿದರೆ ಒಲೆ
ಕಣ್ಣು ಕಟ್ಟಿ ಕಾಡಲ್ಲಿ ಬಿಟ್ಟ ಹಾಗೆ
ಉಂಡದ್ದೇ ಉಗಾದಿ ; ಮಿಂದದ್ದೇ ದೀವಳಿಗೆ
ಕಡ್ಡೀನ ಗುಡ್ಡ ಮಾಡು.
ಅತ್ತು ಹೆದರಿಸೋನೊಬ್ಬ ;ಹೇ.. ಹೆದರಿಸೋನೊಬ್ಬ
ಬರ್ತಾ ಬರ್ತಾ ರಾಯರ ಕುದುರೆ ಕತ್ತೆಯಾಯ್ತು
ತಾನು ಕಳ್ಳ ,ಪರರ ನಂಬ
ಓಡಿ ಹೋಗೋ ಬಡ್ಡಿ ಹಾಲು ಹೆಪ್ಪಿಟ್ಟಾಳೆ?
ಗಡ್ಡಕ್ಕೆ ಬೇರೆ ಸೀಗೇಕಾಯಿ
ನೆಂಟರಿಗೆ ದೂರ ; ನೀರಿಗೆ ಹತ್ತಿರ
ಕುಲ ಸೋಸಿ ಹೆಣ್ಣು ತಗೊಂಡು ಬಾ ; ಜಲ ಸೋಸಿ ನೀರು ತಗೊಂಡು ಬಾ
ಬಾಯಿದ್ದೋರು ಬರಗಾಲದಲ್ಲೂ ಬದುಕಿದರು
ಹದರಿದವರ ಮೇಲೆ ಕಪ್ಪೆ ಎಸೆದರು
ಅಳಿಯ ಮನೆ ತೊಳಿಯ
ನಾಯಿ ಮೊಲೇಲಿ ಖಂಡುಗ ಹಾಲಿದ್ದರೇನು, ದೇವರಿಗಿಲ್ಲ ದಿಂಡರಿಗಿಲ್ಲ
ಮಾಘ ಕಾವ್ಯ ಮಗನಿಗೆ ಬೇಡ
ಮುಂದೆ ಬರೋ ಕೋಡಿಗಿಂತ ಹಿಂದೆ ಬರೋ ಬಾಲಾನೇ ವಾಸಿ
ಪಾಯಸ ಮಾಡಿ ನಾಯಿ ಬಾಲದಲ್ಲಿ ತೊಳಸಿದ ಹಾಗೆ
ಆತುರಕ್ಕೆ ಅಜ್ಜಿ ಮೈನೆರೆದಳು
ಮಾಡಬಾರದ್ದು ಮಾಡಿದರೆ, ಆಗಬಾರದ್ದು ಆಗತ್ತೆ
ಹುಡುಕುತ್ತಿದ್ದ ಬಳ್ಳಿ ಕಾಲಿಗೇ ತೊಡರಿಕೊಂಡಿತು
ದನ ತಿನ್ನುವವನಿಗೆ ಗೊಬ್ಬರದ ಆಣೆ
ಪಾಪಿ ಚಿರಾಯು
ಕಣ್ಣು ಕುರುಡಾದರೆ ಬಾಯಿ ಕುರುಡೇ
ಅಳಿಯನ ಕುರುಡು ಬೆಳಗಾದರೆ ಗೊತ್ತಾಗತ್ತೆ
ಎಲ್ಲರ ಮನೆ ದೋಸೇನೂ ತೂತೇ.
ಚಿನ್ನದ ಸೂಜೀಂತ ಕಣ್ಣು ಚುಚ್ಚಿಕೊಳ್ಳುವುದಕ್ಕೆ ಆಗುತ್ತದೆಯೇ?
ಹಣ ಅಂದರೆ ಹೆಣಾನೂ ಬಾಯಿ ಬಿಡುತ್ತದೆ
ಜರಡಿ ಸೂಜಿಗೆ ಹೇಳಿತಂತೆ: ನಿನ್ನ ಬಾಲದಲ್ಲಿ ತೂತು
ಅಹಂಕಾರಕ್ಕೆ ಉದಾಸೀನವೇ ಮಟ್ಟು.
ಎಲ್ಲಾ ಜಾಣ,ತುಸಾ ಕೋಣ.
ಸಂತೆಗೂ ಮುಂಚೆ ಗಂಟು ಕಳ್ಳರು ನೆರೆದರಂತೆ
ಹುಚ್ಚು ಬಿಟ್ಟ ಹೊರತು ಮದುವೆ ಆಗೋಲ್ಲ; ಮದುವೆ ಆದ ಹೊರತು ಹುಚ್ಚು ಬಿಡಲ್ಲ
ಬೈದು ಹೇಳಿದವರು ಬದುಕಕ್ಕೆ ಹೇಳಿದರು
ನಗೋ ಗಂಡಸನ್ನೂ ಅಳೋ ಹೆಂಗಸನ್ನೂ ನಂಬಬೇಡ
ವ್ರತ ಕೆಟ್ಟರೂ ಸುಖ ಪಡಬೇಕು
ಕೊಂದ ಪಾಪ ತಿಂದು ಪರಿಹಾರ
ಅಗ್ಗದ ಆಸೆಗೆ ಗೊಬ್ಬರ ತಗೊಂಡರು
ಅತ್ತೂ ಕರೆದೂ ಔತಣ ಹೇಳಿಸಿಕೊಂಡರು
ನೆಚ್ಚಿನೆಮ್ಮೆ ಕೋಣನನ್ನೀಯಿತು
ಬಸವನ ಹಿಂದೆ ಬಾಲ,ಸೂಜಿ ಹಿಂದೆ ದಾರ
ಕುದುರೆ ಕಂಡರೆ ಕಾಲುನೋವು
ಖಂಡಿತ ವಾದಿ,ಲೋಕ ವಿರೋಧಿ
ಅತ್ತೆ ಆಸ್ತೀನ ಅಳಿಯ ದಾನ ಮಾಡಿದ
ರಾಮ ರಾಜ್ಯ ಬಂದರೂ ರಾಗಿ ಬೀಸೋದು ತಪ್ಪಲಿಲ್ಲ
ಆಡು ಮುಟ್ಟದ ಸೊಪ್ಪಿಲ್ಲ
ಊರ ದನ ಕಾದು ದೊಡ್ಡ ಬೋರೇಗೌಡ ಅನ್ನಿಸಿಕೊಂಡ
ಹಣ್ಣು ತಿಂದವನು ನುಣುಚಿಕೊಂಡ; ಸಿಪ್ಪೆ ತಿಂದವನು ಸಿಕ್ಕಿ ಹಾಕಿಕೊಂಡ
ಗೌರಿ ಹಬ್ಬಕ್ಕೆ ಬಂದ ಗತಿಗೆಟ್ಟ ಅಳಿಯ
ಜೀನ ಗಳಿಸಿದ ;ಜಾಣ ತಿಂದ
ಶೆಟ್ಟಿ ಬಿಟ್ಟಲ್ಲೆ ಪಟ್ಣ
ಉಟ್ಟರೆ ತೊಟ್ಟರೆ ಪುಟ್ಟಕ್ಕ ಚೆನ್ನ
ಹಾವು ಸಾಯಬಾರದು ;ಕೋಲು ಮುರಿಯಬಾರದು
ಕಾಸಿಗೊಂದು,ಕೊಸರಿಗೆರಡು
ಉ.. ಕುಡಿದರೂ ತನ್ನಿಚ್ಚೇಲಿರಬೇಕು
ಸ್ವತಂತ್ರವೋ,ಸ್ವರ್ಗಲೋಕವೋ
ಊಟ ತನ್ನಿಚ್ಚೆ,ನೋಟ ಪರರಿಚ್ಚೆ
ತಾಳಿದವನು ಬಾಳಿಯಾನು
ಲಾಲಿಸಿದರೆ ಮಕ್ಕಳು ; ಪೂಜಿಸಿದರೆ ದೇವರು
ಹುಚ್ಚಲ್ಲ,ಬೆಪ್ಪಲ್ಲ,ಶಿವಲೀಲೆ
ಅಳಿಯ ಅಲ್ಲ,ಮಗಳ ಗಂಡ
ಹೊಟ್ಟೇಲಿರೋ ಸಿಟ್ಟು ರಟ್ಟೇಲಿಲ್ಲ
ತಲೆಗೆಲ್ಲಾ ಒಂದೇ ಮಂತ್ರವಲ್ಲ
ಬಾಲ ಸುಟ್ಟ ಬೆಕ್ಕಿನ ಹಾಗೆ
ಹಿತ್ತಿಲ ಗಿಡ ಮದ್ದಲ್ಲ
ಸರಿಸರಿಯಾಗಿದ್ರೆ,ಪರಿಪರಿ ನೆಂಟರು
ಇಷ್ಟನ್ನು ಕಂಡೆಯಾ ಕೃಷ್ಣಂಭಟ್ಟಾ ಅಂದರೆ,ಮುಪ್ಪಿನ ಕಾಲಕ್ಕೆ ಮೂರು ಜನ ಹೆಂಡಿರು
ಹಾಕು ಮಣೆ,ನೂಕು ಮಣೆ,ತಳ್ಳು ಮಣೆ
(ನೀನು)ಮೊಳ ಬಿಟ್ಟರೆ,(ನಾನು) ಮಾರು ಬಿಡುತ್ತೇನೆ
ಗಿಣಿ ಸಾಕಿ ಗಿಡುಗನ ಕೈಗೆ ಕೊಟ್ಟರು.
ಕರೆದು ಹೆಣ್ಣು ಕೊಟ್ಟರೆ ಮಲ್ಲೋಗರ ಬಂತಂತೆ.
ಚೇಳಿಗೆ ಪಾರುಪತ್ಯ ಕೊಟ್ಟರೆ ಮನೆಯವರಿಗೆಲ್ಲಾ ಮುಟ್ಟಿಸಿತಂತೆ.
ದಿನಾ ಸಾಯೋರಿಗೆ ಅಳೋರ್ ‍ಯಾರು?
ಊರು ಅಂದ ಮೇಲೆ ಹೊಲಗೇರಿ ಇಲ್ಲದೆ ಇರುತ್ತದೆಯೇ?
ಮೇಯುವುದಕ್ಕೆ ಮುಂದೆ ;ಮೀಯುವುದಕ್ಕೆ ಹಿಂದೆ
ಕಡ್ಡೀನ ಗುಡ್ಡ ಮಾಡು
ನವಿಲಾಡಿತು ಅಂತ ಕೆಂಬೂತ ಪುಕ್ಕ ತೆರೆಯಿತು
ಆಟಕ್ಕುಂಟು,ಲೆಕ್ಕಕ್ಕಿಲ್ಲ
ಹಿರೀಮಗ ಆಗಬೇಡ,ಹಿತ್ತಿಲ ಕದ ಆಗಬೇಡ
ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ
ಆಡಿಕೊಳ್ಳೋರ ಮುಂದೆ ಎಡವಿ ಬಿದ್ದ ಹಾಗೆ
ಹಣವಿದ್ದ ಗಂಡನನ್ನು ಮದುವೆಯಾದರೂ ಋಣವಿದ್ದಷ್ಟೇ
ಬಗ್ಗಿದವನಿಗೆ ಒಂದು ಗುದ್ದು ಜಾಸ್ತಿ
ಹಾಲಿನ ದುಡ್ಡು ಹಾಲಿಗೆ;ನೀರಿನ ದುಡ್ಡು ನೀರಿಗೆ
ತಾಮ್ರದ ಕಾಸು ತಾಯಿ ಮಕ್ಕಳನ್ನು ಬೇರೆ ಮಾಡ್‌ತಂತೆ
ಗಂಡ ಸರಿಯಿದ್ರೆ ಗುಂಡೂ ಪಾವನ
ಬೆಳ್ಳಗಿರೋದೆಲ್ಲಾ ಹಾಲಲ್ಲ
ಹೊಳೆಯುವುದೆಲ್ಲಾ ಚಿನ್ನವಲ್ಲ
ಹಾಸಿಗೆ ಇದ್ದಷ್ಟು ಕಾಲು ಚಾಚು
ಉಣ್ಣು ಬಾ ಅಂದ್ರೆ,ಇರಿ ಬಾ ಅಂದ್ರಂತೆ
ಇರುವೆಗೆ ಇರುವೆ ಮೈ ಭಾರ,ಆನೆಗೆ ಆನೆ ಮೈ ಭಾರ
ಮನಸ್ಸಿದ್ದರೆ ಮಾರ್ಗ
ತಲೆಗೆ ಬಿದ್ದ ನೀರು ಕಾಲಿಗೆ ಬೀಳದೆ ಇರುತ್ತದೆಯೇ?
ಅದ್ನೇ ಉಂಡೇನ್ ಅತ್ತೆಮ್ನೋರೇ,ಕದ ತೆಗೀರಿ ಮಾವ್ನೋರೇ ಅಂದ್ರಂತೆ
ಬಡವೆ ಸೀರೆ ಉಡದೆ ಮಾಸಿತು
ಆಕಾಶಕ್ಕೆ ಏಣಿ ಹಾಕಿದ ಹಾಗೆ
ಸೇರಿಗೆ ಸವ್ವಾಸೇರು
ಒಂದಕ್ಕೆರಡು ದಂಡ,ಹೆಂಡಕ್ಕೆ ರಾಗಿ ದಂಡ
ಹುಟ್ಟು ಗುಣ ಸುಟ್ಟರೂ ಹೋಗಲ್ಲ
ದೇವರಿಲ್ಲದ ಗುಡಿ;ಯಜಮಾನನಿಲ್ಲದ ಮನೆ ಎರಡೂ ಒಂದೇ
ಕೊಟ್ಟ ಹೆಣ್ಣು ಕುಲದಿಂದ ಹೊರಗೆ
ಹೆಣ್ಣು ಚಂದ,ಕಣ್ಣು ಕುರುಡು
ನಾಯಿ ಹೆಸರು'ಸಂಪಿಗೆ'ಅಂತ
ನಾಯಿಗೆ ವಯಸ್ಸಾದ್ರೆ ಅಜ್ಜ ಅಂತಾರಾ?
ಆಕೆಗೆ ಬುದ್ಧಿ ಹೇಳಕ್ಕೆ ಆತನ್ನ ಕರೆಸಿದರೆ,ಆತ ಆಕೇನ ಬಿಟ್ಟು ಆರು ವರ್ಷ ಆಗಿತ್ತಂತೆ.
ಉತ್ತರನ ಪೌರುಷ ಒಲೆ ಮುಂದೆ;ನಿನ್ನ ಪೌರುಷ ನನ್ನ ಮುಂದೆ
ಕೊಟ್ಟೋನು ಕೋಡಂಗಿ;ಇಸಕೊಂಡೋನು ಈರಭದ್ರ
ಹಲ್ಲಿದ್ರೆ ಕಡಲೆ ಇಲ್ಲ;ಕಡಲೆ ಇದ್ರೆ ಹಲ್ಲಿಲ್ಲ
ಗಂಟೂ ಹೋಯ್ತು;ನಂಟೂ ಹೋಯ್ತು
ಅಪ್ಪನ್ನೇ ಅಪ್ಪ ಅನ್ನದೋನು,ಚಿಕ್ಕಪ್ಪನ್ನ ಅಪ್ಪಾ ಅಂತ ಕರೀತಾನಾ?
ಊರಿಗೊಂದು ದಾರಿಯಾದ್ರೆ,ಎಡವಟ್ಟಂಗೆ ಅವನದ್ದೇ ದಾರಿ
ಹೊಟ್ಟೆ ತುಂಬಿದ ಮೇಲೆ ಹಿಟ್ಟೂ ಕಲ್ಲು
ಒನಕೆ ಮುಂಡು ಚಿಗುರಿದಂತೆ
ಹುಣಿಸೆ ಮರ ಮುದಿಯಾದ್ರೂ ಕಾಯಿ ಹುಳಿ ಹೋಗಲ್ಲ
ಮೂರೂ ಬಿಟ್ಟೋನು,ಊರಿಗೆ ದೊಡ್ಡೋನು
ಭಾವಿಗೆ ಬಿದ್ರೆ,ಸಾಲಿಗ್ರಾಮ ಸಿಗ್‌ತಂತೆ
ನಾಯಿಗೆ ಹೊತ್ತಿಲ್ಲ;ನಿಲ್ಲಕ್ಕೆ ನೆಲೆಯಿಲ್ಲ
ಯಂಕ,ಸೀನ,ನೊಣ ಅಂತ ಮನೇಲಿ ಮೂರೇ ಜನ
ಕಂಡೋರ ಮನೆ ರೊಟ್ಟಿಗೆ ಗಿಣ್ಣು ಹಾಲು ಕಾಯಿಸಿದರಂತೆ
ಬೆಣ್ಣೇಲಿ ಕೂದಲು ತೆಗೆದ ಹಾಗೆ
ತುಂಬೆ ಗಿಡಕ್ಕೆ ಏಣಿ ಹಾಕಿದಂತೆ
ಸಾವಿರ ಉಳಿ ಪೆಟ್ಟು,ಒಂದು ಚಿತ್ತಾರ
ಕಾಣದಿರೋ ದೇವರಿಗಿಂತ ಕಾಣೋ ಭೂತಾನೇ ವಾಸಿ
ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು
ಹಿಟ್ಟು ಹಳಸಿತ್ತು;ನಾಯಿ ಹಸಿದಿತ್ತು
ಬಡ್ಡಿ ಬಾಯಿಗಂಜ್ತೀಯೋ,ದೊಡ್ಡೆತ್ತಿನ ಕೋಡಿಗಂಜ್ತೀಯೋ
ತಾಯೀನೇ ತಿಂದೋಳು,ಅತ್ತೇನ ಬಿಟ್ಟಾಳೆಯೇ?
ಒಂದು ಬಿಟ್ಟು ಇನ್ನೊಂದು ಕಟ್ಕೊಂಡ್ರಂತೆ
ಸನ್ಯಾಸಿ ಸಂಸಾರ ಕಟ್ಟಿಕೊಂಡ ಹಾಗೆ
ಶಿಸ್ತುಗಾರ ಪುಟ್ಟಶಾಮಿ
ಎದೆ ಸೀಳಿದ್ರೆ ಮೂರಕ್ಷರಾನೂ ಇಲ್ಲ
ತಾಳಕ್ಕೆ ತಕ್ಕ ಮೇಳ
ಕಂಡೋರ ಆಸ್ತಿಗೆ ನೀನೇ ಧಣಿ
ಸೂಳೆ ಕೈಲಿ ಜೋಳ ಕುಟ್ಟಿಸಿದ ಹಾಗೆ
ಕೋಮಟಿ ಕೊಡ;ಜೈನಿಗ ಬಿಡ
ನಿನ್ನ ಹಿತು(ಮುದ್ದು),ನನ್ನ ತಿಂತು
ಎರಡೂ ಕೈ ಸೇರಿದರೆ ಚಪ್ಪಾಳೆ
ಬೆಟ್ಟ ಮಹಮ್ಮದನ ಬಳಿ ಬರಲ್ಲ,ಮಹಮ್ಮದನೇ ಬೆಟ್ಟದ ಬಳಿ ಹೋಗಬೇಕು
ಹುಲಿಗೆ ಹುಣ್ಣು ಎದ್ದ ಹಾಗೆ
ಹಂಚು ಕಾಣದ ಕೈ ಕಂಚು ಕಾಣ್ತು
ಬರೀ ಕೈಗಿಂತ ವಾಸಿ ಹಿತ್ತಾಳೆ ಕಡಗ
ಮನೇಲಿ ಇಲಿ,ಬೀದೀಲಿ ಹುಲಿ
ಸೂಳೆಗೆ ಮದುವೆ ಮಾಡಿದ ಹಾಗೆ
ಗುರುವಿಗೇ ತಿರುಮಂತ್ರ
ಬೆಳಗೂ ಹೆತ್ತ ಮಗೂನ ನಾಯಿ ಕೊಂಡೊಯ್ಯಿತಂತೆ
ಎದ್ದೋಗೋ ಮಾತು ಬಿದ್ದೋಗಲಿ
ಆಡೋಕಾಗಲ್ಲ,ಅನುಭವಿಸಕ್ಕಾಗಲ್ಲ
ಉಚ್ಚೆ ಕುಡಿದರೂ ತನ್ನಿಚ್ಚೇಲಿರಬೇಕು
ಹಾಲಿದ್ದಾಗ ಹಬ್ಬ ;ನೀರಿದ್ದಾಗ ನೇಮ
ತಾಯಿ ಮಾಡಿದ ಹೊಟ್ಟೆ ;ಊರು ಮಾಡಿದ ಕೊಳಗ
ಅಳಿಲ ಸೇವೆ, ಮಳಲ ಭಕ್ತಿ
ಕೆಟ್ಟ ಅಡಿಗೆ ಅಟ್ಟವಳೇ ಜಾಣೆ
ಕಿಡಿ ಇಲ್ಲದೆ ಬೆಂಕಿಯಿಲ್ಲ ;ಕಾರಣ ಇಲ್ಲದೆ ಜಗಳವಿಲ್ಲ
ಗಂಡಸು ಕೂತು ಕೆಟ್ಟ ;ಹೆಂಗಸು ತಿರುಗಿ ಕೆಟ್ಟಳು
ಹತ್ತಿರಕ್ಕೆ ಬಂದರೆ ಹಡಿಕ್ ನಾತ
ಹೂ-ದವರು ‌ಯಾರು ಅಂದರೆ ಮಾಸಿದ ಸೀರೆಯವರು.
ಅಟ್ಟದಿಂದ ಬಿದ್ದವನನ್ನು ದಡಿಗೆ ತೆಗೆದುಕೊಂಡು ಚಚ್ಚಿದರು.
ಬಿಟ್ಟಿ ಬಂದದ್ದಾದರೆ ನನಗೂ ಇರಲಿ,ನಮ್ಮ ತಾತಂಗೂ ಇರಲಿ.
ಸಾಯ್ತೀನಿ ಸಾಯ್ತೀನಿ ಅಂದೋಳು ಸಾವಿರ ಮುದ್ದೆ ನುಂಗಿದಳಂತೆ.
ಸಂತೆ ಸೂಳೆ ನೆಚ್ಚಿಕೊಂಡು ಮನೆ ಹೆಂಡಿರನ್ನ ಬಿಟ್ಟರಂತೆ.
ಮನೆ ದೇವರನ್ನ ಮೂಲೆಗಿಟ್ಟು ಬೆಟ್ಟದ ದೇವರಿಗೆ ಬುತ್ತಿ ಹೊತ್ತಂತೆ.
ಅಡಿ ಅನ್ನಕ್ಕೆ ಅವಳೇ ಇಲ್ಲೆ ; ಪಿಳ್ಳೆ ಪೇರು ರಾಮಕೃಷ್ನ !( ಇದು ತಮಿಳು ಭಾಷೆಯ ಗಾದೆಯಾದರೂ ಕನ್ನಡಿಗರಲ್ಲಿ ಹೆಚ್ಚು ಪ್ರಚಲಿತವಿದೆ)
ದೇಶ ಸುತ್ತು ; ಕೋಶ ಓದು.
ಹೇಳೋರು ಹೆಡ್ಡರಾದರೆ ,ಕೇಳೋರು ಕಿವುಡರೇ?
ಕಂಡದ್ದನ್ನು ಕಂಡಹಾಗೆ ಹೇಳಿದರೆ ಕೆಂಡದಂಥಾ ಕೋಪವಂತೆ
ಇದ್ದದ್ದನ್ನು ಇದ್ದಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದರಂತೆ
ಒಲ್ಲದ ಗಂಡನಿಗೆ ಮೊಸರಲ್ಲೂ ಕಲ್ಲು
ತುಂಬಿದ ಕೊಡ ತುಳುಕುವುದಿಲ್ಲ
ವೇದ ಸುಳ್ಳಾದರೂ ಗಾದೆ ಸುಳ್ಳಾಗದು
ಎಲ್ಲರ ಮನೆಯ ದೋಸೆಯೂ ತೂತೆ !
ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದರಂತೆ
ಊರಿಗೆ ಊರ ಚಿಂತೆಯಾದರೆ ಅಜ್ಜಿಗೆ ಅರಿವೆ ಚಿಂತೆಯತೆ
ನಾಳೆ ಯಾರೋ ನಾನು ಯಾರೋ!
ಆಳ್ ಮೇಲ್ ಆಳ್ ಬಿದ್ದು ಗೋಣು ಬರಿದಾಯ್ತು
ಉತ್ತುಬಿತ್ತಿದ ಭತ್ತವಾದರೂ ಮಳೆಯಿಲ್ಲದೆ ಮೊಳೆಯದು
ಬಿದ್ದಿನ (=ಅತಿಥಿ, ನೆಂಟ) ಬಂದು ಹಾಳು ಮನೇ ಯಜಮಾನ (ಮನೆಯೊಡೆಯ) ಕುಂತು ಹಾಳು
ಅರಣೆ (= ಹಾವು ರಾಣಿ) ಕಡಿದರೆ ಭರಣಿ (=ಪಿಂಗಾಣಿ ಮಡಿಕೆ) ಮದ್ದು ಸಾಲದು
ಅಪ್ಪಂಥೋನಿಗೆ ಇಪ್ಪಂತ್ತೊಂದು ಕಾಯಿಲೆ
ಸಾಲ ಕೊಳ್ಳುವಾಗ ಒಂದುರಾಗ, ಸಾಲ ಹೊಳ್ಳಿ ಕೊಡುವಾಗ ನಾನಾರಾಗ
ಬಾಳಿಬದುಕಿದವ ಕಲಿ(=ವಿದ್ಯೆ)ಕಲಿತ, ಬಾಳಲಾರದವ ಪಾಠ ಕಲಿತ
ತಳಮಳ ತೀರಲಿಲ್ಲ, ಕಳವಳ ಕಳಿಯಲಿಲ್ಲ
ಮೋಕ್ಷಮಂತ್ರ ತಿಳಿದವನಿಗೆ ವೇದಮಂತ್ರದ ಗೊಡವೆಯೆ?
ಕನಿಗೇಡಿಗೆ(ಸ್ವಾರ್ಥಿಗೆ) ಗತಿ ಇಲ್ಲ
ಅರವಲ್ಲದ್ದು (ಧರ್ಮವಲ್ಲದ್ದು) ಮಾಡಿದರೂ ತರವಲ್ಲದ್ದು ಮಾಡಬಾರದು
ಹಗೆ ಬಿತ್ತಿ ಬೆಂಕಿ(ಹೊಗೆ) ಬೆಳೆದ
ಬರೀ ಮಾತಾಡಿ ಬೈಯ್ಯಿಸಿಕೊಂಡ
ಒಪ್ಪದಾ ಮಾತಾಡಿ ಕೋಪಕ್ಕೆ ತುತ್ತಾದ
ಹಸನಾದ ಮಾತಿಗೆ ಜೀವ ಬೆಸನಾಯ್ತು
ಬಿಟ್ಟವರ ಕಂಡು ಬಿಟ್ಟು ಬಾಳುಗೆಟ್ಟ
ಚಿತ್ತದ ಕಳವಳ ನಿಲ್ಲಿಸಿದವರೇ ಉತ್ತಮರು
ಸಿರಿ ಬಂದ ಕಾಲದಲಿ ಕರದಲಿ ಧರ್ಮ ಬೇಕು
ಎತ್ತ ಹೋದರೂ ಬಿಡದು ಒತ್ತಿ ಕಾಡುವ ವಿಧಿ
ಬರೋಳನ್ನು ನೆಚ್ಚಿ ಇರೋಳನ್ನು ಬಿಟ್ಟ
ಬುದ್ಧಿ ಉಳ್ಳವನಿಗೆ ಕರ್ಮ ತಿದ್ದಿ ಕೊಡುತಿತ್ತು
ಬೆನ್ನಹಿಂದೆ ಬಿದ್ದು (ಓಡಿ)ಬನ್ನ ಪಟ್ಟ
ತಕ್ಕುದನ್ನು ಅರಿಯದ ಓದು ಲಕ್ಷ ಓದಿದರೇನು
ಬಡವನಿಗೆ ಉಳಿದಷ್ಟೆ ಅಭಿಮಾನ
ಬಂದ ಅಥಿತಿಗೆ ಅನ್ನ ಇಕ್ಕದ ಬದುಕು ಯಾತಕ್ಕು ಬೇಡ
ಬಡವ ನೀ ಸೆಣಸಿ ಕೆಡಬೇಡ
ಸರಿಯಾದ ಎಚ್ಚರಿಕೆ ಇಲ್ಲದೆ ಹರಕೆಯ ಕುರಿಯಾದ
ಬಂಧುಗಳಿಲ್ಲದಿರೊ ಬಡತನ ಎಂದಿಗೂ ಬೇಡ
ರಸಿಕನ ನುಡಿ ತಿಂಗಳ ಬೆಳಕಿನಂತೆ
ಎಂಜಲ ತಿಂದರೂ ಅಂಜದೆ ತಿನ್ನು
ಅಂಜುತ್ತಾ ಅಳುಕುತ್ತಾ ತಿಂದ ಅಮೃತ ನಂಜು
ಒಳ್ಳಿಹ ಬಳ್ಳಿ ಕಳ್ಳಿಯ ಹಬ್ಬಿತು
ಗಂಧದ ಮರವನ್ನು ಸುಟ್ಟು ಬೂದಿಯ ತಂದು ಪೂಸಿದ
ಮಾಡಿದ ಕರ್ಮ ಹಿಡಿದೊಯ್ಯದೆ ಬಿಡದು
ಜೀವ ಜೀವವ ತಿಂದು ಜೀವಿಸುತಿದೆ ಜಗವೆಲ್ಲ
ನಾ ಬಲ್ಲೆ ಅನ್ನೊ ಮಾತು ಎಲ್ಲರಿಗು ಸಲ್ಲದು
ತನ್ನ ತಾ ಬಲ್ಲವನೆ ಬಲ್ಲವ
ನಕ್ಕು ನುಡಿದವರು ಕಡೆಗೆ ಅಡವಿಯಲಿಕ್ಕಿ ಬರುವರು
ಇಟ್ಟ ವಿಭೂತಿ ಪಟ್ಟದಂತೆ ಇಟ್ಟ ವಿಭೂತಿ ಅಳಿದರೆ ಚಟ್ಟ ಹತ್ತಿದಂತೆ
ಬಾಲೇರ ಮನಸ್ಸು ನೆಲೆಯಿಲ್ಲ
ಹಬ್ಬಕ್ಕೆ ಹೋಗಿ ತಬ್ಬಿಬ್ಬನಾದ
ಕೆರೆಗೆ ತೊರೆ ಕೂಡಿ ಸರೋವರ ವಾಯ್ತು
ಅರಿತು ಮಾಡಿದ ಪಾಪ ವಜ್ರದ ಸೆರೆಯಂತೆ
ತನ್ನ ತಾ ತನ್ನಿಂದಲೇ ಅರಿಯಬೇಕು
ಕಡಲಲ್ಲಿ ಪುಟಿದ ತೆರೆ ಕಡಲಲ್ಲೇ ಕರಗಿ ಹೋಯ್ತು
ಬಣ ಬಣ ಬೆಳಕು ಹರಿದಾಗ ಕತ್ತಲು ಎತ್ತಲೊ
ಸಮತೆ ತೊಟ್ಟು(=ಧರಿಸಿ) ಪದವಿ ಮುಟ್ಟು
ಇದ್ದೂ ಉಣ್ಣದವನ ಬಾಯಲ್ಲಿ ಕಡೆಗೆ ಮಣ್ಣು ಬಿತ್ತು
ಇದ್ದ ಕಾಲದಲ್ಲಿ ಅಟ್ಟುಣ್ಣ ಬೇಕು
ದೀನನ ಬೇಡಿ ಬಳಲಿದರೆ ಆತ ಏನು ಕೊಟ್ಟಾನು
ಅಲ್ಲದವನ ಒಡನಾಟ ಮೊಳಕೈಗೆ ಕಲ್ಲು ಬಡಿದಂತೆ
ಸುಳ್ಳನ ಮಾತು ಕೆಸರೊಳಗೆ ಮುಳ್ಳು ತುಳಿದಂತೆ
ಹೇಮಗೇಡಿ ನೇಮ ಬೆಳಗಿದ
ಭಂಗಿ ರಸ ನೆತ್ತಿಗೇರಿ ಬಿಂಗಿಯಂತೆ ಆಡಿದ
ಊಡದ ಆವಿಗೆ ಉಣ್ಣದ ಕರುವ ಬಿಟ್ಟಂತೆ
ದೈವದ ಸೊಲ್ಲು ಹರಟುವಾತ ಭವದೊಳಗೆ ತೇಲಾಡುತಿದ್ದ
ಉರವಣಿಸಿ ಬರೋ ದುಃಖಕ್ಕೆ ಪರಿಣಾಮ ವೈರಿ
ಗುಣಗೇಡಿ ಒಡನಾಟ ಯಾವಾಲು ದುಃಖದೇಲ್ ಇದ್ದಂತೆ
ಮಾತಿಗೊಂದು ಮಾತು ಬಂತು ವಿಧಿ ಬಂದು ಆತುಕೊಣ್ತು
ಮೆಲ್ಲಗೆ ಹರಿಯೋ ನೀರು ಕಲ್ಲ ಕೊರೆದಿತ್ತು
ಮಾತಿಂದಲೇ ನಗೆನುಡಿ ಮಾತಿಂದಲೇ ಹಗೆಕೊಲೆ
ಮಾತಿಂದಲೇ ಉಪಚಾರ ಮಾತಿಂದಲೇ ಅಪಚಾರ
ಬನ್ನ ಪಟ್ಟುಣ್ಣೋ ಬಿಸಿ ಅನ್ನಕ್ಕಿಂತ ತಂಗುಳೇ ಲೇಸು
ತನ್ನ ತಾ ತಿಳಿದು ತಾನು ತಾನಾದುದೆ ಉನ್ನತಿ
ಬಸುರಲ್ಲಿ ಬಂದ ಕೂಸು ಮುದ್ದು
ಕೊಂಡು ಕೊಟ್ಟದ್ದೂ ಇಲ್ಲ ಹಂಚಿ ಉಂಡದ್ದೂ ಇಲ್ಲ ಸ್ವರ್ಗ ಬೇಕು ಅಂದ
ಬಚ್ಚಿಟ್ಟ ಆಸ್ತಿ ಹೊಂಚುತ್ತಿದ್ದವರ ಪಾಲಾಯ್ತು
ನಿದ್ದೆ ಗೈಯೋನ ಹೊತ್ತು ನುಂಗ್ತು
ಹಕ್ಕಿ ತೆನೆ ತಿಂದು ಹಿಕ್ಕೆ ಇಕ್ಕಿ ಹೋಯ್ತು
ಬಡವರ ಮಾತು ನುಡಿನುಡಿಗೂ ಬೇಸರ
ಅಂಬಲಿಗೆ ಗತಿಇಲ್ಲದವ ಕಟ್ಟಾಣಿ ರಂಬೆಯ ಬಯಸಿದ
ಒಪ್ಪೊತ್ತು ಕೂಳು ತಪ್ಪಿ ಕಣ್ಣು ಕಾಣಾಕ್ಕಿಲ್ಲ ಕಿವಿ ಕೇಳಾಕ್ಕಿಲ್ಲ
ಸೊಕ್ಕುವುದು ಕೆಕ್ಕರಿಸಿ ನೋಡುವುದು ಸೇರಕ್ಕಿಯ ಗುಣ
ಭಂಗಿ ರಸ ನೆತ್ತಿಗೇರಿ ಬಿಂಗಿಯಂತಾದ
ರಸವಳ್ಳಿ ಹೆಣ್ಣಿಗೆ ರಸಪೂರಿ ಹಣ್ಣಿಗೆ ಮನ ಸೋಲದವರಿಲ್ಲ
ಕುಲಗೇಡಿ ಮಗ ಹುಟ್ಟಿ ಕುಲಕ್ಕೇ ಮಸಿ ಬಳಿದ
ಹೊತ್ತು ಮೀರಿದ ಮಾತು ತನಗೇ ಕುತ್ತು ತಂತು
ಇದ್ದುದ ಉಣ್ಣದವನ ಬಾಯಾಗೆ ಕಡೆಗೆ ಮಣ್ಣು ಬಿತ್ತು
ಪರರ ಹಂಗಿಸಿ ಮಂಗ ಅನಿಸಿಕೊಂಡ
ಹೆಣ್ಣಿಂದ ರಾವಣ ಕೆಟ್ಟ ಮಣ್ಣಿಂದ ಕೌರವ ಕೆಟ್ಟ
ಬೋನದ ಬುತ್ತಿ ತಪ್ಪಿ ಚಿತ್ತವಲ್ಲಭೆಯನ್ನು ಮರೆಸಿತ್ತು
ಕಲ್ಲಿನಲ್ಲಿ ಕಳೆಯ ನಿಲ್ಲಿಸಿದ ಗುರುವಿನ ಸೊಲ್ಲಿನಲ್ಲೇ ದೈವ
ಭೋಗಿ ಭೋಗದಲ್ಲಿ ನೆರೆದು ರೋಗಿಯಾದ, ಯೋಗಿ ಯೋಗದಲ್ಲಿ ನೆರೆದು ಯೋಗವಾದ
ಅರಿತೂ ಮಾಡಿದ ಪಾಪ ವಜ್ರದ ಸೆರೆಯಂತೆ
ತಾ ನೊಂದಂತೆ ಬೇರೇರ ನೋವನ್ನೂ ಅರಿಯಬೇಕು
ಹೊಲಬನರಿಯದ (ರೀತಿಯಲ್ಲದ) ಮಾತು ತಲೆ ಬೇನೆ
ಹೊಲಬನರಿತು ನುಡಿದ ಮಾತು ಫಲ ಪಕ್ವವಾದಂತೆ
ಪ್ರಸ್ತಕ್ಕಿಲ್ಲದ ಮಾತು ಹತ್ತುಸಾವಿರವಿದ್ದೇನು
ಸಾಲ ಕೊಳ್ಳುವಾಗ ಹಾಲು ಕುಡಿದಂತೆ, ಸಾಲ ತಿರುಗಿ ಕೊಡುವಾಗ ಕಿಬ್ಬದಿ ಕೀಲು ಮುರಿದಂತೆ
ಇಲ್ಲದ ಕಾಲಕ್ಕೆ ಕಲ್ಲೆದೆ ಬೇಕು
ಅಕ್ಕಸಾಲಿಗನ ಮಗ ಚಿಮ್ಮಟ ಹಿಡಿಯುತ್ತಲೇ ಹೊನ್ನ ಕದ್ದ
ಸಿದ್ದಿಗಿಂತ ಬಲವಿಲ್ಲ ಬುದ್ಧಿಗಿಂತ ಹಿರಿದಿಲ್ಲ
ಅಂಗಾಂಗದಲ್ಲಿ ಪಾಪ ಮಡಗಿಕೊಂಡು ಗಂಗೇಲಿ ಮಿಂದು ಬಂದ
ಮೋಕ್ಷಕ್ಕೆ ಗ್ನಾನ ಬೇಕು ಯೋಗಕ್ಕೆ ಧ್ಯಾನ ಬೇಕು
ಅರುಗೆಟ್ಟ ನಿದ್ದೆ (=ಅರಿವಿಲ್ಲದೆ ಮಲಗಿರುವುದು) ಇರಗೆಟ್ಟು (=ಇರವು ಗೆಟ್ಟು) ಸತ್ತಂತೆ
ಮದ್ದು ಬುದ್ಧಿ ದೈವ ಒಲ್ಲದೆ ತಿದ್ದವು
ಮಂತ್ರ ತಂತ್ರ ದೈವ ಒಲ್ಲದೆ ತನಗೆ ಸ್ವಂತವಲ್ಲ
ದೈವ ಒಲ್ಲದೆ ಆಗೋದಿಲ್ಲ ದೈವ ಒಲಿದರೆ ಹೋಗೋದಿಲ್ಲ
ಓದಿದ ಓದೆಲ್ಲ ಮೇದ ಕಬ್ಬಿನ ಹಿಪ್ಪೆ, ಓದಿದರ ಅರಿವು ಮೇದ ಕಬ್ಬಿನ ರಸ
ವಿದ್ಯೆ ಇಲ್ಲದವನ ಮೊರೆ ಹಾಳೂರ ಹದ್ದಿನಂತೆ
ವಿದ್ಯೆ ಬಲ್ಲವ ಇದ್ದಲ್ಲು ಸಲ್ಲುವ ಹೋಗಿದ್ದಲ್ಲು ಸಲ್ಲುವ
ವಿದ್ಯೆ ಬಲ್ಲವ ಎಲ್ಲಿದ್ದರು ಸಲ್ಲುವ
ಕುಚುಕು ಬುದ್ಧಿ ಹೊಕ್ಕವನು ಕೆಟ್ಟ
ಒಪ್ಪವಿಲ್ಲದವಳ ನಗೆ ನುಡಿ ನೋಟ ಎಂದೂ ಸಪ್ಪಗೆ
ಒಂದೊಂದು ಕಾಲಕ್ಕೆ ಒಂದೊಂದು ಪರಿ
ಸಿರಿತನ ಇರೂತನ ಹಿರಿತನ ಸಿರಿಹೋದ ಮರುದಿನ ಕಿರಿತನ
ಸಿರಿತನ ಇರೂತನ ಪಿರಿಪಿರಿ ಸಿರಿಹೋದ ಮರುದಿನ ಕಿರಿಕಿರಿ
ಸಿರಿತನ ಇರೂತನ ಹಿರಿತನ ಘನ
ಸಿರಿಯಣ್ಣ ಉಳ್ಳನಕ ಹಿರಿಯಣ್ಣ ಇಲ್ಲಾದಗ ನಡಿಯಣ್ಣ
ಎಂಟು ಹೊನ್ನು ಘನವಾದ ನಂಟು ತಂತು
ಕೂಟಸ್ಥ ಇಲ್ದೋನ ಓದು ಗಿಳಿ ಕಲ್ತ ಪಾಠದಂತೆ
ಒಳ್ಳೇ ರಸವಳ್ಳಿ ಕಳ್ಳೀಗಿಡವನ್ನ ಹಬ್ಬಿತು
ರಸವಳ್ಳಿ ಹೆಣ್ಣು ಒಲಿವಂತೆ ಮಾಡುವುದು ಎಳ್ಳ ತಿಂದ ಋಣ
ತೋಟದ ಕಬ್ಬಿಗಿಂತ, ಪೋಟೆಯ ಜೇನಿಗಿಂತ, ಬಲ್ಲವಳ ಕೂಟ ಲೇಸು
ಕಾಡಿಗೆ ಗಣ್ಣ ಚೆಲುವೆ ಮನೆಗೆ ಕೇಡು ತಂದಳು
ತೋಟದ ಬೇಲಿಯನ್ನು ದಾಟಿ ನೋಡದವರಾರು
ರಂಭೆಯಂಥ ಹೆಣ್ತೀನ ಬಿಟ್ಟು ದೊಂಬಿತಿಯ ಹಿಂದೆ ಹೋದ
ಕಣ್ಣಿಗೆ ಒಪ್ಪವಿಲ್ಲದ ಹೆಣ್ಣು ಸಪ್ಪಗೆ ಕಂಡಳು
ತಿಂಗಳ ಬೆಳಕಾಗಿ ಬಾಳಿನಲ್ಲಿ ತಂಗಾಳಿ ಹಿಂಗದಿರಲಿ
ಮಲ್ಲಿಗೆ ವನದಲ್ಲಿ ತುರುಬಿಲ್ಲದಾಕೆ ಸುಳಿದಂತೆ
ಬಂಡಾಟದ ನಡೆ ಚೆಂದ ಮಿಂಡಾಟದ ನುಡಿ ಚೆಂದ
ಆರಿದೋಗರಕ್ಕೆ ಮೊಸರಿಕ್ಕಿ ಕಾಗೆಗೆ ಸೂರೆಕೊಟ್ಟರು
ದೀಪಕ್ಕೆ ಎಣ್ಣೆಯ ಹುಯ್ಯ್ ಅಂತ ಸುರಿಯುತ್ತಾರೇ
ಹುಯ್ಯಂತ ಕೊಡ ಬೇಡ ಸುಮ್ಮನೆ ಕೂರಲು ಬೇಡ
ಬಂದರು ಬಾ ಅನ್ನದ ದರ್ಪಕುರುಡರ ಸಾವಸವೇ ಬೇಡ
ಮುತ್ತು ಚಿಪ್ಪಲ್ಲಿ ಹುಟ್ಟಿ ಮುಕುಟದ ಮಣಿಯಾಯ್ತು
ನೆರೆದ ಸಿರಿ ಜಾವಕ್ಕೆ ಹರಿದು ಹೋಯಿತು
ಹೊನ್ನಿನ ಶೃತಿ ಕೇಳಿ ಎಂಥೆಂಥಾವರೆಲ್ಲ ಭ್ರಮೆಗೆ ಬಿದ್ದರು
ಬರಿಗೆಟ್ಟ ಬದುಕಿಗಿಂತ ಕೊಂದು ತಿನ್ನೊ ಮಾರಿ ಲೇಸು
ಲಕುಮಿ ತೊಲಗಿದ ಬಳಿಕ ಕುಲ ವೀರವಿದ್ದು ಫಲವಿಲ್ಲ
ಯೋಗಿಗೆ ರಾಗ ಇರಬಾರದು ಭೋಗಿಗೆ ರೋಗ ಇರಬಾರದು
ಮನಸ್ಸಿಲ್ಲದವಳ ಒಡನಾಟ ಮಾತುಮಾತಿಗು ಬೇಸರ
ಲಲನೆಯರ ಒಲುಮೆ ತೊಲಗಿದರೆ ಇಲ್ಲ
ಇಂಬರಿತು ಕೊಡುವಳೆ ರಂಭೆ
ಒಲುಮೆಗೆ ನೋಟಬೇಟವೇ ಮೊದಲು
ನೀರೆಯ ಓರೆಗಣ್ಣ ನೋಟಕ್ಕೆ ನಾಡೆಲ್ಲ ಕಾದಡಿತು
ಸಿರಿಯವ್ವನದ ಹೆಣ್ಣು ಸಕ್ಕರೆ ಬೊಂಬೆಯಂತೆ
ಹಾದರ ಹಾಲು ಸಕ್ಕರೆಯಂತೆ,ಬಯಲಾದರೆ, ಬೇವಿನ ಸಾರದಂತೆ
ಚಿತ್ತವಿಲ್ಲದವಳ ಒಡಗೂಟ ನಾಯ್ ಹೆಣಾನ ಹತ್ತಿ ತಿನ್ನುವಂತೆ
ಕೋರಿ (=ಚೆಂದುಳ್ಳಿ ಚೆಲುವೆ) ಒಲುಮೆ ತನಗೆ ಅನ್ನೋ ಮಾರನಿಗೆ (=ಚೆಲುವಾಂತನಿಗೆ) ಮಾರಿ ಹಿಡಿಯಿತು.
ನಚ್ಚುವುದು ಬೇರೆ ಹೆಣ್ಣು ಒಬ್ಬನ ಮೆಚ್ಚುವುದು ಬೇರೆ
ಹೆಣ್ಣಿನ ಬಗೆ/ಮನಸ್ಸ ಬಲ್ಲೋರಿಲ್ಲ
ಏರಿ ಮ್ಯಾಗಿನ ಪಂಜು ನೀರೊಳಗೆ ಉರಿಯಿತು
ದಾನ ಮಾಡೋಕೆ ಕನಲುವ ಮಾನವ ದಂಡ ಚಕಾರ ಎತ್ತದೆ ತೆರುವ
ಕೊಟ್ಟೆ ಅಂತ ಹೇಳಿ ಕೊಡದವನ ಮಾತು ಬೆನ್ನಿಗೆ ಚೂರಿ ಇರಿದಂತೆ
ಹೊತ್ತನ್ನು ಕೊಲ್ಲುವ ಮೈಗಳ್ಳಗಿಂತ ಸತ್ತ ಹೆಣ ಲೇಸು
ಕೊಡದ ಲೋಭಿ ಮಾತು ಕೊಡಲಿ ಪೆಟ್ಟು
ಮಾಡುವವ ಉತ್ತಮ ಆಡಿ ಮಾಡದವ ಅಧಮ
ನೀಡುವವ ಉತ್ತಮ ಬೇಡಿದರೂ ನೀಡದವ ಅಧಮ
ಆಗ ಬಾ ಈಗ ಬಾ ಹೋಗಿ ಬಾ ಅನ್ನದೆ ಕೊಡುವ ತ್ಯಾಗವಾಗು
ಇಚ್ಚೆಯ ಅರಿತು ಕೊಟ್ಟ ನುಚ್ಚೊಂದು ಮಾಣಿಕ್ಯ
ಬೇಡಿದರೆ ಇಲ್ಲ ಅನ್ನೋದ್ ಕಷ್ಟ ನೀಡುವರ ಬೇಡ ಅನ್ನೋದ್ ಕಷ್ಟ
ಕೈಯೆತ್ತಿ ಕೊಡಲಿಲ್ಲ ಮೈಯ್ಯ ದಂಡಿಸಲಿಲ್ಲ ಪುಣ್ಯದ ಪಾಲು ನನಗಿರಲಿ ಅಂದ
ಕೇಡು ಬರೋ ಕಾಲಕ್ಕೆ ಬುದ್ಧಿಗೇಡು
ಪ್ರಾರಬ್ಧ ಬಂದ ಕಾಲಕ್ಕೆ ಒಂದಲ್ಲ ಒಂದು ಕೇಡು
ಕೋಡಗ ಲಂಕೆಯ ಸುಡುವಾಗ ರಾವಣ ನಾಡ ಕಾಯ್ದಿದ್ದ
ನಾಡೆಂದ್ರ ಕಾಡನ್ನ ಸುಡುವಾಗ ದೇವೇಂದ್ರ ಗಾಳೀನ್ನ ನೋಡೊಕೆ ಕಳಿಸಿದ
ಬಿದ್ದಲ್ಲಿ ಸೋತಲ್ಲಿ ಹೊದಿದ್ದ ಬುದ್ಧಿ ತಪ್ಪಿತು
ಸಾಮವೇದದ ಗಾನ ಭೂಮಿ ದಾನದ ಫಲವ ಜಂಬೂದ್ವೀಪದವರೇ ಬಲ್ಲರು
ಜಪ-ತಪ ಉಪವಾಸ ಇದ್ದರೆ ಅಂತಕನ ವಿಪರೀತ ತಪ್ಪೀತೆ
ಪುಣ್ಯ ಉಂಡು (=ಸುಖ ಅನುಭೋಗಿಸಿ) ತೀರಿತು, ಪಾಪ ತಿಂದು (=ಕಷ್ಟ ಅನುಭವಿಸಿ) ತೀರಿತು
ಮಾಡಿದ ಕರ್ಮ ಬೆನ್ನಾಡಿ ಬಂತು
ಕೇಡು ಬರೋ ಕಾಲಕ್ಕೆ ನಂಟೆಲ್ಲ ಹಗೆಯಾಯ್ತು
ಏನಾದರೇನು ತಾನು ತಾನಾಗದ ವರೆಗೆ
ದಾನಿಗೆ ದೀನತನ ಸಲ್ಲ, ಗ್ನಾನಿಗೆ ಮೌನ ಸಲ್ಲ
ಸೊಲ್ಲಿನ ಬೇದ ತಿಳಿದ ಕಿರಿಯ ಎಲ್ಲರಿಗೂ ಹಿರಿಯ
ಮೊಸರ ಕಡೆದರೆ ಬೆಣ್ಣೆ ಒಸೆದು ಬಂತು
ತನ್ನ ತಾನರಿತವಗೇ ತ್ರಿಭುವನ ತನ್ನೊಳಗೆ ಕಂಡಿತ್ತು
ದೈವ ಅನ್ನೋದ ಮತ್ತೆಲ್ಲೂ ನೊಡದೆ ತಾನಿದ್ದ ಒತ್ತಿಲೇ ನೋಡು
ಪೆದ್ದ ಮರದ ತುದಿಯೇರಿ ಅಣಿತಪ್ಪಿ ಬಿದ್ದು ಸತ್ತ
ಸಿರಿ ಸೋಂಕಿದವರ ಪರಿ ಬೇರೆ
ಮಾತಿನ ಬೊಮ್ಮ ತೂತಾದ ಮಡಕೆಯ ಪರಿ
ಅರಿವಿನ ಹಾದಿ ಬೇರೆ
ಅನುಭವಿಗೆ ಬೇರೆ ಮತವಿಲ್ಲ
ಕೋಪ ಬೀವುದೇ ಸಮತೆ
ಪಾಪ ಅನ್ನೋದಕ್ಕೆ ಕೋಪವೇ ನೆಲೆಗಟ್ಟು
ಕೋಟಿ ಕೊಟ್ಟರೂ ಕೂಟ ಕರ್ಮಿಯ ದುಂದುಗವೇ ಬೇಡ
ಕೊಲ್ಲದಿರುವುದೇ ಧರ್ಮ ಬಲ್ಲವರಿಗೆ ಅದೇ ಸಮ್ಮತ
ಎಲ್ಲರು ಆಸೆ ಬಿಟ್ಟರೆ ಇಲ್ಲಿಯೇ ಕೈಲಾಸ, ಎಲ್ಲವ ಬಯಸಿ ಭ್ರಮಿಸಿದರೆ ಇಲ್ಲಿಯೇ ನರಕ
ಒಳ್ಳೇರ ಒಡನಿದ್ದು ಕಳ್ಳ ಒಳ್ಳೇನಾದ
ನಲ್ಲೆ ಮುಂದೆ ಸುಳಿದರೆ ಲೋಕದೊಳಗೆ ಒಲ್ಲದವರಾರು
ಹೆಣ್ಣಿನ ಸೊಬಗನು ಕಣ್ಣಾರೆ ಕಂಡು ಬಯಸದ ಅಣ್ಣಗಳು ಅದಾರು
ಕುಚ ಹೇಮ ಶಸ್ತ್ರ ಸೋಂಕಿದಾಗ ಶುಚಿ ವೀರ ಧೀರರು ಅಚಲಿತರಾದರು
ಸಜ್ಜನರ ಸಂಗ ಹೆಜ್ಜೇನು ಸವಿದಂತೆ
ಹೃದಯಶೂನ್ಯರ ಒಲವಿಗಿಂತ ಬಲ್ಲವರ ಕದನವೇ ಲೇಸು
ಕರಣಗಳ ತಡೆದು ನಿಲಬಾರದು
ಒಂದರ ಮೊದಲೊಳಗೆ ಬಂದಿದೆ ಜಗವೆಲ್ಲ
ಬಹುಮನದ ಹಾದಿ ಕೈಗೊಂಡರೆ ಸುಖವಿಲ್ಲ
ನೆತ್ತಿಯಲ್ಲಿ ಅಮೃತ ಹೊತ್ತು ಸಾವಿಗಂಜಿ ಜಗವೆಲ್ಲ ಸುತ್ತಾಡಿದ
ಹೆಣ್ಣಿದ್ದ ಮನೆಗೆ ಎಡತಾಕಿ ಅಣ್ಣಯ್ಯ ಮಣ್ಣಾಗಿ ಹೋದ
ಎಲ್ಲವೂ ತಾನಗ ಬಲ್ಲರೆ ಅದುವೇ ಯೋಗ
ಕಯ್ಯಾರೆ ಮಾಡುವ ಧರ್ಮ ಲೇಸು
ಪಾತ್ರವರಿತು ಜಗದ ಜಾತ್ರೆಗೆ ಸಲ್ಲಬೇಕು
ಉಣವಲ್ಲ ಉಡವಲ್ಲದವನ ಒಡವೆ ಕಂಡವರ ಪಾಲಾಯ್ತು
ಉಟ್ಟು ಉಡಲಾರ ಕೊಟ್ಟು ಸೈರಿಸಲಾರ
ಕೊಟ್ಟುಣ್ಣದ ಗಂಟು ಪರರಿಗೆ ಬಿಟ್ಟು ಹೋದಂತೆ
ಕೊಂದ ಪಾಪ ತಿಂದು ಪರಿಹಾರ (=ಕೊಂದ ಪಾಪ/ಕರ್ಮ ತನಗೆ ಅಂಟಿಕೊಂಡು ಅದನ್ನು ತೊಡೆಯುವುದಕ್ಕೆ ಕಷ್ಟ ಅನುಭವಿಸಬೇಕಾಗುತ್ತದೆ)
ಒಂದೊಂದು ಹನಿ ಬಿದ್ದು ನಿಂತಲ್ಲಿ ಮಡುವಾಯ್ತು
ಊರಿಗೆ ದಾರೀಯ ಯಾರು ತೋರಿದರೇನು
ಯಾರಿಗೂ ತೋರದಂತೆ ದೈವ ತನ್ನೊಳಗೆ ಸಾರಿಹುದು
ನಿಜವ ಹಿಡಿ ಘಟವ ನೆಚ್ಚದಿರು
ದಿಟವೇ ಪುಣ್ಯದ ಪುಂಜ ಸಟೆಯೇ ಪಾಪದ ಬೀಜ
ಇಮ್ಮನದಿಂದ ಸುಮ್ಮನೆ ಕೆಟ್ಟೆ (ಕೇಡು)
ಧರ್ಮದ ಹಾದಿ ತಿಳಿದವನಿಗೆ ಓದು ವಾದಗಳೇಕೆ
ಏನೂ ಇಲ್ಲದವಗೆ ಭಯವಿಲ್ಲ
ಬೆರಳು ತೋರುದ್ರೆ ಅಂಗೈನೇ ನುಂಗಿದಂತೆ
ಅಕ್ಕಿ ಉಂಡವ ಹಕ್ಕಿ, ಜೋಳ ಉಂಡವ ತೋಳ
ಅಕ್ಕಿಲ್ಲ ಬ್ಯಾಳಿಲ್ಲ ಅಕ್ಕನ್ನ ಕರತರಬೇಕು
ಅಡೆ ಮಡಕೆಯಲ್ಲ ಇಡೆ ಸಟ್ಟುಗವಲ್ಲ
ಅಣ್ಣಿಗೇರ್‍ಯಾಗ ಎಣ್ಣೆ ಮೊಣಕಾಲ ಮಟ್ಟ
ನೆರಲೆ ಹಣ್ಣು ಬಲು ಕಪ್ಪು ತಿಂದು ನೋಡಿದರೆ ಬಲು ಸವಿ
ಅತ್ತೆ ಮಾಡಿದ್ದು ಅಡಕಲಗೂಡಿಗೆ ಸೊಸೆ ಮಾಡಿದ್ದು ಬೆಳಕಿಗೆ
ಅತ್ತೆಯ ಮನಿಯಾಗ ಮುತ್ತಾಗಿ ಇರಬೇಕು
ಅಧರಕ್ಕೆ ಕಹಿ ಉದರಕ್ಕೆ ಸಿಹಿ
ಅನ್ನ ಹಾಕಿದ ಮನೆಗೆ ಕನ್ನ ಹಾಕಿದಂತೆ
ಅಪ್ಪನ ಬಟ್ಟೆಯಾದರು ಚಿಪ್ಪಿಗ ಬಿಡ
ಅಯ್ಯೋ ಅಂದರೆ ಅರೆ ವಯಸ್ಸು
ಅರಿತೂ ಮಾಡಿದ ಪಾಪ ವಜ್ರಲೇಪ
ಅಲಗಿನ ಗಾಯಕ್ಕಿಂತ ಗಲಗಿನ ಗಾಯ ಹೆಚ್ಚು
ಬಿದ್ದ ಪೆಟ್ಟಿಗಿಂತ ನಕ್ಕ ಪೆಟ್ಟು ಹೆಚ್ಚು
ಅಲಾ ಬಲಾ ಪಾಪಿ ತಲೀ ಮ್ಯಾಲೆ
ಸಿಡಿಲು ಬಡಿದರೆ ಅಂಗೈಲಿ ಹಿಡಿದ ಕೊಡೆ ಕಾಪಾಡಿತೇ
ಆಗುವ (ಅಡುವ) ವರೆಗಿದ್ದು ಆರುವ ವರೆಗೆ ಇರಲಾರರೇ
ಆಟ ಕೆಟ್ಟರೆ ದೀವಟಿಗೆಯವನ ಸುತ್ತ
ಆಡಿ ಉಂಡ ಮೈ ಅಟ್ಟು ಉಂಡೀತೇ?
ಆಡೋಣ ಬಾ ಕೆಡಿಸೋಣ ಬಾ
ಹೊತ್ತು ಕಳೆದರೆ ಮತ್ತೆ ಬಾರದು
ಹೊತ್ತಿರುವಾಗಲೇ ಗೊತ್ತು ಸೇರಬೇಕು
ಹೊಕ್ಕು ಬಳಸಿದರೆ ನಂಟು
ಹೆಣ್ಣು ಹುಟ್ಟಿದರೊಂದು ಹುಣ್ಣು ಹುಟ್ಟಿದ ಹಾಗೆ
ಹೆಣ್ಣು ಹಡೆದವರ ಮನೆ ನುಣ್ಣಗೆ ಗಂಡು ಹಡೆದವರ ಮನೆ ತಣ್ಣಗೆ
ಹೆಣ್ಣು ಜಲ್ಮಕ್ಕೆ ಹೆಜ್ಜೆಗೊಂದು ಮುಳ್ಳು
ಹೆಣ್ಣಿನ ಬಾಳು ಕಣ್ಣೀರಿನ ಗೋಳು
ಹೆಣ್ಣು ಉರಿಸಿದ ಮನೆಯ ಹೆಗ್ಗಂಬ ಉರಿಯಿತು
ಹೆಂಡತಿಯಿಲ್ಲದ ಮನೆ ತಂತಿಯಿಲ್ಲದ ವೀಣೆ
ಹೆಂದತಿಯಿಲ್ಲದ ಮನೆ ದೇವರಿಲ್ಲದ ಗುಡಿ
ಹೂವ ತರುವ ಮನೆಗೆ ದೇವ ಹುಲ್ಲು ಹೊರುವ
ಹುಣ್ಣು ಮಾದರೂ ಕಲೆ ಮಾದೀತೇ
ಹುಚ್ಚು ಹೊಳೇ ಬರುವಾಗ ಹೂವಿನ ತೋಟ ಇದಿರೇ
ಹಾಲಿಗಿಂತ ಕೆನೆ ರುಚಿ
ಹಾರೋ ಹಕ್ಕಿ ಪುಕ್ಕ ಎಣಿಸಿದಂತೆ
ಹಿಂದಲ ಮಾತು ಮರಿ ಮುಂದಲ ಬಾಳು ಅರಿ
ಹಾಯೋ ಎತ್ತು ಹಾಯ್ದರೂ ಬಂತು ಬಿಟ್ಟರೂ ಬಂತು
ಹಾದಿ ತಪ್ಪಿದವನಿಗೆ ಹದಿನೆಂಟು ಹಾದಿ
ಮರ ಕಡಿದು ಮೈಮೇಲೆ ಹಾಕಿಕೊಂಡ್ರಂತ
ಹರ ಮುನಿದರೆ ಗುರು ಕಾಯ್ವ
ಹರಕಿನಲ್ಲಿ ಇಲಿ ಕಡಿಯಿತು
ಹತ್ತು ಮಂದಿ ಹುಲ್ಲು ಕಡ್ಡಿ ಒಬ್ಬನ ತಲೆ ಭಾರ
ಹಂಪ್ಯಾಗ ಇರೂದಕ್ಕಿಂತ ತನ್ನ ಕೊಂಪ್ಯಾಗ ಇರೂದ್ ಲೇಸು
ಹಂಗು ತೊರೆದ ಮೇಲೆ ಲಿಂಗದ ಪರಿವೆ ಏನು
ಸೇರಿಗೆ ಸವ್ವಾ ಸೇರು
ಸೂಳೆ ಪಾಪ ಸನ್ಯಾಸಿಗೆ
ಸುಳ್ಳು ಹೇಳಿದರೂ ನಿಜದ ತಲೆಯ ಮೇಲೆ ಹೊಡೆದಂಗೆ ಹೇಳಬೇಕು
ಮೊಂಡ ಮಾವನಿಗೊಬ್ಬ ಭಂಡ ಅಳಿಯ
ಸಿಟ್ಟು ಬಂದರೆ ಪಡಿ ಹಿಟ್ಟು ಮುಕ್ಕು
ಸರಿದರೆ ಒತ್ತಣ್ಣ ಒತ್ತಿದರೆ ಸರಿಯಣ್ಣ
ಸತ್ತು ಕೊಳ್ಳೋ ಸೊರ್‍ಗಕ್ಕಿಂತ ಬದುಕಿ ಕೊಳ್ಳೋ ನರಕ ಲೇಸು
ವರಕವಿಗಳ ಮುಂದೆ ನರಕವಿಗಳು ವಿದ್ಯೆ ತೋರಬಾರದು
ಬಂಗಾರಕ್ಕೆ ಕುಂದಣವಿಟ್ಟಂತೆ
ವಜ್ರಕ್ಕೆ ಸಾಣಿ ಹಿಡಿದಂತೆ
ಲಕ್ಷ್ಮಿ ಚಂಚಲೆ
ಮೊಂಡ ಕೊಡಲಿ ರಟ್ಟೆಗೆ ಮೂಲ
ಮೂಗು ಹಿಡಿದರೆ ಬಾಯಿ ತಾನೇ ತೆರೆಯುವುದು
ಮುದುಕೀ ನಿನ್ನಾಟ ಮುಂದೈತಿ
ಮುಚ್ಚಿ ಹೇಳಿದರೆ ಒಗಟು ಬಿಚ್ಚಿ ಹೇಳಿದರೆ ಒರಟು
ಮಾಳಿಗೆ ಮನೆ ಬೇಕು ಜೋಳಿಗೆ ಹಣ ಬೇಕು ಮಾದೇವನಂಥಾ ಮಗ ಬೇಕು ಗೌರಿಯಂಥಾ ಸೊಸೆ ಬೇಕು
ಮಾರಿಯ ಹೋತ ತೋರಣದ ಚಿಗುರು ಬಯಸಿತಂತೆ
ಮಾತಿಗೆ ಮಾತುಗಳ ಓತು ಸಾಸಿರ ಉಂಟು
ಮಳೇ ನೀರ ಬಿಟ್ಟು ಮಂಜಿನ ನೀರಿಗೆ ಕೈ ಒಡ್ಡಿದಂತೆ
ಮರಗಿಣಿಯ ಕೂಡೆ ಆಡಿ ಅರಗಿಣಿ ಕೇಟ್ಟಿತು
ಮಂದ್ಯಾಗ ಮಚ್ಚೀಲೆ ಹೊಡೆದು ಸಂದ್ಯಾಗ ಕಾಲು ಹಿಡಿದರು
ಮಂಡಕ್ಕಿ ತಿಂದ ಮಗ ಮದ್ದಾನೆ ತರುಬಿದ ಮೃಷ್ಟಾನ್ನ ತಿಂದ ಮಗ ನೊಣ ಝಾಡಿಸಿದ
ಮಂದಾಳಿಗೊಂದು ಮುಂದಾಳು
ಭಲೆ ಜಟ್ಟಿ ಅಂದ್ರೆ ಕೆಮ್ಮಣ್ಣು ಮುಕ್ಕಿದ
ಬೇಕೆಂಬುದು ಬಾಳು ಸಾಕೆಂಬುದು ಸಾವು
ಬೇವು ಕಾಗೆಗೆ ಇಂಪು ಮಾವು ಕೋಗಿಲೆಗೆ ಇಂಪು
ಬೆಲ್ಲದ ಸಿಪಾಯಿ ಮಾಡಿ ಇರುವೆ ಹತ್ತರ ಕಳಿಸಿದ
ಬೆಣ್ಣೆಯೊಳಗಿನ ಕೂದಲು ತೆಗೆದಂತೆ
ಬೆಕ್ಕಿಗೆ ಬೆಣ್ಣೆ ಕಂಡಿತು ಬಡಿಗೆ ಕಾಣಲಿಲ್ಲ
ಬೆಕ್ಕಿನ ಕನಸಿನಲ್ಲಿ ಬರೀ ಇಲಿಗಳೇ
ಬೆಂದ ಮನೇಲಿ ಹಿರಿದದ್ದೇ ಲಾಭ
ಸುಡುವ ಮನೆಯ ಗಳ ಹಿರಿದಂತೆ
ಬೆಂಕಿಗೆ ಕರಗದ್ದು ಬಿಸಿಲಿಗೆ ಕರಗೀತೇ
ಬೀಳು ಭೂಮಿಗೆ ಬೀಜ ದಂಡ
ಬೀಜ ಸಣ್ಣದಾದರೆ ಮರ ಸಣ್ಣದೋ
ಆನೆಗೂ ಅಡಿ ತಪ್ಪೀತು
ಆನೆಯ ಹೊಟ್ಟೆಗೆ ಅಂಬಲಿ ಬಿಟ್ಟ ಹಾಗೆ
ಆನೆ ಬರುವುದಕ್ಕು ಮುನ್ನ ಗಂಟೆ ಸದ್ದು
ಆನೆ ಹೋದದ್ದು ದಾರಿ ಹಾವು ಹರಿದದ್ದು ಅಡ್ಡದಾರಿ
ಮಳೆಗಾಲದೇಲಿ ಚಿಗಿಯೂದಿಲ್ಲ ಬೇಸಿಗೇಲಿ ಒಣಗೂದಿಲ್ಲ
ಹುಟ್ಟುವವನ ಅಣ್ಣ ಬೆಳೆಯುವವನ ತಮ್ಮ
ಆಸೆ ಮಾತು ಕೊಟ್ಟು ಬಾಸೆ ತಪ್ಪಬಾರ್‍ದು
ಇಕ್ಕಟ್ಟಾದರೂ ತನ್ನ ಗುಡಿಲೇ ಚಂದ
ಇಕ್ಕಲಾರದ ಕೈ ಎಂಜಲು
ಇಟ್ಟ ಶಾಪ ಕೊಟ್ಟವನಿಗೆ ತಟ್ಟೀತು
ಇಲ್ಲು ಪೋಗಂಡ ಅಲ್ಲು ಪೋಗಂಡ
ಇದ್ದ ಮಕ್ಕಳೇ ಎಣ್ಣೆ ಬೆಣ್ಣೆ ಕಾಣದಿರುವಾಗ ಮತ್ತೊಂದು ಕೊಡೋ ದೇವರೇ ಅಂದಂತೆ
ಈರಣ್ಣನ ಮುಂದೆ ಬಸ್ಸಣ್ಣ ಕುಂತಂತೆ
ಉಪಾಸ ಇದ್ರೂ ಉಪದ್ರ ಇರಬಾರ್‍ದು
ಕಲ್ಲ ನಾಗರ ಕಂದರೆ ಹಾಲೆರೆವರು ದಿಟ ನಾಗರ ಕಂಡರೆ ಕೊಲ್ಲೆಂಬರು
ಉಂಬುವ ಜಂಗಮ ಬಂದರೆ ನಡೆಯೆಂಬರು, ಉಣ್ಣದ ಲಿಂಗಕ್ಕೆ ಬೋನ ಹಿಡಿಯೆಂಬರು
ಉಪಕಾರಕ್ಕೋಗಿ ಉಪದ್ರ ಬಂತು
ಉರಗಕ್ಕೆ ಹಾಲೆರೆದರೆ ಅದು ತನ್ನ ಗರಳ್ವ ಬಿಡಬಲ್ಲುದೇ
ಹಾವಿಗೆ ಹಾಲೆರೆದರೇನು ಫಲ
ಗಾಯದ ಮೇಲೆ ಬರೆ ಕೊಟ್ಟಂತೆ
ಎಟ್ಟ್ (ಹಟಮಾರಿ) ಗಂಡಗೆ ಖೊಟ್ಟಿ ಹೆಂಡತಿ
ಎತ್ತು ಮಾರಿದವಗೆ ಹಗ್ಗದ ಆಸೆಯೇ
ಎದ್ದವನು ಗೆದ್ದಾನು
ತಲೆ ಸೀಳಿದರೆ ಎರಡಕ್ಷರ ಇಲ್ಲ
ಎರವಿನವರು ಎರವು ಕಸಗೊಂಡರೆ ಕೆರವಿನಂತಾಯಿತು ಮೋರೆ
ಎಲ್ಲಮ್ಮನ ಗುಡ್ಡದಾಗ ಮುಲ್ಲಾಂದೇನು
ಎಲ್ಲಾ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ
ಒಂದು ದುಡ್ಡು ಕೊಡುವೆ ಹಾಡು ದಾಸಯ್ಯ ಎರಡು ದುಡ್ಡು ಕೊಡುವೆ ಬಿಡು ದಾಸಯ್ಯ
ಒಡೆದ ಹಾಲು ಹೆಪ್ಪಿಗೆ ಬಂದೀತೇ
ಕೆತ್ತೆಂದರೆ ಕೆತ್ತು ಮೆತ್ತೆಂದರೆ ಮೆತ್ತು
ಒಳ್ಳೊಳ್ಳೆಯವರು ಉಳ್ಳಾಡುವಾಗ ಗುಳ್ಳವ್ವ ಪಲ್ಲಕ್ಕಿ ಬೇಡಿದಳಂತೆ
ಕಂಗಾಲನ ಮನೀಗೆ ಕಂಗಾಲ ಹೋದರೆ ಗಂಗಾಳ ನೆಕ್ಕು ಅಂತಂತೆ
ಕಣ್ಣೆರಡಾದರೂ ನೋಟ ಒಂದೇ
ಕರ್ಮ ಕಳೆಯುವವರೆಗೆ ಮರ್ಮದಲ್ಲಿರು
ಕೆಲಸಿಲ್ಲದ ಗಂಡು ಕರೀ ಒನಕೆ ತುಂಡು
ಕರುಬಿದವರ ಮನೆ ಬರಿಮನೆ
ಕಲ್ತ ಕೈ ಕದ್ದಲ್ಲದೆ ಬಿಡದು
ಕೂಡಿದ ಗಂಡನನ್ನಾದರೂ ಬಿಟ್ತೇನು ಕಲ್ತದ್ದ ಬಿಡಲಾರೆ
ಕಳ್ಳನ ಕೈಯಲ್ಲಿ ಕೀಲಿಕೈ ಕೊಟ್ಟಂತೆ
ಕಳ್ಳನ ಕಾವಲಿಟ್ಟ ಹಾಗೆ
ಕಾಲಿಗೆ ಬಿದ್ದು ಕಾಲುಂಗರ ಉಚ್ಚಿಕೊಂಡರಂತೆ
ಕಾವಿ ಉಟ್ಟವರೆಲ್ಲಾ ಸನ್ಯಾಸಿಗಳಲ್ಲ ಬೂದಿ ಬಳಿದವರೆಲ್ಲ ಬೈರಾಗಿಗಳಲ್ಲ
ಕುದಿಯುವುದರೊಳಗಾಗಿ ಮೂರು ಸಾರಿ ಹಳಸಿದಂತೆ
ಕೂತುಕೊಂಡು ಹೇಳುವವನ ಕೆಲಸ ಊರು ಮಾಡಿದರೂ ಸಾಲದು
ಕೂಳಿಗೆ ಕೇಡು ಭೂಮಿಗೆ ಭಾರ
ಕೆಟ್ಟು ಪಟ್ಟಣ ಸೇರು ಇಟ್ಟು ಹಳ್ಳಿ ಸೇರು
ಕೆಟ್ಟು ಬದುಕಬಹುದು ಬದುಕಿ ಕೆಡಬಾರದು
ಕೆಟ್ಟು ಸೈರಿಸಬಲ್ಲೆ ಕೊಟ್ಟು ಸೈರಿಸಲಾರೆ
ಕೆರೆಯ ನೀರ ಕೆರೆಗೆ ಚೆಲ್ಲಿ ವರ ಪಡೆದುಕೊಂಡಂತೆ
ಕೈಲಾದವರು ಮಾಡುತ್ತಾರೆ ಕೈಲಾಗದವರು ಆಡುತ್ತಾರೆ
ಕೊಂಕಿಗೆ ಕೊಂಕೇ ಮದ್ದು
ಕೊಡಲಾರದ ಹೆಣ್ಣಿಗೆ ತೆರವು ಕೇಳಿದರಂತೆ
ಕೊಡುವ ದೇವರು ಬಡವನೇ?
ಕೊಡುವವನ ಕೈ ಯಾವಾಲು ಮೇಲೆ
ಅಪ್ಪ ಗುಡಿ ಕಟ್ಟಿದರೆ ಮಗ ಕಳಸ ಇಟ್ಟ
ಕೋಪ ಪಾಪ ತಂತು ಪಾಪ ತಾಪ ತಂತು
ಗಂಡ ಹೆಂಡಿರ ಜಗಳದಲ್ಲಿ ಮಕ್ಕಳು ಜಗಳ ಕಲಿತವು
ಗಳಕ್ಕನೇ ಉಂಡವ ರೋಗಿ ಗಳಿಗೆ ಉಂಡವ ಭೋಗಿ
ಗಾಣವಾಡದೆ ಎಣ್ಣೆ ಬಂದೀತೇ
ಗುಡಿಸಿದ ಮೇಲೆ ಕಸವಿರಬಾರದು ಬಡಿಸಿದ ಮೇಲೆ ಹಸಿವಿರಬಾರದು
ಗುರುವಿಗೆ ತಿರುಮಂತ್ರ
ಸಂತೇಲಿ ಮನೇ ಮಾಡಿ ಸದ್ದಿಗಂಜೂದೇ
ಗೆದ್ದವ ಸತ್ತ ಸೋತವ ಸತ್ತ
ಚೌಲದಾಗ ದೌಲು ಮಾಡು
ಜನಕ್ಕಂಜದಿದ್ದರೂ ಮನಕ್ಕಂಜಬೇಕು
ಹುಟ್ಟಿದವಗೆ ಸಾವು ತಪ್ಪದು
ತನಗಿಲ್ಲದ್ದು ಎಲ್ಲಿದ್ದರೇನು
ತನ್ನ ತಾನರಿತರೆ ತನ್ನರಿವೆ ಗುರು
ತನ್ನ ನೆರಳಿಗೆ ತಾನಂಜಿ ನಡೆಯಬೇಕು
ತಬ್ಬಳಿ ದೇವರಿಗೆ ತಂಗಳ ನೈವೇದ್ಯ
ತಲೆ ಬಲಿಯಿತು ಅಂತ ಕಲ್ಲಿಗೆ ಹಾಯಬಾರದು
ತವರೂರಿನ ದಾರೀಲಿ ಕಲಿಲ್ಲ ಮುಳ್ಳಿಲ್ಲ
ತಾ ಅನ್ನೋದು ನಮ್ಮ ತಲತಲಾಂತರಕ್ಕೂ ಇರಲಿ, ಕೊ ಅನ್ನೋದು ನಮ್ಮ ಕುಲಕೋಟಿಗೂ ಬೇಡ
ತಾನು ತಿಂದದ್ದು ಮಣ್ಣು ಹೆರರಿಗೆ ಕೊಟ್ಟದ್ದು ಹೊನ್ನು
ತಾ ಬಲವೋ ಜಗ ಬಲವೋ
ತುಟ್ಟಿಯಾದರೂ ಹೊಟ್ಟೆ ಕೇಳದು
ತುಟಿ ಸುಮ್ಮನಿದ್ದರೂ ಹೊಟ್ಟೆ ಸುಮ್ಮನಿರದು
ತೊಳೀಲಿಲ್ಲ ಬಳೀಲಿಲ್ಲ ಮೂಗೇಕೆ ಮಸಿಯಾಯ್ತು
ದನಿಯಿದ್ದವರೂ ಅತ್ತರೂ ಚಂದ ನಕ್ಕರೂ ಚಂದ
ದುಡಿದದ್ದು ಉಂಡೆಯೋ ಪಡೆದದ್ದು ಉಂಡೆಯೋ
ದೂಫ ಹಾಕಿದರೆ ಪಾಪ ಹೋದೀತೇ
ನಡೆವರ್ ಎಡವದೇ ಕುಳಿತವರ್ ಎಡವುವರೇ
ನಾ ಬಡವ ವಾಲಗ ಸಾವಕಾಶ ಊದು ಅಂದಂತೆ
ನೇಮ ಉಳ್ಳವನ ಕಂಡರೆ ಯಮನಿಗೂ ಭಯ
ನೆಂಟ ನೆರವಲ್ಲ ಕುಂಟ ಜೊತೆಯಲ್ಲ
ಪಡುವಣ ಮನೆಗೆ ಮೂಡಣ ದೀಪ
ಪಿಶಾಚಿ ಬಿಟ್ಟರೂ ನಿಶಾಚರ ಬಿಡ
ಹೆಣ್ಣು ಹೊನ್ನು ಮಣ್ಣು ಇನ್ನೊಬರ ಕೈ ಸೇರಿದರೆ ಹೋದಂತೆ
ಬಳ್ಳಿಗೆ ಕಾಯಿ ಭಾರವೇ
ಬಾಡಿಗೆ ಎತ್ತೆಂದು ಬಡಿದು ಬಡಿದು ಹೂಡಬೇಕೆ
ಬಾಳಿ ಬದುಕುವರಿಗೆ ಹಾಳೂರ ಸುದ್ದಿ ಯಾಕೆ
ಬಿಳಿ ಆನೆ ಸಾಕಿದ ಹಾಗೆ
ನಿಷ್ಠೆ ಇಲ್ಲದೆ ಎಷ್ಟು ಪೂಜೆ ಮಾಡಿದರೂ ನಷ್ಟ
ನಿಷ್ಠೆ ಇಲ್ಲದವನಿಗೆ ದೈವ ಬಟ್ಟಬಯಲು
ಕಂಡವರ ಕಂಡು ಕೈಕೊಂಡ ಧರ್ಮ ದಂಗು ಬಡಿಸಿತು
ಕಂಡವರ ಕಂಡು ಕೈಕೊಂಡ ಕೆಲಸ ಕೆಂಡವಾಯ್ತು
ನಿಷ್ಠೆ ಇದ್ದಲ್ಲಿ ದೈವ ಕಲ್ಲುಗುಂಡೊಳಗೆ ಅಡಗಿತ್ತು
ಭಕ್ತಿ ಉಳ್ಳಾತಗೆ ಮುಕ್ತಿ ,ಶಕ್ತಿ ಉಳ್ಳಾತಗೆ ಭುಕ್ತಿ
ಅರಿತು ಮಾಡದ ದಾನ ತೆರೆದು ನೋಡದ ಕಣ್ಣಂತೆ
ಕಾಯ ಕಮಲವೇ ಸೆಜ್ಜೆ ಜೀವ ರತುನವೇ ಜ್ಯೋತಿ
ತತ್ವಮಸಿ ಅಂತ ಅನ್ನೋದ್ ಕಲಿ ಅಂದ್ರೆ ತುತ್ತು ಸವಿ ಅಂತ ಉಣ್ನೋದ್ ಕಲ್ತ
ಜ್ಯೋತಿಯ ನೆಲೆ ಅರಿತವನೇ ಯೋಗಿ
ನೆತ್ತರು ಉಕ್ಕಿದರೆ ಜೀವ ತೊಡಕೀತು
ವಿಧಿ ಕಾಣದ ಎಡೆಗಳಿಲ್ಲ
ದಾರವಿದ್ದರೆ ಮುತ್ತು ಹಾರವೆಂದನಿಸಿತ್ತು
ಕಾಲ ತಪ್ಪಿದ ಬಳಿಕ ನೂರು ಮಾಡಿದರು ಹಾಳು
ಮಿಂದು ಮೈಲಿಗೆ ಉಡೊದಾದ್ರೆ ಜಳಕದ ದಂದುಗವೇಕೆ
ಮಾಡಿದ ಪಾಪ ದಾನದಿಂದ ಹೋದೀತೆ
ಮಿಂದರೆ ಮೈಯ ಕೊಳೆ ಹೋಯ್ತು
ಹಿರಿದು ಪಾಪ ಮಾಡಿ ಗಂಗೆಗೆ ಹರಿದರು
ಅಕ್ಕರ ಕಲ್ತು ತನ್ನ ಒಕ್ಕಲನ್ನೇ ತಿನ್ನೊದ್ ಕಲ್ತ
ವಿಧಿ ಮುನಿದರೆ ಸರಿ ಬೆಸವಾಯ್ತು
ಅರಸು ಒಲಿದರೆ ಸಿರಿ ದೆಸೆಯಾಯ್ತು
ಆಳಿದ ದೊರೆ ಹುಸಿದರೆ ಅಲ್ಲಿಂದ ಹೇಳದೆ ಹೋಗಬೇಕು
ಬಲ್ಲಿದರೊಡನೆ ಸೆಣಸಿ ಮಾತಾಡಿದರೆ ಅಲ್ಲೇ ಬಂತು ಕೇಡು
ಮಂತ್ರಿಇಲ್ಲದ ರಾಜ್ಯ ಕೀಲು ಮುರಿದ ಯಂತ್ರದಂತೆ
ಕತ್ತಿ ವೈರಿ ಕೈಯಲ್ ಕೊಟ್ಟು ಬೆನ್ನ ಮಾಡಿ ನಿಂತನಂತೆ
ಕೊಂಡಾಡುತ್ತ ಜಗದ ಇಚ್ಚೆಯನ್ನೆ ನುಡಿದರೆ ಜಗವೆಲ್ಲ ತನ್ನ ಮುದ್ದಾಡುತಿತ್ತು
ನಾಡಳಿದು ನಾಡೊಡೆಯನಿಗೆ ಕೇಡು ನಾಡೊಡೆಯ ಅಳಿದು ನಾಡಿಗೆಲ್ಲ ಕೇಡು
ಯಾರನ್ನ ನಂಬಿದರು ಆರೈದು ನಂಬಬೇಕು
ಬಾಳಿಕೆಗೆಟ್ಟು ಬೆಸಲಾದ ಚೇಳಿನಂತಾದ
ಹುಟ್ಟು ಸಾವು ದಿಟವೇ ಆದರೂ ಹೆಜ್ಜೆ ಹೆಜ್ಜೆಗೆ ಅಂಜೂದ್ ತಪ್ಪಲಿಲ್ಲ
ಜಿನ ಧರ್ಮವೇ ಜೀವಧರ್ಮ
ಮೂಕ ಪ್ರಾಣಿಯ ಕೊಲ್ಲದ್ದು ಜೀವಧರ್ಮ
ನೀರೆಯ ಓರೆಗಣ್ಣ ನೋಟಕ್ಕೆ ನಾಡೆಲ್ಲ ಇರಿದಾಡಿತು
ಲಲನೆಯರ ಒಲುಮೆ ತೊಲಗಿದರೆ ಇಲ್ಲ
ಇಂಬರಿದು ಕೊಡುವಳೆ ರಂಭೆ
ತಾನೊಲಿದ ಮಂಕು ಮಾಣಿಕ್ಯ
ಹಾಸಿಗೆ ಇದ್ದಷ್ಟು ಕಾಲು ಚಾಚು
ಬೀದೀಲಿ ಹೋಗೋ ಮಾರೀನ ಮನೆಗೆ ಕರೆದಂತೆ
ಮಾಡಿದ್ದುಣ್ಣೋ ಮಾರಾಯ
ಉಪ್ಪು ತಿಂದ ಮ್ಯಾಲೆ ನೀರ ಕುಡಿಯಲೇಬೇಕು
ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ
ಆಗೋದೆಲ್ಲಾ ಒಳ್ಳೇದಕ್ಕೆ
ಗಂಡ ಹೆಂಡಿರ ಜಗಳ ಉಂಡು ಮಲಗುವತನಕ
ಕಾಲಕ್ಕೆ ತಕ್ಕಂತೆ ನಡೆಯಬೇಕು, ತಾಳಕ್ಕೆ ತಕ್ಕಂತೆ ಕುಣಿಯಬೇಕು
ಅನ್ನ ಹಾಕಿದ ಮನೆಗೆ ಕನ್ನ ಹಾಕಬೇಡ
ಮಾರಿ ಕಣ್ಣು ಹೋರಿ ಮ್ಯಾಲೆ, ಕಟುಕನ ಕಣ್ಣು ಕುರಿ ಮ್ಯಾಲೆ
ಪಾಲಿಗೆ ಬಂದದ್ದು ಪಂಚಾಮೃತ
ಸಾವಿರ ಸುಳ್ಳು ಹೇಳಿ ಮದುವೆ ಮಾಡು
ಕಳ್ಳನ ನಂಬಿದರೂ ಕುಳ್ಳನ್ನ ನಂಬಬೇಡ
ಅಟ್ಟಿಕ್ಕಿದೋಳಿಗಿನ್ನ ಬೊಟ್ಟಿಕ್ಕಿದೋಳು ಹೆಚ್ಚು
ಅಪ್ಪಂತೋನಿಗೆ ಇಪ್ಪತ್ತೊಂದು ಕಾಯಿಲೆ
ಅಯ್ಯೋ ಅಂದವರಿಗೆ ಆರು ತಿಂಗಳು ಆಯಸ್ಸು ಕಮ್ಮಿ
ಪಾಪ ಅಂದ್ರೆ ಕರ್ಮ ಬರ್ತದೆ
ಅರಸು ಆದೀಕ (=ಆದಾಯ) ತಿಂದ, ಪರದಾನಿ ಹೂಸು ಕುಡಿದ
ಆಳು ಮೇಲೆ ಆಳು ಬಿದ್ದು ದೋಣು ಬರಿದಾಯ್ತು
ಇಟ್ಟುಕೊಂಡಾಕಿ ಇರೂತನ ಕಟ್ಟಿಕೊಂಡಾಕಿ ಕಡೀತನ
ಇತ್ತಿತ್ತ ಬಾ ಅಂದ್ರೆ ಇದ್ದ ಮನೇನೂ ಕಿತ್ತುಕೊಂಡ
ಹರುವಯ್ಯನ ಎಲೆ ಇಂಬ, ಒಕ್ಕಲಿಗನ ಮನೆ ಇಂಬ
ಗವುಜಿ ಗದ್ದಲ ಏನೂ ಇಲ್ಲ, ಗೋವಿಂದ ಭಟ್ಟ ಬಾವೀಲಿ ಬಿದ್ದ
ಇದ್ದವರು ಇದ್ದಹಾಗೆ ಸಿದ್ಧಾ ದೇವಿಗೆ ಸಿಡಿಲು ಬಡೀತು
ಅಂದು ಬಾ ಅಂದ್ರೆ ಮಿಂದು ಬಂದ
ಹಣ ಇದ್ದೋರಿಗೆ ಏನೆಲ್ಲ, ಗುಣ ಇದ್ದೋರಿಗೆ ಏನಿಲ್ಲ
ಹಣ ಇಲ್ದೋರು ಎದ್ದೂ ಬಿದ್ದಂಗೆ, ಗುಣ ಇಲ್ದೋರು ಇದ್ದೂ ಇಲ್ದಂಗೆ
ಅಜ್ಜ! ಮದುವೆ ಅಂದ್ರೆ ನನಗೋ ಅಂದ
ಅಕ್ಕ ನನ್ನವಳಾದ್ರೆ ಬಾವ ನನ್ನವನೇನು
ಅಕ್ಕನ ಹಗೆ ಬಾವನ ನೆಂಟು
ಅಕ್ಕರೆಯ ಅಕ್ಕ ಬಂದಾಗೇ ಸಕ್ಕರೆಯೆಲ್ಲ ಕಹಿ ಆಯ್ತು
ಅಕ್ಕ ಬರಬೇಕು ಅಕ್ಕಿ ಮುಗೀಬಾರದು
ನೀರೆ ನಿನ್ನ ಮಾತು ನಿಜವೇನೆ ನೀರ ಕಡಿದರೆ ಬೆಣ್ಣೆ ಬಂದಾದೇನೆ
ಅಕ್ಕಿಯ ಮೇಗಳ ಆಸೆ, ನೆಂಟರ ಮೇಗಳ ಬಯಕೆ
ಅಕ್ಕಿ ಸರಿಯಾಗ ಬಾರದು ಅಕ್ಕನ ಮಕ್ಕಳು ಬಡವಾಗ ಬಾರದು
ಅಗಸನ ಬಡಿವಾರವೆಲ್ಲ ಹೆರರ ಬಟ್ಟೆ ಮೇಲೆ
ಅಗಸರ ಕತ್ತೆ ಕೊಂಡು ಹೋಗಿ, ಡೊಂಬರಿಗೆ ತ್ಯಾಗ ಹಾಕಿದ ಹಾಗೆ
ಹಳ್ಳೀ ದೇವರ ತಲೆ ಒಡೆದು, ದಿಲ್ಲೀ ದೇವರ ಹೊಟ್ಟೆ ಹೊರೆದ ಹಾಗೆ
ಅಜ್ಜಿಗೆ ಅರಿವೆಯ ಚಿಂತೆ, ಮಗಳಿಗೆ ಗಂಡನ ಚಿಂತೆ, ಮೊಮ್ಮಗಳಿಗೆ ಕಜ್ಜಾಯದ ಚಿಂತೆ
ಅಜ್ಜಿ ಸಾಕಿದ ಮಗ ಬೊಜ್ಜಕ್ಕೂ ಬಾರದು
ಅಡವಿಯ ದೊಣ್ಣೆ ಪರದೇಸಿಯ ತಲೆ
ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ
ಅತಿ ಆಸೆ ಗತಿಗೇಡು
ಅತ್ಯಾಶ ಬಹುದುಃಖಾಯ ಅತಿ ಸರ್ವತ್ರ ವರ್ಜಯೇತ್
ಅತಿ ಸ್ನೇಹ ಗತಿ ಕೇಡು
ಅರ್ತಿಗೆ ಬಳೆ ತೊಟ್ಟು ಕೈ ಕೊಡವಿದರೆ ಹೋದೀತೆ
ಅತ್ತೆ ಒಡೆದ ಪಾತ್ರೆಗೆ ಬೆಲೆ ಇಲ್ಲ
ಅನ್ಯಾಯದಿಂದ ಗಳಿಸಿದ್ದು ಅಸಡ್ಡಾಳಾಗಿ ಹೋಯ್ತು
ಅಬದ್ಧಕ್ಕೆ ಅಪ್ಪಣೆಯೇ ಅಂದ್ರೆ ಬಾಯಿಗೆ ಬಂದಷ್ಟು
ಅರಗಿನಂತೆ ತಾಯಿ, ಮರದಂತೆ ಮಕ್ಕಳು
ಅಮ್ಮನ ಮನಸ್ಸು ಬೆಲ್ಲದ ಹಾಗೆ, ಮಗಳ ಮನಸ್ಸು ಕಲ್ಲಿನ ಹಾಗೆ
ಅರಮನೆಯ ಮುಂದಿರಬೇಡ, ಕುದರೆಯ ಹಿಂದಿರಬೇಡ
ಅರಸನ ಕುದರೆ ಲಾಯದಲ್ಲೆ ಮುಪ್ಪಾಯಿತು
ಅರೆಪಾವಿನವರ ಅಬ್ಬರ ಬಹಳ
ಅಲ್ಪರ ಸಂಗ ಅಭಿಮಾನ ಭಂಗ
ಅಳಿವುದೇ ಕಾಯ ಉಳಿವುದೇ ಕೀರ್ತಿ
ಆವು ಕಪ್ಪಾದ್ರೆ ಹಾಲು ಕಪ್ಪೇನು
ಆಗರಕ್ಕೆ ಹೋಗಿ ನನ್ನ ಗಂಡ ಗೂಬೆ ತಂದ
ಆಗೋ ಪೂಜೆ ಆಗುತ್ತಿರಲಿ ಊದೋ ಶಂಖ ಊದಿ ಬಿಡುವ
ಆಚಾರ್ಯರಿಗೆ ಮಂತ್ರಕ್ಕಿಂತ ಉಗುಳು ಜಾಸ್ತಿ
ಆಡಿ ತಪ್ಪ ಬೇಡ ಓಡಿ ಸಿಕ್ಕ ಬೇಡ
ಆಡುತ್ತಾ ಆಡುತ್ತಾ ಭಾಷೆ, ಹಾಡುತ್ತಾ ಹಾಡುತ್ತಾ ರಾಗ
ಆಡೋದು ಮಡಿ ಉಂಬೋದು ಮೈಲಿಗೆ
ಓದೋದು ಕಾಶಿ ಖಂಡ, ತಿನ್ನೋದು ಮಶಿ ಕೆಂಡ
ಆನೆ ಮೆಟ್ಟಿದ್ದೇ ಸಂದು, ಸೆಟ್ಟಿ ಕಟ್ಟಿದ್ದೇ ಪಟ್ಟಣ
ಆಪತ್ತಿಗೆ ಹರಕೆ, ಸಂಪತ್ತಿಗೆ ಮರವು
ಆರು ಯತ್ನ ತನ್ನದು, ಏಳನೇದು ದೇವರಿಚ್ಛೆ
ಹಾಕೋದು ಬಿತ್ತೋದು ನನ್ನಿಚ್ಛೆ; ಆಗೋದು ಹೋಗೋದು ದೇವರಿಚ್ಛೆ
ಆಲಸ್ಯಂ ಅಮೃತಂ ವಿಷಂ
ಆಲಸಿ-ಮುಂಡೇದ್ಕೆ ಎರಡು ಖರ್ಚು, ಲೋಭಿ-ಮುಂಡೇದ್ಕೆ ಮೂರು ಖರ್ಚು
ಆಸೆ ಹೆಚ್ಚಿತು ಆಯಸ್ಸು ಕಮ್ಮಿ ಆಯಿತು
ಆಸೆಗೆ ಕೊನೆಯಿಲ್ಲ
ಆಷಾಡದ ಗಾಳಿ ಬೀಸಿ ಬೀಸಿ ಬಡಿವಾಗ, ಹೇಸಿ ನನ್ನ ಜೀವ ಹೆಂಗಸಾಗಬಾರದೇ
ಹೆತ್ತವರಿಗೆ ಅಂಬಲಿ ಬಿಡದಿದ್ದರೂ, ಹಂಬಲ ಬಿಡದಿದ್ದರೆ ಸಾಕು
ಹೊಟ್ಟೆ ಉರಿದು ಕೊಳ್ಳೋದು ಒಂದೇಯ, ಹೊಟ್ಟೆ ಇರಿದು ಕೊಳ್ಳೋದು ಒಂದೇಯ
ಹೇಳಿಕೆ ಮಾತು ಕೇಳಿ ಹೆಂಡ್ರನ್ನ ಬಿಟ್ಟ
ಸಾದೆತ್ತಿಗೆ ಎರಡು ಹೇರು (ಹೊರೆ)
ಹೆತ್ತವರು ಹೆಸರಿಕ್ಕ ಬೇಕು
ಓಡಿ ಹೋಗೊಳು ಮೊಸರಿಗೆ ಹೆಪ್ಪು ಹಾಕ್ತಾಳ
ಕಣ ಕಾಯಬಹುದು, ಹೆಣ ಕಾಯಾಕೆ (ಬೇಸರದಿಂದ ಹೊತ್ತು ಕಳೆಯಲಿಕ್ಕೆ) ಆಗೊದಿಲ್ಲ
ಕತೆ ಹೇಳೋಕೆ ಹ್ಞುಂ-ಗುಟ್ಟೋರಿರಬೇಕು, ನೆಟ್ಟಗೆ ಬಾಳೋಕೆ ಛೀ-ಗುಟ್ಟೋರಿರಬೇಕು
ಕಳ್ಳನ ಮನಸ್ಸು ಹುಳ್ಳಗೆ
ಸಂತೆ ಸೇರೋಕೆ ಮೊದಲು ಗಂಟು ಕಳ್ಳರು ಸೇರಿದರು
ಅಪ್ಪನ ಮನೇಲಿ ಸೈ ಅನ್ನಿಸಿಕೊಂಡೋಳು, ಅತ್ತೆ ಮನೇಲೂ ಸೈ ಅನ್ನಿಸಿಕೊಣ್ತಾಳೆ
ಅನ್ನ ಇಕ್ಕಿ ಸಾಕು ಅನ್ನಿಸ ಬಹುದು, ದುಡ್ಡು ಕೊಟ್ಟು ಸಾಕು ಅನ್ನಿಸೋಕಾಗಲ್ಲ
ಹೆಂಡ್ರನ್ನ ಸಸಾರ (=ತಾತ್ಸಾರ) ಮಾಡಿದ್ರೆ ಸಂಸಾರ ನಿಸ್ಸಾರವಾಗ್ತದೆ
ಹಾಲಿಲ್ಲ ಬಟ್ಟಲಿಲ್ಲ ಗುಟುಕ್ ಅಂದ
ಕೊಡೋದು ಕೊಳ್ಳೋದು ಗಂಡಂದು, ಮಜ ಮಾಡೋದು ಹೆಂಡ್ರುದ್ದು
ಅಂಕೆ ಇಲ್ಲದ ಚತುರೆ, ಲಗಾಮು ಇಲ್ಲದ ಕುದುರೆ
ಊರಿಗಾಗದ ಗೌಡ, ಮೇಲೆರಗುವ ಗಿಡುಗ
ರೊಂಡಿಗೆ ಏಟು ಬಿದ್ರೆ ಮೊಂಡಿಗೆ ಮುಲಾಮು ಹಚ್ಚಿದರು
ಯೋಗ ಇದ್ದಷ್ಟೇ ಭೋಗ
ಹಾಕ್ಮಣೆ, ನೂಕ್ಮಣೆ, ಯಾಕ್ಮಣೆ
ತೇಗಿ ತೇಗಿ ಬೀಗಿ ಬಿದ್ದ
ತಾಮ್ರದ ನಾಣ್ಯ ತಾಯಿ ಮಕ್ಕಳನ್ನ ಕೆಡಿಸ್ತು
ಮುದ್ದು ಮುದ್ದು ತೊಗಲೆ ಬಿದ್ದು ಬಿದ್ದು ನಗಲೆ
ಹೌದಪ್ಪನ ಮನೇಲಿ ಹೌದಪ್ಪ, ಇಲ್ಲಪ್ಪನ ಮನೇಲಿ ಇಲ್ಲಪ್ಪ
ಹೋದ ಬದುಕಿಗೆ ಹನ್ನೆರಡು ದೇವರು
ಹೋದ್ರೆ ಒಂದು ಕಲ್ಲು, ಬಂದ್ರೆ ಒಂದು ಹಣ್ಣು
ಆದ್ರೆ ಒಂದು ಅಡಿಕೆ ಮರ, ಹೋದ್ರೆ ಒಂದು ಗೋಟಡಿಕೆ
ಹೋದಾ ಪುಟ್ಟಾ, ಬಂದಾ ಪುಟ್ಟಾ, ಪುಟ್ಟನ ಕಾಲಿಗೆ ನೀರಿಲ್ಲ
ಇಕ್ಕಲಾರದ ಕೈ ಎಂಜಲು
ಇಕ್ಕುವಳು ನಮ್ಮವಳಾದ್ರೆ ಕೊಟ್ಟಿಗೆಯಲ್ಲಾದರೂ ಉಣಲಕ್ಕು
ಇಕ್ಕೇರಿ ತನಕ ಬಳಗ, ಮಾನ ಮುಚ್ಚಲಿಕ್ಕೆ ಅರಿವೆ ಇಲ್ಲ
ಹೆಸರಿಗೆ ಹೊನ್ನ ಹೆಗ್ಗಡೆ, ಎಸರಿಗೆ ಅಕ್ಕಿ ಇಲ್ಲ
ಇಡೀ ಮುಳುಗಿದರೂ ಮೂಗು ಮೇಲೆ
ಇದ್ದ ಊರ ಸುದ್ದಿ ಇದ್ದಲ್ಲಿ ತೆಗೆಯ ಬಾರದು, ಬೇವೂರ ಸುದ್ದಿ ಹೋದಲ್ಲಿ ತೆಗೆಯ ಬಾರದು
ಇದ್ದದ್ದು ಹೇಳಿದರೆ ಹದ್ದಿನಂತ ಮೋರೆ ಆಯಿತು
ನಿಜ ಆಡಿದರೆ ನಿಷ್ಠೂರ
ಇದ್ದದ್ದು ಹೋಯಿತು ಮದ್ದಿನ ಗುಣದಿಂದ
ಇದ್ದಲ್ಲಿ ಗವುಡ ಹೋದಲ್ಲಿ ಕಿವುಡ
ತನ್ನೂರಲಿ ರಂಗ, ಪರೂರಲಿ ಮಂಗ
ಇಬ್ಬರ ನ್ಯಾಯ, ಮೂರನೇಯವನಿಗೆ ಆದಾಯ
ಇಲ್ಲದ ಬದುಕು ಮಾಡಿ ಇಲಿಗೆ ಚಣ್ಣ ಹೊಲಿಸಿದರು
ಇಲಿಯ ವ್ಯಾಜ್ಯಕ್ಕೆ ಬೆಕ್ಕು ಸಾಕ್ಷಿ
ಇಲಿ ಹೆಚ್ಚಿದವೆಂದು, ಮನೆಗೆ ಉರಿ ಇಡ ಬಾರದು
ಎಡದ ನೆತ್ತಿಗೆ ಬಡಿದರೆ ಬಲದ ನೆತ್ತಿಗೆ ತಾಕಿತು
ಯಾರದೋ ದುಡ್ಡು; ಎಲ್ಲಮ್ಮನ ಜಾತ್ರೆ
ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು
ಮದುವೆ ಮಡಿನೋಡು ಮನೆ ಕಟ್ಟಿ ನೋಡು
ಇಲಿಯಾಗಿ ನೂರುದಿನ ಬಾಳೋದಕ್ಕಿಂತ ಹುಲಿಯಾಗಿ ಮೂರು ದಿನ ಬಾಳೋದು ಲೇಸು
ಮಾತು ಬೆಳ್ಳಿ, ಮೌನ ಬಂಗಾರ
ಕೈ ಕೆಸರಾದ್ರೆ ಬಾಯಿ ಮೊಸರು
ಸಂಸಾರಿ ಸಾವಾಸ ಮಾಡಿ ಸನ್ಯಾಸಿ ಕೆಟ್ಟ
ಮಾತು ಮನೆ ಮುರೀತು, ತೂತು ಒಲೆ ಕೆಡಿಸ್ತು
ಕುಂತು ತಿಂದರೆ, ಕುಡಿಕೆ ಹೊನ್ನೂ ಸಾಲದು
ಮುತ್ತು ಒಡೆದರೆ ಹೋಯ್ತು, ಮಾತು ಆಡಿದರೆ ಹೋಯ್ತು
ತುಂಬಿದ ಕೊಡ, ತುಳುಕೋದಿಲ್ಲ
ಕಾಮಾಲೆ ಕಣ್ಣೊನಿಗೆ ಕಂಡಿದ್ದೆಲ್ಲ ಹಳದಿ ನೇ
ಮದುವೆಯಾಗೋ ಗುಂಡ ಅಂದ್ರೆ ನೀನೇ ನನ್ನ ಹೆಂಡ್ತಿ ಅಂದ
ಮಾಡೋದು ದುರಾಚಾರ, ಮನೆ ಮುಂದೆ ಬೃಂದಾವನ
ಮನೆಗೆ ಬೆಂಕಿ ಬಿದ್ದಾಗ ಬಾವಿ ತೋಡಿದರಂತೆ
ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ
ಮೂರ್ತಿ ಚಿಕ್ಕದಾದ್ರು ಕೀರ್ತಿ ದೊಡ್ಡದು
ಹಾಳೂರಿಗೆ ಉಳಿದವನೇ ಗೌಡ
ಹಿರೀಅಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ
ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು
ಜನ ಮರುಳೋ ಜಾತ್ರೆ ಮರುಳೋ
ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ
ಕಾರ್ಯವಾಸಿ ಕತ್ತೆ ಕಾಲು ಕಟ್ಟು
ಕೆಟ್ಟ ಮೇಲೆ ಬುದ್ಧಿ ಬಂತು, ಅಟ್ಟ ಮೇಲೆ ಒಲೆ ಉರಿಯಿತು
ಕೊಂಕಣ ಸುತ್ತಿ ಮೈಲಾರಕ್ಕೆ ಬಂದ ಹಾಗೆ
ಕೋಪದಲ್ಲಿ ಕುಯ್ದ ಮೂಗು ಶಾಂತಿಯಲ್ಲಿ ಬಂದೀತೇ
ಕೋತಿ ತಾನೂ ಕೆಡೋದಲ್ದೆ ವನಾನೂ ಕೆಡಿಸ್ತು
ಕೊಟ್ಟದ್ದು ತನಗೆ; ಬಚ್ಚಿಟ್ಟದ್ದು ಪರರಿಗೆ
ಕೊಟ್ಟೋನು ಕೋಡಂಗಿ, ಇಸ್ಕೊಂಡೋನು ಈರಭದ್ರ
ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಂಡ
ಕುಂಬಾರಂಗೆ ವರುಷ; ದೊಣ್ಣೆಗೆ ನಿಮಿಷ
ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿಸಿದರು
ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
ಕೈಯಲ್ಲಿ ಶರಣಾರ್ಥಿ, ಕಂಕುಳಲ್ಲಿ ದೊಣ್ಣೆ
ನಾಯಿ ಬೊಗಳಿದರೆ ದೇವಲೋಕ ಹಾಳೇನು
ನಾಯಿ ಬಾಲ ಡೊಂಕು
ಓದಿ ಓದಿ ಮರುಳಾದ ಕೂಚು ಭಟ್ಟ
ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು
ಪಾಪಿ ಸಮುದ್ರ ಹೊಕ್ಕರು ಮೊಣಕಾಲುದ್ದ ನೀರು
ರಾಮೆಶ್ವರಕ್ಕೆ ಹೋದ್ರೂ ಶನೀಶ್ವರನ ಕಾಟ ತಪ್ಪಲಿಲ್ಲ
ಸಾವಿರ ಸುಳ್ಳು ಹೇಳಿ ಒಂಡು ಮಡುವೆ ಮಾಡು
ಬೇಲಿನೆ ಎದ್ದು ಹೊಲ ಮೇಯಿತಂತೆ
ಭಂಗಿ ದೇವರಿಗೆ ಹೆಂಡಗುಡುಕ ಪೂಜರಿ
ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ
ಎತ್ತು ಈಯಿತು ಅನ್ದರೆ ಕೊಟ್ಟಿಗೆಗೆ ಕಟ್ಟು ಎನ್ದರಂತೆ
ಗಂಡ ಹೆಂಡಿರ ಜಗಳ ಉನ್ಡು ಮಲಗೊ ತನಕ
ಹಿಡಿದ ಕೆಲಸ ಕೈ ಹತ್ತಲ್ಲ, ತಿಂದ ಅನ್ನ ಮೈ ಹತ್ತಲ್ಲ
ಮೇಲೆ ಬಿದ್ದು ಬಂದೋಳು ಮೂರು ಕಾಸಿಗೂ ಕಡೆ
ಮೂರೂ ಬಿಟ್ಟೋಳು ಊರಿಗೆ ದೊಡ್ಡೋಳು
ಕೋತಿಯಂಥೋನು ಕೆಣಕಿದ, ಮೂತಿಗೆ ಹೆಟ್ಟಿಸಿಕೊಂಡು ತಿಣಕಿದ
ಮುಳ್ಳಿನಿಂದ ಮುಳ್ಳು ತೆಗೆ, ಹಗೆಯಿಂದ ಹಗೆ ತೆಗೆ
ಆನೆಯಂಥದೂ ಮುಗ್ಗರಿಸ್ತದೆ
ಚರ್ಮ ಸುಕ್ಕಾದ್ರೆ ಮುಪ್ಪು, ಕರ್ಮ ಮುಕ್ಕಾದ್ರೆ ಮುಕ್ತಿ
ಹೊಟ್ಟೆ ತುಂಬಿದೋರಿಗೆ ಹುಡುಗಾಟ, ಹೊಟ್ಟೆಗಿಲ್ಲದೋರಿಗೆ ಮಿಡುಕಾಟ
ಹೆರಿಗೆ ಬೇನೆ ಕೆಲ ಗಂಟೆ ಗಂಟ, ಬಂಜೆ ಬೇನೆ ಬದುಕಿನ ಗಂಟ
ಕಟ್ಟಿದ ಕೆರೆಗೆ ಕೋಡಿ ತಪ್ಪಲ್ಲ, ಹುಟ್ಟಿದ ಮನೆಗೆ ಬೇರೆ(ಪಾಲಗುವುದು) ತಪ್ಪಲ್ಲ
ದುಡ್ಡಿಗೆ ದುಡ್ಡು ಗಂಟು ಹಾಕಿದ್ಯೋ? ಬೆನ್ನಿಗೆ ಹೊಟ್ಟೆ ಅಂಟು ಹಾಕಿದ್ಯೋ?
ಬಿಮ್ಮಗಿದ್ದಾಗ ಹಮ್ಮು, ಬಿಮ್ಮು ತಪ್ಪಿದಾಗ ದಮ್ಮು
ಊರು ಬಾವಿಗೆ ಬಿದ್ದರೂ, ಊರ ಬಾಯಿಗೆ ಬೀಳಬಾರದು
ವಶಗೆಡದೆ ಹಸಗೆಡಲ್ಲ
ಯಜಮಾನಿಲ್ಲದ ಮನೆ ಮೇಟಿ ಇಲ್ಲದ ಕಣ ಎರಡೂ ಒಂದೆ
ಯಾರೂ ಇಲ್ಲದ ಊರಿಗೆ ಹೋಗಿ ನೀರು ಮಜ್ಜಿಗೆ ಬಯಸಿದಂತೆ
ಯೋಗಿ ತಂದದ್ದು ಯೋಗಿಗೆ, ಭೋಗಿ ತಂದದ್ದು ಭೋಗಿಗೆ
ಯಾರೂ ಇಲ್ಲದ ಮನೆಗೆ ನಾನು ಜೋಗಪ್ಪ ಅಂದ
ಯಾವ ಕಾಲ ತಪ್ಪಿದರೂ ಸಾವು ಕಾಲ ತಪ್ಪದು
ಯಸಗಾತಿಗೆ ದೋಸೆ ಕೊಡೊ ಹೊತ್ತಿಗೆ, ಮೂಸಿಮೂಸಿ ಮೂಗಿನ ಕೆಳಗೆ ಹಾಕಿದ್ಲು
ಯುಕ್ತಿಯ ಮಾತು ಮಕ್ಕಳಿಂದಾದರೂ ತಿಳುಕೊ
ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮುದ್ದೆ ಉಣ್ತಾ ಮಜ್ಜಿಗೆ ಓಡಾಟ
ಯೋಗ್ಯತೆ ಅರಿಯದ ದೊರೆ ರೋಗ ಅರಿಯದ ವೈದ್ಯ ಒಂದೇ
ರಟ್ಟೆ ಮುರಿದು ರೊಟ್ಟಿ ತಿನ್ನು ಕಟ್ಟೆ ಹಾಕಿ ಅನ್ನ ಉಣ್ಣು
ರಸ ಬೆಳೆದು ಕಸ ತಿನ್ನಬೇಡ, ಹಸ ಕಟ್ಟಿ ಮೊಸರಿಗೆ ಪರದಾಡಬೇಡ
ರಾಗ ನೆನೆಪಾದಾಗ ತಾಳ ಮರೆತು ಹೋಯಿತಂತೆ
ರಾಗಿ ಇದ್ರೆ ರಾಗ ರಾಗಿ ಇಲ್ದಿದ್ರೆ ರೋಗ
ರಾಗಿಕಲ್ಲು ತಿರುಗುವಾಗ ರಾಜ್ಯವೆಲ್ಲಾ ನೆಂಟರು
ರಾಜ ಇರೋತನಕ ರಾಣಿ ಭೋಗ
ರಾತ್ರಿ ಕಂಡ ಬಾವೀಲಿ ಹಗಲು ಬಿದ್ದಂಗೆ
ರಾಮ ಅನ್ನೋ ಕಾಲದಲ್ಲಿ ರಾವಣ ಬುದ್ಧಿ
ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ
ಲಕ್ಕಿ ಸೊಪ್ಪಾದರೂ ಲೆಕ್ಕದ ಮುದ್ದೆ ಉಣಬೇಕು
ಲಂಚ ಕೊಟ್ಟು ಮಂಚ ಏರು ವಂಚನೆ ಮಾಡಿ ಕೈಲಾಸ ಏರು
ಲಾಭವಿಲ್ಲದ ವ್ಯಾಪಾರ ಕತ್ತೆ ಮೈ ಪರಚಿದಂಗೆ
ಲಿಂಗ ಹರಿದ ಮೇಲೆ ಜಂಗಮನ ಹಂಗೇನು
ಲೋಕ ತಿಳಿಯಬೇಕು ಲೆಕ್ಕ ಕಲಿಯಬೇಕು
ವಿನಾಶ ಕಾಲಕ್ಕೆ ವಿಪರೀತ ಬುದ್ಧಿ
ವ್ಯಾಪಾರಕ್ಕೆ ನಿಮಿಷ ಬೇಸಾಯಕ್ಕೆ ವರುಷ
ಶಿವರಾತ್ರಿ ಮನೆಗೆ ಏಕಾದಶಿ ಬಂದಂಗೆ
ಶಿವಾ ಅರಿಯದ ಸಾವು ಇಲ್ಲ ಮನಾ ಅರಿಯದ ಪಾಪ ಇಲ್ಲ
ಶೀಲವಂತರ ಓಣೀಲಿ ಕೋಳಿ ಮಾಯ ಆದವಂತೆ
ಶೆಟ್ಟಿ ಸುಂಗಾರ ಆಗೋದರೊಳಗೆ ಪಟ್ಟಣ ಹಾಳಾಯ್ತು
ಸಡಗರದಲ್ಲಿ ಮದುವೆ ಮಾಡಿ ಈ ಹೆಣ್ಣು ಯಾರು ಅಂದಳಂತೆ ಅತ್ತೆ
ಸತ್ತ ಮೇಲಿನ ಸೊರ್ಗಕ್ಕಿಂತ ಇದ್ದ ನರಲೋಕ ವಾಸಿ
ಸತ್ತವರಿಗೆ ಸಂಗವಿಲ್ಲ ಕೆಟ್ಟವರಿಗೆ ನೆಂಟರಿಲ್ಲ
ಸತ್ತೋರ ಮಕ್ಕಳು ಇದ್ದೋರ ಕಾಲ್ದಸೀಲಿ
ಸಮಯಕ್ಕಾದ ಹುಲ್ಲು ಕಡ್ಡಿ ಸಹಸ್ರ ಹೊನ್ನು
ಸಮಯಕ್ಕಾದವನೆ ನೆಂಟ ಕೆಲಸಕ್ಕಾದವನೆ ಬಂಟ
ಸಮಯಕ್ಕೆ ಬಾರದ ಬುದ್ಧಿ ಸಾವಿರ ಇದ್ದರೂ ಲದ್ಧಿ
ಸಮುದ್ರದ ನೆಂಟಸ್ತನ ಉಪ್ಪಿಗೆ ಬಡತನ
ಸವತಿ ಸಣ್ಣವಳಲ್ಲ ದಾಯಾದಿ ಚಿಕ್ಕವನಲ್ಲ
ಸಂತೆ ಕಟ್ಟೋಕು ಮೊದಲೇ ಸೇರಿದರು ಗಂಟು ಕಳ್ಳರು
ಸಂತೇಲಿ ಮಂತ್ರ ಹೇಳಿದಂಗೆ
ಸಂದೀಲಿ ಸಮಾರಾಧನೆ ಮಾಡ್ದಂಗೆ
ಸಾಯ್ತಿನಿ ಸಾಯ್ತಿನಿ ಅಂತ ಸಾವಿರ ಕೋಳಿ ತಿಂದನಂತೆ
ಸಾಯೋ ತನಕ ಶನಿ ಕಾಟ ಆದ್ರೆ ಬಾಳೋದು ಯಾವಾಗ
ಸಾಯೋ ಮುಂದೆ ಸಕ್ಕರೆ ತುಪ್ಪ ತಿನಿಸಿದರಂತೆ
ಸಾಲ ಅಂದ್ರೆ ಶೂಲ, ಕಾಲ ಅಂದ್ರೆ ಯಮ
ಸಾಲಗಾರನ ಮನೆಗೆ ಸವುದೆ ಹೊತ್ತರೆ ಮೇಲಣ ಬಡ್ಡಿಗೆ ಸಮವಾಯಿತು
ಸಾಲಗಾರ ಸುಮ್ಮನಿದ್ದರೂ ಸಾಕ್ಷಿದಾರ ಸುಮ್ಮನಿರ
ಸಾವಿರ ಕುದರೆ ಸರದಾರ ಮನೇ ಹೆಣ್ತಿಗೆ ಪಿಂಜಾರ
ಸಾವಿರ ಕೊಟ್ಟರೂ ಸವತಿ ಮನೆ ಬೇಡ
ಸಾವಿರ ಸಲ ಗೋವಿಂದ ಅಂದರು, ಒಬ್ಬ ದಾಸಯ್ಯನಿಗೆ ಭಿಕ್ಷೆ ನೀಡಲಿಲ್ಲ
ಸಾವಿರ ವರ್ಷ ಸಾಮು ಮಾಡಿ ಸಾಯೋ ಮುದುಕಿ ಸೊಂಟ ಮುರಿದ
ಸುಳ್ಳು ದೇವರಿಗೆ ಕಳ್ಳ ಪೂಜಾರಿ
ಸುಂಕದೋನ ಹತ್ರ ಸುಖದುಃಖ ಹೇಳಿಕೊಂಡ ಹಾಗೆ
ಸೂಜಿಯಷ್ಟು ಬಾಯಿ ಗುಡಾಣದಷ್ಟು ಹೊಟ್ಟೆ
ಸೆಟ್ಟಿ ಸಾಲ ಸತ್ತ ಮೇಲೆ ತಿಳೀತು
ಸೊಕ್ಕಿದ್ದು ಉಕ್ತದೆ ಉಕ್ಕಿದ್ದು ಒಲೆಗೆ ಹಾರ್ತದೆ
ಹಗಲು ಅರಸನ ಕಾಟ ಇರುಳು ದೆವ್ವದ ಕಾಟ
ಹಗ್ಗ ತಿನ್ನೋ ಹನುಮಂತ ರಾಯನಿಗೆ ಜ್ವಾಳದ ಶಾವಿಗೆ ಎಷ್ಟು ಕೊಟ್ಟೀಯ
ಹಗ್ಗ ಹರಿಯಲಿಲ್ಲ ಕೋಲು ಮುರಿಯಲಿಲ್ಲ
ಹಗೆಯೋನ ಕೊಲ್ಲಾಕೆ ಹಗಲೇನು ಇರುಳೇನು
ಹಣ್ಣು ತಿಂದೋನು ನುಣುಚಿ ಕೊಂಡ ಸಿಪ್ಪೆ ತಿಂದೋನು ಸಿಗ್ಹಾಕೊಂಡ
ಹಣ ಅಂದ್ರೆ ಹೆಣವೂ ಬಾಯಿ ಬಿಡ್ತದೆ
ಹಣ್ಣೆಲೆ ಉದುರುವಾಗ ಚಿಗುರೆಲೆ ನಗುತಿತ್ತು
ಹತ್ತು ಕಟ್ಟುವಲ್ಲಿ ಒಂದು ಮುತ್ತು ಕಟ್ಟು
ಹತ್ತರೊಟ್ಟಿಗೆ ಹನ್ನೊಂದು ಜಾತ್ರೆಯೊಟ್ಟಿಗೆ ಗೋವಿಂದು
ಹತ್ತು ತಿಂಗಂಳ ಪುಟ್ಟ ಹಟ್ಟೆಲ್ಲಾ ಹೆಜ್ಜೆ
ಹತ್ತು ಮಕ್ಕಳ ತಾಯಾದರೂ ಸತ್ತ ಮಗನ್ನ ಮರೆಯೊದಿಲ್ಲ
ಹತ್ತು ಜನಕ್ಕೆ ಬಿದ್ದ ನ್ಯಾಯ ಬೇಗ ಸಾಯಕಿಲ್ಲ
ಹದ ಬಂದಾಗ ಅರಗಬೇಕು ಬೆದೆ ಬಂದಾಗ ಬಿತ್ತಬೇಕು
ಹರಿದಿದ್ದೇ ಹಳ್ಳ ನಿಂತಿದ್ದೇ ತೀರ್ಥ
ಹರೆ ಬಡಿದರೂ ಮದುವೆ ಮೊರ ಬಡಿದರೂ ಮದುವೆ
ಹರೆಯಕ್ಕೆ ಬಂದಾಗ ಹಂದಿನೂ ಚಂದ
ಹಲವು ದೇವರ ಮಾಡಿ ಹಾರುವಯ್ಯ ಕೆಟ್ಟ
ಹಲ್ಲುಬಿದ್ದ ಮುದುಕಿ ಎಲ್ಲಿ ಬಿದ್ದರೇನು
ಹಸಿದ ಹೊಟ್ಟೆ ತೋರಿಸಿದರೆ ಮಸೆದ ಕತ್ತಿ ತೋರಿಸಿದರು
ಹಸಿದು ಹಲಸಿನ ಹಣ್ಣು ತಿನ್ನು ಉಂಡು ಮಾವಿನ ಹಣ್ಣು ತಿನ್ನು
ಹಳೆ ಮನೆಗೆ ಹೆಗ್ಗಣ ಸೇರಿಕೊಂಡಂಗೆ
ಹಂದಿ ತನ್ನ ಚಂದಕ್ಕೆ ವೃಂದಾವನ ಆಡ್ಕೊಣ್ತು
ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ
ಹಾರುವರ ಕೇರೀಲಿ ಹಬ್ಬ ಆದ್ರೆ ಮೂಳನಾಯಿಗೇನು ಓಡಾಟ
ಹಾಲಪ್ಪ ಅಂತ ಹೆಸರಿದ್ದರೂ ಮಜ್ಜಿಗೆಗೆ ಗತಿ ಇಲ್ಲ
ಹಾಲಿದ್ದಾಗ ಹಬ್ಬ ಮಾಡು ಹಲ್ಲಿದ್ದಾಗ ಕಡಲೆ ತಿನ್ನು
ಹಾಲು ಕುಡಿದ ಮಕ್ಕಳೇ ಬದುಕಲಿಲ್ಲ ವಿಷ ಕುಡಿದ ಮಕ್ಕಳು ಬದುಕ್ಯಾರೆ
ಹಾಲು ಮಾರಿದ್ದು ಹಾಲಿಗೆ ನೀರು ಮಾರಿದ್ದು ನೀರಿಗೆ
ಹಾವೂ ಸಾಯಲಿಲ್ಲ ಕೋಲು ಮುರೀಲಿಲ್ಲ
ಹಾಳೂರಿಗೆ ಉಳಿದೋನೇ ಗೌಡ, ಬೆಂಗಳೂರಿಗೆ ಬಂದೋನೇ ಬಹದ್ದೂರ
ಹಿಟ್ಟು ಹಳಸಿತ್ತು ನಾಯೂ ಹಸಿದಿತ್ತು
ಹಿತವಿಲ್ಲದ ಗಂಡ ಹಿಂದಿದ್ದರೇನು ಮುಂದಿದ್ದರೇನು
ಹಿತ್ತಲ ಗಿಡ ಮದ್ದಲ್ಲ ಹತ್ತರ ಮಾತು ರುಚಿಯಲ್ಲ
ಹಿರಿಯಕ್ಕನ ಚಾಳಿ ಮನೆಮಕ್ಕಳಿಗೆಲ್ಲ
ಹುಟ್ಟಿದ ಮನೆ ಹೋಳಿಹುಣ್ಣಿಮೆ ಕೊಟ್ಟ ಮನೆ ಶಿವರಾತ್ರಿ
ಹುಟ್ಟಿದಾಗ ಬಂದದ್ದು ಹೂತಾಗ ಹೋದೀತೇನು
ಹುಟ್ಟು ಗುಣ ಸುಟ್ಟರೂ ಹೊಗೊದಿಲ್ಲ
ಹುಣಸೆ ಮರ ಮುಪ್ಪಾದರೂ ಹುಳಿ ಮುಪ್ಪಲ್ಲ
ಹುತ್ತ ಬಡಿದರೆ ಹಾವು ಸಾಯುವುದೇ
ಹುಬ್ಬೆ ಮಳೇಲಿ ಬಿತ್ತಿದರೆ ಹುಲ್ಲೂ ಇಲ್ಲ ಕಾಳೂ ಇಲ್ಲ
ಹುಳ್ಳಿಕಾಳೂ ತಿನ್ನೊ ಮುಕ್ಕ ಒಬ್ಬಟ್ಟಿನ ಹೂರ್ಣ ಕೇಳಿದಂಗೆ
ಹೆಡ್ಡಾಳಾದ್ರೂ ದೊಡ್ಡಾಳು ಮೇಲು
ಹೆಣ್ಣು ಚಂದ ಕಣ್ಣು ಕುಲ್ಡು ಅಂದಂಗೆ
ಹೆಣು ಮಕ್ಕಳು ಇದ್ದ ಮನೆ ಕನ್ನಡಿಯಂಗೆ
ಹೆತ್ತ ಅಮ್ಮನ್ನ ತಿನ್ನೋಳು ಅತ್ತೆಯಮ್ಮನ್ನ ಬಿಟ್ಟಾಳ
ಹೇಳೊದು ವೇದ ಹಾಕೊದು ಗಾಳ
ಹೊಟ್ಟೆ ತುಂಬಿದ ಮೇಲೆ ಹುಗ್ಗಿ ಮುಳ್ಳು ಮುಳ್ಳು
ಗಾಳಿ ಬಂದಾಗ ತೂರಿಕೊ, ಧಾರಣೆ ಬಂದಾಗ ಮಾರಿಕೊ
ಹೊರೆ ಹೊತ್ತುಕೊಂಡು ಗ್ರಹಗತಿ ಕೇಳ್ದಂದೆ
ಕಂಗಾಲಾದರೂ ಹಂಗಾಳಾಗಬಾರದು
ಕೊಣನಿಗೆ ಕೊಸೆಯೋ ಸಂಕಟ, ಎಮ್ಮೆಗೆ ಈಯೋ ಸಂಕಟ
ನಿಯತ್ತಿಲ್ಲದೋರಿಗೆ ಬರಕತ್ತಿಲ್ಲ
ನಾಯಿಗೆ ಕೆಲಸಿಲ್ಲ, ನಿಲ್ಲೋಕೆ ಹೊತ್ತಿಲ್ಲ
ನಡತೆ ಕಲಿಯೋದು ಏರುಬಂಡೆ ನಡತೆ ಕೆಡೋದು ಜಾರುಬಂಡೆ
ಎಂಟು ವರ್ಷಕ್ಕೆ ನನ್ನ ಮಗ ದಂಟಾದ
ಡಾವರ (=ನೀರಡಿಕೆ) ಹತ್ತಿದಾಗ ದೇವರ ಧ್ಯಾನ
ದಾಯವಾಗಿ(=ದಾನವಾಗಿ) ಸಿಕ್ಕಿದರೆ, ನನಗೆ ಒಂದಿರಲಿ ನಮ್ಮಪ್ಪನಿಗೆ ಒಂದಿರಲಿ
ಮುಲಾಜಿಗೆ ಬಸುರಾಗಿ ಹೇರೋಕೆ ತಾವಿಲ್ಲ
ಪ್ರದಕ್ಷಿಣೆ ಹಾಕಿದರೆ ಪ್ರಯೋಜನವಿಲ್ಲ, ದಕ್ಷಿಣೆ ಹಾಕಿದರೇಯ ತೀರ್ಥ ಸಿಗೋದು
ತೇದು ಇಕ್ಕಿದೋಳಿಗಿಂತ ಸಾದು ಇಕ್ಕಿದೋಳು ಹೆಚ್ಚು
ಬಾಯ್ ತೆವಲು ತೀರಿಸಿಕೊಳ್ಳೋಕೆ ಎಲೆ ಅಡಿಕೆ ಬೇಕು, ಮೈ ತೆವಲು ತೀರಿಸಿಕೊಳ್ಳೋಕೆ ಒಡಂಬಡಿಕೆ ಬೇಕು
ತೂತು ಗತ್ತಲೇಲಿ ತಾತನ ಮದುವೆ
ತುತ್ತು ತೂಕ ಕೆಡಿಸಿತು, ಕುತ್ತು ಜೀವ ಕೆಡಿಸಿತು
ತಾಳ ತಪ್ಪಿದ ಬಾಳು, ತಾಳಲಾರದ ಗೋಳು
ಅವರವರ ತಲೆಗೆ ಅವರವರದೇ ಕೈ
ಡಂಬು (=ಬೂಟಾಟಿಕೆ) ನನ್ನ ಕೇಳು, ಡಬ್ಬು ನನ್ನ ಹೆಂಡ್ರನ್ನ ಕೇಳು
ಉಂಡ ಮನೆ ಜಂತೆ ಎಣಿಸಬಾರದು
ಬೆಳ್ಳಯ್ಯ ಕಾಕಾ ಅರಿವಯ್ಯ ಮೂಕ
ಕ್ರಮ ಕಾಣದ ನಾಯಿ ಕಪಾಳೆ ನೆಕ್ತು
ಸೊಪ್ಪುಸೆದೆ ತಿನ್ನೋರ ಒಪ್ಪ ನೋಡು, ತುಪ್ಪತೊಗೆ ತಿನ್ನೋರ ರಂಪ ನೋಡು
ಎಲ್ಲರ ಹಲ್ಲೊಳಗೆ ನುರಿದು ಹೋಗೋದಕ್ಕಿಂತ ಒಣಗಿದ ಹುಲ್ಲೊಳಗೆ ಉರಿದು ಹೋಗೋದು ವಾಸಿ
ಹಣ ಎರವಲು ತಂದು ಮಣ ಉರುವಲು ಕೊಂಡ
ಸಮಯಕ್ಕಿಲ್ಲದ ನೆರವು ಸಾವಿರ ಇದ್ದರೂ ಎರವು (ಅನ್ಯ)
ಉಂಡದ್ದು ಊಟ ಆಗಲಿಲ್ಲ, ಕೊಂಡದ್ದು ಕೂಟ ಆಗಲಿಲ್ಲ
ಉಪ್ಪಿಕ್ಕಿದವರನ್ನು ಮುಪ್ಪಿನ ತನಕ ನೆನೆ
ಎಂಥೆಂಥ ದೇವರಿಗೇ ಅಂತರಾಟ ಆಗಿರುವಾಗ ಕಾಲ್ಮುರುಕ ದೇವರಿಗೆ ಕೈಲಾಸವೇ
ಹೊಳೆಗೆ ಸುರಿದರೂ ಅಳೆದು ಸುರಿ
ಹೆಂಡ್ರ ಅವಾಂತರ ತಡಿಲಾರದೆ ಗಂಡ ದೇಶಾಂತರ ಹೋದ
ಉಂಬಾಗ ಉಡುವಾಗ ಊರೆಲ್ಲ ನೆಂಟರು
ಉಂಬೋಕೆ ಉಡೋಕೆ ಅಣ್ಣಪ್ಪ ಕೆಲಸಕ್ಕಷ್ಟೇ ಇಲ್ಲಪ್ಪ
ಉಗಿದರೆ ತುಪ್ಪ ಕೆಡುತ್ತದೆ, ನುಂಗಿದರೆ ಗಂಟಲು ಕೆಡುತ್ತದೆ
ಉಡೋಕೆ ಇಲ್ಲದವ ಮೈಲಿಗೆಗೆ ಹೇಸ, ಉಂಬೋಕೆ ಇಲ್ಲದವ ಎಂಜಲಿಗೆ ಹೇಸ
ಉತ್ತಮನು ಎತ್ತ ಹೋದರೂ ಶುಭವೇ
ಉತ್ತಮ ಹೊಲ ಮಧ್ಯಮ ವ್ಯಾಪಾರ ಕನಿಷ್ಠ ಚಾಕರಿ
ಕೃಷಿತೋನಾಸ್ತಿ ದುರ್ಭಿಕ್ಷಂ
ಉದ್ಯೋಗವೇ ಗಂಡಸಿಗೆ ಲಕ್ಷಣ
ಉರಿಯೋ ಬೆಂಕೀಲಿ ಎಣ್ಣೆ ಹೊಯಿದ ಹಾಗೆ
ಊರು ದೂರಾಯಿತು ಕಾಡು ಹತ್ತರಾಯಿತು
ಊರೆಲ್ಲ ಸೂರೆ ಆದ ಮೇಲೆ ಬಾಗಿಲ ಮುಚ್ಚಿದರು
ಎಡವಿದ ಕಾಲು ಎಡವುದು ಹೆಚ್ಚು
ಎರಡು ದಾಸರ ನಂಬಿ ಕುರುಡು ದಾಸ ಕೆಟ್ಟ
ಎರಡೂ ಕೈ ತಟ್ಟಿದರೆ ಸದ್ದು
ಎಲ್ಲರೂ ಪಾಲಕೀಲಿ ಕೂತರೆ ಹೊರೋರು ಯಾರು
ಎಲ್ಲಾ ಬಣ್ಣ ಮಸಿ ನುಂಗಿತು
ಏರಿದವ ಇಳಿದಾನು
ಏಳರಲ್ಲಿ ಬರಲೋ? ಎಪ್ಪತ್ತರಲ್ಲಿ ಬರಲೋ?
ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ
ಕಂಡದ್ದು ಕಾಣೆ ಉತ್ತಮ ಕಂಡದ್ದು ಕಂಡೆ ಮಧ್ಯಮ, ಕಾಣದ್ದು ಕಂಡೆ ಅಧಮ
ಒಕ್ಕಣ್ಣರ ನಾಡಿಗೆ ಹೋದ್ರೆ ಒಂದು ಕಣ್ಣು ಮುಚ್ಚಿ ನಡೆಯಬೇಕು
ಒಂಡಂಬಡಿಕೆ ಇಂದ ಆಗದು ದಡಂಬಡಿಕೆ ಇಂದ ಆದೀತೇ
ನಯಶಾಲಿ ಆದವನು ಜಯಶಾಲಿ ಆದಾನು
ಒಂದು ಹೊತ್ತು ಉಂಡವ ಯೋಗಿ ಎರಡು ಹೊತ್ತು ಉಂಡವ ಭೋಗಿ ಮೂರು ಹೊತ್ತು ಉಂಡವ ರೋಗಿ ನಾಲ್ಕು ಹೊತ್ತು ಉಂಡವ ಎತ್ತುಕೊಂಡು ಹೋಗಿ
ಒಲ್ಲದ ಗಂಡಗೆ ಬೆಣ್ಣೇಲಿ ಕಲ್ಲು
ಬಾಯಲ್ಲಿ ಬೆಲ್ಲ ಕರುಳು ಕತ್ತರಿ
ಬಾಯಲ್ಲಿ ಬಸಪ್ಪ ಹೊಟ್ಟೆಯಲ್ಲಿ ವಿಷಪ್ಪ
ಕಂಡವರ ಮಕ್ಕಳನ್ನು ಬಾವಿಯಲ್ಲಿ ದೂಡಿ ಆಳ ನೋಡಿದ ಹಾಗೆ
ಬೀದೀ ಕೂಸು ಬೆಳೀತು ಕೋಣೇ ಕೂಸು ಕೊಳೀತು
ಕಚ್ಚುವ ನಾಯಿ ಬೊಗಳದು ಬೊಗಳುವ ನಾಯಿ ಕಚ್ಚದು
ಕಡು ಕೋಪ ಬಂದಾಗ ತಡಕೊಂಡವನೇ ಜಾಣ
ಕಣ್ಣಾರೆ ಕಂಡರೂ ಪರಾಂಬರಿಸಿ ನೋಡು
ಕಪ್ಪರ ತಿಪ್ಪೇಲಿಟ್ಟರೆ ತನ್ನ ವಾಸನೆ ಬಿಟ್ಟೀತೇ
ಕಬ್ಬು ಡೊಂಕಾದ್ರೆ ಸವಿ ಡೊಂಕೇ
ಕಲ್ಲು ಇದ್ದಾಗ ನಾಯಿ ಇಲ್ಲ ನಾಯಿ ಇದ್ದಾಗ ಕಲ್ಲು ಇಲ್ಲ
ಕಳ್ಳನ ಹೆಜ್ಜೆ ಕಳ್ಳನೇ ಬಲ್ಲ
ಹಣ ಇಲ್ಲದವ ಹೆಣಕ್ಕಿಂತ ಕಡೆ
ಕಿಡಿಯಿಂದ ಕಾಡ ಸುಡ ಬಹುದು
ಕೀರ್ತಿಯೇ ಕೈಲಾಸ ಅಪಕೀರ್ತಿಯೇ ನರಕ
ಕೀಲು ಸಣ್ಣದಾದರೂ ಗಾಲಿ ನಡೆಸುತ್ತದೆ
ಕುರುಡು ಕಣ್ಣಿಗಿಂತ ಮೆಳ್ಳೆ ಗಣ್ಣು ವಾಸಿ
ಕೂತು ಉಣ್ಣೋನಿಗೆ ಕುಡಿಕೆ ಹೊನ್ನು ಸಾಲದು
ಕೆಡುವ ಕಾಲಕ್ಕೆ ಬುದ್ಧಿ ಇಲ್ಲ ಮರಣ ಕಾಲಕ್ಕೆ ಮದ್ದಿಲ್ಲ
ಕೈಗೆ ಬಂದ ತುತ್ತು ಬಾಯಿಗೆ ಇಲ್ಲ
ಕೊಡಲಿ ಕಾವು ಕುಲಕ್ಕೆ ಸಾವು
ಬಿದ್ದ ಪೆಟ್ಟಿಗಿಂತ ನಕ್ಕ ಪೆಟ್ಟು ಹೆಚ್ಚು.
ಕೆಟ್ಟ ಮೇಲೆ ಲೊಟ್ಟ
ಕೆಟ್ಟ ಮೇಲೆ ಬುದ್ಧಿ ಬಂತು
ಹಾದಿ ಹಣವಡ್ಡ ಹಾದರಗಿತ್ತಿ ಮನೆ ಯಾವುದು.
ಹಾದೀಲಿ ಹೋಗುವವನ ಕೆಣಕ ಅವನು ಬಂದು ನಿನ್ನ ತದಕ
ಹಾಯ್ದೆ ಇದ್ದರೂ ಎತ್ತಿನ ಕೊಂಬು ಉದ್ದ
ಹಾರದ ಕೋತಿಗೆ ಮುಪ್ಪಾಗ ಬೆಲ್ಲ ತಿನ್ನಿಸಿದರಂತೆ
ಹಾರಾಡೋ ಅಪ್ಪುಂಗೆ ತೂರಾಡೋ ಮಗ ಹುಟ್ದಂಗೆ
ಹಾರುವಯ್ಯನಿಗೆ ಹರಕೆ ಕಟ್ಟಿದಕ್ಕೆ ಹಳೇ ಪರಕೇಲಿ ಹೋಡ್ದ ಹಾಗೆ
ಹಾರುವ ಆಳಲ್ಲ, ಬಾಳೆ ದಡಿಯಲ್ಲ
ಹಾರುವರ ಮೋರೆಯಾದರೂ ನೀರಿನಲ್ಲಿ ತೊಳೆಯದಿದ್ದರೆ ನಾರದೆ ಇದ್ದೀತೆ.
ಹಾರೋ ಹಕ್ಕಿಗೆ ಹಾದರ ಕಟ್ಟಿದರು.
ಹಾರ‍್ಸೋನೋ ತೀರ‍್ಸೋನೋ.
ಹಾಲಲ್ಲಾದ್ರೂ ಅದ್ದು, ನೀರಲ್ಲಾದ್ರೂ ಅದ್ದು.
ಹಾಲು ಬಿಟ್ಟವರ ಮನೆಗೆ ಸೀಬಿ ಅಂದಂಗೆ.
ಹಾಲು ಕಾಯಿಸ್ಕೊಂಡು ನಾನಿದ್ದೆ ಹಲ್ಲು ಕಿರ‍್ಕೊಂಡು ನೀ ಬಂದೆ.
ಹಾಲುಕ್ಕಿದ ಮನೇಲಿ ಮೇಲ್‍ಗರೀಲಿ.
(ಕಾಯಿಲೆ) ಬಿದ್ದಾಗಿನ ಅನ್ನ ಎದ್ದಾಗ ತೆಗೆ.
ಮಾನಿಷ್ಟರು ಮಾನಕ್ಕೆ ಅಂಜಿದರೆ ಮಾನಗೇಡಿ ತನಗೇ ಅಂಜಿದರು ಅಂದನಂತೆ
ರಾಯ ಸತ್ತರೂ ಹೆಣ ; ನಾಯಿ ಸತ್ತರೂ ಹೆಣ .
ರಾಮಾಯ ಸ್ವಸ್ತಿ, ರಾವಣಾಯ ಸ್ವಸ್ತಿ .
ಯೋಗವಿದ್ದಷ್ಟು ಭೋಗ .
ಘಟಾ (ದೇಹ ) ಇದ್ದರೆ ಮಠಾ ಕಟ್ಟಿಸಬಹುದು.
ಛತ್ರದಲ್ಲಿ ಭೋಜನ , ಮಠದಲ್ಲಿ ನಿದ್ದೆ .
ಬೆಲ್ಲವಿಲ್ಲದಿದ್ದರೆ ಬೆಲ್ಲದಂಥ ಮಾತೂ ಇಲ್ಲವೇ?
ಬೇವು ಕಾಗೆಗೆ ಇಷ್ಟ , ಮಾವು ಕೋಗಿಲೆಗೆ ಇಷ್ಟ
ತಕ್ಕವನಲ್ಲಿ ಹೊಕ್ಕಿದ್ದರೆ ತಕ್ಕಷ್ಟಾದರೂ ಸಿಕ್ಕುವುದು
ತಕ್ಕಡಿ ಬಲ್ಲದೇ ಮನೆಯ ಬಡತನವ
ತಕ್ಕಡಿ ಸ್ವರೂಪ ತಕ್ಕವನೇ ಬಲ್ಲ
ತಕ್ರ (=ಮಜ್ಜಿಗೆ) ಶಕ್ರನಿಗೆ(=ಇಂದ್ರ) ಸಹಾ ದುರ್ಲಭ
ತಗಲಿದವನಿಗೆ ಹಗಲಿರುಳೇನು?
ತಗಣೇ ಉಪದ್ರವ ಮಗಳಿಗೂ ಬಿಡಲಿಲ್ಲ
ತಗಲುಗಾರನಿಗೆ (= ದಗಲ್ ಬಾಜ್) ಬಗಲ ಮೇಲೆ ಜ್ಞ್ಯಾನ
ತಗ್ಗಿದವ ಎಂದಿಗೂ ನುಗ್ಗಾಗ
ತಗ್ಗು ದವಸಕ್ಕಾಗಿ ಹಗ್ಗ ಕೊಂಡು ಕೊಂಡ
ತಗ್ಗು ಗದ್ದೆಗೆ ಮೂರು ಬೆಳೆ ಎತ್ತರದ ಗದ್ದೆಗೆ ಒಂದೇ ಬೆಳೆ
ತಟಕಿನಿಂದ ತಟಪಟವಾಯಿತು
ತಟಕು ಬಿದ್ದು ಮಠಾ ಕೆಡಿಸಿತು
ತಟಸ್ಥನಾದವನಿಗೆ ತಂಟೆಯೇನು?
ತಟದಲ್ಲಾಗಲೀ ಮಠದಲ್ಲಾಗಲೀ ಹಟದ ಜಂಗಮನ ಕಾಟ ತಪ್ಪುವುದಿಲ್ಲ
ತಟ್ಟನೆ ಆಡಿದರೆ ಕೊಟ್ಟಷ್ಟು ಫಲ
ತಟ್ಟನೆ ಬಾ ಅಂದ್ರೆ ತುಟಿ ಬಿಟ್ಟನಂತೆ
ತಟ್ಟಿನಲ್ಲಿ ಬಿದ್ದಾಗ್ಯೆ ಗಟ್ಟಿ ಆಗಲಾರ
ತಟ್ಟಿ ಬೈಸಿಕೊಂಡರೂ ತಟ್ಟೇ ಹುಳಿ ಚೆನ್ನಾಗಿದೆ
ತಟ್ಟು ಇದ್ದರ‍ೇ ತಟಾಯಿಸಿ ನಡದಾನು
ತಡವಿದರೆ ಮಡಿ ಸಹಾ ಕೆಡುವುದು
ತಡವ ಮಾಡುವವನ ಗೊಡವೆ ಬೇಡ
ತಡೇ ಕಟ್ಟುವವನ ಮುಂದೆ ಮುಡಿಯೇನು
ತಣ್ಣಗಿದ್ದರೆ ಮಣ್ಣಾದರೂ ಅಸಾಧ್ಯ
ತಣ್ಣೀರು ಆದರೂ ಪುಣ್ಯದಿಂದ ದೊರಕಬೇಕು
ತತ್ರಬಿತ್ರಿಯ (ತಂತ್ರಗಾರ) ಮುಂದೆ ಕತ್ತೆಯ ಹಾಗೆ ಆದ
ತನಗೆ ಇಲ್ಲದ ಮಾರಿ ತಮ್ಮಡಿಗೆ (ತಮ್ಮಡಯ್ಯನಿಗೆ) ವರಾ ಕೊಟ್ಟೀತೇ?
ತನಗೆ ಬಂದ ಹಾನಿ ದುಡ್ಡಿನಿಂದ ಹೋಯಿತು
ತನಗೇ ಇಲ್ಲದವ ಪರರಿಗೆ/ಮಂದಿಗೆ ಏನು ಕೊಟ್ಟಾನು
ತನಗೆ ಇಲ್ಲದವಳು ಮಕ್ಕಳಿಗೆ ಏನು ಹೊದಿಸ್ಯಾಳು
ತನಗೆ ಇಲ್ಲ ಕೂಸಿಗೇನು ಹೊದ್ದಿಸಲಿ
ತನ್ನ ಮರ‍್ಯಾದೆ ಕೆಟ್ಟವ ಪರರ ಮರ‍್ಯಾದೆ ಇಟ್ಟಾನೆ?
ತನ್ನ ನೆರಳು ತಾ ಕಂಡು ನರಳುವವ ಮರುಳನಲ್ಲವೇ?
ತನ್ನ ಕಾಲಿಗೆ ತಾನೇ ಶರಣು ಮಾಡಿ ಹರಸಿಕೊಂಡ ಹಾಗೆ
ತನ್ನ ಅಕ್ಕನ ಅರಿಯದವಳು ನೆರೆಮನೆ ಬೊಮ್ಮಕ್ಕನ ಬಲ್ಲಳೇ?
ತನ್ನ ತಾನರಿತರೆ ಸುಜ್ಞ್ನಾನಿ
ತನ್ನ ಹಲ್ಲು ತಾ ಮರಕೊಂಡು ಇನ್ನೊಬ್ಬನ ಮೇಲೆ ದೂರು ಹೇಳಿದ
ತನ್ನ ಮನೆ ಉಪ್ಪು ಇಲ್ಲ ಬೆನ್ನ ಹಿಂದೆ ಉರಿಯೋ
ತನ್ನ ಸುಖವೇ ಲೋಕದ ಸುಖ, ತನ್ನ ಕಷ್ಟವೇ ಲೋಕದ ಕಷ್ಟ
ತನ್ನ ಹೊಟ್ಟೆ ತಾ ಹೊರೆಯದವ ಮುನ್ನಾರ ಸಲಹುವ?
ತನ್ನ ತಾನರಿತರೆ ತಾನ್‍ಆದಾನು ತನ್ನ ತಾ ಮರೆತರೆ ತಾ ಹೋದಾನು
ತನುವರಿಯದ ನೋವಿಲ್ಲ ಮನವರಿಯದ ತಾಪವಿಲ್ಲ
ತಪಸ್ಸಿಗೆಂತ ಹೋಗಿ ಕುಪ್ಪಸಾ ಕಳಕೊಂಡ
ತಪಸ್ಸು ಇದ್ದವನೇ ಗಭಸ್ತಿ (=ಕಾಂತಿ) ಉಳ್ಳವನು
ತಪ್ಪನೆ ಬಾ (=ತಕ್ಷಣ ಬಾ ) ಅಂದ್ರೆ ತಬ್ಬಲಿಕ್ಕೆ ಬಂದ ಹಾಗೆ
ತಪ್ಪಲೇಲಿ ಇದ್ದದ್ದು ಹೋದರೆ ಕಪಾಲದಲ್ಲಿ ಇದ್ದದ್ದು ಹೋದೀತೇ
ತಪ್ಪಿ ಬಿದ್ದವನಿಗೆ ತೆಪ್ಪ (=ದೋಣಿ) ಏನು ಮಾಡೀತು
ತಪ್ಪಿದವನಿಗೆ ಒಪ್ಪು ಇಲ್ಲ
ತಪ್ಪು ಹೊರಿಸಿದವನಿಗೆ ಒಪ್ಪುವವನು ಯಾರು
ತಫಾವತುಗಾರ (=ಹಣ ತಿಂದು ಹಾಕುವವ) ತಪ್ಪಿದರೆ ತಿಪ್ಪಯ್ಯಗೆ ಏನು ಕೋಪ
ತಬ್ಬಲಿ ತಬಕು (ಎಲೆ ಅಡಿಕೆ ತಟ್ಟೆ, ತಂಬಾಕು ತಟ್ಟೆ) ಕದ್ದು ಜಗಲೀಲಿ ಸಿಕ್ಕಿಬಿದ್ದ
ತಬ್ಬಲಿಯಾದವನು ಬೊಬ್ಬೆ ಹಾಕಿ ಹೆಬ್ಬುಲಿಯ ಓಡಿಸ್ಯಾನೆ?
ತಮ್ಮ ಕಲಹಕ್ಕೆ ಐವರು ಪರರ ಕಲಹಕ್ಕೆ ನೂರಾ ಐವರು
ತಮ್ಮ ಒಳ್ಳೆಯವನೇ ಸರಿ ಒಮ್ಮಾನಕ್ಕಿಗೆ ಮಾರ್ಗವಿಲ್ಲ
ತಮ್ಮ ನಮ್ಮವನಾದರೂ ನಾದಿನಿ ನಮ್ಮವಳಲ್ಲ
ತಮ್ಮ ಸಂಗಡ ತಂಗಿಯ ಗಂಡ ದೂರು ಹೇಳಿದರೆ ನಿನಗೇನಪ್ಪ
ತಮ್ಮನ ಸಂಗಡ ತಿಮ್ಮ ಬಂದರೆ ತಂಗಳನ್ನವೇ ಗತಿ
ತರವಲ್ಲದ ಮಾತು ಮರ ಏರಿದರೆ ಆದೀತೇ
ತರತರವಾಗಿ ಹೇಳಿದ್ದು ಮರೆತರೆ ಮರಕ್ಕಿಂತಾ ಕಡೆ
ತರಹರಿಸಾಳಾರದವಳು ಮರಣಕ್ಕೆ ಪಾತ್ರಳು
ತರಬಲ್ಲವನ ಹೆಂಡತಿ ಅಡಜಾಣೆ (ಅಡಕವಾದ ಜಾಣ್ಮೆ ಉಳ್ಳವಳು)
ತರಲಿಲ್ಲ ಬರಲಿಲ್ಲ ಬರ ಹ್ಯಾಗೆ ಹಿಂಗೀತು
ತರಗು (=ಒಣಗಿದ ಎಲೆ) ತಿಂಬುವುದೇ ಪರಮ ಸುಖ
ತರಗು ತಿಂಬವನಿಗೆ ಒರಗೊಂದು ಕೇಡು
ತರಗು ತಿನ್ನುವವನ ಮನೆಗೆ ಹಪ್ಪಳಕ್ಕೆ ಹೋದರು
ತರಗು (ಮರದಿಂದ ಬಿದ್ದ ಒಣ ಎಲೆಗಳು)ಮೊರದಲ್ಲಿ ಹಿಡಿಯದು
‍*ತರಗು ಲಡ್ಡಿಗೆ ಡೊಳ್ಳು ಗಣಪತಿಯೇ ಶ್ರೇಷ್ಠ
ತರಗೆಲೆ ಅಡಿಕೆ ತಿರಿದು ತಿನ್ನಬೇಕೆ
ತರುವವ ಮರೆತರೆ ಮೊರ ಏನು ಮಾಡೀತು
ತರುವವ ಹೋದಮೇಲೆ ಮರಗುವವರುಂಟೇ
ತರುಬಿದವಗೂ (=ಅಡ್ಡಕಟ್ಟು, ಹೊಡೆ) ಓಡಿದವಗೂ ಸರಿಪಾಲು ಕಷ್ಟ
ತರುಬಿ ಹೋಗುವನ್ನ ಕರುಬಿ (=ಅಸೂಯೆ) ಮಾಡುವುದೇನು?
ತರುಬಿಲ್ಲದ ಒಡ್ಡನು, ಬಿರಿಸಿಲ್ಲದ ಹುರಿಯು
ತರುಬು ಇದ್ದರೆ ಹರುಬು ನಿಂತೀತೇ
ತರ್ಕಾ ಮಾಡುವವ ಮೂರ್ಕನಿಂದ ಕಡೆ
ತರಲೆ ಕೇಳುವವ ಮರುಳಗಿಂತ ಕಡೆ
ತಲೆಗೆ ಎಣ್ಣೆ ಇಲ್ಲ ತನು ಮೃಗನಾಭಿ ಬೇಡಿತು
ತಲೆ ಗಟ್ಟಿ ಅಂತ ಕಲ್ಲ ಹಾಯಬಾರದು
ತಲೆ ಚೆನ್ನಾಗಿದ್ದರೆ ಮುಂಡಾಸು ನೂರು ಕಟ್ಟಬಹುದು
ತಲೆ ತಾಗಿದ್ದಲ್ಲದೆ ಬುದ್ಧಿ ಬಾರದು
ತಲೆ ಹೋಗುವುದಕ್ಕೆ ಕಾಲು ಹೊಣೆಯಾದ ಹಾಗೆ
ತಲೇ ಒಡೆದವನೂ ಸಮ ಲೇಪ ಹಚ್ಚಿದವನೂ ಸಮ
ತಲೇ ಮೂರು ಸುತ್ತು ತಿರುಗಿದರೂ ತುತ್ತು ಬಾಯಿಲೇ
ತಲೆಗೆ ಒಂದು ಕಡ್ಡೀಯಾದರೆ ಒಂದು ತಲೆಯ ಹೊರೆ
ತಲೇ ಮೇಲಣ ಬರಹ ಎಲೆಯಿಂದ ಒರೆಸಿದರೆ ಹೋದೀತೇ
ತಲೇ ಸಿಡಿತಕ್ಕೆ ಮಲಶೋಧನೇ ಕೊಂಡ ಹಾಗೆ
ತಲೇ ಕೂದಲಿದ್ದರೆ ಎತ್ತ ಬೇಕಾದರು ತುರುಬು ಹಾಕಿಕೊಳ್ಳಬಹುದು
ತಲೇ ಕೂದಲಿಲ್ಲದವಳು ತುರುಬು ಬಯಸಿದಳಂತೆ
ತಲೇ ಕೂದಲು ಉದ್ದವಿದ್ದವಳು ಹ್ಯಾಗೆ ಕಟ್ಟಿದರೂ ಚಂದ
ತಲೇ ಕೂದಲು ನೆರೆಯಾದ ಮೇಲೆ ತಬ್ಬಿಕೊಂಡ ತಬ್ಬಲಿ ಮುರವ (=ತಿರುಕ)
ತವಕ ಪಟ್ಟವ ತಬ್ಬರಿಸಿ ಬಿದ್ದ
ತವಡು ತಿಂಬುವನಿಗೆ ವಯ್ಯಾರ ಯಾಕೆ
ತವಡು ತಿಂಬುವವ ಹೋದರೆ ಉಮ್ಮಿ ತಿಂಬುವವ ಬತ್ತಾನೆ
ತವಡು ತಿಂದರು ಮುರುಕು (ಬೆಡಗು, ಕೊಂಕು) ಘನ
ತಳವಾರನಿಗೆ ಪಟ್ಟ ಕಟ್ಟಿದರೆ ಕುಳವಾರು (ಒಕ್ಕಲಿಗರ ಸಮೂಹ) ಹೋದೀತೋ?
ತಳಾ ಬಿಟ್ಟು ಬಂಡಿ ಹಾರದು
ತಳಿಗೆ ಚಂಬು ಹೋದ ಮೇಲೆ ಮಳಿಗೇ ಬಾಗಿಲು ಮುಚ್ಚಿದ ಹಾಗೆ
ತಾ ಕಳ್ಳೆ ಪರರ ನಂಬಳು, ಹಾದರಗಿತ್ತಿ ಗಂಡನ ನಂಬಳು
ತಾ ಕಾಣದ ದೇವರು ಪೂಜಾರಿಗೆ ವರ ಕೊಟ್ಟೀತೇ?
ತಾಗದೆ ಬಾಗದು ಬಿಸಿಯಾಗದೆ ಬೆಣ್ಣೆ ಕರಗದು
ತಾಟುಗಾರ (ಗರ್ವದ ಮನುಷ್ಯ) ಆಟಕ್ಕೆ ಹೋಗಿ ಮೋಟಗಾರನಾಗಿ (ತನ್ನಿಂದಲೇ ತಾ ಮೂರ್ಕನಾಗುವುದು) ಬಿದ್ದ
ತಾತಾಚಾರ‍್ಯರ ಮನೆಗೆ ಏನಪ್ಪಣೆ?
ತಾನಾಗಿ ಬೀಳುವ ಮರಕ್ಕೆ ಕೊಡಲಿ ಇಕ್ಕಿದ ಹಾಗೆ
ತಾನುಂಟೋ? ಮೂರು ಲೋಕವುಂಟೋ?
ತಾ ಕೋಡಗ ಪರರ ಅಣಕಿಸಿತು
ತಾನು ನೆಟ್ಟ ಬೀಳು (ಬಳ್ಳಿ) ತನ್ನ ಎದೆಗೆ ಹಬ್ಬಿತು
ತಾನು ಜಾರಿಬಿದ್ದು ಉಣ್ಣೆಯಂತ ನೆಲ ಅಂದ
ತಾನು ತಿಂಬೋದು ಪಲ್ಲೆ ಸೊಪ್ಪು ಹಿರೇ ಕುದರೆ ಚೇಷ್ಟೆ
ತಾನು ಬಾಳಲಾರದೆ ವಿಧಿಯ ಬೈದಂತೆ
ತಾನು ಗರತಿ ಆದರೆ ಸೂಳೆಗೇರೀಲಿ ಮನೆ ಕಟ್ಟು
ತಾನು ಸಾಯಬೇಕು ಸ್ವರ್ಗಾ ಪಡೆಯಬೇಕು
ತಾನು ಹೋದರೆ ಮಜ್ಜಿಗೆ ಇಲ್ಲ ಮೊಸರಿಗೆ ಚೀಟು
ತಾನು ಹೋದರೆ ಮಜ್ಜಿಗೆ ಇಲ್ಲ ಹೇಳಿ ಕಳಿಸಿದರೆ ಮೊಸರು ಕೊಟ್ಟಾರೆ
ತಾನೂ ಕುಡಿಯ ಕುಡಿಯಲೀಸ
ತಾನೊಂದೆಣಿಸಿದರೆ ದೈವವೊಂದೆಣಿಸಿತು
ತಾಪತ್ರಯದವನಿಗೆ ತಾಪೆ/ಚಾಪೆ ಯಾಕೆ
ತಾಯಂತೆ ಕರು ನಾಯಂತೆ ಬಾಲ
ತಾಯಂತೆ ಮಕ್ಕಳು ನೂಲಂತೆ ಸ್ಯಾಲೆ
ತಾಯಿದ್ದರೆ ತವರು ಮನೆ ನೀರಿದ್ದರೆ ಕೆರೆ ಬಾವಿ
ತಾಯಿಲ್ಲದ ತವರು ಕಾಟಕದಿದ್ದ ಅಡವಿ
ತಾಯಿ ಒಂದಾದರೂ ಬಾಯಿ ಬೇರೆ
ತಾಯಿ ಕಲಿಸಿದ ಊಟ ತಂದೆ ಕಲಿಸಿದ ಬುದ್ಧಿ
ತಾಯಿ ಮಾಡಿದ ಹೊಟ್ಟೆ ಊರು ಮಾಡಿದ ಕೊಳಗ
ತಾಯಿಯ ಹತ್ತಿರ ತರ್ಕವಲ್ಲ ಗುರುವಿನ ಹತ್ತಿರ ವಿದ್ಯೆಯಲ್ಲ
ತಾಯಿಗೆ ಕುಲವಿದ್ದರಷ್ಟೇ ಮಗಳಿಗೂ ಕುಲ
ತಾಯಿಗೆ ಸೇರದ್ದು ನಾಯಿಗೂ ಸೇರದು
ತಾಯಿ ಬೇಕು ಇಲ್ಲವೆ ಬಾಯಿ ಬೇಕು
ತಾಯಿ ಮಾರಿಯಾದರೆ ತರಳನು ಎಲ್ಲಿ ಹೋದಾನು
ತಾಯಿನ್ನ ನೋಡಿ ಮಗಳನ್ನ ತಕ್ಕೋ ಹಾಲನ್ನ ನೋಡಿ ಎಮ್ಮೇನ್ನ ತಕ್ಕೋ
ತಾರಕ್ಕೆ (ಎರಡು ಕಾಸಿನ ನಾಣ್ಯ) ಮೂರು ಸೇರು ಉಪ್ಪಾದರೂ ತರುವುದಕ್ಕೆ ಗತಿ ಬೇಡವೋ
ತಾರಕ್ಕೊಂದು ಸೀರೆಯಾದರೂ ನಾಯಿ ತಿಕ ಬೆತ್ತಲೆ
ತಾರತಮ್ಯ ಅರಿಯದವ ದೊರೆಯಲ್ಲ ಮಾತು ಮೀರಿದವ ಸೇವಕನಲ್ಲ
ತಾರುಣ್ಯವೇ ರೂಪು ಕಾರುಣ್ಯವೇ ಗುಣ
ತಾರು ಮಾರು ಮಾಡುವವನಿಗೆ ಯಾರು ತಾನೆ ನಂಬ್ಯಾರು
ತಾರೇಮರದ ಕಾಯಾದರೂ ಕರೆದರೆ ಬಂದೀತೇ
ತಾರೇ ಬಡ್ಡೀ ನೀರಾ ಅಂದ್ರೆ ತರುವೆನು ನಿಲ್ಲೊ ತಿರುಕ ಮುರವ
ತಾವು ಮಾಡುವುದು ಗಂಧರ್ವರು ಮಾಡಿದರು
ತಾಸಿನ ಗೊತ್ತು ದಾಸಿಗೆ ತಿಳಿದೀತೇ?
ತಾಸಿಗೊಂದು ಕೂಸು ಹೆತ್ತರೆ ಈಸೀಸು ಮುತ್ತು
ತಾಸಿನ ಬಟ್ಟಲು ನೀರ ಕುಡಿದರೆ ತಾಸಿಗೆ ಕೊಡತೀ ಪೆಟ್ಟು
ತಾಳ ತಪ್ಪಿದರೆ ಕುಣಿಯೊದು ತಪ್ಪುವುದಿಲ್ಲ
ತಾಳದಲ್ಲಿ ಜಾಣನಾದರೆ ತಾಳಿಕೆ ಇದ್ದೀತೇ
ತಾಳಲಾರದ ವಿರಹ ತಿಣಕಿದರೆ ಹೋದೀತೇ?
ತಾಳಿಕೆ (ತಾಳ್ಮೆ) ಉಳ್ಳವನಲ್ಲಿ ಕೇಳಿದರೆ ಕಾಳು ಸಿಕ್ಕುವುದು
ತಾಳಿದವ ಬಾಳ್ಯಾನು
ತಾಳು ಬಡಿದರೆ ಕಾಳು ಸಿಕ್ಕೀತೇ
ತಾಳೆಮರ ಉದ್ದವಾದರೆ ಕೋಳಿಗೆ ಬಂದದ್ದೇನು
ತಾಳೆಮರ ದೊಡ್ಡದಾದರೂ ತಾಳೆ ಹೂವಿಗೆ ಸರಿಯಾದೀತೇ
ತಾಳೇ ಹಣ್ಣು ತಾನೇ ಬಿದ್ದರೂ ಬಾಳಾದ ಮುರವಗೆ ಬಾಯಿ ಮುಚ್ಚಿತು
ತಾಳ್ಮೆ ಇದ್ದ ಪುರುಷರಲ್ಲಿ ಬೀಳು ಬಿದ್ದರೆ ಬಾಳ್ಯಾನು
ತಾಳೆ ಹೂವು ಶಿವನಿಗೆ ಆಗದು ಸಂಪಿಗೆಯ ಹೂ ಸಾಲಿಗ್ರಾಮಕೆ ಆಗದು
ತಿಕ ಮಕ ಒಂಡೇ ತಿಪ್ಪಾಭಟ್ಟರಿಗೆ
ತಿಗಳಾ ತಾ ಕೆಡುತ್ತಾ ಏಳು ನೆರೆ ಕೆಡಿಸಿದ
ತಿಗಳಗಿತ್ತಿಯ ಬಾಯಿ ಕೆಣಕಬೇಡ ಬಗಳೊ ನಾಯಿ ಬಡಿಯಬೇಡ
ತಿಗುಳಗೆ ತುತ್ತಿಗೆ ತತ್ವಾರವಾದರೂ ನೆತ್ತಿತುಂಬಾ ನಾಮಕ್ಕೆ ಕಡಿಮೆ ಇಲ್ಲ
ತಿಪ್ಪಯ್ಯಗೆ ಸೂಜಿ ಮೇಲು ಕಳ್ಳಗೆ ಬಾಯಿ ಮೇಲು
ತಿಪ್ಪೆಯ ಮೇಲೆ ಕುಂಡ್ರುವವಗೆ ತಕ್ಯೆ ಯಾತಕ್ಕೆ
ತಿಪ್ಪೇ ಮೇಲಣ ಅರಿವೆಯಾದರೂ ಕಾಲಿಗೆ ಕಟ್ಟಿದರೆ ಬಿರುದು
ತಿಪ್ಪೇ ಮೇಲಣ ದೀಪ ಉಪ್ಪರಿಗೆಯ ಮೇಲೆ ಬಂದೀತೋ?
ತಿಪ್ಪೇ ಮ್ಯಾಲೆ ಮಲಗಿ ಉಪ್ಪರಿಗೆ ಕನಸು ಕಂಡ ಹಾಗೆ
ತಿಪ್ಪೇ ಮೇಲೇ ಮುಪ್ಪಾದ ಕುಂಬಾರ ತಿಪ್ಪ
ತಿಮರು (=ಕಡಿತ, ನವೆ) ತುರಿಸಿದರೆ ಅರಸಿನ ಹಾಗೆ
ತಿರುದುಂಬುವುದಕ್ಕೆ ಬೀದಿ ಹಂಚಿಕೊಂಡ ಹಾಗೆ
ತಿರಿತಿರಿಗಿ ಗೋಕರ್ಣಕ್ಕೆ ಹೋಗಿ ತುರಕನಿಂದ ದೆಬ್ಬೆ ತಿಂದ
ತಿರಿತಿರಿಗಿ ತಿಮ್ಮಪ್ಪನ ಹತ್ತರ ಹೋದರೆ ತಿರಿದುಂಬೋದು ತಪ್ಪೀತೇ?
ತಿರಿದುಂಬುವ ಭಟ್ಟ ದಕ್ಷಿಣೆಯಾದರೂ ಬಿಟ್ಟಾನು ಭೊಜನ ಸಿಕ್ಕಿದರೆ ಬಿಡಲೊಲ್ಲ
ತಿರಿಚಿನಾಪಳ್ಳಿಗೆ ತಿರಿದುಂಬೊದಕ್ಕೆ ಇಲ್ಲಿಂದ ಕೈ ಸವರಿಸಬೇಕೆ
ತಿರುಪತಿ ಕ್ಷೌರಿಕರು ತಲೆ ಬೋಳಿಸಿದ ಹಾಗೆ
ತಿರುಕನ ಬಳಿಗೆ ತಿರುಕ ಹೋದರೆ ಮರುಕ ತಾ ಬರುವುದೇ?
ತಿರುಕನಿಗೆ ಮುರುಕು (ಬೆಡಗು ಕೊಂಕು) ಇದ್ದಾಗ್ಯೂ ತಿರಿದುಂಬುವುದು ತಪ್ಪದು
ತಿರುಪದ ಪುಟ್ಟಿಯಲ್ಲಿ ಶನೀಶ್ವರ ಕೂತ
ತಿರುಪಿನಂತೆ ಇರಬೇಕು ತಿಳಿದವ
ತಿರುಳು ತಿಂದರೂ ಮರುಳು ಹೋಗಲಿಲ್ಲ
ತಿರುಳು ಹೋಗಿ ಬೆಂಡು ಉಳೀತು
ತಿರೋಕಲ್ಲು ಗಾಳಿಯಿಂದ ಹಾರುವುದೋ
ತಿರೋಕಲ್ಲು ಮಳೇಲಿ ಬಿದ್ದರೆ ಮರಕ್ಕಿಂತಾ ಕಡೆಯಾದೀತೇ
ತಿವಾಸಿ ಯಾತಕ್ಕೆ ತಿಪ್ಪೇ ಮೇಲಣವಗೆ
ತಿವಿದುಕೊಂಡರೆ ಬಂದೀತೇ ತಿಮ್ಮಪ್ಪನ ದಯೆ
ತಿಳಿದ ಕಳ್ಳ ತಿರಿಗಿದರೂ ಬಿಡ
ತಿಳಿದವನಾದರೂ ಮಲಮೂತ್ರ ಬಿಟ್ಟೀತೇ?
ತಿಳಿದವ ಮಾಡ್ಯಾನು ನಳಪಾಕವ
ತಿಳಿದು ಒಡ್ಡೋ ತೀರು ಬಾಣವ
ತಿಳಿಯಕ್ಕಿಲ್ಲ ನೋಡಕ್ಕಿಲ್ಲ ಹುಚ್ಚು ಮೂಕನ ಆಟ
ತೀಟೆ ಆದರೆ ತಾನೆ ಬರುತ್ತಾನೆ
ತೀಟೆಗೆ ಮಕ್ಕಳ ಹೆತ್ತು ತಿರುಮಲ ದೇವರ ಹೆಸರಿಟ್ಟ ಹಾಗೆ
ತೀರಕ್ಕೆ ಬಂದ ಮೇಲೆ ತೆರೆಯ ಭಯವೇ
ತೀರದಲ್ಲಿರುವ ಮರಕ್ಕೆ ನೀರು ಯಾತಕ್ಕೆ
ತೀರದ ಕಾರ್ಯ ಹಾರಿದರೂ ಆಗದು
ಇಂಗು ತೆಂಗು ಇದ್ದರೆ ಮಂಗಮ್ಮನೂ ಅಡಿಗೆ ಮಾಡ್ತಾಳೆ.
(ಉಪ್ಪು) ಹಪ್ಪಳಕ್ಕೆ ಊರಿತು ; ಸಂಡಿಗೆಗೆ ಏರಿತು.
ಉಕ್ಕಿದರೆ ಸಾರಲ್ಲ ; ಸೊಕ್ಕಿದರೆ ಹೆಣ್ಣಲ್ಲ.
ಮಘಾ ಮಳೆ ಬಂದಷ್ಟು ಒಳ್ಳೇದು ; ಮನೆ ಮಗ ಉಂಡಷ್ಟು ಒಳ್ಳೇದು.
ಆಶ್ಲೇಷ ಮಳೆ , ಈಸಲಾರದ ಹೊಳೆ.
ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ.
ಅಣ್ಣ ಹುಸಿಯಾದರೂ ತಮ್ಮ ತಂಪು ತರದೇ ಹೋಗಲ್ಲ.( ಪೂರ್ವಾಷಾಢ , ಉತ್ತರಾಷಾಢ ಮಳೆಗಳು )
ಆರಿದ್ರಾ ಮಳೆ ಆರದೇ ಹುಯ್ಯುತ್ತೆ.
ಅಮ್ಮನ ಮನಸ್ಸು ಬೆಲ್ಲದ ಹಾಗೆ ; ಆರಿದ್ರಾ ಹನಿ ಕಲ್ಲಿನ ಹಾಗೆ.
ಮಳೆಗಾಲದ ಮಳೆ ನಂಬಲಾಗದು ; ಮನೆ ಹೆಂಡ್ತಿ ನಗೆ ನಂಬಲಾಗದು.
ತುಂತುರು ಮಳೆಯಿಂದ ತೂಬು ಒಡೆದೀತೆ?
ಉಪವಾಸ ಇರಬಹುದು , ಉಪದ್ರವ ತಾಳಲಾರದು.
ಉಂಡದ್ದೇ ಉಗಾದಿ , ಮಿಂದದ್ದೇ ದೀವಳಿಗೆ , ಹೊಟ್ಟೆಗಿಲ್ಲದ್ದೇ ಏಕಾದಶಿ.
ಉದ್ದರಿ ಕೊಟ್ಟು ಸೆಟ್ಟಿ ಕೆಟ್ಟ, ಕಡ ಸಿಕ್ಕು ಬಡವ ಕೆಟ್ಟ.
ಉಣ್ಣುವಾಗ ಎರಡು ತುತ್ತು ಕಡಿಮೆ ಉಣ್ಣು.
ತಮ್ಮ ಕಲಹಕ್ಕೆ ಐವರು , ಪರರ ಕಲಹಕ್ಕೆ ನೂರಾ ಐವರು. (ಸುಳಿವು ಪಾಂಡವಕೌರವರು)
ತಾನಾಗಿ ಬೀಳುವ ಮರಕ್ಕೆ ಕೊದಲಿ ಏಟು ಹಾಕಿದ ಹಾಗೆ .
ತೀರ್ಥಕ್ಕೆ ಥಂಡಿ, ಪ್ರಸಾದಕ್ಕೆ ಅಜೀರ್ಣ , ಮಂಗಳಾರತಿಗೆ ಉಷ್ಣ (ನಾಜೂಕು ದೇಹಸ್ಥಿತಿ)
ಉಂಡರೆ ಉಬ್ಬಸ , ಹಸಿದಿದ್ದರೆ ಸಂಕಟ(ನಾಜೂಕು ದೇಹಸ್ಥಿತಿ)
ಊರು ನೋಡಿ ಬಾ ಅಂದರೆ ತೋರಣ ಕಟ್ಟಿ ಬಂದ.
ಊರಿಗೆ ಅರಸನದರೂ ತಂದೆ ತಾಯಿಗೆ ಮಗನೇ.
ಎತ್ತು ಚಲೋದಾದರೆ ಇದ್ದ ಊರಲ್ಲೇ ಗಿರಾಕಿ.
ಕಟ್ಟಲಿಲ್ಲ ಬಿಚ್ಚಲಿಲ್ಲ ಹಿ೦ಡಿಕೊಳ್ಳೋಕೆ ಹೊತ್ತಾಯ್ತು ಅ೦ದಳು.
ಕತ್ತೆ ತಪ್ಪಿಸಿಕೊ೦ಡರೆ ಹುಡುಕುತಾರ್‍ಯೇ?
ಆಕಳಿದ್ದವನಿಗೆ ವ್ಯಾಕುಲವಿಲ್ಲ.
ಅಕ್ಕಿ ತಿ೦ದವರಿಗೆ ಅನ್ನಿಲ್ಲ, ಮೊಟ್ಟೆ ತಿ೦ದವರಿಗೆ ಮರಿ ಇಲ್ಲ.
ಆಕಳ ಹೊಟ್ಟೆಯಲ್ಲಿ ಅಚ್ಚೇರು ಬ೦ಗಾರ.
ಉಳೋ ಎತ್ತಾದರೆ ಇರೋ ಊರಿನಲ್ಲಿ ಬೆಲೆಯಾಗದೇ.
ಗುಡ್ಡದ ಮೇಲೆ ಕಪಿ ಸತ್ತರೆ ಊರಿಗೆಲ್ಲಾ ಸೂತಕ.
ಯಾರ ಹೆ೦ಡ್ತಿ ಎಲ್ಲಿಯಾದರೂ ಹೋಗಲಿ ನಮ್ಮ ಹೆ೦ಡ್ತಿ ನಮ್ಮನೇಲಿರಲಿ
ಯಾವ ದೇವರು ವರ ಕೊಟ್ಟರೂ ಗ೦ಡನಿಲ್ಲದೆ ಮಕ್ಕಳಾಗದು.
ಲೇ ಅನ್ನಲು ಅವಳೇ ಇಲ್ಲ ಮಗನ ಹೆಸರು ಮುದ್ದುರ೦ಗ.
ವೈರವಿದ್ದವನ ಕರೆದು ಮುಖಕ್ಷೌರ ಮಾಡಿಸಿಕೊ೦ಡಹಾಗೆ.
ಶ್ಯಾನುಭೋಗರ ಸ೦ಬಳ ಸ೦ತೋಷ ಕೇಳಬೇಡಾ.
ಸರಿಮನೆಯಾಕೆ ಸರಿಗೆ ಹಾಕಿಕೊ೦ಡರೆ ನೆರೆಮನೆಯಾಕೆ ಉರ್ಲು ಹಾಕಿಕೊಳ್ಳಬೇಕೆ?
ಸ೦ಬಳ ಸಾರಿಗೆ ಏನಿಲ್ಲದಿದ್ದರೂ ನನ್ನ ಗ೦ಡನ್ನ ಸುಬೇದಾರ ಅ೦ದರೆ ಎಷ್ಟೋ ಹೆಚ್ಚಳ ಅ೦ದಳ೦ತೆ.
ಸು೦ದರ ಪುರುಷನೆಲ್ಲೆ ಸುಪಣಾತಿ ಅ೦ದ್ರೆ ಸೂಳೆ ಮನೇಲಿ ಸುಖನಿದ್ರೇಲವ್ರೆ ಎ೦ದಳು.
ಪಾಪಿ ಚುನಾವಣೆಗೆ ನಿ೦ತರೆ ಮೂರೇ ಓಟು.
ಲ೦ಚ ಕೊಡದವನಿಗೆ ಕೊ೦ಚವೂ ಸಿಗದು.
ಲ೦ಚ ಕೊಡದವನಿಗೆ ಕೊ೦ಚವೂ ಸಿಗದು.
ಸ್ಟ್ಯಾ೦ಪಿರುವಷ್ಟು ನಾಲಗೆ ಚಾಚು.
ಹೆಸರು ಸರಸ್ವತಿ, ಎಡಗೈ ಹೆಬ್ಬೆಟ್ಟಿನ ಸಹಿ.
ಕೆಲಸವಿಲ್ಲದ ಶಾನುಭೋಗ ಹಳೆ ಲೆಕ್ಕ ನೋಡಿದ ಹಾಗೆ.
ಕೋಳಿಕಾಲಿಗೆ ಗೆಜ್ಜೆ ಕಟ್ಟಿದರೆ ತಿಪ್ಪೆ ಕೆರೆಯದೆ ಇರುವುದೇ?
ಕಾಸೂ ಹಾಳು ತಲೆಯೂ ಬೋಳು.
ದಾಕ್ಷಿಣ್ಯವ೦ತ ದೇಶಕ್ಕೆ ಹೋದರೆ ದಕ್ಷಿಣೆ ಸಿಕ್ಕೀತೇ!
ಚ೦ಡಾಲ ದೇವರಿಗೆ ಚಪ್ಪಲಿ ಪೂಜೆ
ಛತ್ರದಲ್ಲಿ ಊಟ ಮಠದಲ್ಲಿ ನಿದ್ರೆ
ತಿನ್ನೋದು ತವಡು ನಡೆಯೋದು ವೈಯಾರ
ತಾನು ಕೋತಿಯಾಗಿ ರತಿಯನ್ನು ಬಯಸುವುದೇ?
ದೊಡ್ಡ ಗೌಡನ ಮನೇಲಿ ದೊಡ್ಡ ಗುಡಾಣ ಎತ್ತಿದರೆ ಏನೂ ಇಲ್ಲ.
ಮದುವೆ ಆಗೋ ಗ೦ಡಿಗೆ ಅದೇ ಇಲ್ಲ ಅ೦ದ೦ಗೆ.
ಆಸೆಯಿ೦ದ ಅಳಿಯ ಬ೦ದ್ರೆ ಮಗಳು ಹೊರಗಾಗಿರೋದೇ?
ಅ೦ಗ ತೋರಿಸಿ ಅರ್ಧಾ೦ಗಿಯಾದಳು.
ಅಳಿಯನಿಗೆ ದೀಪಾವಳಿ ಮಾವನಿಗೆ ಕೋಪಾವಳಿ.
ಆಫೀಸಿನಲ್ಲಿ ಆಫೀಸರ್, ಮನೆಯಲ್ಲಿ ಕುಕ್ಕರ್.
ಊಟಕ್ಕೇಳೋ ಗು೦ಡ ಅ೦ದ್ರೆ ಯಾವಕ್ಕಿ ಬೇಯಿಸಿದ್ದೀ ಅ೦ದ.
ಅಗಸನ ಸಿಟ್ಟು ಅನ್ಯರ ವಸ್ತ್ರದ ಮೇಲೆ.
ಅ೦ಗಳದಾಗೆ ಒದ್ದು ಅಡಿಗೆ ಮನೆಯಲ್ಲಿ ಕಾಲು ಹಿಡಿದ.
ಅಶ್ವಥ ಸುತ್ತೆ ಮಕ್ಕಳಾಗುತ್ತೆ ಅ೦ದ್ರೆ ಸುತ್ತು ಸುತ್ತಿಗೂ ಹೊಟ್ಟೆ ಮುಟ್ಟಿ ನೋಡಿಕೊ೦ಡಳ೦ತೆ.
ಎಲ್ಲರೂ ನಗ್ತಾರೆ ಅ೦ಥ ಕಿವುಡ ತಾನೂ ನಕ್ಕ.
ಒಡೆಯನಿಗೆ ಹಾಲಿಲ್ಲವೆ೦ದು ಎಮ್ಮೆ ಈಯುತ್ಯೇ?
ಕ೦ಡವರ ಮನೇಲಿ ನೋಡು ನನ್ನ ಕೈ ಧಾರಾಳವ!
ಕುಡಿಯೋದು ಅ೦ಬಲಿ ಮುಕ್ಕಳಿಸೋದು ಪನ್ನೀರು.
ಕುರುಡರ ರಾಜ್ಯದಲ್ಲಿ ಒಕ್ಕಣ್ಣನೇ ರಾಜ.
ಕದ್ದ ರೊಟ್ಟಿ ಬೇರೆ ದೇವರ ಪ್ರಸಾದ ಬೇರೆ.
ಕಡಗ ನೋಡಲಿ ಅ೦ತ ಗುಡಿಸಲು ಸುಟ್ಕೊ೦ಡ ಹಾಗೆ.
ಗ್ರಾಮ ಶಾ೦ತಿಗೆ ತಳವಾರತಲೆ ಬೋಳಿಸಿಕೊ೦ಡನ೦ತೆ.
ಗ೦ಡ ಪಟ್ಟೆ ಸೀರೆ ತರುತ್ತಾನೆ೦ದು ಇದ್ದ ಬಟ್ಟೆ ಸುಟ್ಟಳ೦ತೆ.
ಇದ್ದಾಗ ನವಾಬ ಸಾಬ, ಇಲ್ಲದಾಗ ಫಕೀರ ಸಾಬ.
ತಾನು ಸಾಯುವ ತನಕ ತನ್ನನ್ನು ಜೋಪಾನ ಮಾಡಿದರೆ ತತ್ತಿಯಷ್ಟು ಬ೦ಗಾರ ಕೊಟ್ಟೇನು ಅನ್ನುತ್ತ೦ತೆ ಕೋಳಿ.
ನಾಯಿಗೆ ಹೊಡೆಯಲು ಬಣ್ಣದ ಕೋಲೇ.
ನಾಯಿಯ ಕನಸೆಲ್ಲ ಮೂಳೇನೇ.
ಯಾರ ತೋಟದ ಹುಲ್ಲು ಮೇದಾದ್ರೂ ನಮ್ಮ ಕರು ದೊಡ್ಡದಾಗಲಿ.
ವಿರೂಪಾಕ್ಷ ಹ೦ಪೆ ಬಿಡ, ವಿಘ್ನೇಶ್ವರ ಕೊ೦ಪೆ ಬಿಡ.
ಸೊಕ್ಕಿದ್ದವನಿಗೆ ಯಾಣ, ರೊಕ್ಕಿದ್ದವನಿಗೆ ಪಟ್ಟಣ.
ಹ೦ಪೆಗೆ ಹೋಗದಿದ್ದರೆ ಸ೦ಪಿಗೆ ನೋಡಲಿಲ್ಲವೇ?
ನುಡಿಯೊಳು ಹೊಳೆವುದು ನಾಡಿನ ನಡವಳಿ.
ನುಡಿಯೊಳು ಕ೦ಪಿಡುವುದು ಬದುಕು
ನುಡಿಯಿರದವನಿಗೆ ಇಲ್ಲವು ನಾಡೂ
ನುಡಿಯಲಿ ಸಲ್ಲನದಾವುದಕೂ.
ಊಟಕ್ಕೇಳೋ ಗು೦ಡ ಅ೦ದ್ರೆ ಯಾವಕ್ಕಿ ಬೇಯಿಸಿದ್ದೀ ಅ೦ದ.
ಗಂಡನಿಗೆ ಹೊರಸು ಆಗದು , ಹೆಂಡತಿಗೆ ನೆಲ ಆಗದು!
ಕೊಡುವವರದು ಕೊಟ್ಟರೆ ನನಗೇನು ಉಳಿಯಿತು ಅಂದನಂತೆ.
ಕೋಳೀ ಕಾಲಿಗೆ ಗೆಜ್ಜೆ ಕಟ್ಟಿದರೆ ತಿಪ್ಪೆ ಕೆದರೋದು ಬಿಟ್ಟೀತೆ?
ಕತ್ತೆಯ ಕಾಲು ಮುರಿದರೇನು ? ನಾಯಿಯ ಹಲ್ಲು ಮುರಿದರೇನು?
ಕಟ್ಟಿದ ಗೂಟ , ಹಾಕಿದ ಹಲ್ಲು.
ಉಂಡರೆ ಉಬ್ಬಸ, ಹಸಿದರೆ ಸಂಕಟ .
ಜೋಡಿದ್ದರೆ ನಾಡು ತಿರುಗಬಹುದು.
ಆಕಾಶ ಹರಿದು ಬೀಳುವಾಗ ಕೈ ಅಡ್ಡ ಹಿಡಿಯಬಹುದೇ ?
ಆಗ-ಭೋಗ ಸೂಳೆ ಪಾಲು , ಗೂರಲು ಉಬ್ಬಸ ಹೆಂಡತಿ ಪಾಲು.
ಅಳಿಲು ಏರಿದರೆ ಅರಳಿಮರ ಅಲ್ಲಾಡೀತೆ ?
ನಾವೂ ನೀವೂ ನೆಂಟರು , ಗಂತಿಗೆ ಮಾತ್ರ ಕೈ ಹಚ್ಚಬೇಡಿ.
ನಾಯಿಯನ್ನು ಹೊಡೆಯಲು ಬಣ್ಣದ ಕೋಲೇ ?
ಪದದೊಳಿಲ್ಲ ತಾನರ್ಥದೊಳಿಲ್ಲವು
ಪದಾರ್ಥ ಸ೦ಘಾತದೊಳಿಲ್ಲ
ಎದೆಎದೆಯನು ಪಿಸು ಮಾತೊಳಗರಳಿಸಿ
ಮುದ ಹರಡುವ ಕಲೆ ಋಷಿ ಬಲ್ಲ.
ಅಜ್ಜಿಗೆ ಅಕ್ಕಿ ಚಿ೦ತೆಯಾದರೆ ಮೊಮ್ಮಗಳಿಗೆ ಮೂಗುತಿ ಚಿ೦ತೆ
ಸೂಳೆ ಕೈಯಲ್ಲಿ ಜೋಳ ಕುಟ್ಟಿಸಿದ ಹಾಗೆ
ಮೀಸೆ ಬ೦ದವಗೆ ದೇಶ ಕಾಣದು, ಮೊಲೆ ಬ೦ದವಳಿಗೆ ನೆಲ ಕಾಣದು.
ಹೆ೦ಗಸಿನ ಬುದ್ಧಿ ಮೊಣಕಾಲ ಕೆಳಗೆ
ಅತೀ ಬುದ್ಧಿ, ಅ೦ಡು ಚಪ್ಪಟೆ!
ಅಡಕೆ ಕದ್ದು ಹೋದ ಮಾನ ಆನೆ ಕೊಟ್ಟರೂ ಬರದು
ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯ್ತು.
ಕೆಲಸವಿಲ್ಲದ ಬಡಗಿ ಮಗುವಿನ ಕು೦ಡೆ ಕೆತ್ತಿದನ೦ತೆ.
ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು
ಮನೆ ಮಗ ಉ೦ಡಷ್ಟೂ ಒಳ್ಳೇದು, ಮಗೆ ಮಳೆ ಬ೦ದಷ್ಟೂ ಒಳ್ಳೇದು.
ಆಡಿ ಪೋಕರಿ ಅನ್ನಿಸಿಕೊಳ್ಳುವುದಕಿಂತ ಆಡದೆ ಮೂಗ ಅನ್ನಿಸಿಕೊಳ್ಳುವುದು ಮೇಲು.
ಮಾತಿಗೆ ಸಾಯದೇ ಇದ್ದೋನೂ ಏಟಿಗೂ ಸಾಯುವುದಿಲ್ಲ.
ಹಾವು ಸಾಯಬಾರದು, ಕೋಲು ಮುರೀಬಾರದು.
ಇತ್ತಿತ್ತ ಬಾ ಅಂದರೆ ಇದ್ದ ಮನೆ ಕಿತ್ತುಕೊಂಡರು.
ಬೆರಳು ತೋರಿಸಿದರೆ ಅಂಗೈ ನುಂಗಿದಂತೆ.
ಅಪ್ಪನ ಕಾಲಕ್ಕೆ ಅರಮನೆ, ಮಗನ ಕಾಲಕ್ಕೆ ಬರೀಮನೆ.
ವೇದ ಸುಳ್ಳಾದರು ಗಾದೆ ಸುಳ್ಳಾಗದು.
ಅಡಿಕೆಗೆ ಹೋದ ಮಾನ ಆನೆ ಕೊಟ್ಟರು ಬರಲ್ಲ.
ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ.
ಎತ್ತು ಏರಿಗೆಳೀತು, ಕೋಣ ನೀರಿಗೆಳೀತು.
ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರಂತೆ.
ಕೈ ಕೆಸರಾದರೆ ಬಾಯಿ ಮೊಸರು.
ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ತ?
ಹೆಣ್ಣಿಗೆ ಹಟವಿರಬಾರದು, ಗಂಡಿಗೆ ಚಟವಿರಬಾರದು.
ಮಾತು ಬೆಳ್ಳಿ, ಮೌನ ಬಂಗಾರ.
ಮಾತು ಮನೆ ಮುರಿತು, ತೂತು ಓಲೆ ಕೆಡಿಸಿತು.
ಮಂಗ ಮೊಸರು ತಿಂದು ಮೇಕೆ ಬಾಯಿಗೆ ಸವರಿದ ಹಾಗಾಯಿತು.
ಮನೆಗೆ ಮಾರಿ, ಊರಿಗೆ ಉಪಕಾರಿ.
ಆಳಾಗಬಲ್ಲವನು ಅರಸನಾಗಬಲ್ಲ.
ಊರಿಗೆ ದೊರೆ ಆದರೂ ತಾಯಿಗೆ ಮಗನೆ.
ಹೆತ್ತವರಿಗೆ ಹೆಗ್ಗಣ ಮುದ್ದು.
ಊರೆಲ್ಲ ದೋಚಿಕೊಂಡು ಹೋದಮೇಲೆ ದೊಡ್ಡಿ (ಕೋಟೆ) ಬಾಗಿಲು ಹಾಕಿದರಂತೆ.
ಗಿಡವಾಗಿ ಬಗ್ಗದ್ದು, ಮರವಾಗಿ ಬಗ್ಗೀತೇ?
ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ.
ಮನಸಿದ್ದರೆ ಮಾರ್ಗ.
ಅಡ್ಡಗೋಡೆಯ ಮೇಲೆ ದೀಪ ಇಟ್ಟ ಹಾಗೆ.
ಆರಕ್ಕೇರಲಿಲ್ಲ, ಮೂರಕ್ಕೀಳಿಯಲಿಲ್ಲ.
ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ.
ಅಕ್ಕಿ ಮೇಲೆ ಆಸೆ ನೆಂಟರ ಮೇಲೆ ಇಷ್ಟ.
ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡಂತೆ.
ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ.
ಬೆಕ್ಕು ಕಣ್ಮುಚ್ಚಿ ಹಾಲು ಕುಡಿದರೆ ಜಗತ್ತಿಗೆ ಗೊತ್ತಾಗಲ್ವಾ?
ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ.
ಬೆಳ್ಳಗಿರೋದೆಲ್ಲ ಹಾಲಲ್ಲ, ಹೊಳೆಯೋದೆಲ್ಲ ಚಿನ್ನ ಅಲ್ಲ.
ಹತ್ತು ಕಟ್ಟೋ ಕಡೆ ಒಂದು ಮುತ್ತು ಕಟ್ಟು.
ಜಲ ನೋದಿ ಭಾವಿ ತೆಗೀಬೇಕು, ಕುಲ ನೋಡಿ ಹೆಣ್ಣು ತರ್ಬೇಕು.
ಚಿಂತೆ ಇಲ್ಲದವನಿಗೆ ಸ೦ತೇಯಲ್ಲೂ ನಿದ್ದೆ.
ದೇವರು ವರ ಕೊಟ್ಟರು ಪೂಜಾರಿ ಕೊಡೆಬೇಕಲ್ಲ.
ಹನುಮಂತಾನೆ ಬಾಲ ಕಡಿತಿರುವಾಗ, ಇವನ್ಯಾವನೋ ಶಾವಿಗೆ ಕೇಳಿದನಂತೆ.
ತುಂಬಿದ ಕೊಡ ತುಳುಕುವುದಿಲ್ಲ.
ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ.
ಹನಿ ಹನಿ ಸೇರಿದರೆ ಹಳ್ಳ, ತೆನೆ ತೆನೆ ಸೇರಿದರೆ ಬಳ್ಳ.
ನಾಯಿನ ಕರೆದುಕೊಂಡು ಹೋಗಿ ಸಿಂಹಾಸಾನದ ಮೇಲೆ ಕೂರಿಸಿದ ಹಾಗಯ್ತು.
ಮು೦ಡೆಯ ಮದುವೆಯಲ್ಲಿ ಉ೦ಡೋನೆ ಜಾಣ.
ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು.
ಹಟದಿಂದ ಹೆಣ್ಣು ಕೆಟ್ಟಳು ಚಟದಿಂದ ಗಂಡು ಕೆಟ್ಟ
ಗಂಡಸರ ಕೈಯಲ್ಲಿ ಕೂಸು ನಿಲ್ಲದು ಹೆಂಗಸರ ಕೈಯಲ್ಲಿ ಮಾತು ನಿಲ್ಲದು
ಎಳ್ಳಿನಲ್ಲಿ ಎಣ್ಣೆ ಅಡಕ ಹಾಲಿನಲ್ಲಿ ಬೆಣ್ಣೆ ಅಡಕ
ಮೇಲೆ ಬಸಪ್ಪ ಒಳಗೆ ವಿಷಪ್ಪ
ಹೊರಗೆ ಬೆಳಕು ಒಳಗೆ ಕೊಳಕು
ಹಿಟ್ಟೂ ಹಳಸಿತ್ತು ನಾಯಿಯೂ ಹಸಿದಿತ್ತು
ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲ
ಏಕಾದಶಿಯ ಮನೆಗೆ ಶಿವರಾತ್ರಿ ಬಂದ ಹಾಗೆ
ಒಪ್ಪವಿಲ್ಲದ ಮಾತು ತುಪ್ಪವಿಲ್ಲದ ಊಟ
ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು
ಇದ್ದಾಗ ಹಿರಿಯಣ್ಣ ಇಲ್ಲದಾಗ ತಿರಿಯಣ್ಣ
ಒಕ್ಕುವುದು ರೈತನ ಗುಣ ನೆಕ್ಕುವುದು ನಾಯಿಯ ಗುಣ
ಅರಮನೆಯ ಮುಂದಿರಬೇಡ ಕುದುರೆಯ ಹಿಂದಿರಬೇಡ
ತಾಯಿಯಂತೆ ಮಗಳು ನೂಲಿನಂತೆ ಸೀರೆ
ಕತ್ತೆಯಂಥ ಅತ್ತೆ ಬೇಕು ಮುತ್ತಿನಂಥ ಗಂಡ ಬೇಕು
ಅರಿತರೆ ಮಾತನಾಡು ಮರೆತರೆ ಕೂತು ನೋಡು
ತೋಳ ಹಳ್ಳಕ್ಕೆ ಬಿದ್ದರೆ ಆಳಿಗೊಂದು ಕಲ್ಲು
ಹಾಲಿದ್ದ ಕ೦ಡಲ್ಲಿ ಬೆಕ್ಕು ಹೇಲು ಕ೦ಡಲ್ಲಿ ನಾಯಿ
ಆಪತ್ತಿಗಾದವನೇ ನೆಂಟ ಕೆಲಸಕ್ಕಾದವನೇ ಭಂಟ
ಗಂಜಿಯ ಕುಡಿದರೂ ಗಂಡನ ಮನೆ ಲೇಸು
ಒಲಿದರೆ ನಾರಿ ಮುನಿದರೆ ಮಾರಿ
ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು
ಕಚ್ಚೋ ನಾಯಿ ಬೊಗಳುವುದಿಲ್ಲ
ತುಂಬಿದ ಕೊಡ ತುಳುಕುವುದಿಲ್ಲ
ಊಟ ಬಲ್ಲವನಿಗೆ ರೋಗವಿಲ್ಲ ಮಾತು ಬಲ್ಲವನಿಗೆ ಜಗಳವಿಲ್ಲ
ತಾಳಿದವನು ಬಾಳಿಯಾನು
ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ?
ಆರಕ್ಕೆ ಏರಲಿಲ್ಲ ಮೂರಕ್ಕೆ ಇಳಿಯಲಿಲ್ಲ
ಮುದುಕರಿಗೆ ಮುದ್ದೆ ಕೇಡು ಹಳೇ ಬಟ್ಟೆಗೆ ನೂಲು ಕೇಡು
ಲಾಲಿಸಿದರೆ ಮಕ್ಕಳು ಪೂಜಿಸಿದರೆ ದೇವರು
ಉತ್ತರೆ ಹೊಲ ಚಂದ ಬಿತ್ತರೆ ಬೆಳೆ ಚಂದ
ಅಂಗೈ ಹುಣ್ಣಿಗೆ ಕನ್ನಡಿ ಬೇಕೇ?
ಹಂಗಿನರಮನೆಗಿಂತ ಕುಂದಣದ ಗುಡಿ ಲೇಸು
ಹಸಿದು ಹಲಸು, ಉಂಡು ಮಾವು
ಹೋದರೆ ಶಾಟ, ಬ೦ದರೆ ಬೆಟ್ಟ.
ಊರಿಗೆ ಬಂದವಳು ನೀರಿಗೆ ಬರದೆ ಇರುತ್ತಾಳೆಯೆ?
ಮನೆಗೆ ಮಾರಿ ಊರಿಗೆ ಉಪಕಾರಿ.
ಯಾರದೊ ದುಡ್ಡು ಎಲ್ಲಮ್ಮನ ಜಾತ್ರೆ.
ಓಡ್ಹೋಗುವನ ಚಡ್ಡಿ ಹರಕಂಡಷ್ಟೆ ಲಾಭ.
ಬರಗಾಲದಲ್ಲಿ ಅಧಿಕಮಾಸ ಬಂದ ಹಾಗೆ.
ತಾನೂ ತಿನ್ನ, ಪರರಿಗೂ ಕೊಡ.
ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು.
ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?
ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಯಲ್ಲಿ ಕೊಡೆ ಹಿಡಿದ.
 
</poem>
''''''ಹೊಸಾ ಎಲೆಕ್ಟ್ರಾನಿಕ್ ಗಾದೆಗಳು!''''''
* ಬಾಯಲ್ಲಿ ಬಿಳಿ ಹಲ್ಲು(Tooth) ಇಲ್ಲದೆ ಹೋದರೂ ಪರವಾಗಿಲ್ಲ, ಮೊಬೈಲಿಗೆ ನೀಲಿ ಹಲ್ಲು (Blue Tooth) ಇರಲೇಬೇಕು.
* ಪೆನ್ ಡ್ರೈವ್ ಕಳ್ಳ ಅಂದ್ರೆ ಯೂಎಸ್ ಬಿ ಮುಟ್ಟಿ ನೊಡ್ಕೊಂಡ್ರಂತೆ..(ಮೊನ್ನೆ ಗೆಳೆಯ ಹೇಳಿದ್ದು).
* ಭ್ರಾಡ್ ಬ್ಯಾಂಡಲ್ಲಿ ಆಗದ್ದು ಡಯಲ್ ಅಪ್ ಅಲ್ಲಿ ಆಗುತ್ತಾ?.
* ಆಫೀಸಿಂದ ಮನೆಗೆ ಬಂದ್ರೂ ಪ್ರಾಕ್ಸಿ ಸರ್ವರ್ ಹುಡ್ಕೋದು ಬಿಡ್ಲಿಲ್ಲ.
* ಹಳೆಯ ಪಿಲ್ಮ್ ಹಾಕೋ ಕ್ಯಾಮರಾಕ್ಕೆ ಎಷ್ಟು ಜೀಬಿ ಮೆಮೊರಿ ಕಾರ್ಡ ಇದೆ ಹುಡ್ಕಿದಂತೆ.
* ಎದೆ ಬಗೆದರೆ ಮೂರು ಅಕ್ಷರ ಇಲ್ಲಾ.. ಕಾರ್ಡ್ ಸುಗದ್ರೆ ಮೂರು ಕಾಸಿಲ್ಲ.
* ಸಾಪ್ಟ್ ವೇರ್ ಗೆ ಹೋದ ಮಾನ ಹಾರ್ಡ್ ವೇರ್ ಕೊಟ್ಟರು ಬಾರದು.
* ಗೂಗಲ್ ಟಾಕ್ ಗೆ ಬಾ ಪ್ರೈವೇಟಾಗಿ ಮಾತಾಡ್ಬೇಕು ಅಂದ್ರೆ ಆರ್ಕುಟ್ಟಿಗೆ ಬರ್ತೀನಿ ಅಂದಂತೆ.
 
ಸಿಟಿ ಗಾದೆಗಳು.
 
*"ಹೊಡೆದರೆ ಟೈಸನಗೆ ಹೊಡಿಬೇಕು ಮದುವೆಯಾದರೆ ಐಶ್ವರ್ಯ ರೈಯನ್ನೇ ಮದುವೆಯಾಗಬೇಕು"
*"ಗಂಡನಿಗೆ ನಿಕ್ಕರ್ ಇಲ್ಲದಿದ್ರು ಹೆಂಡತಿಗೆ ಕುಕ್ಕರ್ ಬೇಕು"
*"ಕೈಯಲ್ಲಿ ಉರಿಯೋ ಸಿಗರೇಟ್ ಹಿಡ್ಕೊಂಡು ಬೆಂಕಿಕಡ್ಡಿಗೆ ಊರೆಲ್ಲ ಅಲೆದಾಡಿದರಂತೆ"
*"ಸಮ್ಮಿಶ್ರ ಸರ್ಕಾರಕ್ಕೆ ವರ್ಷ ಎಲ್ಲರಿಗೂ ಕೊಳ್ಳೆ ಹೊಡೆದಿದ್ದೆ ಹರ್ಷ "
*"ಜೈಲು ಹೋಗು ಅಂತಿದೆ ರಾಜಕಾರಣ ಬಾ ಅಂತಿದೆ"
*"ಹೆಂಡ್ತಿ ಮೇಲೆ ಆಸೆ, ಪಕ್ಕದ ಮನೆಯವಳ ಮೇಲೆ ಪ್ರೀತಿ"
*"ಕೆಳಸೇತುವೆ ಕಟ್ಟಿಸಿ ಮೇಲ್ಸೇತುವೆ ಬಿಲ್ ತಿಂದ "
*"ಲಂಚದಲ್ಲಿ ಬಂದಿದ್ದು ಮಂಚದಲ್ಲಿ ಹೋಯಿತು"
*"ಉಪಗ್ರಹ ಕೇಂದ್ರದಲ್ಲಿದ್ದರು, ಶನಿಗ್ರಹ ಕಾಟ ತಪ್ಪಲಿಲ್ಲ"
*"ಕಳ್ಳ ಮಂತ್ರಿಗೆ ಸುಳ್ಳ ಅಧಿಕಾರಿ ಕಾರ್ಯದರ್ಶಿಯಂತೆ "
*"ಖರ್ಗೆ ನಗೋಲ್ಲ ಧರ್ಮಸಿಂಗ್ ಅಳೋನಲ್ಲ"
*"ಸಿಸೇರಿಯನ್ ಆದವಳಿಗೇನು ಗೊತ್ತು ಹೆತ್ತವಳ ಕಷ್ಟ"
*"ಹತ್ತೂರಲ್ಲಿ ವಾಸಿಯಾಗದ ಕಾಯಿಲೆ ಜಕ್ಕೂರಲ್ಲಿ ವಾಸಿಯಾಗುತ್ತಾ?"( ಬೆನ್ ಹಿನ್ ಎಂಬ ಮಾಂತ್ರಿಕನ ಬಗ್ಗೆ)
*"ನೆಟ್ ನಲ್ಲಿ ಸಿಗದಿದದ್ದು ಅಟ್ಟದಲ್ಲಿ ಸಿಗುತ್ತಾ?"
*"ಶ್ರೀರಾಮಪುರದಲ್ಲಿ ಇರೋರೆಲ್ಲ ಏಕ ಪತ್ನಿವ್ರಸ್ತರಲ್ಲ"
*"ಚನ್ನಮ್ಮನ ಕೆರೆ ಒಣಗಿಸಿ ಅಚ್ಚುಕಟ್ಟಾಗಿ ಮನೆ ಕಟ್ಟಿಸಿದಂಗಾಯ್ತು"
*"ದುಡ್ಕೊಂಡು ತಿನ್ನೋ ಅಂದ್ರೆ ರಾಜಕಾರಣ ಸೇರತಿನಿ ಅಂದನಂತೆ"
*"ಲೋಕಾಯುಕ್ತ ದಾಳಿನೂ ಆಗಬೇಕು ಜೊತೆಗೆ ಬಡ್ತಿನೂ ಸಿಗಬೇಕು"
*"ನಂದಿನಿಯವರ ನೆಂಟಸ್ತನ, ಹಾಲಿಗೆ ಬಡತನ"
*"ಮೊಬೈಲ್ ಕಳ್ಳನನ್ನು ಮಹಾದೇವನು ಹಿಡಿಯಲಾರ"
*"ಕಂಟ್ರಿ ಕ್ಲಬ್ಬಿಗೆ ಹೋಗಿ ಕಂಟ್ರಿ ಸಾರಾಯಿ ಕೇಳಿದಂಗಾಯ್ತು"
 
ಟಿ.ವಿ. ಗಾದೆಗಳು!
 
*ಟಿ.ವಿ. ಚಿಕ್ಕದಾದರೂ, ಫಿಲಂ ಚಿಕ್ಕದೆ?
*ಬಿಟ್ಟಿ ಟಿ.ವಿ. ಕೊಟ್ಟರೆ, ಆಂಟೆನಾ ಎಲ್ಲಿ ಅಂದನಂತೆ!
*ಪಾಪಿ ಕಲರ್ ಟಿ.ವಿ. ತಂದರೂ, ಫಿಲಂ ಬ್ಲಾಕ್ ಅಂಡ್ ವೈಟ್ ಬರತ್ತಂತೆ
*ಹೊಟ್ಟೆಗೆ ಹಿಟ್ಟಿಲ್ಲದಿದ್ರೂ, ಮನೆಗೆ ಕಲರ್ ಟಿ.ವಿ. ಬೇಕಂತೆ
 
 
ಹೊಸ ಗಾದೆಗಳು...
 
*ಪಿಸಿಗೆ ಒಂದು ಕಾಲ ಲ್ಯಾಪ್‌ಟಾಪ್‌ಗೆ ಒಂದು ಕಾಲ
*ಟೈಪಿಂಗ್ ಬಾರದವನು ಕೀಬೋರ್ಡ್ ಸರಿಯಿಲ್ಲ ಎಂದನಂತೆ!
*ಡಿಸ್ಕ್‌ ಸ್ಪೇಸ್ ಇದ್ದಷ್ಟೇ ಫೈಲ್ ಸೇವ್ ಮಾಡು
*ಫ್ಲಾಪಿ ಕದ್ದರೂ ಕಳ್ಳ, ಡಿಸ್ಕ್ ಕದ್ದರೂ ಕಳ್ಳ
*ಅಪ್ರೈಸಲ್‌ಗೆ ವರುಷ, ರಿಸೈನ್‌ಗೆ ನಿಮಿಷ
 
<br />ದಯವಿಟ್ಟು ವಿಷಯ-ಪೋಣಿಕೆಗೆ ಅನುಗುಣವಾಗಿ ಗಾದೆಗಳನ್ನು ಪಟ್ಟಿ ಮಾಡಿರಿ...
<br />Please try to list the kannada proverbs(kannada gadegalu) as per the Index (ವಿಷಯ-ಪೋಣಿಕೆ)...
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ/back to index]]<br />
<br>
 
*ಗುಡಿಸಿದ ಮೇಲೆ ಕಸ ಇರಬಾರದು . .ಬಡಿಸಿದ ಮೇಲೆ ಹಸಿವಿರಬಾರದು
*ಕಷ್ಟಕ್ಕೆ ಕರೆಯಬೇಡ...ಊಟಕ್ಕೆ ಮರೆಯಬೇಡ
*ಉಪದೇಶಕ್ಕಿಂತ ಉದಾಹರಣೆ ಆಗಿರುವುದು ಉತ್ತಮ
*ತೋಡಿದ ಬಾವಿಗೆ ನೀರೇ ಸಾಕ್ಷಿ ...ಮಾಡಿದ ತಪ್ಪಿಗೆ ಮನವೇ ಸಾಕ್ಷಿ
*ಹಣ ಇದ್ದವನ ಕೈ ಹಿಡಿದರೂ ಋಣ ಇದ್ದಷ್ಟೇ ಸಿಕ್ಕುವುದು.
*ಬುಟ್ಟಿಯಷ್ಟು ಬುದ್ಧಿಗಿಂತ ಮುಷ್ಠಿಯಷ್ಟು ತಾಳ್ಮೆ ಲೇಸು
*ಹೆಣ್ಣು ಪಂಜರ ಜೀವಿ. ಗಂಡು ಅಂಬರ ಜೀವಿ
*ಸುರಿದು ಊಟ ಮಾಡು ಗೊರೆದು ನಿದ್ದೆ ಮಾಡು
*ಹೆಣ್ಣಿನ ತಂದೆ ಹಣ್ಣಾಗ್ತಾನೆ .ಗಂಡಿನ ತಂದೆ ಗುಂಡಾಗ್ತಾನೆ
*ಹಲಸಿನ ಹಣ್ಣು ಬೇಕು ಅಂಟು ಬೇಡ ಅಂದ್ರೆ ಹೇಗೆ
*ಊಟಕ್ಕೆ ಉಪ್ಪಿನಕಾಯಿ ಇರಬೇಕೆ ಹೊರತು ,ಉಪ್ಪಿನಕಾಯಿಯೇ ಊಟ ಆಗಬಾರದು
*ಮಗಳನ್ನು ಹೊಗಳಿ ಬೆಳಸಬೇಕು.ಮಗನನ್ನು ಶಿಸ್ತಿನಲ್ಲಿ ಬೆಳಸಬೇಕು
*ಅಹಂಕಾರಕ್ಕೆ ಉದಾಸೀನವೇ ಮದ್ದು
*೨೦ ಕ್ಕೆ ಯಜಮಾನಿಕೆ ಸಿಕ್ಕಬಾರದು ೭೦ ಕ್ಕೆ ಕೆಮ್ಮ ಬರಬಾರದು.
*ಕಳಿತರೆ ಬಾಳೆ ರುಚಿ.ಹುಳಿತರೆ ಜೇನು ರುಚಿ.
*ಮಾಡಿದ್ದುಣ್ಣೋ ಮಹರಾಯ
*ತಾಯಿ ನೋಡಿ ಮಗಳ ತರಬೇಕು. ಹಾಲು ನೋಡಿ ಎಮ್ಮೆ ತರಬೇಕು.
*ಸಾರು ಉಕ್ಕಬಾರದು ಹೆಣ್ಣು ಸೊಕ್ಕಬಾರದು.
*ಮನೆ ದೀಪ ಅಂತ ಮುತ್ತಿಟ್ಟರೆ ಸುಡದೇ ಇರುತ್ತಾ
*ಮರ ಹುಟ್ಟಿದಲ್ಲೇ ಮರಣ. ಮನುಷ್ಯ ಹೋದಲ್ಲೇ ಮರಣ
*ಇಂಗು,ತೆಂಗು ಇದ್ದರೆ ಮಂಗವು ಅಡುಗೆ ಮಾಡುತ್ತೆ
*ಅಲ್ಪನಿಗೆ ಐಶ್ವರ್ಯ ಬಂದರೆ ಅರ್ದರಾತ್ರಿಲೀ ಕೊಡೆ ಹಿಡಿದ ಹಾಗೆ
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
 
==ಅ==
*ಅಂಕೆ ಇಲ್ಲದ ಚತುರೆ, ಲಗಾಮು ಇಲ್ಲದ ಕುದುರೆ
*ಅಂಗಾಂಗದಲ್ಲಿ ಪಾಪ ಮಡಗಿಕೊಂಡು ಗಂಗೇಲಿ ಮಿಂದು ಬಂದ
*ಅಂಜುತ್ತಾ ಅಳುಕುತ್ತಾ ತಿಂದ ಅಮೃತ ನಂಜು
*ಅಂದು ಬಾ ಅಂದ್ರೆ ಮಿಂದು ಬಂದ
*ಅಂಬಲಿಗೆ ಗತಿ‌ಇಲ್ಲದವ ಕಟ್ಟಾಣಿ ರಂಬೆಯ ಬಯಸಿದ
*ಅಕ್ಕ ನನ್ನವಳಾದ್ರೆ ಬಾವ ನನ್ನವನೇನು
*ಅಕ್ಕ ಬರಬೇಕು ಅಕ್ಕಿ ಮುಗೀಬಾರದು
*ಅಕ್ಕನ ಹಗೆ ಬಾವನ ನೆಂಟು
*ಅಕ್ಕರ ಕಲ್ತು ತನ್ನ ಒಕ್ಕಲನ್ನೇ ತಿನ್ನೊದ್ ಕಲ್ತ
*ಅಕ್ಕರೆಯ ಅಕ್ಕ ಬಂದಾಗೇ ಸಕ್ಕರೆಯೆಲ್ಲ ಕಹಿ ಆಯ್ತು
*ಅಕ್ಕಸಾಲಿಗನ ಮಗ ಚಿಮ್ಮಟ ಹಿಡಿಯುತ್ತಲೇ ಹೊನ್ನ ಕದ್ದ
*ಅಕ್ಕಿ ಉಂಡವ ಹಕ್ಕಿ, ಜೋಳ ಉಂಡವ ತೋಳ
*ಅಕ್ಕಿ ಸರಿಯಾಗ ಬಾರದು ಅಕ್ಕನ ಮಕ್ಕಳು ಬಡವಾಗ ಬಾರದು
*ಅಕ್ಕಿಯ ಮೇಗಳ ಆಸೆ, ನೆಂಟರ ಮೇಗಳ ಬಯಕೆ
*ಅಕ್ಕಿಲ್ಲ ಬ್ಯಾಳಿಲ್ಲ ಅಕ್ಕನ್ನ ಕರತರಬೇಕು
*ಅಗಸನ ಬಡಿವಾರವೆಲ್ಲ ಹೆರರ ಬಟ್ಟೆ ಮೇಲೆ
*ಅಗಸರ ಕತ್ತೆ ಕೊಂಡು ಹೋಗಿ, ಡೊಂಬರಿಗೆ ತ್ಯಾಗ ಹಾಕಿದ ಹಾಗೆ
*ಅಜ್ಜ ಮದುವೆ ಅಂದ್ರೆ ನನಗೋ ಅಂದ
*ಅಜ್ಜಿ ಸಾಕಿದ ಮಗ ಬೊಜ್ಜಕ್ಕೂ ಬಾರದು
*ಅಜ್ಜಿಗೆ ಅರಿವೆಯ ಚಿಂತೆ, ಮಗಳಿಗೆ ಗಂಡನ ಚಿಂತೆ, ಮೊಮ್ಮಗಳಿಗೆ ಕಜ್ಜಾಯದ ಚಿಂತೆ
*ಅಟ್ಟ ಹತ್ತಲು ಹೋದವ ಏಣಿಯ ಮೋಹಕ್ಕೆ ಬಿದ್ದಂತೆ
*ಅಟ್ಟಿಕ್ಕಿದೋಳಿಗಿನ್ನ ಬೊಟ್ಟಿಕ್ಕಿದೋಳು ಹೆಚ್ಚು
*ಅಡವಿಯ ದೊಣ್ಣೆ ಪರದೇಸಿಯ ತಲೆ
*ಅಡೆ ಮಡಕೆಯಲ್ಲ ಇಡೆ ಸಟ್ಟುಗವಲ್ಲ
*ಅಣ್ಣಿಗೇರ‍್ಯಾಗ ಎಣ್ಣೆ ಮೊಣಕಾಲ ಮಟ್ಟ
*ಅತಿ ಆಸೆ ಗತಿಗೇಡು
*ಅತಿ ಸ್ನೇಹ ಗತಿ ಕೇಡು
*ಅತ್ತೆ ಒಡೆದ ಪಾತ್ರೆಗೆ ಬೆಲೆ ಇಲ್ಲ
*ಅತ್ತೆ ಮಾಡಿದ್ದು ಅಡಕಲಗೂಡಿಗೆ ಸೊಸೆ ಮಾಡಿದ್ದು ಬೆಳಕಿಗೆ
*ಅತ್ತೆಯ ಮನಿಯಾಗ ಮುತ್ತಾಗಿ ಇರಬೇಕು
*ಅತ್ಯಾಶ ಬಹುದುಃಖಾಯ ಅತಿ ಸರ್ವತ್ರ ವರ್ಜಯೇತ್
*ಅಧರಕ್ಕೆ ಕಹಿ ಉದರಕ್ಕೆ ಸಿಹಿ
*ಅನುಭವಿಗೆ ಬೇರೆ ಮತವಿಲ್ಲ
*ಅನ್ನ ಇಕ್ಕಿ ಸಾಕು ಅನ್ನಿಸ ಬಹುದು, ದುಡ್ಡು ಕೊಟ್ಟು ಸಾಕು ಅನ್ನಿಸೋಕಾಗಲ್ಲ
*ಅನ್ನ ಹಾಕಿದ ಮನೆಗೆ ಕನ್ನ ಹಾಕಿದಂತೆ
*ಅನ್ಯಾಯದಿಂದ ಗಳಿಸಿದ್ದು ಅಸಡ್ಡಾಳಾಗಿ ಹೋಯ್ತು
*ಅಪ್ಪ ಗುಡಿ ಕಟ್ಟಿದರೆ ಮಗ ಕಳಸ ಇಟ್ಟ
*ಅಪ್ಪಂತೋನಿಗೆ ಇಪ್ಪತ್ತೊಂದು ಕಾಯಿಲೆ
*ಅಪ್ಪಂಥೋನಿಗೆ ಇಪ್ಪಂತ್ತೊಂದು ಕಾಯಿಲೆ
*ಅಪ್ಪನ ಬಟ್ಟೆಯಾದರು ಚಿಪ್ಪಿಗ ಬಿಡ
*ಅಪ್ಪನ ಮನೇಲಿ ಸೈ ಅನ್ನಿಸಿಕೊಂಡೋಳು, ಅತ್ತೆ ಮನೇಲೂ ಸೈ ಅನ್ನಿಸಿಕೊಣ್ತಾಳೆ
*ಅಬದ್ಧಕ್ಕೆ ಅಪ್ಪಣೆಯೇ ಅಂದ್ರೆ ಬಾಯಿಗೆ ಬಂದಷ್ಟು
*ಅಮ್ಮನ ಮನಸ್ಸು ಬೆಲ್ಲದ ಹಾಗೆ, ಮಗಳ ಮನಸ್ಸು ಕಲ್ಲಿನ ಹಾಗೆ
*ಅಯ್ಯೋ ಅಂದರೆ ಅರೆ ವಯಸ್ಸು
*ಅಯ್ಯೋ ಅಂದವರಿಗೆ ಆರು ತಿಂಗಳು ಆಯಸ್ಸು ಕಮ್ಮಿ
*ಅರಗಿನಂತೆ ತಾಯಿ, ಮರದಂತೆ ಮಕ್ಕಳು
*ಅರಣೆ (= ಹಾವು ರಾಣಿ) ಕಡಿದರೆ ಭರಣಿ (=ಪಿಂಗಾಣಿ ಮಡಿಕೆ) ಮದ್ದು ಸಾಲದು
*ಅರಮನೆಯ ಮುಂದಿರಬೇಡ, ಕುದರೆಯ ಹಿಂದಿರಬೇಡ
*ಅರವಲ್ಲದ್ದು (ಧರ್ಮವಲ್ಲದ್ದು) ಮಾಡಿದರೂ ತರವಲ್ಲದ್ದು ಮಾಡಬಾರದು
*ಅರಸನ ಕುದರೆ ಲಾಯದಲ್ಲೆ ಮುಪ್ಪಾಯಿತು
*ಅರಸು ಆದೀಕ (=ಆದಾಯ) ತಿಂದ, ಪರದಾನಿ ಹೂಸು ಕುಡಿದ
*ಅರಸು ಒಲಿದರೆ ಸಿರಿ ದೆಸೆಯಾಯ್ತು
*ಅರಿತು ಮಾಡದ ದಾನ ತೆರೆದು ನೋಡದ ಕಣ್ಣಂತೆ
*ಅರಿತೂ ಮಾಡಿದ ಪಾಪ ವಜ್ರದ ಸೆರೆಯಂತೆ
*ಅರಿತೂ ಮಾಡಿದ ಪಾಪ ವಜ್ರಲೇಪ
*ಅರಿವಿನ ಹಾದಿ ಬೇರೆ
*ಅರುಗೆಟ್ಟ ನಿದ್ದೆ (=ಅರಿವಿಲ್ಲದೆ ಮಲಗಿರುವುದು) ಇರಗೆಟ್ಟು (=ಇರವು ಗೆಟ್ಟು) ಸತ್ತಂತೆ
*ಅರೆಪಾವಿನವರ ಅಬ್ಬರ ಬಹಳ
*ಅರ್ತಿಗೆ ಬಳೆ ತೊಟ್ಟು ಕೈ ಕೊಡವಿದರೆ ಹೋದೀತೆ
*ಅಲಗಿನ ಗಾಯಕ್ಕಿಂತ ಗಲಗಿನ ಗಾಯ ಹೆಚ್ಚು
*ಅಲಾ ಬಲಾ ಪಾಪಿ ತಲೀ ಮ್ಯಾಲೆ
*ಅಲ್ಪರ ಸಂಗ ಅಭಿಮಾನ ಭಂಗ
*ಅಲ್ಲದವನ ಒಡನಾಟ ಮೊಳಕೈಗೆ ಕಲ್ಲು ಬಡಿದಂತೆ
*ಅವರವರ ತಲೆಗೆ ಅವರವರದೇ ಕೈ
*ಅಳಿವುದೇ ಕಾಯ ಉಳಿವುದೇ ಕೀರ್ತಿ
*ಆಗ ಬಾ ಈಗ ಬಾ ಹೋಗಿ ಬಾ ಅನ್ನದೆ ಕೊಡುವ ತ್ಯಾಗವಾಗು
*ಆಗರಕ್ಕೆ ಹೋಗಿ ನನ್ನ ಗಂಡ ಗೂಬೆ ತಂದ
*ಆಗುವ (ಅಡುವ) ವರೆಗಿದ್ದು ಆರುವ ವರೆಗೆ ಇರಲಾರರೇ
*ಆಗೋ ಪೂಜೆ ಆಗುತ್ತಿರಲಿ ಊದೋ ಶಂಖ ಊದಿ ಬಿಡುವ
*ಆಗೋದೆಲ್ಲಾ ಒಳ್ಳೇದಕ್ಕೆ
*ಆಚಾರ್ಯರಿಗೆ ಮಂತ್ರಕ್ಕಿಂತ ಉಗುಳು ಜಾಸ್ತಿ
*ಆಟ ಕೆಟ್ಟರೆ ದೀವಟಿಗೆಯವನ ಸುತ್ತ
*ಆಡಿ ಉಂಡ ಮೈ ಅಟ್ಟು ಉಂಡೀತೇ?
*ಆಡಿ ತಪ್ಪ ಬೇಡ ಓಡಿ ಸಿಕ್ಕ ಬೇಡ
*ಆಡುತ್ತಾ ಆಡುತ್ತಾ ಭಾಷೆ, ಹಾಡುತ್ತಾ ಹಾಡುತ್ತಾ ರಾಗ
*ಆಡೋಣ ಬಾ ಕೆಡಿಸೋಣ ಬಾ
*ಆಡೋದು ಮಡಿ ಉಂಬೋದು ಮೈಲಿಗೆ
*ಆದ್ರೆ ಒಂದು ಅಡಿಕೆ ಮರ, ಹೋದ್ರೆ ಒಂದು ಗೋಟಡಿಕೆ
*ಆನೆ ಬರುವುದಕ್ಕು ಮುನ್ನ ಗಂಟೆ ಸದ್ದು
*ಆನೆ ಮೆಟ್ಟಿದ್ದೇ ಸಂದು, ಸೆಟ್ಟಿ ಕಟ್ಟಿದ್ದೇ ಪಟ್ಟಣ
*ಆನೆ ಹೋದದ್ದು ದಾರಿ ಹಾವು ಹರಿದದ್ದು ಅಡ್ಡದಾರಿ
*ಆನೆಗೂ ಅಡಿ ತಪ್ಪೀತು
*ಆನೆಯ ಹೊಟ್ಟೆಗೆ ಅಂಬಲಿ ಬಿಟ್ಟ ಹಾಗೆ
*ಆನೆಯಂಥದೂ ಮುಗ್ಗರಿಸ್ತದೆ
*ಆಪತ್ತಿಗೆ ಹರಕೆ, ಸಂಪತ್ತಿಗೆ ಮರವು
*ಆರಿದೋಗರಕ್ಕೆ ಮೊಸರಿಕ್ಕಿ ಕಾಗೆಗೆ ಸೂರೆಕೊಟ್ಟರು
*ಆರು ಯತ್ನ ತನ್ನದು, ಏಳನೇದು ದೇವರಿಚ್ಛೆ
*ಆಲಸಿ-ಮುಂಡೇದ್ಕೆ ಎರಡು ಖರ್ಚು, ಲೋಭಿ-ಮುಂಡೇದ್ಕೆ ಮೂರು ಖರ್ಚು
*ಆಲಸ್ಯಂ ಅಮೃತಂ ವಿಷಂ
*ಆವು ಕಪ್ಪಾದ್ರೆ ಹಾಲು ಕಪ್ಪೇನು
*ಆಷಾಡದ ಗಾಳಿ ಬೀಸಿ ಬೀಸಿ ಬಡಿವಾಗ, ಹೇಸಿ ನನ್ನ ಜೀವ ಹೆಂಗಸಾಗಬಾರದೇ
*ಆಸೆ ಮಾತು ಕೊಟ್ಟು ಬಾಸೆ ತಪ್ಪಬಾರ‍್ದು
*ಆಸೆ ಹೆಚ್ಚಿತು ಆಯಸ್ಸು ಕಮ್ಮಿ ಆಯಿತು
*ಆಸೆಗೆ ಕೊನೆಯಿಲ್ಲ
*ಆಳ್ ಮೇಲ್ ಆಳ್ ಬಿದ್ದು ಗೋಣು ಬರಿದಾಯ್ತು
*ಆಳಿದ ದೊರೆ ಹುಸಿದರೆ ಅಲ್ಲಿಂದ ಹೇಳದೆ ಹೋಗಬೇಕು
*ಆಳು ಮೇಲೆ ಆಳು ಬಿದ್ದು ದೋಣು ಬರಿದಾಯ್ತು
*ಆಡೋಕಾಗಲ್ಲ,ಅನುಭವಿಸಕ್ಕಾಗಲ್ಲ
*ಆಡಿಕೊಳ್ಳೋರ ಮುಂದೆ ಎಡವಿ ಬಿದ್ದ ಹಾಗೆ
*ಆಡು ಮುಟ್ಟದ ಸೊಪ್ಪಿಲ್ಲ
*ಆಳಾಗಬಲ್ಲವನು ಅರಸಾಗಬಲ್ಲ
*ಆಟಕ್ಕುಂಟು,ಲೆಕ್ಕಕ್ಕಿಲ್ಲ
*ಆದ ಕೆಲಸಕ್ಕೆ ಅತ್ತೆಗಳು ಬಂದಂತೆ
*ಆಗೊದೆಲ್ಲ ವೊಳ್ಳೆದಕ್ಕೆ
*ಆಕಾಶ ನೋಡೊದಕ್ಕೆ ನೂಕುನುಗ್ಗಲೆ ?
*ಆಕಾಶಕ್ಕೆ ಏಣಿ ಹಾಕಿದ ಹಾಗೆ
*ಆಕಳು ದಾನಕ್ಕೆ ಕೊಟ್ರೆ, ಹಲ್ಲು ಹಿಡಿದು ನೊಡಿದ್ರಂತೆ.
*ಆಕೆಗೆ ಬುದ್ಧಿ ಹೇಳಕ್ಕೆ ಆತನ್ನ ಕರೆಸಿದರೆ,ಆತ ಆಕೇನ ಬಿಟ್ಟು ಆರು ವರ್ಷ ಆಗಿತ್ತಂತೆ.
*ಆನೆ ದಾನ ಮಾಡಿದವನು ಸರಪಣಿಗೆ ಜಗಳಾಡುವನೆ ?
*ಆಪತ್ತಿಗಾದವನೇ ನೆಂಟ
*ಆರಕ್ಕೇರಲ್ಲ, ಮೂರಕ್ಕಿಳಿಯಲ್ಲ
*ಆರಕ್ಕೆ ಹೆಚ್ಚಿಲ್ಲ; ಮೂರಕ್ಕೆ ಕಡಿಮೆಯಿಲ್ಲ
*ಆರು ದೋಸೆ ಕೊಟ್ರೆ ಅತ್ತೆ ಕಡೇ,ಮೂರು ದೋಸೆ ಕೊಟ್ರೆ ಮಾವನ ಕಡೆ
*ಆರು ದೋಸೆ ಕೊಟ್ರೆ ಅತ್ತೆ ಕಡೆ, ಮೂರು ದೋಸೆ ಕೊಟ್ರೆ ಸೊಸೆ ಕಡೆ
*ಆಸೆಯೇ ದು:ಖಕ್ಕೆ ಮೂಲ
*ಆತುರಗಾರನಿಗೆ ಬುದ್ಧಿ ಮಟ್ಟ
*ಆತುರಕ್ಕೆ ಅಜ್ಜಿ ಮೈನೆರೆದಳು
*ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ
*ಅಡಿ ಅನ್ನಕ್ಕೆ ಅವಳೇ ಇಲ್ಲೆ ; ಪಿಳ್ಳೆ ಪೇರು ರಾಮಕೃಷ್ನ !
*ಅಡಿಕೆ ಕದ್ದ ಮಾನ ಆನೆ ಕೊಟ್ರೂ ಬರೊಲ್ಲ
*ಅಡುಗೆ ಮಾಡಿದವಳಿಗಿಂತ ಬಡಿಸಿದವಳೇ ಮೇಲು
*ಅಳೋ ... ಮೇಲೆ ಗಳು ಬಿತ್ತು
*ಅಳಿದೂರಿಗೆ ಉಳಿದವನೇ ಗೌಡ
*ಅಳಿಲ ಸೇವೆ, ಮಳಲ ಭಕ್ತಿ
*ಅಳಿಯ ಅಲ್ಲ,ಮಗಳ ಗಂಡ
*ಅಳಿಯ ಮನೆ ತೊಳಿಯ
*ಅಳಿಯನ ಕುರುಡು ಬೆಳಗಾದರೆ ಗೊತ್ತಾಗತ್ತೆ
*ಅಂಬಲಿ ಕುಡಿಯುವವನಿಗೆ, ಮೀಸೆ ಹಿಡಿಯುವವನೊಬ್ಬ
*ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?
*ಅಂಗೈ ತೋರಿಸಿ ಅವಲಕ್ಷಣ ಅಂತ ಅನ್ನಿಸಿಕೊಂಡರಂತೆ
*ಅಂಕೆ ಇಲ್ಲದ ಕಪಿ ಲಂಕೆ ಸುಟ್ಟಿತು
*ಅಂಕೆಯಲ್ಲಿದ್ದ ಹೆಣ್ಣು, ಮಜ್ಜಿಗೆಯಲ್ಲಿದ್ದ ಬೆಣ್ಣೆ ಕೆಡೊಲ್ಲ
*ಅಂತೂ ಇಂತೂ ಕುಂತಿ ಮಕ್ಕಳಿಗೆ ರಾಜ್ಯವಿಲ್ಲ
*ಅಟ್ಟ ಮೇಲೆ ಒಲೆ ಉರಿಯಿತು, ಕೆಟ್ಟ ಮೇಲೆ ಬುದ್ಧಿ ಬಂತು
*ಅಟ್ಟದ ಮೇಲಿಂದ ಬಿದ್ದವನಿಗೆ ದಡಿಗೆ ತಗೊಂಡು ಹೇರಿದರಂತೆ
*ಅಟ್ಟದಿಂದ ಬಿದ್ದವನನ್ನು ದಡಿಗೆ ತೆಗೆದುಕೊಂಡು ಚಚ್ಚಿದರು.
*ಅದ್ನೇ ಉಂಡೇನ್ ಅತ್ತೆಮ್ನೋರೇ,ಕದ ತೆಗೀರಿ ಮಾವ್ನೋರೇ ಅಂದ್ರಂತೆ
*ಅಗ್ಗದ ಆಸೆಗೆ ಗೊಬ್ಬರ ತಗೊಂಡರು
*ಅಗ್ಗದ ಮಾಲು;ಮುಗ್ಗಿದ ಜೋಳ
*ಅಹಂಕಾರಕ್ಕೆ ಉದಾಸೀನವೇ ಮಟ್ಟು.
*ಐದು ಬೆರಳೂ ಒಂದೇ ಸಮ ಇರೋಲ್ಲ
*ಐದು ಕುರುಡರು ಆನೆಯನ್ನು ಬಣ್ಣಿಸಿದ ಹಾಗೆ
*ಅಜ್ಜಿ ನೂತದ್ದೆಲ್ಲಾ ಅಜ್ಜನ ಉಡಿದಾರಕ್ಕೆ.
*ಅಜ್ಜಿಗೆ ಅರಿವೆ ಚಿಂತೆ ಮೊಮ್ಮಗಳಿಗೆ ಮಿಂ..ನ ಚಿಂತೆ
*ಅಕ್ಕ ಸತ್ತರೆ ಅಮಾವಾಸ್ಯೆ ನಿಲ್ಲುತ್ತದೆಯೆ ?
*ಅಕ್ಕಸಾಲಿ ಅಕ್ಕನ ಚಿನ್ನಾನೂ ಬಿಡ
*ಅಕ್ಕಿ ಮೇಲೆ ಆಸೆ, ನೆಂಟರ ಮೆಲೆ ಪ್ರೀತಿ
*ಅಲ್ಲುಂಟೆ, ಇಲ್ಲುಂಟೆ, ಕಲ್ಲಲ್ಲುಂಟೆ, ಶಿವದಾನ.
*ಅಲ್ಪ ವಿದ್ಯಾ ಮಹಾಗರ್ವಿ
*ಅಲ್ಪನಿಗೆ ಐಶ್ವರ್ಯ ಬಂದ್ರೆ ಅರ್ಧ ರಾತ್ರೀಲಿ ಕೊಡೆ ಹಿಡಿದನಂತೆ
*ಅಲ್ಪರ ಸಂಗ ಅಭಿಮಾನ ಭಂಗ
*ಅಮ್ಮನವರು ಪಟ್ಟಕ್ಕೆ ಬಂದಾಗ,ಅಯ್ಯನವರು ಚಟ್ಟಕ್ಕೇರಿದರು
*ಅನ್ನ ಹಾಕಿದ ಮನೆಗೆ ಕನ್ನ ಹಕಬೇಡ
*ಅನುಕೂಲ ಸಿಂಧು; ಅಭಾವ ವೈರಾಗ್ಯ
*ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಂಡಂತೆ
*ಅಪ್ಪನ್ನೇ ಅಪ್ಪ ಅನ್ನದೋನು,ಚಿಕ್ಕಪ್ಪನ್ನ ಅಪ್ಪಾ ಅಂತ ಕರೀತಾನಾ?
*ಅರವತ್ತಕ್ಕೆ ಅರಳು ಮರಳು
*ಅರ್ಧ ಆದ ಕೆಲಸವನ್ನು ಅರಸನಿಗೂ ತೋರಿಸಬೇಡ
*ಅತಿ ಆಸೆ ಗತಿ ಕೇಡು
*ಅತಿ ಸ್ನೇಹ ಗತಿ ಕೆಡಿಸಿತು
*ಅತಿಯಾದರೆ ಅಮೃತವೂ ವಿಷ
*ಅತ್ತೂ ಕರೆದೂ ಔತಣ ಹೇಳಿಸಿಕೊಂಡರು
*ಅತ್ತೂ ಕರೆದೂ ಔತಣ ಮಾಡಿಸಿಕೊಂಡಂತೆ
*ಅತ್ತ ದರಿ; ಇತ್ತ ಪುಲಿ
*ಅತ್ತೆ ಆಸ್ತೀನ ಅಳಿಯ ದಾನ ಮಾಡಿದ
*ಅತ್ತೆ ಮೇಲಿನ ಕೋಪ ಕೊತ್ತಿ ಮೇಲೆ
*ಅತ್ತೆ ಒಡೆದ ಪಾತ್ರೆಗೆ ಬೆಲೆಯಿಲ್ಲ
*ಅತ್ತೆಗೊಂದು ಕಾಲ; ಸೊಸೆಗೊಂದು ಕಾಲ
*ಅತ್ತು ಹೆದರಿಸೋನೊಬ್ಬ ;ಹೇ.. ಹೆದರಿಸೋನೊಬ್ಬ
*ಅಯ್ಯಾ ಎಂದರೆ ಸ್ವರ್ಗ; ಎಲವೋ ಎಂದರೆ ನರಕ
*ಅಯ್ಯೋ ಪಾಪ ಅಂದ್ರೆ ಅರ್ಧ ಆಯುಸ್ಸು
*ಆನೆಗೆ ಚಡ್ಡಿ ಹೊಲಿಸಿದ ಹಾಗೆ
*ಆಡೋದು ಮಡಿ ಉಂಬೋದು ಮೈಲಿಗೆ
*ಆಡಿ ತಪ್ಪ ಬೇಡ ಓಡಿ ಸಿಕ್ಕ ಬೇಡ
*ಆಡುತ್ತಾ ಆಡುತ್ತಾ ಭಾಷೆ, ಹಾಡುತ್ತಾ ಹಾಡುತ್ತಾ ರಾಗ
*ಆಳು ಮೇಲೆ ಆಳು ಬಿದ್ದು ದೋಣು ಬರಿದಾಯ್ತು
*ಆಷಾಡದ ಗಾಳಿ ಬೀಸಿ ಬೀಸಿ ಬಡಿವಾಗ, ಹೇಸಿ ನನ್ನ ಜೀವ ಹೆಂಗಸಾಗಬಾರದೇ
*ಆಚಾರ್ಯರಿಗೆ ಮಂತ್ರಕ್ಕಿಂತ ಉಗುಳು ಜಾಸ್ತಿ
*ಆದ್ರೆ ಒಂದು ಅಡಿಕೆ ಮರ, ಹೋದ್ರೆ ಒಂದು ಗೋಟಡಿಕೆ
*ಆಗೋ ಪೂಜೆ ಆಗುತ್ತಿರಲಿ ಊದೋ ಶಂಖ ಊದಿ ಬಿಡುವ
*ಆಗರಕ್ಕೆ ಹೋಗಿ ನನ್ನ ಗಂಡ ಗೂಬೆ ತಂದ
*ಆಲಸಿ-ಮುಂಡೇದ್ಕೆ ಎರಡು ಖರ್ಚು, ಲೋಭಿ-ಮುಂಡೇದ್ಕೆ ಮೂರು ಖರ್ಚು
*ಆಲಸ್ಯಂ ಅಮೃತಂ ವಿಷಂ
*ಆನೆ ಮೆಟ್ಟಿದ್ದೇ ಸಂದು, ಸೆಟ್ಟಿ ಕಟ್ಟಿದ್ದೇ ಪಟ್ಟಣ
*ಆನೆಯಂಥದೂ ಮುಗ್ಗರಿಸ್ತದೆ
*ಆಪತ್ತಿಗೆ ಹರಕೆ, ಸಂಪತ್ತಿಗೆ ಮರವು
*ಆರು ಯತ್ನ ತನ್ನದು, ಏಳನೇದು ದೇವರಿಚ್ಛೆ
*ಆಸೆ ಹೆಚ್ಚಿತು ಆಯಸ್ಸು ಕಮ್ಮಿ ಆಯಿತು
*ಆಸೆಗೆ ಕೊನೆಯಿಲ್ಲ
*ಆವು ಕಪ್ಪಾದ್ರೆ ಹಾಲು ಕಪ್ಪೇನು
*ಅಡವಿಯ ದೊಣ್ಣೆ ಪರದೇಸಿಯ ತಲೆ
*ಅಡಿಗೆ ಬಿದ್ಫರೂ ಮೀಸೆ ಮೇಲೆ
*ಅಳಿವುದೇ ಕಾಯ ಉಳಿವುದೇ ಕೀರ್ತಿ
*ಅಂದು ಬಾ ಅಂದ್ರೆ ಮಿಂದು ಬಂದ
*ಅಂಗೈ ಹುಣ್ಣಿಗೆ ಕನ್ನಡಿ ಯಾಕೆ
*ಅಂಕೆ ಇಲ್ಲದ ಚತುರೆ, ಲಗಾಮು ಇಲ್ಲದ ಕುದುರೆ
*ಅಟ್ಟಿಕ್ಕಿದೋಳಿಗಿನ್ನ ಬೊಟ್ಟಿಕ್ಕಿದೋಳು ಹೆಚ್ಚು
*ಅಬದ್ಧಕ್ಕೆ ಅಪ್ಪಣೆಯೇ ಅಂದ್ರೆ ಬಾಯಿಗೆ ಬಂದಷ್ಟು
*ಅಗಸನ ಬಡಿವಾರವೆಲ್ಲ ಹೆರರ ಬಟ್ಟೆ ಮೇಲೆ
*ಅಗಸರ ಕತ್ತೆ ಕೊಂಡು ಹೋಗಿ, ಡೊಂಬರಿಗೆ ತ್ಯಾಗ ಹಾಕಿದ ಹಾಗೆ
*ಅಜ್ಜ! ಮದುವೆ ಅಂದ್ರೆ ನನಗೋ ಅಂದ
*ಅಜ್ಜಿ ಸಾಕಿದ ಮಗ ಬೊಜ್ಜಕ್ಕೂ ಬಾರದು
*ಅಜ್ಜಿಗೆ ಅರಿವೆಯ ಚಿಂತೆ, ಮಗಳಿಗೆ ಗಂಡನ ಚಿಂತೆ, ಮೊಮ್ಮಗಳಿಗೆ ಕಜ್ಜಾಯದ ಚಿಂತೆ
*ಅಕ್ಕ ಬರಬೇಕು ಅಕ್ಕಿ ಮುಗೀಬಾರದು
*ಅಕ್ಕ ನನ್ನವಳಾದ್ರೆ ಬಾವ ನನ್ನವನೇನು
*ಅಕ್ಕ ಸತ್ತರೆ ಅಮಾಸೆ ನಿಲ್ಲದು, ಅಣ್ಣ ಸತ್ತರೆ ಹುಣ್ಣಿಮೆ ನಿಲ್ಲದು
*ಅಕ್ಕನ ಹಗೆ ಬಾವನ ನೆಂಟು
*ಅಕ್ಕರೆಯ ಅಕ್ಕ ಬಂದಾಗೇ ಸಕ್ಕರೆಯೆಲ್ಲ ಕಹಿ ಆಯ್ತು
*ಅಕ್ಕಿ ಸರಿಯಾಗ ಬಾರದು ಅಕ್ಕನ ಮಕ್ಕಳು ಬಡವಾಗ ಬಾರದು
*ಅಕ್ಕಿಯ ಮೇಗಳ ಆಸೆ, ನೆಂಟರ ಮೇಗಳ ಬಯಕೆ
*ಅಲ್ಪರ ಸಂಗ ಅಭಿಮಾನ ಭಂಗ
*ಅಮ್ಮನ ಮನಸ್ಸು ಬೆಲ್ಲದ ಹಾಗೆ, ಮಗಳ ಮನಸ್ಸು ಕಲ್ಲಿನ ಹಾಗೆ
*ಅನ್ನ ಇಕ್ಕಿ ಸಾಕು ಅನ್ನಿಸ ಬಹುದು, ದುಡ್ಡು ಕೊಟ್ಟು ಸಾಕು ಅನ್ನಿಸೋಕಾಗಲ್ಲ
*ಅನ್ಯಾಯದಿಂದ ಗಳಿಸಿದ್ದು ಅಸಡ್ಡಾಳಾಗಿ ಹೋಯ್ತು
*ಅಪ್ಪಂತೋನಿಗೆ ಇಪ್ಪತ್ತೊಂದು ಕಾಯಿಲೆ
*ಅಪ್ಪಂತೋನಿಗೆ ಇಪ್ಪತ್ತೊಂದು ಕಾಯಿಲೆ
*ಅಪ್ಪನ ಮನೇಲಿ ಸೈ ಅನ್ನಿಸಿಕೊಂಡೋಳು, ಅತ್ತೆ ಮನೇಲೂ ಸೈ ಅನ್ನಿಸಿಕೊಣ್ತಾಳೆ
*ಅರಗಿನಂತೆ ತಾಯಿ, ಮರದಂತೆ ಮಕ್ಕಳು
*ಅರಮನೆಯ ಮುಂದಿರಬೇಡ, ಕುದರೆಯ ಹಿಂದಿರಬೇಡ
*ಅರಸನ ಕುದರೆ ಲಾಯದಲ್ಲೆ ಮುಪ್ಪಾಯಿತು
*ಅರಸು ಆದೀಕ (=ಆದಾಯ) ತಿಂದ, ಪರದಾನಿ ಹೂಸು ಕುಡಿದ
*ಅರೆಪಾವಿನವರ ಅಬ್ಬರ ಬಹಳ
*ಅರ್ತಿಗೆ ಬಳೆ ತೊಟ್ಟು ಕೈ ಕೊಡವಿದರೆ ಹೋದೀತೆ
*ಅತಿ ಆಸೆ ಗತಿಗೇಡು
*ಅತಿ ಸ್ನೇಹ ಗತಿ ಕೇಡು
*ಅತ್ತೆ ಒಡೆದ ಪಾತ್ರೆಗೆ ಬೆಲೆ ಇಲ್ಲ
*ಅತ್ಯಾಶ ಬಹುದುಃಖಾಯ ಅತಿ ಸರ್ವತ್ರ ವರ್ಜಯೇತ್
*ಅವರವರ ತಲೆಗೆ ಅವರವರದೇ ಕೈ
*ಅಯ್ಯೋ ಅಂದವರಿಗೆ ಆರು ತಿಂಗಳು ಆಯಸ್ಸು ಕಮ್ಮಿ
*(ಅವರು) ಚಾಪೆ ಕೆಳಗೆ ತೂರಿದರೆ (ನೀನು) ರಂಗೋಲಿ ಕೆಳಗೆ ತೂರು.
*ಅಳೀಮಯ್ಯ ನಾಚ್ಕಂಡ್ ನಾಚ್ಕಂಡು ನಾಲ್ಕು ಮುದ್ದೆ ತಿಂದ್ನಂತೆ, ಸೇರಲ್ಲ ಸೇರಲ್ಲ ಅಂತ ಸೇರಕ್ಕಿ ತಿಂದ್ನಂತೆ.
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
 
==ಇ==
*ಇಂಬರಿತು ಕೊಡುವಳೆ ರಂಭೆ
*ಇಕ್ಕಟ್ಟಾದರೂ ತನ್ನ ಗುಡಿಲೇ ಚಂದ
*ಇಕ್ಕಲಾರದ ಕೈ ಎಂಜಲು
*ಇಕ್ಕುವಳು ನಮ್ಮವಳಾದ್ರೆ ಕೊಟ್ಟಿಗೆಯಲ್ಲಾದರೂ ಉಣಲಕ್ಕು
*ಇಕ್ಕೇರಿ ತನಕ ಬಳಗ, ಮಾನ ಮುಚ್ಚಲಿಕ್ಕೆ ಅರಿವೆ ಇಲ್ಲ
*ಇಚ್ಚೆಯ ಅರಿತು ಕೊಟ್ಟ ನುಚ್ಚೊಂದು ಮಾಣಿಕ್ಯ
*ಇಟ್ಟ ವಿಭೂತಿ ಪಟ್ಟದಂತೆ ಇಟ್ಟ ವಿಭೂತಿ ಅಳಿದರೆ ಚಟ್ಟ ಹತ್ತಿದಂತೆ
*ಇಟ್ಟ ಶಾಪ ಕೊಟ್ಟವನಿಗೆ ತಟ್ಟೀತು
*ಇಟ್ಟುಕೊಂಡಾಕಿ ಇರೂತನ ಕಟ್ಟಿಕೊಂಡಾಕಿ ಕಡೀತನ
*ಇಡೀ ಮುಳುಗಿದರೂ ಮೂಗು ಮೇಲೆ
*ಇತ್ತಿತ್ತ ಬಾ ಅಂದ್ರೆ ಇದ್ದ ಮನೇನೂ ಕಿತ್ತುಕೊಂಡ
*ಇದ್ದ ಊರ ಸುದ್ದಿ ಇದ್ದಲ್ಲಿ ತೆಗೆಯ ಬಾರದು, ಬೇವೂರ ಸುದ್ದಿ ಹೋದಲ್ಲಿ ತೆಗೆಯ ಬಾರದು
*ಇದ್ದ ಕಾಲದಲ್ಲಿ ಅಟ್ಟುಣ್ಣ ಬೇಕು
*ಇದ್ದ ಮಕ್ಕಳೇ ಎಣ್ಣೆ ಬೆಣ್ಣೆ ಕಾಣದಿರುವಾಗ ಮತ್ತೊಂದು ಕೊಡೋ ದೇವರೇ ಅಂದಂತೆ
*ಇದ್ದದ್ದು ಹೇಳಿದರೆ ಹದ್ದಿನಂತ ಮೋರೆ ಆಯಿತು
*ಇದ್ದದ್ದು ಹೋಯಿತು ಮದ್ದಿನ ಗುಣದಿಂದ
*ಇದ್ದಲ್ಲಿ ಗವುಡ ಹೋದಲ್ಲಿ ಕಿವುಡ
*ಇದ್ದವರು ಇದ್ದಹಾಗೆ ಸಿದ್ಧಾ ದೇವಿಗೆ ಸಿಡಿಲು ಬಡೀತು
*ಇದ್ದುದ ಉಣ್ಣದವನ ಬಾಯಾಗೆ ಕಡೆಗೆ ಮಣ್ಣು ಬಿತ್ತು
*ಇದ್ದೂ ಉಣ್ಣದವನ ಬಾಯಲ್ಲಿ ಕಡೆಗೆ ಮಣ್ಣು ಬಿತ್ತು
*ಇಬ್ಬರ ನ್ಯಾಯ, ಮೂರನೇಯವನಿಗೆ ಆದಾಯ
*ಇಮ್ಮನದಿಂದ ಸುಮ್ಮನೆ ಕೆಟ್ಟೆ (ಕೇಡು)
*ಇಲಿ ಹೆಚ್ಚಿದವೆಂದು, ಮನೆಗೆ ಉರಿ ಇಡ ಬಾರದು
*ಇಲಿಯ ವ್ಯಾಜ್ಯಕ್ಕೆ ಬೆಕ್ಕು ಸಾಕ್ಷಿ
*ಇಲಿಯಾಗಿ ನೂರುದಿನ ಬಾಳೋದಕ್ಕಿಂತ ಹುಲಿಯಾಗಿ ಮೂರು ದಿನ ಬಾಳೋದು ಲೇಸು
*ಇಲ್ಲದ ಕಾಲಕ್ಕೆ ಕಲ್ಲೆದೆ ಬೇಕು
*ಇಲ್ಲದ ಬದುಕು ಮಾಡಿ ಇಲಿಗೆ ಚಣ್ಣ ಹೊಲಿಸಿದರು
*ಇಲ್ಲು ಪೋಗಂಡ ಅಲ್ಲು ಪೋಗಂಡ
*ಈರಣ್ಣನ ಮುಂದೆ ಬಸ್ಸಣ್ಣ ಕುಂತಂತೆ
*ಇಡಿಯ ಮುಳುಗಿದವನಿಗೆ ಚಳಿಯೇನು?ಮಳೆಯೇನು?
*ಇಷ್ಟನ್ನು ಕಂಡೆಯಾ ಕೃಷ್ಣಂಭಟ್ಟಾ ಅಂದರೆ,ಮುಪ್ಪಿನ ಕಾಲಕ್ಕೆ ಮೂರು ಜನ ಹೆಂಡಿರು
*ಇಬ್ಬರ ಜಗಳ ಮೂರನೆಯವನಿಗೆ ಲಾಭ
*ಇದ್ದೋರು ಮೂರು ಜನರಲ್ಲಿ ಕದ್ದೋರು ಯಾರು ?
*ಇದ್ದದ್ದನ್ನು ಇದ್ದಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದರಂತೆ
*ಇದ್ದದ್ದು ಇದ್ದ ಹಾಗೆ ಹೇಳಿದ್ರೆ, ಎದ್ದು ಬಂದು ಎದೆಗೆ ಒದ್ದನಂತೆ
*ಇಲಿ ಬಂತು ಎಂದರೆ ಹುಲಿ ಬಂತು ಎಂದರು
*ಇರಲಾರದೆ ಇರುವೆ ಬಿಟ್ಟುಕೊಂಡು ಕಿರುಗೂರಿಗೆ ಹೋದರಂತೆ ಕಣಿ ಕೇಳುವುದಕ್ಕೆ
*ಇರುಳು ಕಂಡ ಭಾವೀಲಿ ಹಗಲು ಬಿದ್ದರು
*ಇರುವೆಗೆ ಇರುವೆ ಮೈ ಭಾರ,ಆನೆಗೆ ಆನೆ ಮೈ ಭಾರ
*ಇತ್ತತ್ತ ಬಾ ಅಂದ್ರೆ ಇದ್ದ ಮನೆ ಕಿತ್ಕೊಂಡರು
*ಇಡೀ ಮುಳುಗಿದರೂ ಮೂಗು ಮೇಲೆ
*ಇಟ್ಟುಕೊಂಡಾಕಿ ಇರೂತನ ಕಟ್ಟಿಕೊಂಡಾಕಿ ಕಡೀತನ
*ಇಬ್ಬರ ನ್ಯಾಯ, ಮೂರನೇಯವನಿಗೆ ಆದಾಯ
*ಇದ್ದ ಊರ ಸುದ್ದಿ ಇದ್ದಲ್ಲಿ ತೆಗೆಯ ಬಾರದು, ಬೇವೂರ ಸುದ್ದಿ ಹೋದಲ್ಲಿ ತೆಗೆಯ ಬಾರದು
*ಇದ್ದದ್ದು ಹೇಳಿದರೆ ಹದ್ದಿನಂತ ಮೋರೆ ಆಯಿತು
*ಇದ್ದದ್ದು ಹೋಯಿತು ಮದ್ದಿನ ಗುಣದಿಂದ
*ಇದ್ದಲ್ಲಿ ಗವುಡ ಹೋದಲ್ಲಿ ಕಿವುಡ
*ಇದ್ದವರು ಇದ್ದಹಾಗೆ ಸಿದ್ಧಾ ದೇವಿಗೆ ಸಿಡಿಲು ಬಡೀತು
*ಇಕ್ಕೇರಿ ತನಕ ಬಳಗ, ಮಾನ ಮುಚ್ಚಲಿಕ್ಕೆ ಅರಿವೆ ಇಲ್ಲ
*ಇಕ್ಕಲಾರದ ಕೈ ಎಂಜಲು
*ಇಕ್ಕುವಳು ನಮ್ಮವಳಾದ್ರೆ ಕೊಟ್ಟಿಗೆಯಲ್ಲಾದರೂ ಉಣಲಕ್ಕು
*ಇಲಿ ಹೆಚ್ಚಿದವೆಂದು, ಮನೆಗೆ ಉರಿ ಇಡ ಬಾರದು
*ಇಲಿಯಾಗಿ ನೂರುದಿನ ಬಾಳೋದಕ್ಕಿಂತ ಹುಲಿಯಾಗಿ ಮೂರು ದಿನ ಬಾಳೋದು ಲೇಸು
*ಇಲಿಯ ವ್ಯಾಜ್ಯಕ್ಕೆ ಬೆಕ್ಕು ಸಾಕ್ಷಿ
*ಇಲ್ಲದ ಬದುಕು ಮಾಡಿ ಇಲಿಗೆ ಚಣ್ಣ ಹೊಲಿಸಿದರು
*ಇತ್ತಿತ್ತ ಬಾ ಅಂದ್ರೆ ಇದ್ದ ಮನೇನೂ ಕಿತ್ತುಕೊಂಡ
*ಈಚಲ ಮರದ ಕೆಲಗೆ ಕುಳಿತು ಮಜ್ಜಿಗೆ ಕುಡಿದ ಹಾಗೆ
*ಈಸಿ ನೋಡು , ಇದ್ದು ಜೈಸಿ ನೋಡು
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
 
==ಉ==
*ಉಂಡ ಮನೆ ಜಂತೆ ಎಣಿಸಬಾರದು
*ಉಂಡದ್ದು ಊಟ ಆಗಲಿಲ್ಲ, ಕೊಂಡದ್ದು ಕೂಟ ಆಗಲಿಲ್ಲ
*ಉಂಬಾಗ ಉಡುವಾಗ ಊರೆಲ್ಲ ನೆಂಟರು
*ಉಂಬುವ ಜಂಗಮ ಬಂದರೆ ನಡೆಯೆಂಬರು, ಉಣ್ಣದ ಲಿಂಗಕ್ಕೆ ಬೋನ ಹಿಡಿಯೆಂಬರು
*ಉಂಬೋಕೆ ಉಡೋಕೆ ಅಣ್ಣಪ್ಪ ಕೆಲಸಕ್ಕಷ್ಟೇ ಇಲ್ಲಪ್ಪ
*ಉಗಿದರೆ ತುಪ್ಪ ಕೆಡುತ್ತದೆ, ನುಂಗಿದರೆ ಗಂಟಲು ಕೆಡುತ್ತದೆ
*ಉಟ್ಟು ಉಡಲಾರ ಕೊಟ್ಟು ಸೈರಿಸಲಾರ
*ಉಡೋಕೆ ಇಲ್ಲದವ ಮೈಲಿಗೆಗೆ ಹೇಸ, ಉಂಬೋಕೆ ಇಲ್ಲದವ ಎಂಜಲಿಗೆ ಹೇಸ
*ಉಣವಲ್ಲ ಉಡವಲ್ಲದವನ ಒಡವೆ ಕಂಡವರ ಪಾಲಾಯ್ತು
*ಉತ್ತಮ ಹೊಲ ಮಧ್ಯಮ ವ್ಯಾಪಾರ ಕನಿಷ್ಠ ಚಾಕರಿ
*ಉತ್ತಮನು ಎತ್ತ ಹೋದರೂ ಶುಭವೇ
*ಉತ್ತುಬಿತ್ತಿದ ಭತ್ತವಾದರೂ ಮಳೆಯಿಲ್ಲದೆ ಮೊಳೆಯದು
*ಉದ್ಯೋಗವೇ ಗಂಡಸಿಗೆ ಲಕ್ಷಣ
*ಉಪಕಾರಕ್ಕೋಗಿ ಉಪದ್ರ ಬಂತು
*ಉಪಾಸ ಇದ್ರೂ ಉಪದ್ರ ಇರಬಾರ‍್ದು
*ಉಪ್ಪಿಕ್ಕಿದವರನ್ನು ಮುಪ್ಪಿನ ತನಕ ನೆನೆ
*ಉಪ್ಪು ತಿಂದ ಮ್ಯಾಲೆ ನೀರ ಕುಡಿಯಲೇಬೇಕು
*ಉರಗಕ್ಕೆ ಹಾಲೆರೆದರೆ ಅದು ತನ್ನ ಗರಳ್ವ ಬಿಡಬಲ್ಲುದೇ
*ಉರವಣಿಸಿ ಬರೋ ದುಃಖಕ್ಕೆ ಪರಿಣಾಮ ವೈರಿ
*ಉರಿಯೋ ಬೆಂಕೀಲಿ ಎಣ್ಣೆ ಹೊಯಿದ ಹಾಗೆ
*ಊಡದ ಆವಿಗೆ ಉಣ್ಣದ ಕರುವ ಬಿಟ್ಟಂತೆ
*ಊರಿಗಾಗದ ಗೌಡ, ಮೇಲೆರಗುವ ಗಿಡುಗ
*ಊರಿಗೆ ದಾರೀಯ ಯಾರು ತೋರಿದರೇನು
*ಊರು ದೂರಾಯಿತು ಕಾಡು ಹತ್ತರಾಯಿತು
*ಊರು ಬಾವಿಗೆ ಬಿದ್ದರೂ, ಊರ ಬಾಯಿಗೆ ಬೀಳಬಾರದು
*ಊರೆಲ್ಲ ಸೂರೆ ಆದ ಮೇಲೆ ಬಾಗಿಲ ಮುಚ್ಚಿದರು
*ಊಟ ಬಲ್ಲವನಿಗೆ ರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲ
*ಊಟ ತನ್ನಿಚ್ಚೆ,ನೋಟ ಪರರಿಚ್ಚೆ
*ಊಟಕ್ಕಿಲ್ಲದ ಉಪ್ಪಿನಕಾಯಿ ..ಕ್ಕೆ ಸಮಾನ
*ಊರ ದನ ಕಾದು ದೊಡ್ಡ ಬೋರೇಗೌಡ ಅನ್ನಿಸಿಕೊಂಡ
*ಊರಿಗೆ ಊರ ಚಿಂತೆಯಾದರೆ ಅಜ್ಜಿಗೆ ಅರಿವೆ ಚಿಂತೆಯತೆ
*ಊರಿಗೆ ಬಂದವಳು ನೀರಿಗೆ ಬಾರದೇ ಇರುವಳೇ?
*ಊರಿಗೆ ಉಪಕಾರಿ, ಮನೆಗೆ ಮಾರಿ
*ಊರಿಗೆಲ್ಲಾ ಒಬ್ಬಳೇ ಪದ್ಮಾವತಿ
*ಊರಿಗೊಂದು ದಾರಿಯಾದ್ರೆ,ಎಡವಟ್ಟಂಗೆ ಅವನದ್ದೇ ದಾರಿ
*ಊರು ಅಂದ ಮೇಲೆ ಹೊಲಗೇರಿ ಇಲ್ಲದೆ ಇರುತ್ತದೆಯೇ?
*ಊರು ಹೋಗು ಅನ್ನುತ್ತೆ; ಕಾಡು ಬಾ ಅನ್ನುತ್ತೆ
*ಊರು ಸೂರೆ ಹೋದ ಮೇಲೆ ಕೋಟೆ ಬಾಗಿಲು ಹಾಕಿದರಂತೆ
*ಊರು ಸುಟ್ಟರೂ ಹನುಮಂತರಾಯ ಹೊರಗೆ
*ಉಚ್ಚೆ ಕುಡಿದರೂ ತನ್ನಿಚ್ಚೇಲಿರಬೇಕು
*ಉಂಡೂ ಹೋದ; ಕೊಂಡೂ ಹೋದ
*ಉಂಡದ್ದೇ ಉಗಾದಿ ; ಮಿಂದದ್ದೇ ದೀವಳಿಗೆ
*ಉಣ್ಣೋಕಿಲ್ಲದಿದ್ದರೂ ಸಣ್ಣಕ್ಕಿ ಅನ್ನ ತಿಂದರು ; ಉಡೋಕಿಲ್ಲದಿದ್ದರೂ ಪಟ್ಟೆ ಸೀರೆ ಉಟ್ಟರು
*ಉಣ್ಣು ಬಾ ಅಂದ್ರೆ,ಇರಿ ಬಾ ಅಂದ್ರಂತೆ
*ಉಟ್ಟರೆ ತೊಟ್ಟರೆ ಪುಟ್ಟಕ್ಕ ಚೆನ್ನ
*ಉಚ್ಚೆ ಕುಡಿದರೂ ತನ್ನಿಚ್ಚೇಲಿರಬೇಕು
*ಉಗುರಿನಲ್ಲಿ ಹೋಗೋ ಚಿಗುರಿಗೆ ಕೊಡಲಿ ಏಕೆ ?
*ಉಪ್ಪ ತಿಂದ ಮೇಲೆ ನೀರು ಕುಡಿಯಲೇ ಬೆಕು
*ಉಪ್ಪು ತಿಂದ ಮನೆಗೆ ಎರಡು ಬಗೆಯ ಬಂದ
*ಉಪ್ಪು ತಿಂದವನು ನೀರು ಕುಡಿಯಲೇ ಬೇಕು
*ಉರಿಯೋ ಬೆಂಕಿಗೆ ತುಪ್ಪ ಸುರಿದ ಹಾಗೆ
*ಉರಿಯೋ ಗಾಯಕ್ಕೆ ಉಪ್ಪು ಸವರಿದಂತೆ
*ಉಸ್ ಎಂದರೆ ಉಸಳಿ ಬೇಡಿದ್ದನಂತೆ
*ಉತ್ತರನ ಪೌರುಷ ಒಲೆ ಮುಂದೆ;ನಿನ್ನ ಪೌರುಷ ನನ್ನ ಮುಂದೆ
*ಉಡೋಕೆ ಇಲ್ಲದವ ಮೈಲಿಗೆಗೆ ಹೇಸ, ಉಂಬೋಕೆ ಇಲ್ಲದವ ಎಂಜಲಿಗೆ ಹೇಸ
*ಉಂಡ ಮನೆ ಜಂತೆ ಎಣಿಸಬಾರದು
*ಉಂಡದ್ದು ಊಟ ಆಗಲಿಲ್ಲ, ಕೊಂಡದ್ದು ಕೂಟ ಆಗಲಿಲ್ಲ
*ಉಂಬಾಗ ಉಡುವಾಗ ಊರೆಲ್ಲ ನೆಂಟರು
*ಉಂಬೋಕೆ ಉಡೋಕೆ ಅಣ್ಣಪ್ಪ ಕೆಲಸಕ್ಕಷ್ಟೇ ಇಲ್ಲಪ್ಪ
*ಉದ್ಯೋಗವೇ ಗಂಡಸಿಗೆ ಲಕ್ಷಣ
*ಉಗಿದರೆ ತುಪ್ಪ ಕೆಡುತ್ತದೆ, ನುಂಗಿದರೆ ಗಂಟಲು ಕೆಡುತ್ತದೆ
*ಉಪ್ಪಿಕ್ಕಿದವರನ್ನು ಮುಪ್ಪಿನ ತನಕ ನೆನೆ
*ಉರಿಯೋ ಬೆಂಕೀಲಿ ಎಣ್ಣೆ ಹೊಯಿದ ಹಾಗೆ
*ಉತ್ತಮ ಹೊಲ ಮಧ್ಯಮ ವ್ಯಾಪಾರ ಕನಿಷ್ಠ ಚಾಕರಿ
*ಉತ್ತಮನು ಎತ್ತ ಹೋದರೂ ಶುಭವೇ
*ಊರೆಲ್ಲ ಸೂರೆ ಆದ ಮೇಲೆ ಬಾಗಿಲ ಮುಚ್ಚಿದರು
*ಊರಿಗಾಗದ ಗೌಡ, ಮೇಲೆರಗುವ ಗಿಡುಗ
*ಊರಿಗೆ ಬಂದ ನೀರೆ ನೀರಿಗೆ ಬಾರದಿರುತ್ತಾಳೆಯೇ?
*ಊರು ಬಾವಿಗೆ ಬಿದ್ದರೂ, ಊರ ಬಾಯಿಗೆ ಬೀಳಬಾರದು
*ಊರು ದೂರಾಯಿತು ಕಾಡು ಹತ್ತರಾಯಿತು
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
 
==ಎ==
*ಎಂಜಲ ತಿಂದರೂ ಅಂಜದೆ ತಿನ್ನು
*ಎಂಟು ವರ್ಷಕ್ಕೆ ನನ್ನ ಮಗ ದಂಟಾದ
*ಎಂಟು ಹೊನ್ನು ಘನವಾದ ನಂಟು ತಂತು
*ಎಂಥೆಂಥ ದೇವರಿಗೇ ಅಂತರಾಟ ಆಗಿರುವಾಗ ಕಾಲ್ಮುರುಕ ದೇವರಿಗೆ ಕೈಲಾಸವೇ
*ಎಟ್ಟ್ (ಹಟಮಾರಿ) ಗಂಡಗೆ ಖೊಟ್ಟಿ ಹೆಂಡತಿ
*ಎಡದ ನೆತ್ತಿಗೆ ಬಡಿದರೆ ಬಲದ ನೆತ್ತಿಗೆ ತಾಕಿತು
*ಎಡವಿದ ಕಾಲು ಎಡವುದು ಹೆಚ್ಚು
*ಎತ್ತ ಹೋದರೂ ಬಿಡದು ಒತ್ತಿ ಕಾಡುವ ವಿಧಿ
*ಎತ್ತು ಈಯಿತು ಅನ್ದರೆ ಕೊಟ್ಟಿಗೆಗೆ ಕಟ್ಟು ಎನ್ದರಂತೆ
*ಎತ್ತು ಮಾರಿದವಗೆ ಹಗ್ಗದ ಆಸೆಯೇ
*ಎದ್ದವನು ಗೆದ್ದಾನು
*ಎರಡು ದಾಸರ ನಂಬಿ ಕುರುಡು ದಾಸ ಕೆಟ್ಟ
*ಎರಡೂ ಕೈ ತಟ್ಟಿದರೆ ಸದ್ದು
*ಎರವಿನವರು ಎರವು ಕಸಗೊಂಡರೆ ಕೆರವಿನಂತಾಯಿತು ಮೋರೆ
*ಎಲ್ಲಮ್ಮನ ಗುಡ್ಡದಾಗ ಮುಲ್ಲಾಂದೇನು
*ಎಲ್ಲರ ಹಲ್ಲೊಳಗೆ ನುರಿದು ಹೋಗೋದಕ್ಕಿಂತ ಒಣಗಿದ ಹುಲ್ಲೊಳಗೆ ಉರಿದು ಹೋಗೋದು ವಾಸಿ
*ಎಲ್ಲರು ಆಸೆ ಬಿಟ್ಟರೆ ಇಲ್ಲಿಯೇ ಕೈಲಾಸ, ಎಲ್ಲವ ಬಯಸಿ ಭ್ರಮಿಸಿದರೆ ಇಲ್ಲಿಯೇ ನರಕ
*ಎಲ್ಲರೂ ಪಾಲಕೀಲಿ ಕೂತರೆ ಹೊರೋರು ಯಾರು
*ಎಲ್ಲವೂ ತಾನಗ ಬಲ್ಲರೆ ಅದುವೇ ಯೋಗ
*ಎಲ್ಲಾ ಬಣ್ಣ ಮಸಿ ನುಂಗಿತು
*ಎಲ್ಲಾ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ
*ಏನಾದರೇನು ತಾನು ತಾನಾಗದ ವರೆಗೆ
*ಏನೂ ಇಲ್ಲದವಗೆ ಭಯವಿಲ್ಲ
*ಏರಿ ಮ್ಯಾಗಿನ ಪಂಜು ನೀರೊಳಗೆ ಉರಿಯಿತು
*ಏರಿದವ ಇಳಿದಾನು
*ಏಳರಲ್ಲಿ ಬರಲೋ? ಎಪ್ಪತ್ತರಲ್ಲಿ ಬರಲೋ?
*ಎಂಜಲು ಕೈಯಲ್ಲಿ ಕಾಗೆ ಓಡಿಸದ ಬುದ್ಧಿ
*ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡರು
*ಎದ್ದೋಗೋ ಮಾತು ಬಿದ್ದೋಗಲಿ
*ಎದ್ದರೆ ಆಳಲ್ಲ
*ಎದೆ ಸೀಳಿದ್ರೆ ಮೂರಕ್ಷರಾನೂ ಇಲ್ಲ
*ಎಲೆ ಎತ್ತೋ ಜಾಣ ಅಂದರೆ ಉಂಡೋರೆಷ್ಟು ಮಂದಿ ಅಂದನಂತೆ
*ಎಲ್ಲಾ ಜಾಣ,ತುಸಾ ಕೋಣ.
*ಎಲ್ಲಾ ಜಾಣ; ತುಸ ಕೋಣ
*ಎಲ್ಲಾರ ಮನೇ ದೋಸೇನೂ ತೂತು
*ಎಲ್ಲರ ಮನೆ ದೋಸೇನೂ ತೂತೇ.
*ಎಲ್ಲರ ಮನೆಯ ದೋಸೆಯೂ ತೂತೆ !
*ಎರಡೂ ಕೈ ಸೇರಿದರೆ ಚಪ್ಪಾಳೆ
*ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು
*ಎತ್ತಿಗೆ ಜ್ವರ ಬಂದ್ರೆ, ಎಮ್ಮೆಗೆ ಬರೆ ಎಳೆದರಂತೆ
*ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು
*ಎತ್ತು ಈಯಿತು ಅಂದರೆ ಕೊಟ್ಟಿಗೆಗೆ ಕಟ್ಟು ಅಂದರಂತೆ
*ಎತ್ತು ಹೊರಬಲ್ಲ ಭಾರವನ್ನು ಕರು ಹೊರಬಲ್ಲುದೆ ?
*ಎಡದ ನೆತ್ತಿಗೆ ಬಡಿದರೆ ಬಲದ ನೆತ್ತಿಗೆ ತಾಕಿತು
*ಎಡವಿದ ಕಾಲು ಎಡವುದು ಹೆಚ್ಚು
*ಎಂಟು ವರ್ಷಕ್ಕೆ ನನ್ನ ಮಗ ದಂಟಾದ
*ಎಂಥೆಂಥ ದೇವರಿಗೇ ಅಂತರಾಟ ಆಗಿರುವಾಗ ಕಾಲ್ಮುರುಕ ದೇವರಿಗೆ ಕೈಲಾಸವೇ
*ಎಲ್ಲಾ ಬಣ್ಣ ಮಸಿ ನುಂಗಿತು
*ಎಲ್ಲರೂ ಪಾಲಕೀಲಿ ಕೂತರೆ ಹೊರೋರು ಯಾರು
*ಎಲ್ಲರ ಹಲ್ಲೊಳಗೆ ನುರಿದು ಹೋಗೋದಕ್ಕಿಂತ ಒಣಗಿದ ಹುಲ್ಲೊಳಗೆ ಉರಿದು ಹೋಗೋದು ವಾಸಿ
*ಎರಡೂ ಕೈ ತಟ್ಟಿದರೆ ಸದ್ದು
*ಎರಡು ದಾಸರ ನಂಬಿ ಕುರುಡು ದಾಸ ಕೆಟ್ಟ
*ಎತ್ತೂ ಕೋಣಕ್ಕೆ ಎರಡು ಕೋಡು, ನಮ್ಮ ಅಯ್ಯಂಗಾರ್ಗೆ ಮೂರು ಕೋಡು
*ಎತ್ತು ಈಯಿತು ಅನ್ದರೆ ಕೊಟ್ಟಿಗೆಗೆ ಕಟ್ಟು ಎನ್ದರಂತೆ
*ಏತಿ ಅಂದರೆ ಪ್ರೇತಿ
*ಏತಿ ಅಂದರೆ ಪ್ರೇತಿ ಅಂದಂತೆ
*ಏಳರಲ್ಲಿ ಬರಲೋ? ಎಪ್ಪತ್ತರಲ್ಲಿ ಬರಲೋ?
*ಏರಿದವ ಇಳಿದಾನು
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
 
==ಒ==
*ಒಂಡಂಬಡಿಕೆ ಇಂದ ಆಗದು ದಡಂಬಡಿಕೆ ಇಂದ ಆದೀತೇ
*ಒಂದರ ಮೊದಲೊಳಗೆ ಬಂದಿದೆ ಜಗವೆಲ್ಲ
*ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ
*ಒಂದು ದುಡ್ಡು ಕೊಡುವೆ ಹಾಡು ದಾಸಯ್ಯ ಎರಡು ದುಡ್ಡು ಕೊಡುವೆ ಬಿಡು ದಾಸಯ್ಯ
*ಒಂದು ಹೊತ್ತು ಉಂಡವ ಯೋಗಿ ಎರಡು ಹೊತ್ತು ಉಂಡವ ಭೋಗಿ ಮೂರು ಹೊತ್ತು ಉಂಡವ ರೋಗಿ ನಾಲ್ಕು ಹೊತ್ತು ಉಂಡವ ಎತ್ತುಕೊಂಡು ಹೋಗಿ
*ಒಂದೊಂದು ಕಾಲಕ್ಕೆ ಒಂದೊಂದು ಪರಿ
*ಒಂದೊಂದು ಹನಿ ಬಿದ್ದು ನಿಂತಲ್ಲಿ ಮಡುವಾಯ್ತು
*ಒಕ್ಕಣ್ಣರ ನಾಡಿಗೆ ಹೋದ್ರೆ ಒಂದು ಕಣ್ಣು ಮುಚ್ಚಿ ನಡೆಯಬೇಕು
*ಒಡೆದ ಹಾಲು ಹೆಪ್ಪಿಗೆ ಬಂದೀತೇ
*ಒಪ್ಪದಾ ಮಾತಾಡಿ ಕೋಪಕ್ಕೆ ತುತ್ತಾದ
*ಒಪ್ಪವಿಲ್ಲದವಳ ನಗೆ ನುಡಿ ನೋಟ ಎಂದೂ ಸಪ್ಪಗೆ
*ಒಪ್ಪೊತ್ತು ಕೂಳು ತಪ್ಪಿ ಕಣ್ಣು ಕಾಣಾಕ್ಕಿಲ್ಲ ಕಿವಿ ಕೇಳಾಕ್ಕಿಲ್ಲ
*ಒಲುಮೆಗೆ ನೋಟಬೇಟವೇ ಮೊದಲು
*ಒಲ್ಲದ ಗಂಡಗೆ ಬೆಣ್ಣೇಲಿ ಕಲ್ಲು
*ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು
*ಒಳ್ಳಿಹ ಬಳ್ಳಿ ಕಳ್ಳಿಯ ಹಬ್ಬಿತು
*ಒಳ್ಳೇ ರಸವಳ್ಳಿ ಕಳ್ಳೀಗಿಡವನ್ನ ಹಬ್ಬಿತು
*ಒಳ್ಳೇರ ಒಡನಿದ್ದು ಕಳ್ಳ ಒಳ್ಳೇನಾದ
*ಒಳ್ಳೊಳ್ಳೆಯವರು ಉಳ್ಳಾಡುವಾಗ ಗುಳ್ಳವ್ವ ಪಲ್ಲಕ್ಕಿ ಬೇಡಿದಳಂತೆ
*ಓಡಿ ಹೋಗೊಳು ಮೊಸರಿಗೆ ಹೆಪ್ಪು ಹಾಕ್ತಾಳ
*ಓದಿ ಓದಿ ಮರುಳಾದ ಕೂಚು ಭಟ್ಟ
*ಓದಿದ ಓದೆಲ್ಲ ಮೇದ ಕಬ್ಬಿನ ಹಿಪ್ಪೆ, ಓದಿದರ ಅರಿವು ಮೇದ ಕಬ್ಬಿನ ರಸ
*ಓದೋದು ಕಾಶಿ ಖಂಡ, ತಿನ್ನೋದು ಮಶಿ ಕೆಂಡ
*ಓಡಿ ಹೋಗೋ ಬಡ್ಡಿ ಹಾಲು ಹೆಪ್ಪಿಟ್ಟಾಳೆ?
*ಓದಿ ಓದಿ ಮರುಳಾದ ಕೂಚು ಭಟ್ಟ; ಓದದೆ ಅನ್ನ ಕೊಟ್ಟ ನಮ್ಮ ರೈತ
*ಓದಿ ಬರೆಯೋ ಕಾಲದಲ್ಲಿ ಆಡಿ ಮಣ್ಣು ಹುಯ್ಕೊಂಡರು
*ಓದುವಾಗ ಓದು; ಆಡುವಾಗ ಆಡು
*ಓಲೆ ಆಸೆಗೆ ಬೆಕ್ಕು ಮೂಗುತಿ ಕಳಕೊಂಡಿತು
*ಓತಿಕ್ಯಾತಕ್ಕೆ ಬೇಲಿ ಗೂಟ ಸಾಕ್ಷಿ
*ಒಂದಕ್ಕೆರಡು ದಂಡ,ಹೆಂಡಕ್ಕೆ ರಾಗಿ ದಂಡ
*ಒಂದು ಬಿಟ್ಟು ಇನ್ನೊಂದು ಕಟ್ಕೊಂಡ್ರಂತೆ
*ಒಂದು ಹೊತ್ತು ತಿನ್ನೋವ್ನು ಯೋಗಿ, ಎರಡು ಹೊತ್ತು ತಿನ್ನೋವ್ನು ಭೋಗಿ, ಮೂರು ಹೊತ್ತು ತಿನ್ನೋವ್ನು ರೋಗಿ, ನಾಕು ಹೊತ್ತು ತಿನ್ನೋವ್ನ ಎತ್ಕೊಂಡು ಹೋಗಿ
*ಒಂದು ಕಣ್ಣಿಗೆ ಬೆಣ್ಣೆ; ಮತ್ತೊಂದು ಕಣ್ಣಿಗೆ ಸುಣ್ಣ
*ಒಂದು ಒಳ್ಳೇ ಮಾತಿಗೆ ಸುಳ್ಳೇ ಪ್ರಧಾನ
*ಒಕ್ಕಣ್ಣನ ರಾಜ್ಯದಲ್ಲಿ ಒಂದು ಕಣ್ಣು ಮುಚ್ಚಿಕೊಂಡು ನಡಿ
*ಒಲಿದರೆ ನಾರಿ ಮುನಿದರೆ ಮಾರಿ
*ಒಲ್ಲದ ಗಂಡನಿಗೆ ಮೊಸರಲ್ಲೂ ಕಲ್ಲು
*ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು
*ಒನಕೆ ಮುಂಡು ಚಿಗುರಿದಂತೆ
*ಒಂಡಂಬಡಿಕೆ ಇಂದ ಆಗದು ದಡಂಬಡಿಕೆ ಇಂದ ಆದೀತೇ
*ಒಂದು ಹೊತ್ತು ಉಂಡವ ಯೋಗಿ ಎರಡು ಹೊತ್ತು ಉಂಡವ ಭೋಗಿ ಮೂರು ಹೊತ್ತು ಉಂಡವ ರೋಗಿ ನಾಲ್ಕು ಹೊತ್ತು ಉಂಡವ ಎತ್ತುಕೊಂಡು ಹೋಗಿ
*ಒಂದು ಕಣ್ಣೀಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ
*ಒಕ್ಕಣ್ಣರ ನಾಡಿಗೆ ಹೋದ್ರೆ ಒಂದು ಕಣ್ಣು ಮುಚ್ಚಿ ನಡೆಯಬೇಕು
*ಒಲ್ಲದ ಗಂಡಗೆ ಬೆಣ್ಣೇಲಿ ಕಲ್ಲು
*ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು
*ಓಡಿ ಹೋಗೊಳು ಮೊಸರಿಗೆ ಹೆಪ್ಪು ಹಾಕ್ತಾಳ
*ಓದೋದು ಕಾಶಿ ಖಂಡ, ತಿನ್ನೋದು ಮಶಿ ಕೆಂಡ
*ಓದಿ ಓದಿ ಮರುಳಾದ ಕೂಚು ಭಟ್ಟ
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
==ಕ==
*ಕಂಗಾಲನ ಮನೀಗೆ ಕಂಗಾಲ ಹೋದರೆ ಗಂಗಾಳ ನೆಕ್ಕು ಅಂತಂತೆ
*ಕಂಗಾಲಾದರೂ ಹಂಗಾಳಾಗಬಾರದು
*ಕಂಡದ್ದು ಕಾಣೆ ಉತ್ತಮ ಕಂಡದ್ದು ಕಂಡೆ ಮಧ್ಯಮ, ಕಾಣದ್ದು ಕಂಡೆ ಅಧಮ
*ಕಂಡವರ ಕಂಡು ಕೈಕೊಂಡ ಕೆಲಸ ಕೆಂಡವಾಯ್ತು
*ಕಂಡವರ ಕಂಡು ಕೈಕೊಂಡ ಧರ್ಮ ದಂಗು ಬಡಿಸಿತು
*ಕಂಡವರ ಮಕ್ಕಳನ್ನು ಬಾವಿಯಲ್ಲಿ ದೂಡಿ ಆಳ ನೋಡಿದ ಹಾಗೆ
*ಕಚ್ಚುವ ನಾಯಿ ಬೊಗಳದು ಬೊಗಳುವ ನಾಯಿ ಕಚ್ಚದು
*ಕಟ್ಟಿದ ಕೆರೆಗೆ ಕೋಡಿ ತಪ್ಪಲ್ಲ, ಹುಟ್ಟಿದ ಮನೆಗೆ ಬೇರೆ(ಪಾಲಗುವುದು) ತಪ್ಪಲ್ಲ
*ಕಡಲಲ್ಲಿ ಪುಟಿದ ತೆರೆ ಕಡಲಲ್ಲೇ ಕರಗಿ ಹೋಯ್ತು
*ಕಡು ಕೋಪ ಬಂದಾಗ ತಡಕೊಂಡವನೇ ಜಾಣ
*ಕಣ ಕಾಯಬಹುದು, ಹೆಣ ಕಾಯಾಕೆ (ಬೇಸರದಿಂದ ಹೊತ್ತು ಕಳೆಯಲಿಕ್ಕೆ) ಆಗೊದಿಲ್ಲ
*ಕಣ್ಣಾರೆ ಕಂಡರೂ ಪರಾಂಬರಿಸಿ ನೋಡು
*ಕಣ್ಣಿಗೆ ಒಪ್ಪವಿಲ್ಲದ ಹೆಣ್ಣು ಸಪ್ಪಗೆ ಕಂಡಳು
*ಕಣ್ಣೆರಡಾದರೂ ನೋಟ ಒಂದೇ
*ಕತೆ ಹೇಳೋಕೆ ಹ್ಞುಂ-ಗುಟ್ಟೋರಿರಬೇಕು, ನೆಟ್ಟಗೆ ಬಾಳೋಕೆ ಛೀ-ಗುಟ್ಟೋರಿರಬೇಕು
*ಕತ್ತಿ ವೈರಿ ಕೈಯಲ್ ಕೊಟ್ಟು ಬೆನ್ನ ಮಾಡಿ ನಿಂತನಂತೆ
*ಕನಿಗೇಡಿಗೆ(ಸ್ವಾರ್ಥಿಗೆ) ಗತಿ ಇಲ್ಲ
*ಕಪ್ಪರ ತಿಪ್ಪೇಲಿಟ್ಟರೆ ತನ್ನ ವಾಸನೆ ಬಿಟ್ಟೀತೇ
*ಕಬ್ಬು ಡೊಂಕಾದ್ರೆ ಸವಿ ಡೊಂಕೇ
*ಕಯ್ಯಾರೆ ಮಾಡುವ ಧರ್ಮ ಲೇಸು
*ಕರಣಗಳ ತಡೆದು ನಿಲಬಾರದು
*ಕರುಬಿದವರ ಮನೆ ಬರಿಮನೆ
*ಕರ್ಮ ಕಳೆಯುವವರೆಗೆ ಮರ್ಮದಲ್ಲಿರು
*ಕಲ್ತ ಕೈ ಕದ್ದಲ್ಲದೆ ಬಿಡದು
*ಕಲ್ಲ ನಾಗರ ಕಂದರೆ ಹಾಲೆರೆವರು ದಿಟ ನಾಗರ ಕಂಡರೆ ಕೊಲ್ಲೆಂಬರು
*ಕಲ್ಲಿನಲ್ಲಿ ಕಳೆಯ ನಿಲ್ಲಿಸಿದ ಗುರುವಿನ ಸೊಲ್ಲಿನಲ್ಲೇ ದೈವ
*ಕಲ್ಲು ಇದ್ದಾಗ ನಾಯಿ ಇಲ್ಲ ನಾಯಿ ಇದ್ದಾಗ ಕಲ್ಲು ಇಲ್ಲ
*ಕಳ್ಳನ ಕಾವಲಿಟ್ಟ ಹಾಗೆ
*ಕಳ್ಳನ ಕೈಯಲ್ಲಿ ಕೀಲಿಕೈ ಕೊಟ್ಟಂತೆ
*ಕಳ್ಳನ ನಂಬಿದರೂ ಕುಳ್ಳನ್ನ ನಂಬಬೇಡ
*ಕಳ್ಳನ ಮನಸ್ಸು ಹುಳ್ಳಗೆ
*ಕಳ್ಳನ ಹೆಜ್ಜೆ ಕಳ್ಳನೇ ಬಲ್ಲ
*ಕಾಡಿಗೆ ಗಣ್ಣ ಚೆಲುವೆ ಮನೆಗೆ ಕೇಡು ತಂದಳು
*ಕಾಮಾಲೆ ಕಣ್ಣೊನಿಗೆ ಕಂಡಿದ್ದೆಲ್ಲ ಹಳದಿ ನೇ
*ಕಾಯ ಕಮಲವೇ ಸೆಜ್ಜೆ ಜೀವ ರತುನವೇ ಜ್ಯೋತಿ
*ಕಾರ್ಯವಾಸಿ ಕತ್ತೆ ಕಾಲು ಕಟ್ಟು
*ಕಾಲ ತಪ್ಪಿದ ಬಳಿಕ ನೂರು ಮಾಡಿದರು ಹಾಳು
*ಕಾಲಕ್ಕೆ ತಕ್ಕಂತೆ ನಡೆಯಬೇಕು, ತಾಳಕ್ಕೆ ತಕ್ಕಂತೆ ಕುಣಿಯಬೇಕು
*ಕಾಲಿಗೆ ಬಿದ್ದು ಕಾಲುಂಗರ ಉಚ್ಚಿಕೊಂಡರಂತೆ
*ಕಾವಿ ಉಟ್ಟವರೆಲ್ಲಾ ಸನ್ಯಾಸಿಗಳಲ್ಲ ಬೂದಿ ಬಳಿದವರೆಲ್ಲ ಬೈರಾಗಿಗಳಲ್ಲ
*ಕಿಡಿಯಿಂದ ಕಾಡ ಸುಡ ಬಹುದು
*ಕೀರ್ತಿಯೇ ಕೈಲಾಸ ಅಪಕೀರ್ತಿಯೇ ನರಕ
*ಕೀಲು ಸಣ್ಣದಾದರೂ ಗಾಲಿ ನಡೆಸುತ್ತದೆ
*ಕುಂತು ತಿಂದರೆ, ಕುಡಿಕೆ ಹೊನ್ನೂ ಸಾಲದು
*ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಂಡ
*ಕುಂಬಾರಂಗೆ ವರುಷ; ದೊಣ್ಣೆಗೆ ನಿಮಿಷ
*ಕುಚ ಹೇಮ ಶಸ್ತ್ರ ಸೋಂಕಿದಾಗ ಶುಚಿ ವೀರ ಧೀರರು ಅಚಲಿತರಾದರು
*ಕುಚುಕು ಬುದ್ಧಿ ಹೊಕ್ಕವನು ಕೆಟ್ಟ
*ಕುದಿಯುವುದರೊಳಗಾಗಿ ಮೂರು ಸಾರಿ ಹಳಸಿದಂತೆ
*ಕುರುಡು ಕಣ್ಣಿಗಿಂತ ಮೆಳ್ಳೆ ಗಣ್ಣು ವಾಸಿ
*ಕುಲಗೇಡಿ ಮಗ ಹುಟ್ಟಿ ಕುಲಕ್ಕೇ ಮಸಿ ಬಳಿದ
*ಕೂಟಸ್ಥ ಇಲ್ದೋನ ಓದು ಗಿಳಿ ಕಲ್ತ ಪಾಠದಂತೆ
*ಕೂಡಿದ ಗಂಡನನ್ನಾದರೂ ಬಿಟ್ತೇನು ಕಲ್ತದ್ದ ಬಿಡಲಾರೆ
*ಕೂತು ಉಣ್ಣೋನಿಗೆ ಕುಡಿಕೆ ಹೊನ್ನು ಸಾಲದು
*ಕೂತುಕೊಂಡು ಹೇಳುವವನ ಕೆಲಸ ಊರು ಮಾಡಿದರೂ ಸಾಲದು
*ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿಸಿದರು
*ಕೂಳಿಗೆ ಕೇಡು ಭೂಮಿಗೆ ಭಾರ
*ಕೃಷಿತೋನಾಸ್ತಿ ದುರ್ಭಿಕ್ಷಂ (ಸಂಸ್ಕೃತ)
*ಕೆಟ್ಟ ಮೇಲೆ ಬುದ್ಧಿ ಬಂತು, ಅಟ್ಟ ಮೇಲೆ ಒಲೆ ಉರಿಯಿತು
*ಕೆಟ್ಟ ಮೇಲೆ ಲೊಟ್ಟ
*ಕೆಟ್ಟು ಪಟ್ಟಣ ಸೇರು ಇಟ್ಟು ಹಳ್ಳಿ ಸೇರು
*ಕೆಟ್ಟು ಬದುಕಬಹುದು ಬದುಕಿ ಕೆಡಬಾರದು
*ಕೆಟ್ಟು ಸೈರಿಸಬಲ್ಲೆ ಕೊಟ್ಟು ಸೈರಿಸಲಾರೆ
*ಕೆಡುವ ಕಾಲಕ್ಕೆ ಬುದ್ಧಿ ಇಲ್ಲ ಮರಣ ಕಾಲಕ್ಕೆ ಮದ್ದಿಲ್ಲ
*ಕೆತ್ತೆಂದರೆ ಕೆತ್ತು ಮೆತ್ತೆಂದರೆ ಮೆತ್ತು
*ಕೆರೆಗೆ ತೊರೆ ಕೂಡಿ ಸರೋವರ ವಾಯ್ತು
*ಕೆರೆಯ ನೀರ ಕೆರೆಗೆ ಚೆಲ್ಲಿ ವರ ಪಡೆದುಕೊಂಡಂತೆ
*ಕೆಲಸಿಲ್ಲದ ಗಂಡು ಕರೀ ಒನಕೆ ತುಂಡು
*ಕೇಡು ಬರೋ ಕಾಲಕ್ಕೆ ನಂಟೆಲ್ಲ ಹಗೆಯಾಯ್ತು
*ಕೇಡು ಬರೋ ಕಾಲಕ್ಕೆ ಬುದ್ಧಿಗೇಡು
*ಕೈ ಕೆಸರಾದ್ರೆ ಬಾಯಿ ಮೊಸರು
*ಕೈಗೆ ಬಂದ ತುತ್ತು ಬಾಯಿಗೆ ಇಲ್ಲ
*ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
*ಕೈಯಲ್ಲಿ ಶರಣಾರ್ಥಿ, ಕಂಕುಳಲ್ಲಿ ದೊಣ್ಣೆ
*ಕೈಯೆತ್ತಿ ಕೊಡಲಿಲ್ಲ ಮೈಯ್ಯ ದಂಡಿಸಲಿಲ್ಲ ಪುಣ್ಯದ ಪಾಲು ನನಗಿರಲಿ ಅಂದ
*ಕೈಲಾದವರು ಮಾಡುತ್ತಾರೆ ಕೈಲಾಗದವರು ಆಡುತ್ತಾರೆ
*ಕೊಂಕಣ ಸುತ್ತಿ ಮೈಲಾರಕ್ಕೆ ಬಂದ ಹಾಗೆ
*ಕೊಂಕಿಗೆ ಕೊಂಕೇ ಮದ್ದು
*ಕೊಂಡಾಡುತ್ತ ಜಗದ ಇಚ್ಚೆಯನ್ನೆ ನುಡಿದರೆ ಜಗವೆಲ್ಲ ತನ್ನ ಮುದ್ದಾಡುತಿತ್ತು
*ಕೊಂಡು ಕೊಟ್ಟದ್ದೂ ಇಲ್ಲ ಹಂಚಿ ಉಂಡದ್ದೂ ಇಲ್ಲ ಸ್ವರ್ಗ ಬೇಕು ಅಂದ
*ಕೊಂದ ಪಾಪ ತಿಂದು ಪರಿಹಾರ (=ಕೊಂದ ಪಾಪ/ಕರ್ಮ ತನಗೆ ಅಂಟಿಕೊಂಡು ಅದನ್ನು ತೊಡೆಯುವುದಕ್ಕೆ ಕಷ್ಟ ಅನುಭವಿಸಬೇಕಾಗುತ್ತದೆ)
*ಕೊಟ್ಟದ್ದು ತನಗೆ; ಬಚ್ಚಿಟ್ಟದ್ದು ಪರರಿಗೆ
*ಕೊಟ್ಟುಣ್ಣದ ಗಂಟು ಪರರಿಗೆ ಬಿಟ್ಟು ಹೋದಂತೆ
*ಕೊಟ್ಟೆ ಅಂತ ಹೇಳಿ ಕೊಡದವನ ಮಾತು ಬೆನ್ನಿಗೆ ಚೂರಿ ಇರಿದಂತೆ
*ಕೊಟ್ಟೋನು ಕೋಡಂಗಿ, ಇಸ್ಕೊಂಡೋನು ಈರಭದ್ರ
*ಕೊಡದ ಲೋಭಿ ಮಾತು ಕೊಡಲಿ ಪೆಟ್ಟು
*ಕೊಡಲಾರದ ಹೆಣ್ಣಿಗೆ ತೆರವು ಕೇಳಿದರಂತೆ
*ಕೊಡಲಿ ಕಾವು ಕುಲಕ್ಕೆ ಸಾವು
*ಕೊಡುವ ದೇವರು ಬಡವನೇ?
*ಕೊಡುವವನ ಕೈ ಯಾವಾಲು ಮೇಲೆ
*ಕೊಡೋದು ಕೊಳ್ಳೋದು ಗಂಡಂದು, ಮಜ ಮಾಡೋದು ಹೆಂಡ್ರುದ್ದು
*ಕೊಣನಿಗೆ ಕೊಸೆಯೋ ಸಂಕಟ, ಎಮ್ಮೆಗೆ ಈಯೋ ಸಂಕಟ
*ಕೊಲ್ಲದಿರುವುದೇ ಧರ್ಮ ಬಲ್ಲವರಿಗೆ ಅದೇ ಸಮ್ಮತ
*ಕೋಟಿ ಕೊಟ್ಟರೂ ಕೂಟ ಕರ್ಮಿಯ ದುಂದುಗವೇ ಬೇಡ
*ಕೋಡಗ ಲಂಕೆಯ ಸುಡುವಾಗ ರಾವಣ ನಾಡ ಕಾಯ್ದಿದ್ದ
*ಕೋತಿ ತಾನೂ ಕೆಡೋದಲ್ದೆ ವನಾನೂ ಕೆಡಿಸ್ತು
*ಕೋತಿ ಮೊಸರು ಕುಡಿದು ಮೇಕೆ ಬಾಯಿಗೆ ಒರೆಸಿತಂತೆ
*ಕೋತಿಯಂಥೋನು ಕೆಣಕಿದ, ಮೂತಿಗೆ ಹೆಟ್ಟಿಸಿಕೊಂಡು ತಿಣಕಿದ
*ಕೋಪ ಪಾಪ ತಂತು ಪಾಪ ತಾಪ ತಂತು
*ಕೋಪ ಬೀವುದೇ ಸಮತೆ
*ಕೋಪದಲ್ಲಿ ಕುಯ್ದ ಮೂಗು ಶಾಂತಿಯಲ್ಲಿ ಬಂದೀತೇ
*ಕೋರಿ (=ಚೆಂದುಳ್ಳಿ ಚೆಲುವೆ) ಒಲುಮೆ ತನಗೆ ಅನ್ನೋ ಮಾರನಿಗೆ (=ಚೆಲುವಾಂತನಿಗೆ) ಮಾರಿ ಹಿಡಿಯಿತು.
*ಕ್ರಮ ಕಾಣದ ನಾಯಿ ಕಪಾಳೆ ನೆಕ್ತು
*ಕಾಮಾಲೆ ಕಣ್ಣೊನಿಗೆ ಕಂಡಿದ್ದೆಲ್ಲ ಹಳದಿ ನೇ
*ಕಾರ್ಯವಾಸಿ ಕತ್ತೆ ಕಾಲು ಕಟ್ಟು
*ಕೀಲು ಸಣ್ಣದಾದರೂ ಗಾಲಿ ನಡೆಸುತ್ತದೆ
*ಕೀರ್ತಿಯೇ ಕೈಲಾಸ ಅಪಕೀರ್ತಿಯೇ ನರಕ
*ಕೋಪದಲ್ಲಿ ಕುಯ್ದ ಮೂಗು ಶಾಂತಿಯಲ್ಲಿ ಬಂದೀತೇ
*ಕೋತಿ ತಾನೂ ಕೆಡೋದಲ್ದೆ ವನಾನೂ ಕೆಡಿಸ್ತು
*ಕೋತಿಯಂಥೋನು ಕೆಣಕಿದ, ಮೂತಿಗೆ ಹೆಟ್ಟಿಸಿಕೊಂಡು ತಿಣಕಿದ
*ಕೃಷಿತೋನಾಸ್ತಿ ದುರ್ಭಿಕ್ಷಂ
*ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿಸಿದರು
*ಕೂತು ಉಣ್ಣೋನಿಗೆ ಕುಡಿಕೆ ಹೊನ್ನು ಸಾಲದು
*ಕಡು ಕೋಪ ಬಂದಾಗ ತಡಕೊಂಡವನೇ ಜಾಣ
*ಕಳ್ಳನ ಹೆಜ್ಜೆ ಕಳ್ಳನೇ ಬಲ್ಲ
*ಕಳ್ಳನ ಮನಸ್ಸು ಹುಳ್ಳಗೆ
*ಕಂಡದ್ದು ಕಾಣೆ ಉತ್ತಮ ಕಂಡದ್ದು ಕಂಡೆ ಮಧ್ಯಮ, ಕಾಣದ್ದು ಕಂಡೆ ಅಧಮ
*ಕಂಡವರ ಮಕ್ಕಳನ್ನು ಬಾವಿಯಲ್ಲಿ ದೂಡಿ ಆಳ ನೋಡಿದ ಹಾಗೆ
*ಕಂಗಾಲಾದರೂ ಹಂಗಾಳಾಗಬಾರದು
*ಕಣ್ಣಾರೆ ಕಂಡರೂ ಪರಾಂಬರಿಸಿ ನೋಡು
*ಕಣ ಕಾಯಬಹುದು, ಹೆಣ ಕಾಯಾಕೆ (ಬೇಸರದಿಂದ ಹೊತ್ತು ಕಳೆಯಲಿಕ್ಕೆ) ಆಗೊದಿಲ್ಲ
*ಕಟ್ಟಿದ ಕೆರೆಗೆ ಕೋಡಿ ತಪ್ಪಲ್ಲ, ಹುಟ್ಟಿದ ಮನೆಗೆ ಬೇರೆ(ಪಾಲಗುವುದು) ತಪ್ಪಲ್ಲ
*ಕಬ್ಬು ಡೊಂಕಾದ್ರೆ ಸವಿ ಡೊಂಕೇ
*ಕಚ್ಚುವ ನಾಯಿ ಬೊಗಳದು ಬೊಗಳುವ ನಾಯಿ ಕಚ್ಚದು
*ಕೈ ಕೆಸರಾದ್ರೆ ಬಾಯಿ ಮೊಸರು
*ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
*ಕೈಗೆ ಬಂದ ತುತ್ತು ಬಾಯಿಗೆ ಇಲ್ಲ
*ಕೈಯಲ್ಲಿ ಶರಣಾರ್ಥಿ, ಕಂಕುಳಲ್ಲಿ ದೊಣ್ಣೆ
*ಕಲ್ಲು ಇದ್ದಾಗ ನಾಯಿ ಇಲ್ಲ ನಾಯಿ ಇದ್ದಾಗ ಕಲ್ಲು ಇಲ್ಲ
*ಕಪ್ಪರ ತಿಪ್ಪೇಲಿಟ್ಟರೆ ತನ್ನ ವಾಸನೆ ಬಿಟ್ಟೀತೇ
*ಕತೆ ಹೇಳೋಕೆ ಹ್ಞುಂ-ಗುಟ್ಟೋರಿರಬೇಕು, ನೆಟ್ಟಗೆ ಬಾಳೋಕೆ ಛೀ-ಗುಟ್ಟೋರಿರಬೇಕು
*ಕೆಡುವ ಕಾಲಕ್ಕೆ ಬುದ್ಧಿ ಇಲ್ಲ ಮರಣ ಕಾಲಕ್ಕೆ ಮದ್ದಿಲ್ಲ
*ಕೆಟ್ಟ ಮೇಲೆ ಬುದ್ಧಿ ಬಂತು, ಅಟ್ಟ ಮೇಲೆ ಒಲೆ ಉರಿಯಿತು
*ಕಿಡಿಯಿಂದ ಕಾಡ ಸುಡ ಬಹುದು
*ಕೊಡೋದು ಕೊಳ್ಳೋದು ಗಂಡಂದು, ಮಜ ಮಾಡೋದು ಹೆಂಡ್ರುದ್ದು
*ಕೊಡಲಿ ಕಾವು ಕುಲಕ್ಕೆ ಸಾವು
*ಕೊಂಕಣ ಸುತ್ತಿ ಮೈಲಾರಕ್ಕೆ ಬಂದ ಹಾಗೆ
*ಕೊಣನಿಗೆ ಕೊಸೆಯೋ ಸಂಕಟ, ಎಮ್ಮೆಗೆ ಈಯೋ ಸಂಕಟ
*ಕೊಟ್ಟೋನು ಕೋಡಂಗಿ, ಇಸ್ಕೊಂಡೋನು ಈರಭದ್ರ
*ಕೊಟ್ಟದ್ದು ತನಗೆ; ಬಚ್ಚಿಟ್ಟದ್ದು ಪರರಿಗೆ
*ಕ್ರಮ ಕಾಣದ ನಾಯಿ ಕಪಾಳೆ ನೆಕ್ತು
*ಕುಂಬಾರಂಗೆ ವರುಷ; ದೊಣ್ಣೆಗೆ ನಿಮಿಷ
*ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಂಡ
*ಕುಂತು ತಿಂದರೆ, ಕುಡಿಕೆ ಹೊನ್ನೂ ಸಾಲದು
*ಕುರುಡು ಕಣ್ಣಿಗಿಂತ ಮೆಳ್ಳೆ ಗಣ್ಣು ವಾಸಿ
*ಕಾಡಿಗೆ ಹೋಗೋ ವಯಸ್ಸಿನಲ್ಲಿ ಬ್ರಾಹ್ಮಣ ಓಂ ಕಲಿತ
*ಕಾಣದಿರೋ ದೇವರಿಗಿಂತ ಕಾಣೋ ಭೂತಾನೇ ವಾಸಿ
*ಕಾಲಕ್ಕೆ ತಕ್ಕಂತೆ ನಡಿಯಬೇಕು, ತಾಳಕ್ಕೆ ತಕ್ಕಂತೆ ಕುಣಿಯಬೇಕು
*ಕಾಲಿನದು ಕಾಲಿಗೆ; ತಲೆಯದು ತಲೆಗೆ
*ಕಾಮಾಲೆ ಕಣ್ಣಿನವನಿಗೆ ಲೋಕವೆಲ್ಲಾ ಹಳದಿಯಂತೆ
*ಕಾರ್ಯವಾಸಿ ಕತ್ತೆ ಕಾಲು ಕಟ್ಟು
*ಕಾಸಿದ್ರೆ ಕೈಲಾಸ
*ಕಾಸಿಗೆ ತಕ್ಕ ಕಜ್ಜಾಯ.
*ಕಾಸಿಗೊಂದು,ಕೊಸರಿಗೆರಡು
*ಕಾಸು ಕೊಟ್ಟು ಬ್ರಹ್ಮೇತಿ ತಗೊಂಡರು
*ಕಾಯಕವೇ ಕೈಲಾಸ
*ಕೋಣನ ಮುಂದೆ ಕಿನ್ನರಿ ಬಾರಿಸಿದಂತೆ
*ಕೋಣನೆರಡುಂ ಹೋರೆ ಗಿಡುವಿಂಗೆ ಮಿತ್ತು (ರಾಘವಾಂಕ)
*ಕೋಣೆಯ ಕೂಸು ಕೊಳೆಯಿತು; ಓಣಿಯ ಕೂಸು ಬೆಳೆಯಿತು
*ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆಯೇ ಮೇಲು
*ಕೋಮಟಿ ಕೊಡ;ಜೈನಿಗ ಬಿಡ
*ಕೋಪದಲ್ಲಿ ಕೊಯ್ದ ಮೂಗು ಶಾಂತವಾದ ಮೇಲೆ ಬರುತ್ತದೆಯೆ ?
*ಕೋತಿ ಕಜ್ಜಾಯ ಹಂಚಿದ ಹಾಗೆ.
*ಕೋತಿ ತಾನು ಕೆಡೋದಲ್ದೆ ವನ ಎಲ್ಲ ಕೆಡಿಸಿತಂತೆ
*ಕೋತಿ ತಾನು ಮೊಸರನ್ನ ತಿಂದು ಮೇಕೆ ಬಾಯಿಗೆ ಒರೆಸಿತಂತೆ
*ಕೋತಿಗೆ ಹೆಂಡ ಕುಡಿಸಿದಂತೆ
*ಕೂರೆಗೆ ಹೆದರಿ ಸೀರೆ ಬಿಚ್ಚೆಸೆದರು
*ಕೂರೆಗೆ ಹೆದರಿ ಸಂತೆಯಲ್ಲಿ ಸೀರೆ ಬಿಚ್ಚಿದರಂತೆ
*ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿದ್ರು
*ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದರಂತೆ
*ಕೂತು ತಿನ್ನುವವನಿಗೆ ಕುಡಿಕೆ ಹಣ ಸಾಲದು
*ಕಡ್ಡೀನ ಗುಡ್ಡ ಮಾಡು
*ಕಡ್ಡೀನ ಗುಡ್ಡ ಮಾಡು.
*ಕಳ್ಳನ ಹೆಂಡತಿ ಎಂದಿದ್ದರೂ ...ಯೆ
*ಕಳ್ಳನ ಹೆಂಡತಿ ಎಂದಿದ್ದರೂ ಮುಂ..
*ಕಳ್ಳನ ಮನಸ್ಸು ಹುಳ್ಳ ಹುಳ್ಳಗೆ
*ಕಳ್ಳನ ನಂಬಿದ್ರು ಕುಳ್ಳನ ನಂಬಬೇಡ
*ಕಳ್ಳನಿಗೊಂದು ಪಿಳ್ಳೆ ನೆವ
*ಕಳ್ಳನಿಗೊಂದು ಪಿಳ್ಳೆ ನೆವ
*ಕಳ್ಳನ್ನ ನಂಬಿದ್ರೂ ಕುಳ್ಳನ್ನ ನಂಬಬಾರದು
*ಕಳೆದುಕೊಂಡ ವಸ್ತುವನ್ನು ಕಳೆದುಹೋದ ಜಾಗದಲ್ಲೇ ಹುಡುಕು
*ಕಂಡೋರ ಆಸ್ತಿಗೆ ನೀನೇ ಧಣಿ
*ಕಂಡೋರ ಮಕ್ಕಳನ್ನು ಭಾವಿಗೆ ತಳ್ಳಿ ಆಳ ನೋಡುವ ಬುದ್ಧಿ
*ಕಂಡೋರ ಮನೆ ರೊಟ್ಟಿಗೆ ಗಿಣ್ಣು ಹಾಲು ಕಾಯಿಸಿದರಂತೆ
*ಕಂಡ ಕಳ್ಳ ಜೀವ ಸಹಿತ ಬಿಡ
*ಕಂಡ ಮನೆಗೆ ಕಳ್ಳ ಬಂದ , ಉಂಡ ಮನೆಗೆ ನೆಂಟ ಬಂದ
*ಕಂಡದ್ದನ್ನು ಕಂಡಹಾಗೆ ಹೇಳಿದರೆ ಕೆಂಡದಂಥಾ ಕೋಪವಂತೆ
*ಕಂಕುಳಲ್ಲಿ ದೊಣ್ಣೆ; ಕೈಯಲ್ಲಿ ಶರಣಾರ್ಥಿ
*ಕಂಕುಳಲ್ಲಿ ಮಗು ಇಟ್ಟುಕೊಂಡು ಊರೆಲ್ಲ ಹುಡುಕಿದರಂತೆ
*ಕಂತೆಗೆ ತಕ್ಕ ಬೊಂತೆ
*ಕಣ್ಣರಿಯದಿದ್ದರೂ ಕರುಳರಿಯುತ್ತದೆ
*ಕಣ್ಣು ಕಟ್ಟಿ ಕಾಡಲ್ಲಿ ಬಿಟ್ಟ ಹಾಗೆ
*ಕಣ್ಣು ಕುರುಡಾದರೆ ಬಾಯಿ ಕುರುಡೇ
*ಕಷ್ಟ ಪಟ್ಟರೆ ಫಲವುಂಟು
*ಕಟ್ಟಿಕೊಂಡವಳು ಕಡೇ ತನಕ; ಇಟ್ಟುಕೊಂಡವಳು ಇರೋ ತನಕ
*ಕಬ್ಬಿಣ ಕಾದಿರುವಾಗಲೇ ಬಡಿಯಬೇಕು
*ಕಬ್ಬು ಡೊಂಕಾದರೆ ಸಿಹಿ ಡೊಂಕೆ ?
*ಕದ ತಿನ್ನೋವನಿಗೆ ಹಪ್ಪಳ ಈಡಲ್ಲ
*ಕದ್ದು ತಿಂದ ಹಣ್ಣು, ಪಕ್ಕದ ಮನೆ ಊಟ ಎಂದೂ ಹೆಚ್ಚು ರುಚಿ
*ಕೈ ಕೆಸರಾದರೆ ಬಾಯಿ ಮೊಸರು
*ಕೈ ಕೆಸರಾದರೆ ಬಾಯಿ ಮೊಸರು.
*ಕೈ ತೋರಿಸಿ ಅವಲಕ್ಷಣ ಅನ್ನಿಸಿಕೊಂಡರಂತೆ
*ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
*ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ.
*ಕೈಗೆಟುಕದ ದ್ರಾಕ್ಷಿ ಹುಳಿ
*ಕೈಲಾಗದೋನು ಮೈ ಪರಚಿಕೊಂಡ
*ಕೈಯ್ಯಲ್ಲೆ ಬೆಣ್ಣೆ ಇಟ್ಟುಕೊಂಡು,ತುಪ್ಪಕ್ಕೆ ಊರೆಲ್ಲ ಅಲೆದರಂತೆ
*ಕಜ್ಜಿ ಹೋದರೂ ಕಡಿತ ಹೋಗಲಿಲ್ಲ
*ಕನ್ನಡಿ ಒಳಗಿನ ಗಂಟು ಕೈಗೆ ದಕ್ಕೀತೆ ?
*ಕಪ್ಪೆ ತಕ್ಕಡೀಲಿ ಹಾಕಿದ ಹಾಗೆ
*ಕರೆದು ಹೆಣ್ಣು ಕೊಟ್ಟರೆ ಮಲ್ಲೋಗರ ಬಂತಂತೆ.
*ಕರೆಯದವರ ಮನೆಗೆ ಕಳಸಗಿತ್ತಿಯಾಗು
*ಕತ್ತೆಗೇನು ಗೊತ್ತು ಕಸ್ತೂರಿ ವಾಸನೆ
*ಕೆಟ್ಟ ಅಡಿಗೆ ಅಟ್ಟವಳೇ ಜಾಣೆ
*ಕೆಟ್ಟ ಕಾಲ ಬಂದಾಗ ಕಟ್ಟಿಕೊಂಡವಳೂ ಕೆಟ್ಟವಳು
*ಕೆಟ್ಟು ಪಟ್ಟಣ ಸೇರು
*ಕೆಲಸವಿಲ್ಲದ ಆಚಾರಿ ಮಗನ ತಲೆ ಕೆತ್ತಿದನಂತೆ
*ಕೆಲಸವಿಲ್ಲದ ಬಡಗಿ ಮಗುವಿನ ... ಕೆತ್ತಿದ
*ಕೆಲಸವಿಲ್ಲದ ಕುಂಬಾರ ಮಕ್ಕಳ ಅಂ.. ತಟ್ಟಿದ
*ಕಿಡಿ ಇಲ್ಲದೆ ಬೆಂಕಿಯಿಲ್ಲ ;ಕಾರಣ ಇಲ್ಲದೆ ಜಗಳವಿಲ್ಲ
*ಕೊಂದ ಪಾಪ ತಿಂದು ಪರಿಹಾರ
*ಕೊಂಕಣ ಸುತ್ತಿ ಮೈಲಾರಕ್ಕೆ ಬಂದರು
*ಕೊಟ್ಟೋನು ಕೋಡಂಗಿ;ಇಸಕೊಂಡೋನು ಈರಭದ್ರ
*ಕೊಟ್ಟ ಹೆಣ್ಣು ಕುಲದಿಂದ ಹೊರಗೆ
*ಕೊಟ್ಟವನು ಕೋಡಂಗಿ; ಇಸ್ಕೊಂಡೋನು ಈರಭದ್ರ
*ಕೊಟ್ಟಿದ್ದು ತನಗೆ; ಬಚ್ಚಿಟ್ಟದ್ದು ಪರರಿಗೆ
*ಕೊಚ್ಚೆ ಮೇಲೆ ಕಲ್ಲು ಹಾಕಿದಂತೆ
*ಕುಡಿಯೋ ನೀರಿನಲ್ಲಿ ಬೆರಳಾಡಿಸೋ ಬುದ್ಧಿ (ಕುಡಿಯೋ ನೀರಿನಲ್ಲಿ ... ಅದ್ದುವ ಬುದ್ಧಿ)
*ಕುಂಟನಿಗೆ ಎಂಟು ಚೇಷ್ಟೆ, ಕುರುಡನಿಗೆ ನಾನಾಚೇಷ್ಟೆ
*ಕುಂಬಾರನಿಗೆ ವರುಷ; ದೊಣ್ಣೆಗೆ ನಿಮಿಷ
*ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡ್ಕಂಡನಂತೆ
*ಕುಣೀಲಾರದ ಸೂಳೆ ನೆಲ ಡೊಂಕು ಅಂದ್ಳಂತೆ
*ಕುಣಿಯಲಾರದವಳು ನೆಲ ಡೊಂಕು ಅಂದಳಂತೆ
*ಕುದಿಯುವ ಎಣ್ಣೆಯಿಂದ ಕಾದ ತವದ ಮೇಲೆ ಬಿದ್ದ ಹಾಗೆ
*ಕುದುರೆ ಕಂಡರೆ ಕಾಲುನೋವು
*ಕುಲ ಸೋಸಿ ಹೆಣ್ಣು ತಗೊಂಡು ಬಾ ; ಜಲ ಸೋಸಿ ನೀರು ತಗೊಂಡು ಬಾ
*ಕುರಿ ಕಾಯೋದಕ್ಕೆ ತೋಳನನ್ನು ಕಳಿಸಿದರಂತೆ
*ಕುರಿ ಕೊಬ್ಬಿದಷ್ಟೂ ಕುರುಬನಿಗೇ ಲಾಭ
*ಕುರು ಮೇಲೆ ಬರೆ ಎಳೆದ ಹಾಗೆ
*ಕುರುಡರ ರಾಜ್ಯದಲ್ಲಿ ಒಕ್ಕಣ್ಣನೇ ರಾಜ
*’ಕೋ’ ಅನ್ನೋದು ಕುಲದಲ್ಲಿಲ್ಲ ,’ತಾ’ ಅನ್ನೋದು ತಾತರಾಯನ ಕಾಲದ್ದು
*ಖಂಡಿತ ವಾದಿ,ಲೋಕ ವಿರೋಧಿ
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
 
==ಗ==
*ಗಂಡ ಹೆಂಡಿರ ಜಗಳ ಉಂಡು ಮಲಗುವತನಕ
*ಗಂಡ ಹೆಂಡಿರ ಜಗಳದಲ್ಲಿ ಮಕ್ಕಳು ಜಗಳ ಕಲಿತವು
*ಗಂಧದ ಮರವನ್ನು ಸುಟ್ಟು ಬೂದಿಯ ತಂದು ಪೂಸಿದ
*ಗವುಜಿ ಗದ್ದಲ ಏನೂ ಇಲ್ಲ, ಗೋವಿಂದ ಭಟ್ಟ ಬಾವೀಲಿ ಬಿದ್ದ
*ಗಳಕ್ಕನೇ ಉಂಡವ ರೋಗಿ ಗಳಿಗೆ ಉಂಡವ ಭೋಗಿ
*ಗಾಣವಾಡದೆ ಎಣ್ಣೆ ಬಂದೀತೇ
*ಗಾಯದ ಮೇಲೆ ಬರೆ ಕೊಟ್ಟಂತೆ
*ಗಾಳಿ ಬಂದಾಗ ತೂರಿಕೊ, ಧಾರಣೆ ಬಂದಾಗ ಮಾರಿಕೊ
*ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ
*ಗುಡಿಸಿದ ಮೇಲೆ ಕಸವಿರಬಾರದು ಬಡಿಸಿದ ಮೇಲೆ ಹಸಿವಿರಬಾರದು
*ಗುಣಗೇಡಿ ಒಡನಾಟ ಯಾವಾಲು ದುಃಖದೇಲ್ ಇದ್ದಂತೆ
*ಗುರುವಿಗೆ ತಿರುಮಂತ್ರ
*ಗೆದ್ದವ ಸತ್ತ ಸೋತವ ಸತ್ತ
*ಗಾಳಿ ಬಂದಾಗ ತೂರಿಕೋ
*ಗಾಳಿ ಗುದ್ದಿ ಮೈ ಕೈ ನೋಯಿಸಿಕೊಂಡಂತೆ
*ಗಾಣಿಗಿತ್ತಿ ಅಯ್ಯೋ ಅಂದರೆ ನೆತ್ತಿ ತಂಪಾದೀತೇ?
*ಗಾಜಿನ ಮನೇಲಿರೋವ್ರು ಅಕ್ಕಪಕ್ಕದ ಮನೇ ಮೇಲೆ ಕಲ್ಲೆಸೆಯಬಾರದು
*ಗಾಯದ ಮೇಲೆ ಬರೆ ಎಳೆದಂತೆ
*ಗೋರ್ಕಲ್ಲ ಮೇಲೆ ಮಳೆಗರೆದಂತೆ
*ಗಡ್ಡಕ್ಕೆ ಬೇರೆ ಸೀಗೇಕಾಯಿ
*ಗಂಡ ಹೆಂಡಿರ ಜಗಳ ಉಂಡು ಮಲಗುವ ತನಕ
*ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು.
*ಗಂಡ ಸರಿಯಿದ್ರೆ ಗುಂಡೂ ಪಾವನ
*ಗಂಡ-ಹೆಂಡಿರ ಜಗಳ ತಿಂದು ಮಲುಗೊ ವರೆಗೆ
*ಗಂಡಸಿಗೇಕೆ ಗೌರಿ ದು:ಖ ?
*ಗಂಡಸು ಕೂತು ಕೆಟ್ಟ ;ಹೆಂಗಸು ತಿರುಗಿ ಕೆಟ್ಟಳು
*ಗಂಟೂ ಹೋಯ್ತು;ನಂಟೂ ಹೋಯ್ತು
*ಗಂಧ ಹೆಚ್ಚಾಯ್ತು ಅಂತ ಎಲ್ಲೆಲ್ಲಿಗೂ ಬಳಿದುಕೊಂಡರಂತೆ
*ಗಂಜಿ ಕುಡಿಯೋನಿಗೆ,ಮೀಸೆ ಹಿಡಿಯುವವನೊಬ್ಬ
*ಗಣೇಶನನ್ನು ಮಾಡಲು ಹೋಗಿ ಅವರ ಅಪ್ಪನನ್ನು ಮಾಡಿದಂತೆ
*ಗೌರಿ ಹಬ್ಬಕ್ಕೆ ಬಂದ ಗತಿಗೆಟ್ಟ ಅಳಿಯ
*ಗೆದ್ದೆತ್ತಿನ ಬಾಲ ಹಿಡಿದ ಹಾಗೆ
*ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ ?
*ಗಿಣಿ ಸಾಕಿ ಗಿಡುಗದ ಕೈಗೆ ಕೊಟ್ಟರು
*ಗಿಣಿ ಸಾಕಿ ಗಿಡುಗನ ಕೈಗೆ ಕೊಟ್ಟರು.
*ಗುಡ್ಡ ಕಡಿದು ಹಳ್ಳ ತುಂಬಿಸಿ ನೆಲ ಸಮ ಮಾಡಿದ ಹಾಗೆ
*ಗುಂಪಿನಲ್ಲಿ ಗೋವಿಂದ
*ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ
*ಗುರುವಿಗೇ ತಿರುಮಂತ್ರ
*ಘಟಾ (ದೇಹ ) ಇದ್ದರೆ ಮಠಾ ಕಟ್ಟಿಸಬಹುದು.
*ಗಾಳಿ ಬಂದಾಗ ತೂರಿಕೊ, ಧಾರಣೆ ಬಂದಾಗ ಮಾರಿಕೊ
*ಗಂಡ ಹೆಂಡಿರ ಜಗಳ ಉನ್ಡು ಮಲಗೊ ತನಕ
*ಗವುಜಿ ಗದ್ದಲ ಏನೂ ಇಲ್ಲ, ಗೋವಿಂದ ಭಟ್ಟ ಬಾವೀಲಿ ಬಿದ್ದ
*ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
==ಚ==
*ಚರ್ಮ ಸುಕ್ಕಾದ್ರೆ ಮುಪ್ಪು, ಕರ್ಮ ಮುಕ್ಕಾದ್ರೆ ಮುಕ್ತಿ
*ಚಿತ್ತದ ಕಳವಳ ನಿಲ್ಲಿಸಿದವರೇ ಉತ್ತಮರು
*ಚಿತ್ತವಿಲ್ಲದವಳ ಒಡಗೂಟ ನಾಯ್ ಹೆಣಾನ ಹತ್ತಿ ತಿನ್ನುವಂತೆ
*ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ
*ಚೌಲದಾಗ ದೌಲು ಮಾಡು
*ಚೇಳಿಗೆ ಪಾರುಪತ್ಯ ಕೊಟ್ಟರೆ ಮನೆಯವರಿಗೆಲ್ಲಾ ಮುಟ್ಟಿಸಿತಂತೆ.
*ಚೇಳಿಗೊಂದೇ ಬಸಿರು ; ಬಾಳೆಗೊಂದೇ ಗೊನೆ
*ಚಂಡಾಲ ದೇವರಿಗೆ ಚಪ್ಪಲಿ ಸೇವೆ
*ಚೆಲ್ಲಿದ ಹಾಲಿಗೆ ಅತ್ತು ಪ್ರಯೋಜನವಿಲ್ಲ
*ಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆ ಬಂತು
*ಚಿನ್ನದ ಸೂಜೀಂತ ಕಣ್ಣು ಚುಚ್ಚಿಕೊಳ್ಳುವುದಕ್ಕೆ ಆಗುತ್ತದೆಯೇ?
*ಚಿತ್ತಾರದ ಅಂದವನ್ನು ಮಸಿ ನುಂಗಿತು
*ಛತ್ರದಲ್ಲಿ ಭೋಜನ , ಮಠದಲ್ಲಿ ನಿದ್ದೆ .
*ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ
*ಚರ್ಮ ಸುಕ್ಕಾದ್ರೆ ಮುಪ್ಪು, ಕರ್ಮ ಮುಕ್ಕಾದ್ರೆ ಮುಕ್ತಿ
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
==ಜ==
*ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ
*ಜನ ಮರುಳೋ ಜಾತ್ರೆ ಮರುಳೋ
*ಜನಕ್ಕಂಜದಿದ್ದರೂ ಮನಕ್ಕಂಜಬೇಕು
*ಜಪ-ತಪ ಉಪವಾಸ ಇದ್ದರೆ ಅಂತಕನ ವಿಪರೀತ ತಪ್ಪೀತೆ
*ಜಿನ ಧರ್ಮವೇ ಜೀವಧರ್ಮ
*ಜೀವ ಜೀವವ ತಿಂದು ಜೀವಿಸುತಿದೆ ಜಗವೆಲ್ಲ
*ಜ್ಯೋತಿಯ ನೆಲೆ ಅರಿತವನೇ ಯೋಗಿ
*ಜಾಣನಿಗೆ ಮಾತಿನ ಪೆಟ್ಟು; ದಡ್ಡನಿಗೆ ದೊಣ್ಣೆಯ ಪೆಟ್ಟು
*ಜೀನ ಗಳಿಸಿದ ;ಜಾಣ ತಿಂದ
*ಜಟ್ಟಿ ಜಾರಿದರೆ ಅದೂ ಒಂದು ಪಟ್ಟು
*ಜರಡಿ ಸೂಜಿಗೆ ಹೇಳಿತಂತೆ: ನಿನ್ನ ಬಾಲದಲ್ಲಿ ತೂತು
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
 
==ಟ==
*ಟೊಣಪೆ (ಗಾತ್ರದಲ್ಲಿ ದೊಡ್ಡದಾದ) ಶಾಸ್ತ್ರಕ್ಕೆ ಹೆಣಗುವುದೇ ಅರ್ಥ
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
==ಡ==
*ಡಂಬು (=ಬೂಟಾಟಿಕೆ) ನನ್ನ ಕೇಳು, ಡಬ್ಬು ನನ್ನ ಹೆಂಡ್ರನ್ನ ಕೇಳು
*ಡಾವರ (=ನೀರಡಿಕೆ) ಹತ್ತಿದಾಗ ದೇವರ ಧ್ಯಾನ
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
==ತ==
*ತಕ್ಕಡಿ ಬಲ್ಲದೇ ಮನೆಯ ಬಡತನವ
*ತಕ್ಕಡಿ ಸ್ವರೂಪ ತಕ್ಕವನೇ ಬಲ್ಲ
*ತಕ್ಕವನಲ್ಲಿ ಹೊಕ್ಕಿದ್ದರೆ ತಕ್ಕಷ್ಟಾದರೂ ಸಿಕ್ಕುವುದು
*ತಕ್ಕುದನ್ನು ಅರಿಯದ ಓದು ಲಕ್ಷ ಓದಿದರೇನು
*ತಕ್ರ (=ಮಜ್ಜಿಗೆ) ಶಕ್ರನಿಗೆ(=ಇಂದ್ರ) ಸಹಾ ದುರ್ಲಭ
*ತಗಣೇ ಉಪದ್ರವ ಮಗಳಿಗೂ ಬಿಡಲಿಲ್ಲ
*ತಗಲಿದವನಿಗೆ ಹಗಲಿರುಳೇನು?
*ತಗಲುಗಾರನಿಗೆ (= ದಗಲ್ ಬಾಜ್) ಬಗಲ ಮೇಲೆ ಜ್ಞ್ಯಾನ
*ತಗ್ಗಿದವ ಎಂದಿಗೂ ನುಗ್ಗಾಗ
*ತಗ್ಗು ಗದ್ದೆಗೆ ಮೂರು ಬೆಳೆ ಎತ್ತರದ ಗದ್ದೆಗೆ ಒಂದೇ ಬೆಳೆ
*ತಗ್ಗು ದವಸಕ್ಕಾಗಿ ಹಗ್ಗ ಕೊಂಡು ಕೊಂಡ
*ತಟಕಿನಿಂದ ತಟಪಟವಾಯಿತು
*ತಟಕು ಬಿದ್ದು ಮಠಾ ಕೆಡಿಸಿತು
*ತಟದಲ್ಲಾಗಲೀ ಮಠದಲ್ಲಾಗಲೀ ಹಟದ ಜಂಗಮನ ಕಾಟ ತಪ್ಪುವುದಿಲ್ಲ
*ತಟಸ್ಥನಾದವನಿಗೆ ತಂಟೆಯೇನು?
*ತಟ್ಟನೆ ಆಡಿದರೆ ಕೊಟ್ಟಷ್ಟು ಫಲ
*ತಟ್ಟನೆ ಬಾ ಅಂದ್ರೆ ತುಟಿ ಬಿಟ್ಟನಂತೆ
*ತಟ್ಟಿ ಬೈಸಿಕೊಂಡರೂ ತಟ್ಟೇ ಹುಳಿ ಚೆನ್ನಾಗಿದೆ
*ತಟ್ಟಿನಲ್ಲಿ ಬಿದ್ದಾಗ್ಯೆ ಗಟ್ಟಿ ಆಗಲಾರ
*ತಟ್ಟು ಇದ್ದರ‍ೇ ತಟಾಯಿಸಿ ನಡದಾನು
*ತಡವ ಮಾಡುವವನ ಗೊಡವೆ ಬೇಡ
*ತಡವಿದರೆ ಮಡಿ ಸಹಾ ಕೆಡುವುದು
*ತಡೇ ಕಟ್ಟುವವನ ಮುಂದೆ ಮುಡಿಯೇನು
*ತಣ್ಣಗಿದ್ದರೆ ಮಣ್ಣಾದರೂ ಅಸಾಧ್ಯ
*ತಣ್ಣೀರು ಆದರೂ ಪುಣ್ಯದಿಂದ ದೊರಕಬೇಕು
*ತತ್ರಬಿತ್ರಿಯ (ತಂತ್ರಗಾರ) ಮುಂದೆ ಕತ್ತೆಯ ಹಾಗೆ ಆದ
*ತತ್ವಮಸಿ ಅಂತ ಅನ್ನೋದ್ ಕಲಿ ಅಂದ್ರೆ ತುತ್ತು ಸವಿ ಅಂತ ಉಣ್ನೋದ್ ಕಲ್ತ
*ತನಗಿಲ್ಲದ್ದು ಎಲ್ಲಿದ್ದರೇನು
*ತನಗೆ ಇಲ್ಲ ಕೂಸಿಗೇನು ಹೊದ್ದಿಸಲಿ
*ತನಗೆ ಇಲ್ಲದ ಮಾರಿ ತಮ್ಮಡಿಗೆ (ತಮ್ಮಡಯ್ಯನಿಗೆ) ವರಾ ಕೊಟ್ಟೀತೇ?
*ತನಗೆ ಇಲ್ಲದವಳು ಮಕ್ಕಳಿಗೆ ಏನು ಹೊದಿಸ್ಯಾಳು
*ತನಗೆ ಬಂದ ಹಾನಿ ದುಡ್ಡಿನಿಂದ ಹೋಯಿತು
*ತನಗೇ ಇಲ್ಲದವ ಪರರಿಗೆ/ಮಂದಿಗೆ ಏನು ಕೊಟ್ಟಾನು
*ತನುವರಿಯದ ನೋವಿಲ್ಲ ಮನವರಿಯದ ತಾಪವಿಲ್ಲ
*ತನ್ನ ಅಕ್ಕನ ಅರಿಯದವಳು ನೆರೆಮನೆ ಬೊಮ್ಮಕ್ಕನ ಬಲ್ಲಳೇ?
*ತನ್ನ ಕಾಲಿಗೆ ತಾನೇ ಶರಣು ಮಾಡಿ ಹರಸಿಕೊಂಡ ಹಾಗೆ
*ತನ್ನ ತಾ ತನ್ನಿಂದಲೇ ಅರಿಯಬೇಕು
*ತನ್ನ ತಾ ತಿಳಿದು ತಾನು ತಾನಾದುದೆ ಉನ್ನತಿ
*ತನ್ನ ತಾ ಬಲ್ಲವನೆ ಬಲ್ಲವ
*ತನ್ನ ತಾನರಿತರೆ ತನ್ನರಿವೆ ಗುರು
*ತನ್ನ ತಾನರಿತರೆ ತಾನ್‍ಆದಾನು ತನ್ನ ತಾ ಮರೆತರೆ ತಾ ಹೋದಾನು
*ತನ್ನ ತಾನರಿತರೆ ಸುಜ್ಞ್ನಾನಿ
*ತನ್ನ ತಾನರಿತವಗೇ ತ್ರಿಭುವನ ತನ್ನೊಳಗೆ ಕಂಡಿತ್ತು
*ತನ್ನ ನೆರಳಿಗೆ ತಾನಂಜಿ ನಡೆಯಬೇಕು
*ತನ್ನ ನೆರಳು ತಾ ಕಂಡು ನರಳುವವ ಮರುಳನಲ್ಲವೇ?
*ತನ್ನ ಮನೆ ಉಪ್ಪು ಇಲ್ಲ ಬೆನ್ನ ಹಿಂದೆ ಉರಿಯೋ
*ತನ್ನ ಮರ್ಯಾದೆ ಕೆಟ್ಟವ ಪರರ ಮರ್ಯಾದೆ ಇಟ್ಟಾನೆ?
*ತನ್ನ ಸುಖವೇ ಲೋಕದ ಸುಖ, ತನ್ನ ಕಷ್ಟವೇ ಲೋಕದ ಕಷ್ಟ
*ತನ್ನ ಹಲ್ಲು ತಾ ಮರಕೊಂಡು ಇನ್ನೊಬ್ಬನ ಮೇಲೆ ದೂರು ಹೇಳಿದ
*ತನ್ನ ಹೊಟ್ಟೆ ತಾ ಹೊರೆಯದವ ಮುನ್ನಾರ ಸಲಹುವ?
*ತನ್ನೂರಲಿ ರಂಗ, ಪರೂರಲಿ ಮಂಗ
*ತಪಸ್ಸಿಗೆಂತ ಹೋಗಿ ಕುಪ್ಪಸಾ ಕಳಕೊಂಡ
*ತಪಸ್ಸು ಇದ್ದವನೇ ಗಭಸ್ತಿ (=ಕಾಂತಿ) ಉಳ್ಳವನು
*ತಪ್ಪನೆ ಬಾ (=ತಕ್ಷಣ ಬಾ ) ಅಂದ್ರೆ ತಬ್ಬಲಿಕ್ಕೆ ಬಂದ ಹಾಗೆ
*ತಪ್ಪಲೇಲಿ ಇದ್ದದ್ದು ಹೋದರೆ ಕಪಾಲದಲ್ಲಿ ಇದ್ದದ್ದು ಹೋದೀತೇ
*ತಪ್ಪಿ ಬಿದ್ದವನಿಗೆ ತೆಪ್ಪ (=ದೋಣಿ) ಏನು ಮಾಡೀತು
*ತಪ್ಪಿದವನಿಗೆ ಒಪ್ಪು ಇಲ್ಲ
*ತಪ್ಪು ಹೊರಿಸಿದವನಿಗೆ ಒಪ್ಪುವವನು ಯಾರು
*ತಫಾವತುಗಾರ (=ಹಣ ತಿಂದು ಹಾಕುವವ) ತಪ್ಪಿದರೆ ತಿಪ್ಪಯ್ಯಗೆ ಏನು ಕೋಪ
*ತಬ್ಬಲಿ ತಬಕು (ಎಲೆ ಅಡಿಕೆ ತಟ್ಟೆ, ತಂಬಾಕು ತಟ್ಟೆ) ಕದ್ದು ಜಗಲೀಲಿ ಸಿಕ್ಕಿಬಿದ್ದ
*ತಬ್ಬಲಿಯಾದವನು ಬೊಬ್ಬೆ ಹಾಕಿ ಹೆಬ್ಬುಲಿಯ ಓಡಿಸ್ಯಾನೆ?
*ತಬ್ಬಳಿ ದೇವರಿಗೆ ತಂಗಳ ನೈವೇದ್ಯ
*ತಮ್ಮ ಒಳ್ಳೆಯವನೇ ಸರಿ ಒಮ್ಮಾನಕ್ಕಿಗೆ ಮಾರ್ಗವಿಲ್ಲ
*ತಮ್ಮ ಕಲಹಕ್ಕೆ ಐವರು ಪರರ ಕಲಹಕ್ಕೆ ನೂರಾ ಐವರು
*ತಮ್ಮ ನಮ್ಮವನಾದರೂ ನಾದಿನಿ ನಮ್ಮವಳಲ್ಲ
*ತಮ್ಮ ಸಂಗಡ ತಂಗಿಯ ಗಂಡ ದೂರು ಹೇಳಿದರೆ ನಿನಗೇನಪ್ಪ
*ತಮ್ಮನ ಸಂಗಡ ತಿಮ್ಮ ಬಂದರೆ ತಂಗಳನ್ನವೇ ಗತಿ
*ತರಗು (=ಒಣಗಿದ ಎಲೆ) ತಿಂಬುವುದೇ ಪರಮ ಸುಖ
*ತರಗು (ಮರದಿಂದ ಬಿದ್ದ ಒಣ ಎಲೆಗಳು)ಮೊರದಲ್ಲಿ ಹಿಡಿಯದು
*ತರಗು ತಿಂಬವನಿಗೆ ಒರಗೊಂದು ಕೇಡು
*ತರಗು ತಿನ್ನುವವನ ಮನೆಗೆ ಹಪ್ಪಳಕ್ಕೆ ಹೋದರು
*ತರಗು ಲಡ್ಡಿಗೆ ಡೊಳ್ಳು ಗಣಪತಿಯೇ ಶ್ರೇಷ್ಠ
*ತರಗೆಲೆ ಅಡಿಕೆ ತಿರಿದು ತಿನ್ನಬೇಕೆ
*ತರತರವಾಗಿ ಹೇಳಿದ್ದು ಮರೆತರೆ ಮರಕ್ಕಿಂತಾ ಕಡೆ
*ತರಬಲ್ಲವನ ಹೆಂಡತಿ ಅಡಜಾಣೆ (ಅಡಕವಾದ ಜಾಣ್ಮೆ ಉಳ್ಳವಳು)
*ತರಲಿಲ್ಲ ಬರಲಿಲ್ಲ ಬರ ಹ್ಯಾಗೆ ಹಿಂಗೀತು
*ತರಲೆ ಕೇಳುವವ ಮರುಳಗಿಂತ ಕಡೆ
*ತರವಲ್ಲದ ಮಾತು ಮರ ಏರಿದರೆ ಆದೀತೇ
*ತರಹರಿಸಾಳಾರದವಳು ಮರಣಕ್ಕೆ ಪಾತ್ರಳು
*ತರುಬಿ ಹೋಗುವನ್ನ ಕರುಬಿ (=ಅಸೂಯೆ) ಮಾಡುವುದೇನು?
*ತರುಬಿದವಗೂ (=ಅಡ್ಡಕಟ್ಟು, ಹೊಡೆ) ಓಡಿದವಗೂ ಸರಿಪಾಲು ಕಷ್ಟ
*ತರುಬಿಲ್ಲದ ಒಡ್ಡನು, ಬಿರಿಸಿಲ್ಲದ ಹುರಿಯು
*ತರುಬು ಇದ್ದರೆ ಹರುಬು ನಿಂತೀತೇ
*ತರುವವ ಮರೆತರೆ ಮೊರ ಏನು ಮಾಡೀತು
*ತರುವವ ಹೋದಮೇಲೆ ಮರಗುವವರುಂಟೇ
*ತರ್ಕಾ ಮಾಡುವವ ಮೂರ್ಕನಿಂದ ಕಡೆ
*ತಲೆ ಗಟ್ಟಿ ಅಂತ ಕಲ್ಲ ಹಾಯಬಾರದು
*ತಲೆ ಚೆನ್ನಾಗಿದ್ದರೆ ಮುಂಡಾಸು ನೂರು ಕಟ್ಟಬಹುದು
*ತಲೆ ತಾಗಿದ್ದಲ್ಲದೆ ಬುದ್ಧಿ ಬಾರದು
*ತಲೆ ಬಲಿಯಿತು ಅಂತ ಕಲ್ಲಿಗೆ ಹಾಯಬಾರದು
*ತಲೆ ಸೀಳಿದರೆ ಎರಡಕ್ಷರ ಇಲ್ಲ
*ತಲೆ ಹೋಗುವುದಕ್ಕೆ ಕಾಲು ಹೊಣೆಯಾದ ಹಾಗೆ
*ತಲೆಗೆ ಎಣ್ಣೆ ಇಲ್ಲ ತನು ಮೃಗನಾಭಿ ಬೇಡಿತು
*ತಲೆಗೆ ಒಂದು ಕಡ್ಡೀಯಾದರೆ ಒಂದು ತಲೆಯ ಹೊರೆ
*ತಲೇ ಒಡೆದವನೂ ಸಮ ಲೇಪ ಹಚ್ಚಿದವನೂ ಸಮ
*ತಲೇ ಕೂದಲಿದ್ದರೆ ಎತ್ತ ಬೇಕಾದರು ತುರುಬು ಹಾಕಿಕೊಳ್ಳಬಹುದು
*ತಲೇ ಕೂದಲಿಲ್ಲದವಳು ತುರುಬು ಬಯಸಿದಳಂತೆ
*ತಲೇ ಕೂದಲು ಉದ್ದವಿದ್ದವಳು ಹ್ಯಾಗೆ ಕಟ್ಟಿದರೂ ಚಂದ
*ತಲೇ ಕೂದಲು ನೆರೆಯಾದ ಮೇಲೆ ತಬ್ಬಿಕೊಂಡ ತಬ್ಬಲಿ ಮುರವ (=ತಿರುಕ)
*ತಲೇ ಮೂರು ಸುತ್ತು ತಿರುಗಿದರೂ ತುತ್ತು ಬಾಯಿಲೇ
*ತಲೇ ಮೇಲಣ ಬರಹ ಎಲೆಯಿಂದ ಒರೆಸಿದರೆ ಹೋದೀತೇ
*ತಲೇ ಸಿಡಿತಕ್ಕೆ ಮಲಶೋಧನೇ ಕೊಂಡ ಹಾಗೆ
*ತವಕ ಪಟ್ಟವ ತಬ್ಬರಿಸಿ ಬಿದ್ದ
*ತವಡು ತಿಂದರು ಮುರುಕು (ಬೆಡಗು, ಕೊಂಕು) ಘನ
*ತವಡು ತಿಂಬುವನಿಗೆ ವಯ್ಯಾರ ಯಾಕೆ
*ತವಡು ತಿಂಬುವವ ಹೋದರೆ ಉಮ್ಮಿ ತಿಂಬುವವ ಬತ್ತಾನೆ
*ತವರೂರಿನ ದಾರೀಲಿ ಕಲಿಲ್ಲ ಮುಳ್ಳಿಲ್ಲ
*ತಳಮಳ ತೀರಲಿಲ್ಲ, ಕಳವಳ ಕಳಿಯಲಿಲ್ಲ
*ತಳವಾರನಿಗೆ ಪಟ್ಟ ಕಟ್ಟಿದರೆ ಕುಳವಾರು (ಒಕ್ಕಲಿಗರ ಸಮೂಹ) ಹೋದೀತೋ?
*ತಳಾ ಬಿಟ್ಟು ಬಂಡಿ ಹಾರದು
*ತಳಿಗೆ ಚಂಬು ಹೋದ ಮೇಲೆ ಮಳಿಗೇ ಬಾಗಿಲು ಮುಚ್ಚಿದ ಹಾಗೆ
*ತಾ ಅನ್ನೋದು ನಮ್ಮ ತಲತಲಾಂತರಕ್ಕೂ ಇರಲಿ, ಕೊ ಅನ್ನೋದು ನಮ್ಮ ಕುಲಕೋಟಿಗೂ ಬೇಡ
*ತಾ ಕಳ್ಳೆ ಪರರ ನಂಬಳು, ಹಾದರಗಿತ್ತಿ ಗಂಡನ ನಂಬಳು
*ತಾ ಕಾಣದ ದೇವರು ಪೂಜಾರಿಗೆ ವರ ಕೊಟ್ಟೀತೇ?
*ತಾ ಕೋಡಗ ಪರರ ಅಣಕಿಸಿತು
*ತಾ ನೊಂದಂತೆ ಬೇರೇರ ನೋವನ್ನೂ ಅರಿಯಬೇಕು
*ತಾ ಬಲವೋ ಜಗ ಬಲವೋ
*ತಾಗದೆ ಬಾಗದು ಬಿಸಿಯಾಗದೆ ಬೆಣ್ಣೆ ಕರಗದು
*ತಾಟುಗಾರ (ಗರ್ವದ ಮನುಷ್ಯ) ಆಟಕ್ಕೆ ಹೋಗಿ ಮೋಟಗಾರನಾಗಿ (ತನ್ನಿಂದಲೇ ತಾ ಮೂರ್ಕನಾಗುವುದು) ಬಿದ್ದ
*ತಾತಾಚಾರ‍್ಯರ ಮನೆಗೆ ಏನಪ್ಪಣೆ?
*ತಾನಾಗಿ ಬೀಳುವ ಮರಕ್ಕೆ ಕೊಡಲಿ ಇಕ್ಕಿದ ಹಾಗೆ
*ತಾನು ಗರತಿ ಆದರೆ ಸೂಳೆಗೇರೀಲಿ ಮನೆ ಕಟ್ಟು
*ತಾನು ಜಾರಿಬಿದ್ದು ಉಣ್ಣೆಯಂತ ನೆಲ ಅಂದ
*ತಾನು ತಿಂದದ್ದು ಮಣ್ಣು ಹೆರರಿಗೆ ಕೊಟ್ಟದ್ದು ಹೊನ್ನು
*ತಾನು ತಿಂಬೋದು ಪಲ್ಲೆ ಸೊಪ್ಪು ಹಿರೇ ಕುದರೆ ಚೇಷ್ಟೆ
*ತಾನು ನೆಟ್ಟ ಬೀಳು (ಬಳ್ಳಿ) ತನ್ನ ಎದೆಗೆ ಹಬ್ಬಿತು
*ತಾನು ಬಾಳಲಾರದೆ ವಿಧಿಯ ಬೈದಂತೆ
*ತಾನು ಸಾಯಬೇಕು ಸ್ವರ್ಗಾ ಪಡೆಯಬೇಕು
*ತಾನು ಹೋದರೆ ಮಜ್ಜಿಗೆ ಇಲ್ಲ ಮೊಸರಿಗೆ ಚೀಟು
*ತಾನು ಹೋದರೆ ಮಜ್ಜಿಗೆ ಇಲ್ಲ ಹೇಳಿ ಕಳಿಸಿದರೆ ಮೊಸರು ಕೊಟ್ಟಾರೆ
*ತಾನುಂಟೋ? ಮೂರು ಲೋಕವುಂಟೋ?
*ತಾನೂ ಕುಡಿಯ ಕುಡಿಯಲೀಸ
*ತಾನೊಂದೆಣಿಸಿದರೆ ದೈವವೊಂದೆಣಿಸಿತು
*ತಾನೊಲಿದ ಮಂಕು ಮಾಣಿಕ್ಯ
*ತಾಪತ್ರಯದವನಿಗೆ ತಾಪೆ/ಚಾಪೆ ಯಾಕೆ
*ತಾಮ್ರದ ನಾಣ್ಯ ತಾಯಿ ಮಕ್ಕಳನ್ನ ಕೆಡಿಸ್ತು
*ತಾಯಂತೆ ಕರು ನಾಯಂತೆ ಬಾಲ
*ತಾಯಂತೆ ಮಕ್ಕಳು ನೂಲಂತೆ ಸ್ಯಾಲೆ
*ತಾಯಿ ಒಂದಾದರೂ ಬಾಯಿ ಬೇರೆ
*ತಾಯಿ ಕಲಿಸಿದ ಊಟ ತಂದೆ ಕಲಿಸಿದ ಬುದ್ಧಿ
*ತಾಯಿ ಬೇಕು ಇಲ್ಲವೆ ಬಾಯಿ ಬೇಕು
*ತಾಯಿ ಮಾಡಿದ ಹೊಟ್ಟೆ ಊರು ಮಾಡಿದ ಕೊಳಗ
*ತಾಯಿ ಮಾರಿಯಾದರೆ ತರಳನು ಎಲ್ಲಿ ಹೋದಾನು
*ತಾಯಿಗೆ ಕಂಡರೆ ತಲೆ ನೋವು
*ತಾಯಿಗೆ ಕುಲವಿದ್ದರಷ್ಟೇ ಮಗಳಿಗೂ ಕುಲ
*ತಾಯಿಗೆ ಸೇರದ್ದು ನಾಯಿಗೂ ಸೇರದು
*ತಾಯಿದ್ದರೆ ತವರು ಮನೆ ನೀರಿದ್ದರೆ ಕೆರೆ ಬಾವಿ
*ತಾಯಿನ್ನ ನೋಡಿ ಮಗಳನ್ನ ತಕ್ಕೋ ಹಾಲನ್ನ ನೋಡಿ ಎಮ್ಮೇನ್ನ ತಕ್ಕೋ
*ತಾಯಿಯ ಹತ್ತಿರ ತರ್ಕವಲ್ಲ ಗುರುವಿನ ಹತ್ತಿರ ವಿದ್ಯೆಯಲ್ಲ
*ತಾಯಿಲ್ಲದ ತವರು ಕಾಟಕದಿದ್ದ ಅಡವಿ
*ತಾರಕ್ಕೆ (ಎರಡು ಕಾಸಿನ ನಾಣ್ಯ) ಮೂರು ಸೇರು ಉಪ್ಪಾದರೂ ತರುವುದಕ್ಕೆ ಗತಿ ಬೇಡವೋ
*ತಾರಕ್ಕೊಂದು ಸೀರೆಯಾದರೂ ನಾಯಿ ತಿಕ ಬೆತ್ತಲೆ
*ತಾರತಮ್ಯ ಅರಿಯದವ ದೊರೆಯಲ್ಲ ಮಾತು ಮೀರಿದವ ಸೇವಕನಲ್ಲ
*ತಾರು ಮಾರು ಮಾಡುವವನಿಗೆ ಯಾರು ತಾನೆ ನಂಬ್ಯಾರು
*ತಾರುಣ್ಯವೇ ರೂಪು ಕಾರುಣ್ಯವೇ ಗುಣ
*ತಾರೇ ಬಡ್ಡೀ ನೀರಾ ಅಂದ್ರೆ ತರುವೆನು ನಿಲ್ಲೊ ತಿರುಕ ಮುರವ
*ತಾರೇಮರದ ಕಾಯಾದರೂ ಕರೆದರೆ ಬಂದೀತೇ
*ತಾವು ಮಾಡುವುದು ಗಂಧರ್ವರು ಮಾಡಿದರು
*ತಾಸಿಗೊಂದು ಕೂಸು ಹೆತ್ತರೆ ಈಸೀಸು ಮುತ್ತು
*ತಾಸಿನ ಗೊತ್ತು ದಾಸಿಗೆ ತಿಳಿದೀತೇ?
*ತಾಸಿನ ಬಟ್ಟಲು ನೀರ ಕುಡಿದರೆ ತಾಸಿಗೆ ಕೊಡತೀ ಪೆಟ್ಟು
*ತಾಳ ತಪ್ಪಿದ ಬಾಳು, ತಾಳಲಾರದ ಗೋಳು
*ತಾಳ ತಪ್ಪಿದರೆ ಕುಣಿಯೊದು ತಪ್ಪುವುದಿಲ್ಲ
*ತಾಳದಲ್ಲಿ ಜಾಣನಾದರೆ ತಾಳಿಕೆ ಇದ್ದೀತೇ
*ತಾಳಲಾರದ ವಿರಹ ತಿಣಕಿದರೆ ಹೋದೀತೇ?
*ತಾಳಿಕೆ (ತಾಳ್ಮೆ) ಉಳ್ಳವನಲ್ಲಿ ಕೇಳಿದರೆ ಕಾಳು ಸಿಕ್ಕುವುದು
*ತಾಳಿದವ ಬಾಳ್ಯಾನು
*ತಾಳು ಬಡಿದರೆ ಕಾಳು ಸಿಕ್ಕೀತೇ
*ತಾಳೆ ಹೂವು ಶಿವನಿಗೆ ಆಗದು ಸಂಪಿಗೆಯ ಹೂ ಸಾಲಿಗ್ರಾಮಕೆ ಆಗದು
*ತಾಳೆಮರ ಉದ್ದವಾದರೆ ಕೋಳಿಗೆ ಬಂದದ್ದೇನು
*ತಾಳೆಮರ ದೊಡ್ಡದಾದರೂ ತಾಳೆ ಹೂವಿಗೆ ಸರಿಯಾದೀತೇ
*ತಾಳೇ ಹಣ್ಣು ತಾನೇ ಬಿದ್ದರೂ ಬಾಳಾದ ಮುರವಗೆ ಬಾಯಿ ಮುಚ್ಚಿತು
*ತಾಳ್ಮೆ ಇದ್ದ ಪುರುಷರಲ್ಲಿ ಬೀಳು ಬಿದ್ದರೆ ಬಾಳ್ಯಾನು
*ತಿಂಗಳ ಬೆಳಕಾಗಿ ಬಾಳಿನಲ್ಲಿ ತಂಗಾಳಿ ಹಿಂಗದಿರಲಿ
*ತಿಕ ಮಕ ಒಂಡೇ ತಿಪ್ಪಾಭಟ್ಟರಿಗೆ
*ತಿಗಳಗಿತ್ತಿಯ ಬಾಯಿ ಕೆಣಕಬೇಡ ಬಗಳೊ ನಾಯಿ ಬಡಿಯಬೇಡ
*ತಿಗಳಾ ತಾ ಕೆಡುತ್ತಾ ಏಳು ನೆರೆ ಕೆಡಿಸಿದ
*ತಿಗುಳಗೆ ತುತ್ತಿಗೆ ತತ್ವಾರವಾದರೂ ನೆತ್ತಿತುಂಬಾ ನಾಮಕ್ಕೆ ಕಡಿಮೆ ಇಲ್ಲ
*ತಿಪ್ಪಯ್ಯಗೆ ಸೂಜಿ ಮೇಲು ಕಳ್ಳಗೆ ಬಾಯಿ ಮೇಲು
*ತಿಪ್ಪೆಯ ಮೇಲೆ ಕುಂಡ್ರುವವಗೆ ತಕ್ಯೆ ಯಾತಕ್ಕೆ
*ತಿಪ್ಪೇ ಮೇಲಣ ಅರಿವೆಯಾದರೂ ಕಾಲಿಗೆ ಕಟ್ಟಿದರೆ ಬಿರುದು
*ತಿಪ್ಪೇ ಮೇಲಣ ದೀಪ ಉಪ್ಪರಿಗೆಯ ಮೇಲೆ ಬಂದೀತೋ?
*ತಿಪ್ಪೇ ಮೇಲೇ ಮುಪ್ಪಾದ ಕುಂಬಾರ ತಿಪ್ಪ
*ತಿಪ್ಪೇ ಮ್ಯಾಲೆ ಮಲಗಿ ಉಪ್ಪರಿಗೆ ಕನಸು ಕಂಡ ಹಾಗೆ
*ತಿಮರು (=ಕಡಿತ, ನವೆ) ತುರಿಸಿದರೆ ಅರಸಿನ ಹಾಗೆ
*ತಿರಿಚಿನಾಪಳ್ಳಿಗೆ ತಿರಿದುಂಬೊದಕ್ಕೆ ಇಲ್ಲಿಂದ ಕೈ ಸವರಿಸಬೇಕೆ
*ತಿರಿತಿರಿಗಿ ಗೋಕರ್ಣಕ್ಕೆ ಹೋಗಿ ತುರಕನಿಂದ ದೆಬ್ಬೆ ತಿಂದ
*ತಿರಿತಿರಿಗಿ ತಿಮ್ಮಪ್ಪನ ಹತ್ತರ ಹೋದರೆ ತಿರಿದುಂಬೋದು ತಪ್ಪೀತೇ?
*ತಿರಿದುಂಬುವ ಭಟ್ಟ ದಕ್ಷಿಣೆಯಾದರೂ ಬಿಟ್ಟಾನು ಭೊಜನ ಸಿಕ್ಕಿದರೆ ಬಿಡಲೊಲ್ಲ
*ತಿರುಕನ ಬಳಿಗೆ ತಿರುಕ ಹೋದರೆ ಮರುಕ ತಾ ಬರುವುದೇ?
*ತಿರುಕನಿಗೆ ಮುರುಕು (ಬೆಡಗು ಕೊಂಕು) ಇದ್ದಾಗ್ಯೂ ತಿರಿದುಂಬುವುದು ತಪ್ಪದು
*ತಿರುದುಂಬುವುದಕ್ಕೆ ಬೀದಿ ಹಂಚಿಕೊಂಡ ಹಾಗೆ
*ತಿರುಪತಿ ಕ್ಷೌರಿಕರು ತಲೆ ಬೋಳಿಸಿದ ಹಾಗೆ
*ತಿರುಪದ ಪುಟ್ಟಿಯಲ್ಲಿ ಶನೀಶ್ವರ ಕೂತ
*ತಿರುಪಿನಂತೆ ಇರಬೇಕು ತಿಳಿದವ
*ತಿರುಳು ತಿಂದರೂ ಮರುಳು ಹೋಗಲಿಲ್ಲ
*ತಿರುಳು ಹೋಗಿ ಬೆಂಡು ಉಳೀತು
*ತಿರೋಕಲ್ಲು ಗಾಳಿಯಿಂದ ಹಾರುವುದೋ
*ತಿರೋಕಲ್ಲು ಮಳೇಲಿ ಬಿದ್ದರೆ ಮರಕ್ಕಿಂತಾ ಕಡೆಯಾದೀತೇ
*ತಿವಾಸಿ ಯಾತಕ್ಕೆ ತಿಪ್ಪೇ ಮೇಲಣವಗೆ
*ತಿವಿದುಕೊಂಡರೆ ಬಂದೀತೇ ತಿಮ್ಮಪ್ಪನ ದಯೆ
*ತಿಳಿದ ಕಳ್ಳ ತಿರಿಗಿದರೂ ಬಿಡ
*ತಿಳಿದವ ಮಾಡ್ಯಾನು ನಳಪಾಕವ
*ತಿಳಿದವನಾದರೂ ಮಲಮೂತ್ರ ಬಿಟ್ಟೀತೇ?
*ತಿಳಿದು ಒಡ್ಡೋ ತೀರು ಬಾಣವ
*ತಿಳಿಯಕ್ಕಿಲ್ಲ ನೋಡಕ್ಕಿಲ್ಲ ಹುಚ್ಚು ಮೂಕನ ಆಟ
*ತೀಟೆ ಆದರೆ ತಾನೆ ಬರುತ್ತಾನೆ
*ತೀಟೆಗೆ ಮಕ್ಕಳ ಹೆತ್ತು ತಿರುಮಲ ದೇವರ ಹೆಸರಿಟ್ಟ ಹಾಗೆ
*ತೀಟೆ ತೀರಿದಮೇಲೆ ಲೌಡಿ ಸಂಗ ಯಾಕೆ?
*ತೀರಕ್ಕೆ ಬಂದ ಮೇಲೆ ತೆರೆಯ ಭಯವೇ
*ತೀರದ ಕಾರ್ಯ ಹಾರಿದರೂ ಆಗದು
*ತೀರದಲ್ಲಿರುವ ಮರಕ್ಕೆ ನೀರು ಯಾತಕ್ಕೆ
*ತುಂಬಿದ ಕೊಡ, ತುಳುಕೋದಿಲ್ಲ
*ತುಟಿ ಸುಮ್ಮನಿದ್ದರೂ ಹೊಟ್ಟೆ ಸುಮ್ಮನಿರದು
*ತುಟ್ಟಿಯಾದರೂ ಹೊಟ್ಟೆ ಕೇಳದು
*ತುತ್ತು ತೂಕ ಕೆಡಿಸಿತು, ಕುತ್ತು ಜೀವ ಕೆಡಿಸಿತು
*ತೂತು ಗತ್ತಲೇಲಿ ತಾತನ ಮದುವೆ
*ತೇಗಿ ತೇಗಿ ಬೀಗಿ ಬಿದ್ದ
*ತೇದು ಇಕ್ಕಿದೋಳಿಗಿಂತ ಸಾದು ಇಕ್ಕಿದೋಳು ಹೆಚ್ಚು
*ತೊಳೀಲಿಲ್ಲ ಬಳೀಲಿಲ್ಲ ಮೂಗೇಕೆ ಮಸಿಯಾಯ್ತು
*ತೋಟದ ಕಬ್ಬಿಗಿಂತ, ಪೋಟೆಯ ಜೇನಿಗಿಂತ, ಬಲ್ಲವಳ ಕೂಟ ಲೇಸು
*ತೋಟದ ಬೇಲಿಯನ್ನು ದಾಟಿ ನೋಡದವರಾರು
*ತಾ ಮಾಡಿದ್ದು ಉತ್ತಮ, ಮಗ ಮಾಡಿದ್ದು ಮಧ್ಯಮ, ಆಳು ಮಾಡಿದ್ದು ಹಾಳು
*ತಾಳಕ್ಕೆ ತಕ್ಕ ಮೇಳ
*ತಾಳಿದವನು ಬಾಳಿಯಾನು
*ತಾಮ್ರದ ಕಾಸು ತಾಯಿ ಮಕ್ಕಳನ್ನು ಬೇರೆ ಮಾಡ್‌ತಂತೆ
*ತಾನೂ ತಿನ್ನ; ಪರರಿಗೂ ಕೊಡ
*ತಾನು ಕಳ್ಳ ,ಪರರ ನಂಬ
*ತಾನು ಮಾಡುವುದು ಉತ್ತಮ; ಮಗ ಮಾಡುವುದು ಮಧ್ಯಮ; ಆಳು ಮಾಡುವುದು ಹಾಳು
*ತಾಯೀನೇ ತಿಂದೋಳು,ಅತ್ತೇನ ಬಿಟ್ಟಾಳೆಯೇ?
*ತಾಯಿ ಮಾಡಿದ ಹೊಟ್ಟೆ ;ಊರು ಮಾಡಿದ ಕೊಳಗ
*ತಾಯಿಗಿಂತ ಬಂಧುವಿಲ್ಲ; ಉಪ್ಪಿಗಿಂತ ರುಚಿಯಿಲ್ಲ
*ತೋಳ ಬಿದ್ದರೆ ಆಳಿಗೊಂದು ಕಲ್ಲು
*ತೋಳ ಹಳ್ಳಕ್ಕೆ ಬಿದ್ದರೆ ಆಳಿಗೊಂದು ಕಲ್ಲು
*ತೋಟ ಶೃಂಗಾರ, ಒಳಗೆ ಗೋಣಿ ಸೊಪ್ಪು
*ತೂಕಡಿಸುವವನಿಗೆ ಹಾಸಿಗೆ ಹಾಸಿ ಕೊಟ್ಟ ಹಾಗೆ
*ತಲೆ ಗಟ್ಟಿ ಇದೆ ಅಂತ ಕಲ್ಲಿಗೆ ಹಾಯಬಾರದು
*ತಲೆಗೆ ಬಿದ್ದ ನೀರು ಕಾಲಿಗೆ ಬೀಳದೆ ಇರುತ್ತದೆಯೇ?
*ತಲೆಗೆಲ್ಲಾ ಒಂದೇ ಮಂತ್ರವಲ್ಲ
*ತಮ್ಮ ಕೋಳಿ ಕೂಗಿದ್ದರಿಂದಲೇ ಬೆಳಗಾಯಿತು ಎಂದುಕೊಂಡರು
*ತಮ್ಮನೇಲಿ ಹೆಗ್ಗಣ ಸತ್ತು ಬಿದ್ದಿದ್ದರೂ ಬೇರೇ ಮನೇ ಸತ್ತ ನೊಣದ ಕಡೆಗೆ ಬೆಟ್ಟು ಮಾಡಿದರು
*ತನಗೇ ಜಾಗವಿಲ್ಲ; ಕೊರಳಲ್ಲಿ ಡೋಲು ಬೇರೆ
*ತನ್ನ ಓಣೀಲಿ ನಾಯಿಯೇ ಸಿಂಹ
*ತನ್ನ ಬೆನ್ನು ತಾನೇ ತಟ್ಟಿಕೊಂಡ ಹಾಗೆ
*ತನ್ನ ಎಲೇಲಿ ಕತ್ತೆ ಸತ್ತು ಬಿದ್ದಿದ್ರೆ , ಪಕ್ಕದ ಎಲೇಲಿ ನೊಣ ಹೊಡೆಯಕ್ಕೆ ಹೋದ
*ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ತೂಗಬಲ್ಲುದು
*ತುಂಬೆ ಗಿಡಕ್ಕೆ ಏಣಿ ಹಾಕಿದಂತೆ
*ತುಂಬಿದ ಕೊಡ ತುಳುಕುವುದಿಲ್ಲ
*ತುಂಬಿದ ಕೊಡ ತುಳುಕುವುದಿಲ್ಲ
*ತಾಳ ತಪ್ಪಿದ ಬಾಳು, ತಾಳಲಾರದ ಗೋಳು
*ತಾಮ್ರದ ನಾಣ್ಯ ತಾಯಿ ಮಕ್ಕಳನ್ನ ಕೆಡಿಸ್ತು
*ತೇದು ಇಕ್ಕಿದೋಳಿಗಿಂತ ಸಾದು ಇಕ್ಕಿದೋಳು ಹೆಚ್ಚು
*ತೇಗಿ ತೇಗಿ ಬೀಗಿ ಬಿದ್ದ
*ತೂತು ಗತ್ತಲೇಲಿ ತಾತನ ಮದುವೆ
*ತನ್ನೂರಲಿ ರಂಗ, ಪರೂರಲಿ ಮಂಗ
*ತುಂಬಿದ ಕೊಡ, ತುಳುಕೋದಿಲ್ಲ
*ತುತ್ತು ತೂಕ ಕೆಡಿಸಿತು, ಕುತ್ತು ಜೀವ ಕೆಡಿಸಿತು
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
 
==ದ==
*ದನಿಯಿದ್ದವರೂ ಅತ್ತರೂ ಚಂದ ನಕ್ಕರೂ ಚಂದ
*ದಾನ ಮಾಡೋಕೆ ಕನಲುವ ಮಾನವ ದಂಡ ಚಕಾರ ಎತ್ತದೆ ತೆರುವ
*ದಾನಿಗೆ ದೀನತನ ಸಲ್ಲ, ಗ್ನಾನಿಗೆ ಮೌನ ಸಲ್ಲ
*ದಾಯವಾಗಿ(=ದಾನವಾಗಿ) ಸಿಕ್ಕಿದರೆ, ನನಗೆ ಒಂದಿರಲಿ ನಮ್ಮಪ್ಪನಿಗೆ ಒಂದಿರಲಿ
*ದಾರವಿದ್ದರೆ ಮುತ್ತು ಹಾರವೆಂದನಿಸಿತ್ತು
*ದಿಟವೇ ಪುಣ್ಯದ ಪುಂಜ ಸಟೆಯೇ ಪಾಪದ ಬೀಜ
*ದೀನನ ಬೇಡಿ ಬಳಲಿದರೆ ಆತ ಏನು ಕೊಟ್ಟಾನು
*ದೀಪಕ್ಕೆ ಎಣ್ಣೆಯ ಹುಯ್ಯ್ ಅಂತ ಸುರಿಯುತ್ತಾರೇ
*ದುಡಿದದ್ದು ಉಂಡೆಯೋ ಪಡೆದದ್ದು ಉಂಡೆಯೋ
*ದುಡ್ಡಿಗೆ ದುಡ್ಡು ಗಂಟು ಹಾಕಿದ್ಯೋ? ಬೆನ್ನಿಗೆ ಹೊಟ್ಟೆ ಅಂಟು ಹಾಕಿದ್ಯೋ?
*ದೂಫ ಹಾಕಿದರೆ ಪಾಪ ಹೋದೀತೇ
*ದೈವ ಅನ್ನೋದ ಮತ್ತೆಲ್ಲೂ ನೊಡದೆ ತಾನಿದ್ದ ಒತ್ತಿಲೇ ನೋಡು
*ದೈವ ಒಲ್ಲದೆ ಆಗೋದಿಲ್ಲ ದೈವ ಒಲಿದರೆ ಹೋಗೋದಿಲ್ಲ
*ದೈವದ ಸೊಲ್ಲು ಹರಟುವಾತ ಭವದೊಳಗೆ ತೇಲಾಡುತಿದ್ದ
*ಧರ್ಮದ ಹಾದಿ ತಿಳಿದವನಿಗೆ ಓದು ವಾದಗಳೇಕೆ
*ದಾಕ್ಷಿಣ್ಯಕ್ಕೆ ಬಸಿರಾಗೋದು
*ದಾರಿಯಲ್ಲಿ ಹೋಗುತ್ತಿದ್ದ ಮಾರಿಯನ್ನು ಕರೆದು ಮನೆಗೆ ಸೇರಿಸಿಕೊಂಡಂತೆ
*ದೇಶ ಸುತ್ತು ; ಕೋಶ ಓದು.
*ದೇವನೊಬ್ಬ ನಾಮ ಹಲವು
*ದೇವರಿಲ್ಲದ ಗುಡಿ;ಯಜಮಾನನಿಲ್ಲದ ಮನೆ ಎರಡೂ ಒಂದೇ
*ದೇವರು ಒಲಿದರೂ ಪೂಜಾರಿ ಒಲಿಯೊಲ್ಲ.
*ದೇವರು ವರ ಕೊಟ್ಟರೂ ಪೂಜಾರಿ ವರ ಕೊಡ
*ದೇವಸ್ಥಾನದಲ್ಲಿ ಊದಿನ ಕಡ್ಡಿ ಹಚ್ಚದಿದ್ದರೂ ಚಿಂತೆಯಿಲ್ಲ; ... ಬಿಡಬೇಡ
*ದೀಪದ ಕೆಳಗೆ ಯಾವತ್ತೂ ಕತ್ತಲೇ
*ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ
*ದಂಡಿಗೆ ಹೆದರಲಿಲ್ಲ, ದಾಳಿಗೆ ಹೆದರಲಿಲ್ಲ, ಇನ್ನು ನಿನ್ನ ಗಳಗಂಟೆಗೆ
*ದಕ್ಷಿಣೆಗೆ ತಕ್ಕ ಪ್ರದಕ್ಷಿಣೆ
*ದನ ತಿನ್ನುವವನಿಗೆ ಗೊಬ್ಬರದ ಆಣೆ
*ಧರ್ಮಕ್ಕೆ ದಟ್ಟಿ ಕೊಟ್ಟರೆ ಹಿತ್ತಲಿಗೆ ಹೋಗಿ ಮೊಳ ಹಾಕಿದರು
*ಧರ್ಮಕ್ಕೆ ಕೊಟ್ಟ ಆಕಳ ಹಲ್ಲು ಎಣಿಸಿದರು
*ದಿನಾ ಸಾಯೋರಿಗೆ ಅಳೋರ್ ‍ಯಾರು?
*ದೊಡ್ಡವರು ಹೇಳಿದ ಹಾಗೆ ಮಾಡು; ಮಾಡಿದ ಹಾಗೆ ಮಾಡಬೇಡ
*ದುಡ್ಡೇ ದೊಡ್ಡಪ್ಪ,ಬುದ್ಧಿ ಅದರಪ್ಪ
*ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡ ಹಾಗೆ
*ದುಡಿಮೆಯೇ ದೇವರು
*ದುಡಿಮೆಯೇ ದುಡ್ಡಿನ ತಾಯಿ
*ದುಷ್ಟರಿಂದ ದೂರವಿರು
*ದುರ್ಭಿಕ್ಷದಲ್ಲಿ ಅಧಿಕ ಮಾಸ ಬಂದಂತೆ
*ದಾಯವಾಗಿ(=ದಾನವಾಗಿ) ಸಿಕ್ಕಿದರೆ, ನನಗೆ ಒಂದಿರಲಿ ನಮ್ಮಪ್ಪನಿಗೆ ಒಂದಿರಲಿ
*ದುಡ್ಡಿಗೆ ದುಡ್ಡು ಗಂಟು ಹಾಕಿದ್ಯೋ? ಬೆನ್ನಿಗೆ ಹೊಟ್ಟೆ ಅಂಟು ಹಾಕಿದ್ಯೋ?
 
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
==ನ==
*ನಕ್ಕು ನುಡಿದವರು ಕಡೆಗೆ ಅಡವಿಯಲಿಕ್ಕಿ ಬರುವರು
*ನಚ್ಚುವುದು ಬೇರೆ ಹೆಣ್ಣು ಒಬ್ಬನ ಮೆಚ್ಚುವುದು ಬೇರೆ
*ನಡತೆ ಕಲಿಯೋದು ಏರುಬಂಡೆ ನಡತೆ ಕೆಡೋದು ಜಾರುಬಂಡೆ
*ನಡೆವರ್ ಎಡವದೇ ಕುಳಿತವರ್ ಎಡವುವರೇ
*ನಯಶಾಲಿ ಆದವನು ಜಯಶಾಲಿ ಆದಾನು
*ನಲ್ಲೆ ಮುಂದೆ ಸುಳಿದರೆ ಲೋಕದೊಳಗೆ ಒಲ್ಲದವರಾರು
*ನಾ ಬಡವ ವಾಲಗ ಸಾವಕಾಶ ಊದು ಅಂದಂತೆ
*ನಾ ಬಲ್ಲೆ ಅನ್ನೊ ಮಾತು ಎಲ್ಲರಿಗು ಸಲ್ಲದು
*ನಾಡಳಿದು ನಾಡೊಡೆಯನಿಗೆ ಕೇಡು ನಾಡೊಡೆಯ ಅಳಿದು ನಾಡಿಗೆಲ್ಲ ಕೇಡು
*ನಾಡೆಂದ್ರ ಕಾಡನ್ನ ಸುಡುವಾಗ ದೇವೇಂದ್ರ ಗಾಳೀನ್ನ ನೋಡೊಕೆ ಕಳಿಸಿದ
*ನಾಯಿ ಬಾಲ ಡೊಂಕು
*ನಾಯಿ ಬೊಗಳಿದರೆ ದೇವಲೋಕ ಹಾಳೇನು
*ನಾಯಿಗೆ ಕೆಲಸಿಲ್ಲ, ನಿಲ್ಲೋಕೆ ಹೊತ್ತಿಲ್ಲ
*ನಾಳೆ ಯಾರೋ ನಾನು ಯಾರೋ!
*ನಿಜ ಆಡಿದರೆ ನಿಷ್ಠೂರ
*ನಿಜವ ಹಿಡಿ ಘಟವ ನೆಚ್ಚದಿರು
*ನಿದ್ದೆ ಗೈಯೋನ ಹೊತ್ತು ನುಂಗ್ತು
*ನಿಯತ್ತಿಲ್ಲದೋರಿಗೆ ಬರಕತ್ತಿಲ್ಲ
*ನಿಷ್ಠೆ ಇದ್ದಲ್ಲಿ ದೈವ ಕಲ್ಲುಗುಂಡೊಳಗೆ ಅಡಗಿತ್ತು
*ನಿಷ್ಠೆ ಇಲ್ಲದವನಿಗೆ ದೈವ ಬಟ್ಟಬಯಲು
*ನಿಷ್ಠೆ ಇಲ್ಲದೆ ಎಷ್ಟು ಪೂಜೆ ಮಾಡಿದರೂ ನಷ್ಟ
*ನೀಡುವವ ಉತ್ತಮ ಬೇಡಿದರೂ ನೀಡದವ ಅಧಮ
*ನೀರೆ ನಿನ್ನ ಮಾತು ನಿಜವೇನೆ ನೀರ ಕಡಿದರೆ ಬೆಣ್ಣೆ ಬಂದಾದೇನೆ
*ನೀರೆಯ ಓರೆಗಣ್ಣ ನೋಟಕ್ಕೆ ನಾಡೆಲ್ಲ ಇರಿದಾಡಿತು/ಕಾದಡಿತು
*ನೆಂಟ ನೆರವಲ್ಲ ಕುಂಟ ಜೊತೆಯಲ್ಲ
*ನೆತ್ತರು ಉಕ್ಕಿದರೆ ಜೀವ ತೊಡಕೀತು
*ನೆತ್ತಿಯಲ್ಲಿ ಅಮೃತ ಹೊತ್ತು ಸಾವಿಗಂಜಿ ಜಗವೆಲ್ಲ ಸುತ್ತಾಡಿದ
*ನೆರಲೆ ಹಣ್ಣು ಬಲು ಕಪ್ಪು ತಿಂದು ನೋಡಿದರೆ ಬಲು ಸವಿ
*ನೆರೆದ ಸಿರಿ ಜಾವಕ್ಕೆ ಹರಿದು ಹೋಯಿತು
*ನೇಮ ಉಳ್ಳವನ ಕಂಡರೆ ಯಮನಿಗೂ ಭಯ
*ನಾಯಿ ಬಾಲ ಡೊಂಕು
*ನಾಯಿ ಬೊಗಳಿದರೆ ದೇವಲೋಕ ಹಾಳೇನು
*ನಾಯಿಗೆ ಕೆಲಸಿಲ್ಲ, ನಿಲ್ಲೋಕೆ ಹೊತ್ತಿಲ್ಲ
*ನೀರೆ ನಿನ್ನ ಮಾತು ನಿಜವೇನೆ ನೀರ ಕಡಿದರೆ ಬೆಣ್ಣೆ ಬಂದಾದೇನೆ
*ನೀರಿಳಿಯದ ಗಂಟಲಲ್ಲಿ ಕಡುಬು ತುರುಕಿದಂತೆ
*ನಡತೆ ಕಲಿಯೋದು ಏರುಬಂಡೆ ನಡತೆ ಕೆಡೋದು ಜಾರುಬಂಡೆ
*ನಯಶಾಲಿ ಆದವನು ಜಯಶಾಲಿ ಆದಾನು
*ನೆಂಟರೆಲ್ಲ ಖರೆ, ಕಂಟಲೆ ಚೀಲಕ್ಕೆ ಕೈ ಹಾಕಬೇಡ
*ನಿಜ ಆಡಿದರೆ ನಿಷ್ಠೂರ
*ನಿಯತ್ತಿಲ್ಲದೋರಿಗೆ ಬರಕತ್ತಿಲ್ಲ
*ನಾಯೀನ ತಗೊಂಡು ಹೋಗಿ ಸಿಂಹಾಸನದ ಮೇಲೆ ಕೂರಿಸಿದರೆ ... ಕಂಡು ಇಳಿಬಿತ್ತು
*ನಾಯಿ ಬಾಲ ಡೊಂಕು
*ನಾಯಿ ಬಾಲಕ್ಕೆ ದೆಬ್ಬೆ ಕಟ್ಟಿದ ಹಾಗೆ
*ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ತದೆಯೆ ?
*ನಾಯಿ ಹೆಸರು’ಸಂಪಿಗೆ’ಅಂತ
*ನಾಯಿ ಮೊಲೇಲಿ ಖಂಡುಗ ಹಾಲಿದ್ದರೇನು, ದೇವರಿಗಿಲ್ಲ ದಿಂಡರಿಗಿಲ್ಲ
*ನಾಯಿಗೆ ಹೊತ್ತಿಲ್ಲ;ನಿಲ್ಲಕ್ಕೆ ನೆಲೆಯಿಲ್ಲ
*ನಾಯಿಗೆ ವಯಸ್ಸಾದ್ರೆ ಅಜ್ಜ ಅಂತಾರಾ?
*ನೀರಿಳಿಯದ ಗಂಟಲೊಳ್ ಕಡುಬಂ ತುರುಕಿದಂತಾಯ್ತು (ಮುದ್ದಣ)
*ನೀರಿನಲ್ಲಿ ಹೋಮ ಮಾಡಿದಂತೆ
*ನೂಲಿನಂತೆ ಸೀರೆ; ತಾಯಿಯಂತೆ ಮಗಳು
*ನೂರು ಜನಿವಾರ ಒಟ್ಟಿಗಿರಬಹುದು; ಮೂರು ಜಡೆ ಒಟ್ಟಿಗಿರುವುದಿಲ್ಲ
*ನದೀನೇ ನೋಡದೆ ಇರೋನು ಸಮುದ್ರ ವರ್ಣನೆ ಮಾಡಿದ ಹಾಗೆ
*ನಗೋ ಗಂಡಸನ್ನೂ ಅಳೋ ಹೆಂಗಸನ್ನೂ ನಂಬಬೇಡ
*ನಗುವ ಹೆಂಗಸು, ಅಳುವ ಗಂಡಸು ಇಬ್ಬರನ್ನೂ ನಂಬಬಾರದು
*ನಮಾಜು ಮಾಡಲು ಹೋಗಿ ಮಸೀದಿ ಕೆಡವಿಕೊಂಡ ಹಾಗೆ
*ನಮಸ್ಕಾರ ಮಾಡಲು ಹೋಗಿ ದೇವಸ್ಥಾನದ ಗೋಪುರ ತಲೇ ಮೇಲೆ ಬಿತ್ತು
*ನಮ್ಮ ದೇವರ ಸತ್ಯ ನಮಗೆ ಗೊತ್ತಿಲ್ಲವೇ ?
*ನಮ್ಮ ದೇವರ ಸತ್ಯ ನಮಗೆ ಗೊತ್ತು.
*ನನ್ನ ಮಗ ಎಂಟು ವರ್ಷಕ್ಕೆ ದಂಟು ಎಂದ
*ನರಿ ಕೂಗು ಗಿರಿ ಮುಟ್ಟುತ್ತದೆಯೆ ?
*ನರಿಗೆ ಹೇಳಿದರೆ ನರಿ ತನ್ನ ಬಾಲಕ್ಕೆ ಹೇಳಿತಂತೆ
*ನವಿಲಾಡಿತು ಅಂತ ಕೆಂಬೂತ ಪುಕ್ಕ ತೆರೆಯಿತು
*ನವಿಲನ್ನು ನೋಡಿ ಕೆಂಬೂತ ಪುಕ್ಕ ಕೆದರಿತಂತೆ
*ನೆಂಟರಿಗೆ ದೂರ ; ನೀರಿಗೆ ಹತ್ತಿರ
*ನೆಚ್ಚಿನೆಮ್ಮೆ ಕೋಣನನ್ನೀಯಿತು
*ನೆಲಕ್ಕೆ ಬಿದ್‍ದ್ರೂ ಮೀಸೆ ಮಣ್ಣಾಗಿಲ್ಲ
*ನಿನ್ನ ಹಿತು(ಮುದ್ದು),ನನ್ನ ತಿಂತು
*ನಿಸ್ಸಹಾಯಕರ ಮೇಲೆ ಹುಲ್ಲುಕಡ್ಡಿ ಸಹ ಭುಸುಗುಡುತ್ತದೆ
*ನೆಗಡಿಯಾಯ್ತೆಂದು ಮೂಗು ಕೂಯಿಕೊಂಡರಂತೆ
*ನೀನು ಮೊಳ ಬಿಟ್ಟರೆ,ನಾನು ಮಾರು ಬಿಡುತ್ತೇನೆ
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
 
==ಪ==
*ಪಡುವಣ ಮನೆಗೆ ಮೂಡಣ ದೀಪ
*ಪರರ ಹಂಗಿಸಿ ಮಂಗ ಅನಿಸಿಕೊಂಡ
*ಪಾತ್ರವರಿತು ಜಗದ ಜಾತ್ರೆಗೆ ಸಲ್ಲಬೇಕು
*ಪಾಪ ಅಂದ್ರೆ ಕರ್ಮ ಬರ್ತದೆ
*ಪಾಪ ಅನ್ನೋದಕ್ಕೆ ಕೋಪವೇ ನೆಲೆಗಟ್ಟು
*ಪಾಪಿ ಸಮುದ್ರ ಹೊಕ್ಕರು ಮೊಣಕಾಲುದ್ದ ನೀರು
*ಪಾಲಿಗೆ ಬಂದದ್ದು ಪಂಚಾಮೃತ
*ಪಿಶಾಚಿ ಬಿಟ್ಟರೂ ನಿಶಾಚರ ಬಿಡ
*ಪುಣ್ಯ ಉಂಡು (=ಸುಖ ಅನುಭೋಗಿಸಿ) ತೀರಿತು, ಪಾಪ ತಿಂದು (=ಕಷ್ಟ ಅನುಭವಿಸಿ) ತೀರಿತು
*ಪೆದ್ದ ಮರದ ತುದಿಯೇರಿ ಅಣಿತಪ್ಪಿ ಬಿದ್ದು ಸತ್ತ
*ಪ್ರದಕ್ಷಿಣೆ ಹಾಕಿದರೆ ಪ್ರಯೋಜನವಿಲ್ಲ, ದಕ್ಷಿಣೆ ಹಾಕಿದರೇಯ ತೀರ್ಥ ಸಿಗೋದು
*ಪ್ರಸ್ತಕ್ಕಿಲ್ಲದ ಮಾತು ಹತ್ತುಸಾವಿರವಿದ್ದೇನು
*ಪ್ರಾರಬ್ಧ ಬಂದ ಕಾಲಕ್ಕೆ ಒಂದಲ್ಲ ಒಂದು ಕೇಡು
*ಪಾಂಡವರು ಪಗಡೆಯಾಡಿ ಕೆಟ್ಟರು ; ಹೆಣ್ಣುಮಕ್ಕಳು ಕವಡೆಯಾಡಿ ಕೆಟ್ಟರು
*ಪಾಲಿಗೆ ಬಂದದ್ದೆ ಪರಮಾನ್ನ.
*ಪಾಲಿಗೆ ಬಂದದ್ದು ಪಂಚಾಮೃತ
*ಪಾಪಿ ಚಿರಾಯು
*ಪಾಪಿ ಧನ ಪ್ರಾಯಶ್ಚಿತ್ತಕ್ಕೆ
*ಪಾಪಿ ಸಮುದ್ರ ಹೊಕ್ಕರೂ ಮೊಳಕಾಲುದ್ದ ನೀರು
*ಪಾಯಸ ಮಾಡಿ ನಾಯಿ ಬಾಲದಲ್ಲಿ ತೊಳಸಿದ ಹಾಗೆ
*ಪಕ್ಕದ ಮನೇಗೆ ಬಿದ್ದ ಬೆಂಕಿ ಬಿಸಿ ತನ್ನ ಮನೇಗೆ ಬೀಳೋವರೆಗೂ ತಾಕಲ್ಲ
*ಪ್ರಥಮ ಚುಂಬನೇ ದಂತ ಭಗ್ನಮ್
*ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು
*ಪುರಾಣ ಹೇಳೊಕೆ; ಬದನೆಕಾಯಿ ತಿನ್ನೋಕೆ
*ಪಾಪ ಅಂದ್ರೆ ಕರ್ಮ ಬರ್ತದೆ
*ಪಾಪಿ ಸಮುದ್ರ ಹೊಕ್ರೂ ಮೊಣಕಾಲುದ್ದ ನೀರು
*ಪ್ರದಕ್ಷಿಣೆ ಹಾಕಿದರೆ ಪ್ರಯೋಜನವಿಲ್ಲ, ದಕ್ಷಿಣೆ ಹಾಕಿದರೇಯ ತೀರ್ಥ ಸಿಗೋದು
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
==ಬ==
*ಬಂಗಾರಕ್ಕೆ ಕುಂದಣವಿಟ್ಟಂತೆ
*ಬಂಡಾಟದ ನಡೆ ಚೆಂದ ಮಿಂಡಾಟದ ನುಡಿ ಚೆಂದ
*ಬಂದ ಅಥಿತಿಗೆ ಅನ್ನ ಇಕ್ಕದ ಬದುಕು ಯಾತಕ್ಕು ಬೇಡ
*ಬಂದರು ಬಾ ಅನ್ನದ ದರ್ಪಕುರುಡರ ಸಾವಸವೇ ಬೇಡ
*ಬಂಧುಗಳಿಲ್ಲದಿರೊ ಬಡತನ ಎಂದಿಗೂ ಬೇಡ
*ಬಚ್ಚಿಟ್ಟ ಆಸ್ತಿ ಹೊಂಚುತ್ತಿದ್ದವರ ಪಾಲಾಯ್ತು
*ಬಡವ ನೀ ಸೆಣಸಿ ಕೆಡಬೇಡ
*ಬಡವನಿಗೆ ಉಳಿದಷ್ಟೆ ಅಭಿಮಾನ
*ಬಡವರ ಮಾತು ನುಡಿನುಡಿಗೂ ಬೇಸರ
*ಬಣ ಬಣ ಬೆಳಕು ಹರಿದಾಗ ಕತ್ತಲು ಎತ್ತಲೊ
*ಬನ್ನ ಪಟ್ಟುಣ್ಣೋ ಬಿಸಿ ಅನ್ನಕ್ಕಿಂತ ತಂಗುಳೇ ಲೇಸು
*ಬರಿಗೆಟ್ಟ ಬದುಕಿಗಿಂತ ಕೊಂದು ತಿನ್ನೊ ಮಾರಿ ಲೇಸು
*ಬರೀ ಮಾತಾಡಿ ಬಯ್ಯಿಸಿಕೊಂಡ
*ಬರೋಳನ್ನು ನೆಚ್ಚಿ ಇರೋಳನ್ನು ಬಿಟ್ಟ
*ಬಲ್ಲಿದರೊಡನೆ ಸೆಣಸಿ ಮಾತಾಡಿದರೆ ಅಲ್ಲೇ ಬಂತು ಕೇಡು
*ಬಸುರಲ್ಲಿ ಬಂದ ಕೂಸು ಮುದ್ದು
*ಬಹುಮನದ ಹಾದಿ ಕೈಗೊಂಡರೆ ಸುಖವಿಲ್ಲ
*ಬಳ್ಳಿಗೆ ಕಾಯಿ ಭಾರವೇ
*ಬಾಡಿಗೆ ಎತ್ತೆಂದು ಬಡಿದು ಬಡಿದು ಹೂಡಬೇಕೆ
*ಬಾಯ್ ತೆವಲು ತೀರಿಸಿಕೊಳ್ಳೋಕೆ ಎಲೆ ಅಡಿಕೆ ಬೇಕು, ಮೈ ತೆವಲು ತೀರಿಸಿಕೊಳ್ಳೋಕೆ ಒಡಂಬಡಿಕೆ ಬೇಕು
*ಬಾಯಲ್ಲಿ ಬಸಪ್ಪ ಹೊಟ್ಟೆಯಲ್ಲಿ ವಿಷಪ್ಪ
*ಬಾಯಲ್ಲಿ ಬೆಲ್ಲ ಕರುಳು ಕತ್ತರಿ
*ಬಾಲೇರ ಮನಸ್ಸು ನೆಲೆಯಿಲ್ಲ
*ಬಾಳಿ ಬದುಕುವರಿಗೆ ಹಾಳೂರ ಸುದ್ದಿ ಯಾಕೆ
*ಬಾಳಿಕೆಗೆಟ್ಟು ಬೆಸಲಾದ ಚೇಳಿನಂತಾದ
*ಬಾಳಿಬದುಕಿದವ ಕಲಿ(=ವಿದ್ಯೆ)ಕಲಿತ, ಬಾಳಲಾರದವ ಪಾಠ ಕಲಿತ
*ಬಿಟ್ಟವರ ಕಂಡು ಬಿಟ್ಟು ಬಾಳುಗೆಟ್ಟ
*ಬಿದ್ದ ಪೆಟ್ಟಿಗಿಂತ ನಕ್ಕ ಪೆಟ್ಟು ಹೆಚ್ಚು.
*ಬಿದ್ದಲ್ಲಿ ಸೋತಲ್ಲಿ ಹೊದಿದ್ದ ಬುದ್ಧಿ ತಪ್ಪಿತು
*ಬಿದ್ದಿನ (=ಅತಿಥಿ, ನೆಂಟ) ಬಂದು ಹಾಳು ಮನೇ ಯಜಮಾನ (ಮನೆಯೊಡೆಯ) ಕುಂತು ಹಾಳು
*ಬಿಮ್ಮಗಿದ್ದಾಗ ಹಮ್ಮು, ಬಿಮ್ಮು ತಪ್ಪಿದಾಗ ದಮ್ಮು
*ಬಿಳಿ ಆನೆ ಸಾಕಿದ ಹಾಗೆ
*ಬೀಜ ಸಣ್ಣದಾದರೆ ಮರ ಸಣ್ಣದೋ
*ಬೀದೀ ಕೂಸು ಬೆಳೀತು ಕೋಣೇ ಕೂಸು ಕೊಳೀತು
*ಬೀದೀಲಿ ಹೋಗೋ ಮಾರೀನ ಮನೆಗೆ ಕರೆದಂತೆ
*ಬೀಳು ಭೂಮಿಗೆ ಬೀಜ ದಂಡ
*ಬುದ್ಧಿ ಉಳ್ಳವನಿಗೆ ಕರ್ಮ ತಿದ್ದಿ ಕೊಡುತಿತ್ತು
*ಬೆಂಕಿಗೆ ಕರಗದ್ದು ಬಿಸಿಲಿಗೆ ಕರಗೀತೇ
*ಬೆಂದ ಮನೇಲಿ ಹಿರಿದದ್ದೇ ಲಾಭ
*ಬೆಕ್ಕಿಗೆ ಬೆಣ್ಣೆ ಕಂಡಿತು ಬಡಿಗೆ ಕಾಣಲಿಲ್ಲ
*ಬೆಕ್ಕಿನ ಕನಸಿನಲ್ಲಿ ಬರೀ ಇಲಿಗಳೇ
*ಬೆಣ್ಣೆಯೊಳಗಿನ ಕೂದಲು ತೆಗೆದಂತೆ
*ಬೆನ್ನಹಿಂದೆ ಬಿದ್ದು (ಓಡಿ)ಬನ್ನ ಪಟ್ಟ
*ಬೆರಳು ತೋರುದ್ರೆ ಅಂಗೈನೇ ನುಂಗಿದಂತೆ
*ಬೆಲ್ಲದ ಸಿಪಾಯಿ ಮಾಡಿ ಇರುವೆ ಹತ್ತರ ಕಳಿಸಿದ
*ಬೆಲ್ಲವಿಲ್ಲದಿದ್ದರೆ ಬೆಲ್ಲದಂಥ ಮಾತೂ ಇಲ್ಲವೇ?
*ಬೆಳ್ಳಯ್ಯ ಕಾಕಾ ಅರಿವಯ್ಯ ಮೂಕ
*ಬೇಕೆಂಬುದು ಬಾಳು ಸಾಕೆಂಬುದು ಸಾವು
*ಬೇಡಿದರೆ ಇಲ್ಲ ಅನ್ನೋದ್ ಕಷ್ಟ ನೀಡುವರ ಬೇಡ ಅನ್ನೋದ್ ಕಷ್ಟ
*ಬೇಲಿನೆ ಎದ್ದು ಹೊಲ ಮೇಯಿತಂತೆ
*ಬೇವು ಕಾಗೆಗೆ ಇಂಪು ಮಾವು ಕೋಗಿಲೆಗೆ ಇಂಪು
*ಬೇವು ಕಾಗೆಗೆ ಇಷ್ಟ , ಮಾವು ಕೋಗಿಲೆಗೆ ಇಷ್ಟ
*ಬೋನದ ಬುತ್ತಿ ತಪ್ಪಿ ಚಿತ್ತವಲ್ಲಭೆಯನ್ನು ಮರೆಸಿತ್ತು
*ಭಂಗಿ ದೇವರಿಗೆ ಹೆಂಡಗುಡುಕ ಪೂಜರಿ
*ಭಂಗಿ ರಸ ನೆತ್ತಿಗೇರಿ ಬಿಂಗಿಯಂತೆ ಆಡಿದ
*ಭಕ್ತಿ ಉಳ್ಳಾತಗೆ ಮುಕ್ತಿ ,ಶಕ್ತಿ ಉಳ್ಳಾತಗೆ ಭುಕ್ತಿ
*ಭಲೆ ಜಟ್ಟಿ ಅಂದ್ರೆ ಕೆಮ್ಮಣ್ಣು ಮುಕ್ಕಿದ
*ಭೋಗಿ ಭೋಗದಲ್ಲಿ ನೆರೆದು ರೋಗಿಯಾದ, ಯೋಗಿ ಯೋಗದಲ್ಲಿ ನೆರೆದು ಯೋಗವಾದ
*ಬಾಣಲೆಯಿಂದ ಬೆಂಕಿಗೆ
*ಬಾಲ ಸುಟ್ಟ ಬೆಕ್ಕಿನ ಹಾಗೆ
*ಬಾಯಲ್ಲಿ ಬೆಣ್ಣೆ;ಬಗಲಲ್ಲಿ ದೊಣ್ಣೆ.
*ಬಾಯಿ ಬಿಟ್ಟರೆ ಬಣ್ಣಗೇಡು
*ಬಾಯಿದ್ದೋರು ಬರಗಾಲದಲ್ಲೂ ಬದುಕಿದರು
*ಬೇಲಿಯೇ ಎದ್ದು ಹೊಲ ಮೇದಂತೆ
*ಬೇಲಿಯೇ ಎದ್ದು ಹೊಲ ಮೇಯ್ದಂತೆ
*ಬೀದೀಲಿ ಹೋಗೋ ಮಾರೀನ ಮನೆ ಹೊಕ್ಕು ಹೋಗು ಅಂದಂತಾಯ್ತು
*ಬೀದೀಲಿ ಹೊಗೊ ಮಾರೀನ ಮನೆಗೆ ಕರೆದಂಗೆ
*ಬಡ್ಡಿ ಬಾಯಿಗಂಜ್ತೀಯೋ,ದೊಡ್ಡೆತ್ತಿನ ಕೋಡಿಗಂಜ್ತೀಯೋ
*ಬಡ ದೇವರನ್ನು ಕಂಡರೆ ಬಿಲ್ಪತ್ರೇನೂ ’ಭುಸ್’ ಅಂತಂತೆ
*ಬಡವ ನೀ ಮಡಗಿದ ಹಾಗಿರು
*ಬಡವನ ಕೋಪ ದವಡೆಗೆ ಮೂಲ
*ಬಡವನ ಸಿಟ್ಟು ದವಡೆಗೆ ಮೂಲ
*ಬಡವರ ಮನೆ ಊಟ ಚೆನ್ನ, ದೊಡ್ಡವರ ಮನೆ ನೋಟ ಚೆನ್ನ
*ಬಡವೆ ಸೀರೆ ಉಡದೆ ಮಾಸಿತು
*ಬಂದ ದಾರಿಗೆ ಸುಂಕವಿಲ್ಲ
*ಬಗ್ಗಿದವನಿಗೆ ಒಂದು ಗುದ್ದು ಜಾಸ್ತಿ
*ಬೈದು ಹೇಳಿದವರು ಬದುಕಕ್ಕೆ ಹೇಳಿದರು
*ಬಲ್ಲವನೇ ಬಲ್ಲ ಬೆಲ್ಲದ ರುಚಿಯ
*ಬರೀ ಕೈಗಿಂತ ವಾಸಿ ಹಿತ್ತಾಳೆ ಕಡಗ
*ಬರ್ತಾ ಬರ್ತಾ ರಾಯರ ಕುದುರೆ ಕತ್ತೆಯಾಯ್ತು
*ಬಸವನ ಹಿಂದೆ ಬಾಲ,ಸೂಜಿ ಹಿಂದೆ ದಾರ
*ಬೆಳ್ಳಗಿರೋದೆಲ್ಲಾ ಹಾಲಲ್ಲ
*ಬೆಳ್ಳಗಿರೋದೆಲ್ಲ ಹಾಲಲ್ಲ
*ಬೆಳಗೂ ಹೆತ್ತ ಮಗೂನ ನಾಯಿ ಕೊಂಡೊಯ್ಯಿತಂತೆ
*ಬೆಳೆಯುವ ಪೈರು ಮೊಳಕೆಯಲ್ಲಿ
*ಬೆಂದ ಮನೆಗೆ ಹಿರಿದದ್ದೇ ಲಾಭ
*ಬೆಂಕಿ ಇಲ್ಲದೆ ಹೊಗೆ ಏಳಲ್ಲ
*ಬೆಣ್ಣೇಲಿ ಕೂದಲು ತೆಗೆದ ಹಾಗೆ
*ಬೆಟ್ಟ ಅಗೆದು ಇಲಿ ಹಿಡಿದಂತೆ
*ಬೆಕ್ಕಿಗೆ ಚೆಲ್ಲಾಟ: ಇಲಿಗೆ ಪ್ರಾಣಸಂಕಟ
*ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದಂತೆ
*ಬೆರಳು ತೋರಿಸಿದರೆ ಹಸ್ತ ನುಂಗಿದರಂತೆ
*ಬಿಡಿಯಕ್ಕೆ ಬಸಿರಾದರೆ ಹಡೆಯೋದು ಕಷ್ಟ
*ಬಿಟ್ಟಿ ಬಂದದ್ದಾದರೆ ನನಗೂ ಇರಲಿ,ನಮ್ಮ ತಾತಂಗೂ ಇರಲಿ.
*ಬಿರಿಯಾ ಉಂಡ ಬ್ರಾಹ್ಮಣ ಭಿಕ್ಷೆ ಬೇಡಿದ
*ಬಿಸಿ ತುಪ್ಪ; ನುಂಗೋದಕ್ಕೂ ಆಗೊಲ್ಲ; ಉಗುಳೋದಕ್ಕೂ ಆಗೊಲ್ಲ
*ಬೊಗಳುವ ನಾಯಿ ಕಚ್ಚುವುದಿಲ್ಲ
*ಬಾಯ್ ತೆವಲು ತೀರಿಸಿಕೊಳ್ಳೋಕೆ ಎಲೆ ಅಡಿಕೆ ಬೇಕು, ಮೈ ತೆವಲು ತೀರಿಸಿಕೊಳ್ಳೋಕೆ ಒಡಂಬಡಿಕೆ ಬೇಕು
*ಬಾಯಲ್ಲಿ ಬಸಪ್ಪ ಹೊಟ್ಟೆಯಲ್ಲಿ ವಿಷಪ್ಪ
*ಬಾಯಲ್ಲಿ ಬೆಲ್ಲ ಕರುಳು ಕತ್ತರಿ
*ಬೇಲಿನೆ ಎದ್ದು ಹೊಲ ಮೇಯಿತಂತೆ
*ಬೀದೀ ಕೂಸು ಬೆಳೀತು ಕೋಣೇ ಕೂಸು ಕೊಳೀತು
*ಬಂಟರ ಅಬ್ಬರ ಸೇವಿನ ಗೊಬ್ಬರ
*ಬೆಳ್ಳಯ್ಯ ಕಾಕಾ ಅರಿವಯ್ಯ ಮೂಕ
*ಬಿದ್ದರೂ ಮೀಸೆ ಮಣ್ಣಾಗಲಿಲ್ಲ
*ಬಿಮ್ಮಗಿದ್ದಾಗ ಹಮ್ಮು, ಬಿಮ್ಮು ತಪ್ಪಿದಾಗ ದಮ್ಮು
*ಭಂಗಿ ದೇವರಿಗೆ ಹೆಂಡಗುಡುಕ ಪೂಜರಿ
*ಭಾವಿಗೆ ಬಿದ್ರೆ,ಸಾಲಿಗ್ರಾಮ ಸಿಗ್ತಂತೆ
*ಭಟ್ಟನ ಮಗಳಿಗೆ ಹುಟ್ಟಲು ದಿನವಿಲ್ಲ
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
 
==ಮ==
*ಮಂಡಕ್ಕಿ ತಿಂದ ಮಗ ಮದ್ದಾನೆ ತರುಬಿದ ಮೃಷ್ಟಾನ್ನ ತಿಂದ ಮಗ ನೊಣ ಝಾಡಿಸಿದ
*ಮಂತ್ರ ತಂತ್ರ ದೈವ ಒಲ್ಲದೆ ತನಗೆ ಸ್ವಂತವಲ್ಲ
*ಮಂತ್ರಿ‌ಇಲ್ಲದ ರಾಜ್ಯ ಕೀಲು ಮುರಿದ ಯಂತ್ರದಂತೆ
*ಮಂದಾಳಿಗೊಂದು ಮುಂದಾಳು
*ಮಂದ್ಯಾಗ ಮಚ್ಚೀಲೆ ಹೊಡೆದು ಸಂದ್ಯಾಗ ಕಾಲು ಹಿಡಿದರು
*ಮದುವೆ ಮಾಡಿ ನೋಡು ಮನೆ ಕಟ್ಟಿ ನೋಡು
*ಮದುವೆಯಾಗೋ ಗುಂಡ ಅಂದ್ರೆ ನೀನೇ ನನ್ನ ಹೆಂಡ್ತಿ ಅಂದ
*ಮದ್ದು ಬುದ್ಧಿ ದೈವ ಒಲ್ಲದೆ ತಿದ್ದವು
*ಮನಸ್ಸಿಲ್ಲದವಳ ಒಡನಾಟ ಮಾತುಮಾತಿಗು ಬೇಸರ
*ಮನೆಗೆ ಬೆಂಕಿ ಬಿದ್ದಾಗ ಬಾವಿ ತೋಡಿದರಂತೆ
*ಮರ ಕಡಿದು ಮೈಮೇಲೆ ಹಾಕಿಕೊಂಡ್ರಂತ
*ಮರಗಿಣಿಯ ಕೂಡೆ ಆಡಿ ಅರಗಿಣಿ ಕೇಟ್ಟಿತು
*ಮಲ್ಲಿಗೆ ವನದಲ್ಲಿ ತುರುಬಿಲ್ಲದಾಕೆ ಸುಳಿದಂತೆ
*ಮಳೆಗಾಲದೇಲಿ ಚಿಗಿಯೂದಿಲ್ಲ ಬೇಸಿಗೇಲಿ ಒಣಗೂದಿಲ್ಲ
*ಮಳೇ ನೀರ ಬಿಟ್ಟು ಮಂಜಿನ ನೀರಿಗೆ ಕೈ ಒಡ್ಡಿದಂತೆ
*ಮಾಡಿದ ಕರ್ಮ ಬೆನ್ನಾಡಿ ಬಂತು
*ಮಾಡಿದ ಕರ್ಮ ಹಿಡಿದೊಯ್ಯದೆ ಬಿಡದು
*ಮಾಡಿದ ಪಾಪ ದಾನದಿಂದ ಹೋದೀತೆ
*ಮಾಡಿದ್ದುಣ್ಣೋ ಮಾರಾಯ
*ಮಾಡುವವ ಉತ್ತಮ ಆಡಿ ಮಾಡದವ ಅಧಮ
*ಮಾಡೋದು ದುರಾಚಾರ, ಮನೆ ಮುಂದೆ ಬೃಂದಾವನ
*ಮಾತಿಂದಲೇ ಉಪಚಾರ ಮಾತಿಂದಲೇ ಅಪಚಾರ
*ಮಾತಿಂದಲೇ ನಗೆನುಡಿ ಮಾತಿಂದಲೇ ಹಗೆಕೊಲೆ
*ಮಾತಿಗೆ ಮಾತುಗಳ ಓತು ಸಾಸಿರ ಉಂಟು
*ಮಾತಿಗೊಂದು ಮಾತು ಬಂತು ವಿಧಿ ಬಂದು ಆತುಕೊಣ್ತು
*ಮಾತಿನ ಬೊಮ್ಮ ತೂತಾದ ಮಡಕೆಯ ಪರಿ
*ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ
*ಮಾತು ಬೆಳ್ಳಿ, ಮೌನ ಬಂಗಾರ
*ಮಾತು ಮನೆ ಮುರೀತು, ತೂತು ಒಲೆ ಕೆಡಿಸ್ತು
*ಮಾನಿಷ್ಟರು ಮಾನಕ್ಕೆ ಅಂಜಿದರೆ ಮಾನಗೇಡಿ ತನಗೇ ಅಂಜಿದರು ಅಂದನಂತೆ
*ಮಾರಿ ಕಣ್ಣು ಹೋರಿ ಮ್ಯಾಲೆ, ಕಟುಕನ ಕಣ್ಣು ಕುರಿ ಮ್ಯಾಲೆ
*ಮಾರಿಯ ಹೋತ ತೋರಣದ ಚಿಗುರು ಬಯಸಿತಂತೆ
*ಮಾಳಿಗೆ ಮನೆ ಬೇಕು ಜೋಳಿಗೆ ಹಣ ಬೇಕು ಮಾದೇವನಂಥಾ ಮಗ ಬೇಕು ಗೌರಿಯಂಥಾ ಸೊಸೆ ಬೇಕು
*ಮಿಂದರೆ ಮೈಯ ಕೊಳೆ ಹೋಯ್ತು
*ಮಿಂದು ಮೈಲಿಗೆ ಉಡೊದಾದ್ರೆ ಜಳಕದ ದಂದುಗವೇಕೆ
*ಮುಚ್ಚಿ ಹೇಳಿದರೆ ಒಗಟು ಬಿಚ್ಚಿ ಹೇಳಿದರೆ ಒರಟು
*ಮುತ್ತು ಒಡೆದರೆ ಹೋಯ್ತು, ಮಾತು ಆಡಿದರೆ ಹೋಯ್ತು
*ಮುತ್ತು ಚಿಪ್ಪಲ್ಲಿ ಹುಟ್ಟಿ ಮುಕುಟದ ಮಣಿಯಾಯ್ತು
*ಮುದುಕೀ ನಿನ್ನಾಟ ಮುಂದೈತಿ
*ಮುದ್ದು ಮುದ್ದು ತೊಗಲೆ ಬಿದ್ದು ಬಿದ್ದು ನಗಲೆ
*ಮುಲಾಜಿಗೆ ಬಸುರಾಗಿ ಹೇರೋಕೆ ತಾವಿಲ್ಲ
*ಮುಳ್ಳಿನಿಂದ ಮುಳ್ಳು ತೆಗೆ, ಹಗೆಯಿಂದ ಹಗೆ ತೆಗೆ
*ಮೂಕ ಪ್ರಾಣಿಯ ಕೊಲ್ಲದ್ದು ಜೀವಧರ್ಮ
*ಮೂಗು ಹಿಡಿದರೆ ಬಾಯಿ ತಾನೇ ತೆರೆಯುವುದು
*ಮೂರೂ ಬಿಟ್ಟೋಳು ಊರಿಗೆ ದೊಡ್ಡೋಳು
*ಮೂರ್ತಿ ಚಿಕ್ಕದಾದ್ರು ಕೀರ್ತಿ ದೊಡ್ಡದು
*ಮೆಲ್ಲಗೆ ಹರಿಯೋ ನೀರು ಕಲ್ಲ ಕೊರೆದಿತ್ತು
*ಮೇಲೆ ಬಿದ್ದು ಬಂದೋಳು ಮೂರು ಕಾಸಿಗೂ ಕಡೆ
*ಮೊಂಡ ಕೊಡಲಿ ರಟ್ಟೆಗೆ ಮೂಲ
*ಮೊಂಡ ಮಾವನಿಗೊಬ್ಬ ಭಂಡ ಅಳಿಯ
*ಮೊಸರ ಕಡೆದರೆ ಬೆಣ್ಣೆ ಒಸೆದು ಬಂತು
*ಮೋಕ್ಷಕ್ಕೆ ಗ್ನಾನ ಬೇಕು ಯೋಗಕ್ಕೆ ಧ್ಯಾನ ಬೇಕು
*ಮೋಕ್ಷಮಂತ್ರ ತಿಳಿದವನಿಗೆ ವೇದಮಂತ್ರದ ಗೊಡವೆಯೆ?
*ಮಾಡೋದು ದುರಾಚಾರ, ಮನೆ ಮುಂದೆ ಬೃಂದಾವನ
*ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ
*ಮಾತು ಬೆಳ್ಳಿ, ಮೌನ ಬಂಗಾರ
*ಮಾತು ಮನೆ ಮುರೀತು, ತೂತು ಒಲೆ ಕೆಡಿಸ್ತು
*ಮೇಲೆ ಬಿದ್ದು ಬಂದೋಳು ಮೂರು ಕಾಸಿಗೂ ಕಡೆ
*ಮೂರೂ ಬಿಟ್ಟೋಳು ಊರಿಗೆ ದೊಡ್ಡೋಳು
*ಮೂರ್ತಿ ಚಿಕ್ಕದಾದ್ರು ಕೀರ್ತಿ ದೊಡ್ಡದು
*ಮದುವೆ ಮಡಿನೋಡು ಮನೆ ಕಟ್ಟಿ ನೋಡು
*ಮದುವೆಯಾಗೋ ಗುಂಡ ಅಂದ್ರೆ ನೀನೇ ನನ್ನ ಹೆಂಡ್ತಿ ಅಂದ
*ಮಕ ನೋಡಿ ಮಾರು ಹೋದ, ಗುಣ ನೋಡಿ ದೂರ ಹೋದ
*ಮನೆಗೆ ಬೆಂಕಿ ಬಿದ್ದಾಗ ಬಾವಿ ತೋಡಿದರಂತೆ
*ಮುಳ್ಳಿನಿಂದ ಮುಳ್ಳು ತೆಗೆ, ಹಗೆಯಿಂದ ಹಗೆ ತೆಗೆ
*ಮುದ್ದು ಮುದ್ದು ತೊಗಲೆ ಬಿದ್ದು ಬಿದ್ದು ನಗಲೆ
*ಮುಲಾಜಿಗೆ ಬಸುರಾಗಿ ಹೇರೋಕೆ ತಾವಿಲ್ಲ
*ಮುತ್ತು ಒಡೆದರೆ ಹೋಯ್ತು, ಮಾತು ಆಡಿದರೆ ಹೋಯ್ತು
*ಮಾಡೋದು ಅನಾಚಾರ ; ಮನೆ ಮುಂದೆ ಬೃಂದಾವನ
*ಮಾಡೋರನ್ನು ಕಂಡರೆ ನೋಡು ನನ್ನ ಸಿರೀನ
*ಮಾಡಬಾರದ್ದು ಮಾಡಿದರೆ ಆಗಬಾರದ್ದೇ ಆಗುತ್ತೆ
*ಮಾಡಬಾರದ್ದು ಮಾಡಿದರೆ, ಆಗಬಾರದ್ದು ಆಗತ್ತೆ
*ಮಾಡಿದೋರ ಪಾಪ ಆಡಿದೋರ ಬಾಯಲ್ಲಿ
*ಮಾಡಿದರೆ ಮನೆ ; ಹೂಡಿದರೆ ಒಲೆ
*ಮಾಡಿದ್ದುಣ್ಣೋ ಮಹರಾಯ
*ಮಾಡಿದುಣ್ಣೊ ಮಾರಾಯ
*ಮಾಘ ಕಾವ್ಯ ಮಗನಿಗೆ ಬೇಡ
*ಮಾರಿ ಕಣ್ಣು ಹೋರಿ ಮ್ಯಾಲೆ, ಕಟುಕನ್ ಕಣ್ಣು ಕುರಿ ಮ್ಯಾಲೆ.
*ಮಾತು ಆಡಿದರೆ ಹೋಯಿತು; ಮುತ್ತು ಒಡೆದರೆ ಹೋಯಿತು
*ಮಾತು ಬೆಳ್ಳಿ; ಮೌನ ಬಂಗಾರ
*ಮಾತು ಮನೆ ಕೆಡಿಸಿತು; ತೂತು ಒಲೆ ಕೆಡಿಸಿತು
*ಮೇಲೆ ಬಿದ್ದ ಸೂಳೆ ಮೂರು ಕಾಸಿಗೂ ಬೇಡ
*ಮೇಯುವುದಕ್ಕೆ ಮುಂದೆ ;ಮೀಯುವುದಕ್ಕೆ ಹಿಂದೆ
*ಮೀಸೆ ಬಂದಾಗ ದೇಶ ಕಾಣದು ಮೊ.. ಬಂದಾಗ ನೆಲ ಕಾಣದು
*ಮೋಟಾಳಿಗೊಂದು ಚೋಟಾಳು
*ಮೂಗಿಗಿಂತ ಮೂಗುತಿ ಭಾರ
*ಮೂರೂ ಬಿಟ್ಟೋನು,ಊರಿಗೆ ದೊಡ್ಡೋನು
*ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು
*ಮೂರು ವರ್ಷಕ್ಕೆ ಬಂದಿದ್ದು ಮೂವತ್ತು ವರ್ಷಕ್ಕೆ ಬಂತು
*ಮಘೆ ಮಳೆ ಬಂದಷ್ಟೂ ಒಳ್ಳೇದು, ಮನೆ ಮಗ ಉಂಡಷ್ಟೂ ಒಳ್ಳೇದು
*ಮಳ್ಳೀ ಮಳ್ಳಿ ಮಂಚಕ್ಕೆ ಎಷ್ಟು ಕಾಲು ಅಂದ್ರೆ, ಮೂರು ಮತ್ತೊಂದು ಅಂದ್ಲಂತೆ
*ಮಳೆ ಹುಯ್ದರೆ ಕೇಡಲ್ಲ; ಮಗ ಉಂಡರೆ ಕೇಡಲ್ಲ
*ಮಂಗನ ಕೈಗೆ ಮಾಣಿಕ್ಯ ಕೊಟ್ಟ ಹಾಗೆ
*ಮಂತ್ರಕ್ಕೆ ಮಾವಿನ ಕಾಯಿ ಉದುರುತ್ತದೆಯೆ ?
*ಮಂತ್ರಕ್ಕಿಂತ ಉಗುಳೇ ಜಾಸ್ತಿ
*ಮದುವೇಲಿ ಗಂಡು, ಸ್ಮಶಾನ ಯಾತ್ರೇಲಿ ಹೆಣವಾಗೋ ಬಯಕೆ
*ಮದುವೆ ಮಾಡಿ ನೋಡು, ಮನೆ ಕಟ್ಟಿ ನೋಡು
*ಮದುವೆಯಾಗೋ ಗುಂಡ ಅಂದರೆ ನೀನೇ ನನ್ನ ಹೆಂಡತಿಯಾಗು ಅಂದ ಹಾಗೆ
*ಮಗೂನ ಚಿವುಟೋದು, ತೊಟ್ಟಿಲು ತೂಗೋದು
*ಮಹಡಿ ಹತ್ತಿದ ಮೇಲೆ ಏಣಿ ಒದ್ದ ಹಾಗೆ
*ಮಕ್ಕಳಿಲ್ಲದ ಮನೆಯಲ್ಲಿ ಅಜ್ಜ ಅಂಬೆಗಾಲಿಟ್ಟ
*ಮಕ್ಕಳಿಸ್ಕೂಲ್ ಮನೇಲಲ್ವೇ? (ಕೈಲಾಸಂ)
*ಮನೇಗೆ ಬೆಂಕಿ ಬಿದ್ದಾಗ ಭಾವಿ ತೋಡಕ್ಕೆ ಶುರು ಮಾಡಿದರಂತೆ
*ಮನೇಲಿ ಇಲಿ,ಬೀದೀಲಿ ಹುಲಿ
*ಮನಸ್ಸಿದ್ದರೆ ಮಾರ್ಗ
*ಮನೆ ದೇವರನ್ನ ಮೂಲೆಗಿಟ್ಟು ಬೆಟ್ಟದ ದೇವರಿಗೆ ಬುತ್ತಿ ಹೊತ್ತಂತೆ.
*ಮನೆ ತುಂಬ ಮುತ್ತಿದ್ದರೆ ...ಗೂ ಪೋಣಿಸಿಕೊಂಡರಂತೆ
*ಮನೆಗೆ ಮಾರಿ, ಪರರಿಗೆ ಉಪಕಾರಿ
*ಮೆತ್ತಗಿದ್ದಲ್ಲಿ ಮತ್ತೊಂದು ಗುದ್ದಲಿ
*ಮೆತ್ತಗಿದ್ದವರನ್ನು ಮೊಣಕೈಯಲ್ಲಿ ಗುದ್ದಿದರು
*ಮಿಂಚಿಹೋದ ಕಾರ್ಯಕ್ಕೆ ಚಿಂತಿಸಿ ಫಲವೇನು ?
*ಮೊದಲಿದ್ದವಳೇ ವಾಸಿ ಎಬ್ಬಿಸಿದರೆ ಉಣ್ಣೋಳು
*ಮೊಲ ಎಬ್ಬಿಸಿ ...ಕ್ಕೆ ಕೂತರು
*ಮುಖ ನೋಡಿ ಮಣೆ ಹಾಕು
*ಮುಳುಗುತ್ತಿರುವವನಿಗೆ ಹುಲ್ಲು ಕಡ್ಡಿಯೂ ಆಸರೆ
*ಮುಂದೆ ಬರೋ ಕೋಡಿಗಿಂತ ಹಿಂದೆ ಬರೋ ಬಾಲಾನೇ ವಾಸಿ
*ಮುಟ್ಟಿದೋರ ಮೇಲೆ ಬಿಟ್ಟೆ ನನ್ನ ಪ್ರಾಣ
*ಮುದಿ ... ಮಹಾ ಪತಿವ್ರತೆ (ವೃದ್ಧ ನಾರೀ ಪತಿವ್ರತಾ)
*ಮುಸುಕಿನೊಳಗೆ ಗುದ್ದಿಸಿಕೊಂಡಂತೆ
*ಮುತ್ತು ಹೆಚ್ಚಾಯ್ತು ಅಂತ ಎಲ್ಲೆಲ್ಲಿಗೋ ತೊಟ್ರಂತೆ.
 
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
 
==ಯ==
*ಯಜಮಾನಿಲ್ಲದ ಮನೆ ಮೇಟಿ ಇಲ್ಲದ ಕಣ ಎರಡೂ ಒಂದೆ
*ಯಸಗಾತಿಗೆ ದೋಸೆ ಕೊಡೊ ಹೊತ್ತಿಗೆ, ಮೂಸಿಮೂಸಿ ಮೂಗಿನ ಕೆಳಗೆ ಹಾಕಿದ್ಲು
*ಯಾರದೋ ದುಡ್ಡು; ಎಲ್ಲಮ್ಮನ ಜಾತ್ರೆ
*ಯಾರನ್ನ ನಂಬಿದರು ಆರೈದು ನಂಬಬೇಕು
*ಯಾರಿಗೂ ತೋರದಂತೆ ದೈವ ತನ್ನೊಳಗೆ ಸಾರಿಹುದು
*ಯಾರೂ ಇಲ್ಲದ ಊರಿಗೆ ಹೋಗಿ ನೀರು ಮಜ್ಜಿಗೆ ಬಯಸಿದಂತೆ
*ಯಾರೂ ಇಲ್ಲದ ಮನೆಗೆ ನಾನು ಜೋಗಪ್ಪ ಅಂದ
*ಯಾವ ಕಾಲ ತಪ್ಪಿದರೂ ಸಾವು ಕಾಲ ತಪ್ಪದು
*ಯುಕ್ತಿಯ ಮಾತು ಮಕ್ಕಳಿಂದಾದರೂ ತಿಳುಕೊ
*ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮುದ್ದೆ ಉಣ್ತಾ ಮಜ್ಜಿಗೆ ಓಡಾಟ
*ಯೋಗ ಇದ್ದಷ್ಟೇ ಭೋಗ
*ಯೋಗಿ ತಂದದ್ದು ಯೋಗಿಗೆ, ಭೋಗಿ ತಂದದ್ದು ಭೋಗಿಗೆ
*ಯೋಗಿಗೆ ರಾಗ ಇರಬಾರದು ಭೋಗಿಗೆ ರೋಗ ಇರಬಾರದು
*ಯೋಗ್ಯತೆ ಅರಿಯದ ದೊರೆ ರೋಗ ಅರಿಯದ ವೈದ್ಯ ಒಂದೇ
*ಯಾರದೋ ದುಡ್ಡು; ಎಲ್ಲಮ್ಮನ ಜಾತ್ರೆ
*ಯಾರದೊ ದುಡ್ಡಿನಲ್ಲಿ ಯೆಲ್ಲಮನ್ನ ಜಾತ್ರೆ
*ಯಾವ ಹುತ್ತದಲ್ಲಿ ಯಾವ ಹಾವು ಇರುತ್ತೊ
*ಯಂಕ,ಸೀನ,ನೊಣ ಅಂತ ಮನೇಲಿ ಮೂರೇ ಜನ
*ಯಥಾ ರಾಜಾ ತಥಾ ಪ್ರಜಾ
*ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ
*ಯಾರೂ ಇಲ್ಲದ ಊರಿಗೆ ಹೋಗಿ ನೀರು ಮಜ್ಜಿಗೆ ಬಯಸಿದಂತೆ
*ಯಾರೂ ಇಲ್ಲದ ಮನೆಗೆ ನಾನು ಜೋಗಪ್ಪ ಅಂದ
*ಯಾರದೋ ದುಡ್ಡು; ಎಲ್ಲಮ್ಮನ ಜಾತ್ರೆ
*ಯಾವ ಕಾಲ ತಪ್ಪಿದರೂ ಸಾವು ಕಾಲ ತಪ್ಪದು
*ಯೋಗ ಇದ್ದಷ್ಟೇ ಭೋಗ
*ಯೋಗಿ ತಂದದ್ದು ಯೋಗಿಗೆ, ಭೋಗಿ ತಂದದ್ದು ಭೋಗಿಗೆ
*ಯೋಗ್ಯತೆ ಅರಿಯದ ದೊರೆ ರೋಗ ಅರಿಯದ ವೈದ್ಯ ಒಂದೇ
*ಯಜಮಾನಿಲ್ಲದ ಮನೆ ಮೇಟಿ ಇಲ್ಲದ ಕಣ ಎರಡೂ ಒಂದೆ
*ಯಸಗಾತಿಗೆ ದೋಸೆ ಕೊಡೊ ಹೊತ್ತಿಗೆ, ಮೂಸಿಮೂಸಿ ಮೂಗಿನ ಕೆಳಗೆ ಹಾಕಿದ್ಲು
*ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮುದ್ದೆ ಉಣ್ತಾ ಮಜ್ಜಿಗೆ ಓಡಾಟ
*ಯುಕ್ತಿಯ ಮಾತು ಮಕ್ಕಳಿಂದಾದರೂ ತಿಳುಕೊ
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
==ರ==
*ರಂಭೆಯಂಥ ಹೆಣ್ತೀನ ಬಿಟ್ಟು ದೊಂಬಿತಿಯ ಹಿಂದೆ ಹೋದ
*ರಟ್ಟೆ ಮುರಿದು ರೊಟ್ಟಿ ತಿನ್ನು ಕಟ್ಟೆ ಹಾಕಿ ಅನ್ನ ಉಣ್ಣು
*ರಸ ಬೆಳೆದು ಕಸ ತಿನ್ನಬೇಡ, ಹಸ ಕಟ್ಟಿ ಮೊಸರಿಗೆ ಪರದಾಡಬೇಡ
*ರಸವಳ್ಳಿ ಹೆಣ್ಣಿಗೆ ರಸಪೂರಿ ಹಣ್ಣಿಗೆ ಮನ ಸೋಲದವರಿಲ್ಲ
*ರಸವಳ್ಳಿ ಹೆಣ್ಣು ಒಲಿವಂತೆ ಮಾಡುವುದು ಎಳ್ಳ ತಿಂದ ಋಣ
*ರಸಿಕನ ನುಡಿ ತಿಂಗಳ ಬೆಳಕಿನಂತೆ
*ರಾಗ ನೆನೆಪಾದಾಗ ತಾಳ ಮರೆತು ಹೋಯಿತಂತೆ
*ರಾಗಿ ಇದ್ರೆ ರಾಗ ರಾಗಿ ಇಲ್ದಿದ್ರೆ ರೋಗ
*ರಾಗಿಕಲ್ಲು ತಿರುಗುವಾಗ ರಾಜ್ಯವೆಲ್ಲಾ ನೆಂಟರು
*ರಾಜ ಇರೋತನಕ ರಾಣಿ ಭೋಗ
*ರಾತ್ರಿ ಕಂಡ ಬಾವೀಲಿ ಹಗಲು ಬಿದ್ದಂಗೆ
*ರಾಮ ಅನ್ನೋ ಕಾಲದಲ್ಲಿ ರಾವಣ ಬುದ್ಧಿ
*ರಾಮಾಯ ಸ್ವಸ್ತಿ, ರಾವಣಾಯ ಸ್ವಸ್ತಿ
*ರಾಮೆಶ್ವರಕ್ಕೆ ಹೋದ್ರೂ ಶನೀಶ್ವರನ ಕಾಟ ತಪ್ಪಲಿಲ್ಲ
*ರಾಯ ಸತ್ತರೂ ಹೆಣ ; ನಾಯಿ ಸತ್ತರೂ ಹೆಣ
*ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ
*ರೊಂಡಿಗೆ ಏಟು ಬಿದ್ರೆ ಮೊಂಡಿಗೆ ಮುಲಾಮು ಹಚ್ಚಿದರು
*ರಾಮೇಶ್ವರಕ್ಕೆ ಹೋದರೂ ಶನೇಶ್ವರನ ಕಾಟ ತಪ್ಪಲಿಲ್ಲ
*ರಾಮ ರಾಜ್ಯ ಬಂದರೂ ರಾಗಿ ಬೀಸೋದು ತಪ್ಪಲಿಲ್ಲ
*ರಾತ್ರಿ ಎಲ್ಲ ರಾಮಾಯಣ ಕೇಳಿ, ಬೆಳಗಾಗೆದ್ದು ರಾಮಂಗೂ ಸೀತೆಗೂ ಏನು ಸಂಬಂಧ ಅಂದ್ರಂತೆ
*ರಾವಣಾಸುರನ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ
*ರೇಶ್ಮೆ ಶಾಲಿನಲ್ಲಿ ಸುತ್ತಿದ ಚಪ್ಪಲಿ ಏಟು
*ರೋಗಿ ಬಯಸಿದ್ದು ಹಾಲು ಅನ್ನ ವೈದ್ಯರು ಹೇಳಿದ್ದು ಹಾಲು ಅನ್ನ
*ರೋಗಿ ಬಯಸಿದ್ದು ಹಾಲು-ಅನ್ನ ವೈದ್ಯ ಹೇಳಿದ್ದು ಹಾಲು-ಅನ್ನ
*ರಂಗನ ಮುಂದೆ ಸಿಂಗನೆ ? ಸಿಂಗನ ಮುಂದೆ ಮಂಗನೆ ?
*ರತ್ನ ತಗೊಂಡು ಹೋಗಿ ಗಾಜಿನ ತುಂಡಿಗೆ ಹೋಲಿಸಿದರು
*ರವಿ ಕಾಣದ್ದನ್ನು ಕವಿ ಕಂಡ
*ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ
*ರಾಗ ನೆನೆಪಾದಾಗ ತಾಳ ಮರೆತು ಹೋಯಿತಂತೆ
*ರಾಗಿ ಇದ್ರೆ ರಾಗ ರಾಗಿ ಇಲ್ದಿದ್ರೆ ರೋಗ
*ರಾಗಿಕಲ್ಲು ತಿರುಗುವಾಗ ರಾಜ್ಯವೆಲ್ಲಾ ನೆಂಟರು
*ರಾಜ ಇರೋತನಕ ರಾಣಿ ಭೋಗ
*ರಾಮ ಅನ್ನೋ ಕಾಲದಲ್ಲಿ ರಾವಣ ಬುದ್ಧಿ
*ರಾಮೆಶ್ವರಕ್ಕೆ ಹೋದ್ರೂ ಶನೀಶ್ವರನ ಕಾಟ ತಪ್ಪಲಿಲ್ಲ
*ರಾತ್ರಿ ಕಂಡ ಬಾವೀಲಿ ಹಗಲು ಬಿದ್ದಂಗೆ
*ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ
*ರಟ್ಟೆ ಮುರಿದು ರೊಟ್ಟಿ ತಿನ್ನು ಕಟ್ಟೆ ಹಾಕಿ ಅನ್ನ ಉಣ್ಣು
*ರಸ ಬೆಳೆದು ಕಸ ತಿನ್ನಬೇಡ, ಹಸ ಕಟ್ಟಿ ಮೊಸರಿಗೆ ಪರದಾಡಬೇಡ
*ರೊಂಡಿಗೆ ಏಟು ಬಿದ್ರೆ ಮೊಂಡಿಗೆ ಮುಲಾಮು ಹಚ್ಚಿದರು
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
==ಲ==
*ಲಂಚ ಕೊಟ್ಟು ಮಂಚ ಏರು ವಂಚನೆ ಮಾಡಿ ಕೈಲಾಸ ಏರು
*ಲಕುಮಿ ತೊಲಗಿದ ಬಳಿಕ ಕುಲ ವೀರವಿದ್ದು ಫಲವಿಲ್ಲ
*ಲಕ್ಕಿ ಸೊಪ್ಪಾದರೂ ಲೆಕ್ಕದ ಮುದ್ದೆ ಉಣಬೇಕು
*ಲಕ್ಷ್ಮಿ ಚಂಚಲೆ
*ಲಲನೆಯರ ಒಲುಮೆ ತೊಲಗಿದರೆ ಇಲ್ಲ
*ಲಾಭವಿಲ್ಲದ ವ್ಯಾಪಾರ ಕತ್ತೆ ಮೈ ಪರಚಿದಂಗೆ
*ಲಿಂಗ ಹರಿದ ಮೇಲೆ ಜಂಗಮನ ಹಂಗೇನು
*ಲೋಕ ತಿಳಿಯಬೇಕು ಲೆಕ್ಕ ಕಲಿಯಬೇಕು
*ಲಾಭವಿಲ್ಲದ ವ್ಯಾಪಾರ ಕತ್ತೆ ಮೈ ಪರಚಿದಂಗೆ
*ಲೋಕ ತಿಳಿಯಬೇಕು ಲೆಕ್ಕ ಕಲಿಯಬೇಕು
*ಲಂಚ ಕೊಟ್ಟು ಮಂಚ ಏರು ವಂಚನೆ ಮಾಡಿ ಕೈಲಾಸ ಏರು
*ಲಕ್ಕಿ ಸೊಪ್ಪಾದರೂ ಲೆಕ್ಕದ ಮುದ್ದೆ ಉಣಬೇಕು
*ಲಿಂಗ ಹರಿದ ಮೇಲೆ ಜಂಗಮನ ಹಂಗೇನು
*ಲಾಲಿಸಿದರೆ ಮಕ್ಕಳು ; ಪೂಜಿಸಿದರೆ ದೇವರು
*ಲಂಘನಮ್ ಪರಮೌಷಧಮ್
*ಲೊಳಲೊಟ್ಟೆ ಗಂಡನಿಗೆ ಹಳಸಿದ ಊಟ
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
==ವ==
*ವಜ್ರಕ್ಕೆ ಸಾಣಿ ಹಿಡಿದಂತೆ
*ವರಕವಿಗಳ ಮುಂದೆ ನರಕವಿಗಳು ವಿದ್ಯೆ ತೋರಬಾರದು
*ವಶಗೆಡದೆ ಹಸಗೆಡಲ್ಲ
*ವಿದ್ಯೆ ಇಲ್ಲದವನ ಮೊರೆ ಹಾಳೂರ ಹದ್ದಿನಂತೆ
*ವಿದ್ಯೆ ಬಲ್ಲವ ಇದ್ದಲ್ಲು ಸಲ್ಲುವ ಹೋಗಿದ್ದಲ್ಲು ಸಲ್ಲುವ
*ವಿದ್ಯೆ ಬಲ್ಲವ ಎಲ್ಲಿದ್ದರು ಸಲ್ಲುವ
*ವಿಧಿ ಕಾಣದ ಎಡೆಗಳಿಲ್ಲ
*ವಿಧಿ ಮುನಿದರೆ ಸರಿ ಬೆಸವಾಯ್ತು
*ವಿನಾಶ ಕಾಲಕ್ಕೆ ವಿಪರೀತ ಬುದ್ಧಿ
*ವ್ಯಾಪಾರಕ್ಕೆ ನಿಮಿಷ ಬೇಸಾಯಕ್ಕೆ ವರುಷ
*ವೇದ ಸುಳ್ಳಾದರೂ ಗಾದೆ ಸುಳ್ಳಾಗದು
*ವೈದ್ಯರ ಹತ್ತಿರ, ವಕೀಲರ ಹತ್ತಿರ ಸುಳ್ಳು ಹೇಳಬೇಡ
*ವಿದ್ಯೆ ಇಲ್ಲದವನು ಹದ್ದಿಗಿಂತಲೂ ಕಡೆ
*ವಿನಾಶ ಕಾಲೇ ವಿಪರೀತ ಬುದ್ಧಿ
*ವ್ರತ ಕೆಟ್ಟರೂ ಸುಖ ಪಡಬೇಕು
*ವಿನಾಶ ಕಾಲಕ್ಕೆ ವಿಪರೀತ ಬುದ್ಧಿ
*ವ್ಯಾಪಾರಕ್ಕೆ ನಿಮಿಷ ಬೇಸಾಯಕ್ಕೆ ವರುಷ
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
 
==ಶ==
*ಶಾನುಭೋಗರ ಮನೇಲಿ ಶೋಭನ ಅಂದ್ರೆ ಪಟೇಲನ ಮನೇಲಿ ನಿದ್ದೆ ಮಾಡ್ಲಿಲ್ವಂತೆ
*ಶಿವರಾತ್ರಿ ಮನೆಗೆ ಏಕಾದಶಿ ಬಂದಂಗೆ
*ಶಿವಾ ಅರಿಯದ ಸಾವು ಇಲ್ಲ ಮನಾ ಅರಿಯದ ಪಾಪ ಇಲ್ಲ
*ಶೀಲವಂತರ ಓಣೀಲಿ ಕೋಳಿ ಮಾಯ ಆದವಂತೆ
*ಶೆಟ್ಟಿ ಸುಂಗಾರ ಆಗೋದರೊಳಗೆ ಪಟ್ಟಣ ಹಾಳಾಯ್ತು
*ಶಂಖದಿಂದ ಬಂದರೇ ತೀರ್ಥ
*ಶಂಖದಿಂದ ಬಿದ್ದರೆ ತೀರ್ಥ
*ಶರಣರ ಬದುಕನ್ನು ಅವರ ಮರಣದಲ್ಲಿ ನೋಡು
*ಶೆಟ್ಟಿ ಶೃಂಗಾರ ಆಗೋದ್ರಲ್ಲಿ ಪಟ್ಣ ಕೆಡ್ತು
*ಶೆಟ್ಟಿ ಬಿಟ್ಟಲ್ಲೆ ಪಟ್ಣ
*ಶಿಸ್ತುಗಾರ ಪುಟ್ಟಶಾಮಿ
*ಶಿವ ಪೂಜೇಲಿ ಕರಡಿ ಬಿಟ್ಟಂಗೆ
*ಶಿವಪೂಜೇಲಿ ಕರಡಿಗೆ ಬಿಟ್ಟ ಹಾಗೆ
*ಶುಭ ನುಡಿಯೋ ಸೋಮ ಅಂದರೆ ಗೂಬೆ ಕಾಣ್ತಲ್ಲೋ ಮಾಮ ಅಂದ ಹಾಗೆ
*ಶೀಲವಂತರ ಓಣೀಲಿ ಕೋಳಿ ಮಾಯ ಆದವಂತೆ
*ಶೆಟ್ಟಿ ಸುಂಗಾರ ಆಗೋದರೊಳಗೆ ಪಟ್ಟಣ ಹಾಳಾಯ್ತು
*ಶಿವಾ ಅರಿಯದ ಸಾವು ಇಲ್ಲ ಮನಾ ಅರಿಯದ ಪಾಪ ಇಲ್ಲ
*ಶಿವರಾತ್ರಿ ಮನೆಗೆ ಏಕಾದಶಿ ಬಂದಂಗೆ
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
 
==ಸ==
*ಸಂತೆ ಕಟ್ಟೋಕು ಮೊದಲೇ ಸೇರಿದರು ಗಂಟು ಕಳ್ಳರು
*ಸಂತೆ ಸೇರೋಕೆ ಮೊದಲು ಗಂಟು ಕಳ್ಳರು ಸೇರಿದರು
*ಸಂತೇಲಿ ಮಂತ್ರ ಹೇಳಿದಂಗೆ
*ಸಂತೇಲಿ ಮನೇ ಮಾಡಿ ಸದ್ದಿಗಂಜೂದೇ
*ಸಂದೀಲಿ ಸಮಾರಾಧನೆ ಮಾಡ್ದಂಗೆ
*ಸಂಸಾರಿ ಸಾವಾಸ ಮಾಡಿ ಸನ್ಯಾಸಿ ಕೆಟ್ಟ
*ಸಜ್ಜನರ ಸಂಗ ಹೆಜ್ಜೇನು ಸವಿದಂತೆ
*ಸಡಗರದಲ್ಲಿ ಮದುವೆ ಮಾಡಿ ಈ ಹೆಣ್ಣು ಯಾರು ಅಂದಳಂತೆ ಅತ್ತೆ
*ಸತ್ತ ಮೇಲಿನ ಸೊರ್ಗಕ್ಕಿಂತ ಇದ್ದ ನರಲೋಕ ವಾಸಿ
*ಸತ್ತವರಿಗೆ ಸಂಗವಿಲ್ಲ ಕೆಟ್ಟವರಿಗೆ ನೆಂಟರಿಲ್ಲ
*ಸತ್ತು ಕೊಳ್ಳೋ ಸೊರ‍್ಗಕ್ಕಿಂತ ಬದುಕಿ ಕೊಳ್ಳೋ ನರಕ ಲೇಸು
*ಸತ್ತೋರ ಮಕ್ಕಳು ಇದ್ದೋರ ಕಾಲ್ದಸೀಲಿ
*ಸಮತೆ ತೊಟ್ಟು(=ಧರಿಸಿ) ಪದವಿ ಮುಟ್ಟು
*ಸಮಯಕ್ಕಾದ ಹುಲ್ಲು ಕಡ್ಡಿ ಸಹಸ್ರ ಹೊನ್ನು
*ಸಮಯಕ್ಕಾದವನೆ ನೆಂಟ ಕೆಲಸಕ್ಕಾದವನೆ ಬಂಟ
*ಸಮಯಕ್ಕಿಲ್ಲದ ನೆರವು ಸಾವಿರ ಇದ್ದರೂ ಎರವು (ಅನ್ಯ)
*ಸಮಯಕ್ಕೆ ಬಾರದ ಬುದ್ಧಿ ಸಾವಿರ ಇದ್ದರೂ ಲದ್ಧಿ
*ಸಮುದ್ರದ ನೆಂಟಸ್ತನ ಉಪ್ಪಿಗೆ ಬಡತನ
*ಸರಿದರೆ ಒತ್ತಣ್ಣ ಒತ್ತಿದರೆ ಸರಿಯಣ್ಣ
*ಸರಿಯಾದ ಎಚ್ಚರಿಕೆ ಇಲ್ಲದೆ ಹರಕೆಯ ಕುರಿಯಾದ
*ಸವತಿ ಸಣ್ಣವಳಲ್ಲ ದಾಯಾದಿ ಚಿಕ್ಕವನಲ್ಲ
*ಸಾದೆತ್ತಿಗೆ ಎರಡು ಹೇರು (ಹೊರೆ)
*ಸಾಮವೇದದ ಗಾನ ಭೂಮಿ ದಾನದ ಫಲವ ಜಂಬೂದ್ವೀಪದವರೇ ಬಲ್ಲರು
*ಸಾಯೋ ತನಕ ಶನಿ ಕಾಟ ಆದ್ರೆ ಬಾಳೋದು ಯಾವಾಗ
*ಸಾಯೋ ಮುಂದೆ ಸಕ್ಕರೆ ತುಪ್ಪ ತಿನಿಸಿದರಂತೆ
*ಸಾಯ್ತಿನಿ ಸಾಯ್ತಿನಿ ಅಂತ ಸಾವಿರ ಕೋಳಿ ತಿಂದನಂತೆ
*ಸಾಲ ಅಂದ್ರೆ ಶೂಲ, ಕಾಲ ಅಂದ್ರೆ ಯಮ
*ಸಾಲ ಕೊಳ್ಳುವಾಗ ಒಂದುರಾಗ, ಸಾಲ ಹೊಳ್ಳಿ ಕೊಡುವಾಗ ನಾನಾರಾಗ
*ಸಾಲ ಕೊಳ್ಳುವಾಗ ಹಾಲು ಕುಡಿದಂತೆ, ಸಾಲ ತಿರುಗಿ ಕೊಡುವಾಗ ಕಿಬ್ಬದಿ ಕೀಲು ಮುರಿದಂತೆ
*ಸಾಲಗಾರ ಸುಮ್ಮನಿದ್ದರೂ ಸಾಕ್ಷಿದಾರ ಸುಮ್ಮನಿರ
*ಸಾಲಗಾರನ ಮನೆಗೆ ಸವುದೆ ಹೊತ್ತರೆ ಮೇಲಣ ಬಡ್ಡಿಗೆ ಸಮವಾಯಿತು
*ಸಾವಿರ ಕುದರೆ ಸರದಾರ ಮನೇ ಹೆಣ್ತಿಗೆ ಪಿಂಜಾರ
*ಸಾವಿರ ಕೊಟ್ಟರೂ ಸವತಿ ಮನೆ ಬೇಡ
*ಸಾವಿರ ವರ್ಷ ಸಾಮು ಮಾಡಿ ಸಾಯೋ ಮುದುಕಿ ಸೊಂಟ ಮುರಿದ
*ಸಾವಿರ ಸಲ ಗೋವಿಂದ ಅಂದರು, ಒಬ್ಬ ದಾಸಯ್ಯನಿಗೆ ಭಿಕ್ಷೆ ನೀಡಲಿಲ್ಲ
*ಸಾವಿರ ಸುಳ್ಳು ಹೇಳಿ ಒಂಡು ಮಡುವೆ ಮಾಡು
*ಸಿಟ್ಟು ಬಂದರೆ ಪಡಿ ಹಿಟ್ಟು ಮುಕ್ಕು
*ಸಿಡಿಲು ಬಡಿದರೆ ಅಂಗೈಲಿ ಹಿಡಿದ ಕೊಡೆ ಕಾಪಾಡಿತೇ
*ಸಿದ್ದಿಗಿಂತ ಬಲವಿಲ್ಲ ಬುದ್ಧಿಗಿಂತ ಹಿರಿದಿಲ್ಲ
*ಸಿರಿ ಬಂದ ಕಾಲದಲಿ ಕರದಲಿ ಧರ್ಮ ಬೇಕು
*ಸಿರಿ ಸೋಂಕಿದವರ ಪರಿ ಬೇರೆ
*ಸಿರಿತನ ಇರೂತನ ಪಿರಿಪಿರಿ ಸಿರಿಹೋದ ಮರುದಿನ ಕಿರಿಕಿರಿ
*ಸಿರಿತನ ಇರೂತನ ಹಿರಿತನ ಘನ
*ಸಿರಿತನ ಇರೂತನ ಹಿರಿತನ ಸಿರಿಹೋದ ಮರುದಿನ ಕಿರಿತನ
*ಸಿರಿಯಣ್ಣ ಉಳ್ಳನಕ ಹಿರಿಯಣ್ಣ ಇಲ್ಲಾದಗ ನಡಿಯಣ್ಣ
*ಸಿರಿಯವ್ವನದ ಹೆಣ್ಣು ಸಕ್ಕರೆ ಬೊಂಬೆಯಂತೆ
*ಸುಂಕದೋನ ಹತ್ರ ಸುಖದುಃಖ ಹೇಳಿಕೊಂಡ ಹಾಗೆ
*ಸುಡುವ ಮನೆಯ ಗಳ ಹಿರಿದಂತೆ
*ಸುಳ್ಳನ ಮಾತು ಕೆಸರೊಳಗೆ ಮುಳ್ಳು ತುಳಿದಂತೆ
*ಸುಳ್ಳು ದೇವರಿಗೆ ಕಳ್ಳ ಪೂಜಾರಿ
*ಸುಳ್ಳು ಹೇಳಿದರೂ ನಿಜದ ತಲೆಯ ಮೇಲೆ ಹೊಡೆದಂಗೆ ಹೇಳಬೇಕು
*ಸೂಜಿಯಷ್ಟು ಬಾಯಿ ಗುಡಾಣದಷ್ಟು ಹೊಟ್ಟೆ
*ಸೂಳೆ ಪಾಪ ಸನ್ಯಾಸಿಗೆ
*ಸೆಟ್ಟಿ ಸಾಲ ಸತ್ತ ಮೇಲೆ ತಿಳೀತು
*ಸೇರಿಗೆ ಸವ್ವಾ ಸೇರು
*ಸೊಕ್ಕಿದ್ದು ಉಕ್ತದೆ ಉಕ್ಕಿದ್ದು ಒಲೆಗೆ ಹಾರ್ತದೆ
*ಸೊಕ್ಕುವುದು ಕೆಕ್ಕರಿಸಿ ನೋಡುವುದು ಸೇರಕ್ಕಿಯ ಗುಣ
*ಸೊಪ್ಪುಸೆದೆ ತಿನ್ನೋರ ಒಪ್ಪ ನೋಡು, ತುಪ್ಪತೊಗೆ ತಿನ್ನೋರ ರಂಪ ನೋಡು
*ಸೊಲ್ಲಿನ ಬೇದ ತಿಳಿದ ಕಿರಿಯ ಎಲ್ಲರಿಗೂ ಹಿರಿಯ
*ಸಾವಿರ ಚಿತ್ತಾರ ಮಸಿ ನುಂಗಿತು
*ಸಾವಿರ ಕುದುರೆ ಸರದಾರ, ಮನೆ ಹೆಂಡತಿ ಕಾಸ್ತಾರ
*ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು
*ಸಾವಿರ ಉಳಿ ಪೆಟ್ಟು,ಒಂದು ಚಿತ್ತಾರ
*ಸಾಯ್ತೀನಿ ಸಾಯ್ತೀನಿ ಅಂದೋಳು ಸಾವಿರ ಮುದ್ದೆ ನುಂಗಿದಳಂತೆ.
*ಸೇರಿಗೆ ಸವ್ವಾಸೇರು
*ಸೀರೆ ಗಂಟು ಬಿಚ್ಚೋವಾಗ ದಾರದ ನಂಟು ಯಾರಿಗೆ ಬೇಕು?
*ಸೋದರ ಮಾವನ ಚಾಳು ತುಂಡಪುಂಡರ ಪಾಲು
*ಸೂಳೆ ಕೈಲಿ ಜೋಳ ಕುಟ್ಟಿಸಿದ ಹಾಗೆ
*ಸೂಳೆ ಮುಪ್ಪಾಗಿ ಗೊರವಿತ್ತಿಯಾದಳು
*ಸೂಳೆಗೆ ಮದುವೆ ಮಾಡಿದ ಹಾಗೆ
*ಸಂದೀಲಿ ಸಮಾರಾಧನೆ
*ಸಂಕಟ ಬಂದಾಗ ವೆಂಕಟರಮಣ
*ಸಂಸಾರ ಗುಟ್ಟು; ವ್ಯಾಧಿ ರಟ್ಟು
*ಸಂತೆ ಹೊತ್ತಿಗೆ ಮೂರು ಮೊಳ ನೇದ ಹಾಗೆ
*ಸಂತೆ ಸೂಳೆ ನೆಚ್ಚಿಕೊಂಡು ಮನೆ ಹೆಂಡಿರನ್ನ ಬಿಟ್ಟರಂತೆ.
*ಸಂತೆಗೂ ಮುಂಚೆ ಗಂಟು ಕಳ್ಳರು ನೆರೆದರಂತೆ
*ಸಣ್ಣವರ ನೆರಳು ಉದ್ದವಾದಾಗ ಸೂರ್ಯನಿಗೂ ಮುಳುಗುವ ಕಾಲ
*ಸದಾಶಿವನಿಗೆ ಅದೇ ಧ್ಯಾನ
*ಸಗಣಿಯವನ ಸರಸಕ್ಕಿಂತ, ಗಂಧದವನ ಗುದ್ದಾಟ ಮೇಲು
*ಸಗಣಿಯವನೊಡನೆ ಸ್ನೇಹಕ್ಕಿಂತ ಗಂಧದವನ ಜೊತೆ ಗುದ್ದಾಟ ಮೇಲು
*ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ
*ಸಜ್ಜನರ ಸಂಗ ಹೆಜ್ಜೇನು ಸವಿದಂತೆ
*ಸಲಿಗೆ ಕೊಟ್ಟ ಸೊಣಗ ಸಟ್ಟುಗ ನೆಕ್ಕಿತಂತೆ
*ಸಮುದ್ರ ದಾಟಿದವನಿಗೆ ಹಸುವಿನ ಹೆಜ್ಜೆ ದೊಡ್ಡದೆ
*ಸಮುದ್ರದ ಮದ್ಯೆ ಇದ್ದರೂ ಉಪ್ಪಿಗೆ ಬರವಂತೆ
*ಸಮುದ್ರದ ನೆಂಟಸ್ತನ ; ಉಪ್ಪಿಗೆ ಬಡತನ
*ಸನ್ಯಾಸಿ ಬೆಕ್ಕು ಸಾಕಿದ ಹಾಗೆ
*ಸನ್ಯಾಸಿ ಸಂಸಾರ ಕಟ್ಟಿಕೊಂಡ ಹಾಗೆ
*ಸರಿಸರಿಯಾಗಿದ್ರೆ,ಪರಿಪರಿ ನೆಂಟರು
*ಸತ್ಯಕ್ಕೆ ಸಾವಿಲ್ಲ; ಸುಳ್ಳಿಗೆ ಸುಖವಿಲ್ಲ
*ಸುಂಕದವನ ಮುಂದೆ ಸುಖದುಃಖವೇ
*ಸ್ವತಂತ್ರವೋ,ಸ್ವರ್ಗಲೋಕವೋ
*ಸಾದೆತ್ತಿಗೆ ಎರಡು ಹೇರು (ಹೊರೆ)
*ಸಾಲ ಅಂದ್ರೆ ಶೂಲ, ಕಾಲ ಅಂದ್ರೆ ಯಮ
*ಸಾಲಗಾರ ಸುಮ್ಮನಿದ್ದರೂ ಸಾಕ್ಷಿದಾರ ಸುಮ್ಮನಿರ
*ಸಾಲಗಾರನ ಮನೆಗೆ ಸವುದೆ ಹೊತ್ತರೆ ಮೇಲಣ ಬಡ್ಡಿಗೆ ಸಮವಾಯಿತು
*ಸಾವಿರ ಕೊಟ್ಟರೂ ಸವತಿ ಮನೆ ಬೇಡ
*ಸಾವಿರ ಕುದರೆ ಸರದಾರ ಮನೇ ಹೆಣ್ತಿಗೆ ಪಿಂಜಾರ
*ಸಾವಿರ ಸಲ ಗೋವಿಂದ ಅಂದರು, ಒಬ್ಬ ದಾಸಯ್ಯನಿಗೆ ಭಿಕ್ಷೆ ನೀಡಲಿಲ್ಲ
*ಸಾವಿರ ಸುಳ್ಳು ಹೇಳಿ ಒಂಡು ಮಡುವೆ ಮಾಡು
*ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು
*ಸಾವಿರ ವರ್ಷ ಸಾಮು ಮಾಡಿ ಸಾಯೋ ಮುದುಕಿ ಸೊಂಟ ಮುರಿದ
*ಸಾಯೋ ಮುಂದೆ ಸಕ್ಕರೆ ತುಪ್ಪ ತಿನಿಸಿದರಂತೆ
*ಸಾಯೋ ತನಕ ಶನಿ ಕಾಟ ಆದ್ರೆ ಬಾಳೋದು ಯಾವಾಗ
*ಸಾಯ್ತಿನಿ ಸಾಯ್ತಿನಿ ಅಂತ ಸಾವಿರ ಕೋಳಿ ತಿಂದನಂತೆ
*ಸೂಜಿಯಷ್ಟು ಬಾಯಿ ಗುಡಾಣದಷ್ಟು ಹೊಟ್ಟೆ
*ಸಡಗರದಲ್ಲಿ ಮದುವೆ ಮಾಡಿ ಈ ಹೆಣ್ಣು ಯಾರು ಅಂದಳಂತೆ ಅತ್ತೆ
*ಸಂದೀಲಿ ಸಮಾರಾಧನೆ ಮಾಡ್ದಂಗೆ
*ಸಂಸಾರಿ ಸಾವಾಸ ಮಾಡಿ ಸನ್ಯಾಸಿ ಕೆಟ್ಟ
*ಸಂತೇಲಿ ಮಂತ್ರ ಹೇಳಿದಂಗೆ
*ಸಂತೆ ಕಟ್ಟೋಕು ಮೊದಲೇ ಸೇರಿದರು ಗಂಟು ಕಳ್ಳರು
*ಸಂತೆ ಸೇರೋಕೆ ಮೊದಲು ಗಂಟು ಕಳ್ಳರು ಸೇರಿದರು
*ಸಮಯಕ್ಕಾದ ಹುಲ್ಲು ಕಡ್ಡಿ ಸಹಸ್ರ ಹೊನ್ನು
*ಸಮಯಕ್ಕಾದವನೆ ನೆಂಟ ಕೆಲಸಕ್ಕಾದವನೆ ಬಂಟ
*ಸಮಯಕ್ಕೆ ಬಾರದ ಬುದ್ಧಿ ಸಾವಿರ ಇದ್ದರೂ ಲದ್ಧಿ
*ಸಮಯಕ್ಕಿಲ್ಲದ ನೆರವು ಸಾವಿರ ಇದ್ದರೂ ಎರವು (ಅನ್ಯ)
*ಸಮುದ್ರದ ನೆಂಟಸ್ತನ ಉಪ್ಪಿಗೆ ಬಡತನ
*ಸತ್ತೋರ ಮಕ್ಕಳು ಇದ್ದೋರ ಕಾಲ್ದಸೀಲಿ
*ಸತ್ತ ಮೇಲಿನ ಸೊರ್ಗಕ್ಕಿಂತ ಇದ್ದ ನರಲೋಕ ವಾಸಿ
*ಸತ್ತವರಿಗೆ ಸಂಗವಿಲ್ಲ ಕೆಟ್ಟವರಿಗೆ ನೆಂಟರಿಲ್ಲ
*ಸವತಿ ಸಣ್ಣವಳಲ್ಲ ದಾಯಾದಿ ಚಿಕ್ಕವನಲ್ಲ
*ಸೆಟ್ಟಿ ಸಾಲ ಸತ್ತ ಮೇಲೆ ತಿಳೀತು
*ಸೊಕ್ಕಿದ್ದು ಉಕ್ತದೆ ಉಕ್ಕಿದ್ದು ಒಲೆಗೆ ಹಾರ್ತದೆ
*ಸೊಪ್ಪುಸೆದೆ ತಿನ್ನೋರ ಒಪ್ಪ ನೋಡು, ತುಪ್ಪತೊಗೆ ತಿನ್ನೋರ ರಂಪ ನೋಡು
*ಸುಳ್ಳು ದೇವರಿಗೆ ಕಳ್ಳ ಪೂಜಾರಿ
*ಸುಂಕದೋನ ಹತ್ರ ಸುಖದುಃಖ ಹೇಳಿಕೊಂಡ ಹಾಗೆ
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
==ಹ==
*ಹಂಗು ತೊರೆದ ಮೇಲೆ ಲಿಂಗದ ಪರಿವೆ ಏನು
*ಹಂದಿ ತನ್ನ ಚಂದಕ್ಕೆ ವೃಂದಾವನ ಆಡ್ಕೊಣ್ತು
*ಹಂಪ್ಯಾಗ ಇರೂದಕ್ಕಿಂತ ತನ್ನ ಕೊಂಪ್ಯಾಗ ಇರೂದ್ ಲೇಸು
*ಹಕ್ಕಿ ತೆನೆ ತಿಂದು ಹಿಕ್ಕೆ ಇಕ್ಕಿ ಹೋಯ್ತು
*ಹಗಲು ಅರಸನ ಕಾಟ ಇರುಳು ದೆವ್ವದ ಕಾಟ
*ಹಗೆ ಬಿತ್ತಿ ಬೆಂಕಿ(ಹೊಗೆ) ಬೆಳೆದ
*ಹಗೆಯೋನ ಕೊಲ್ಲಾಕೆ ಹಗಲೇನು ಇರುಳೇನು
*ಹಗ್ಗ ತಿನ್ನೋ ಹನುಮಂತ ರಾಯನಿಗೆ ಜ್ವಾಳದ ಶಾವಿಗೆ ಎಷ್ಟು ಕೊಟ್ಟೀಯ
*ಹಗ್ಗ ಹರಿಯಲಿಲ್ಲ ಕೋಲು ಮುರಿಯಲಿಲ್ಲ
*ಹಣ ಅಂದ್ರೆ ಹೆಣವೂ ಬಾಯಿ ಬಿಡ್ತದೆ
*ಹಣ ಇದ್ದೋರಿಗೆ ಏನೆಲ್ಲ, ಗುಣ ಇದ್ದೋರಿಗೆ ಏನಿಲ್ಲ
*ಹಣ ಇಲ್ದೋರು ಎದ್ದೂ ಬಿದ್ದಂಗೆ, ಗುಣ ಇಲ್ದೋರು ಇದ್ದೂ ಇಲ್ದಂಗೆ
*ಹಣ ಇಲ್ಲದವ ಹೆಣಕ್ಕಿಂತ ಕಡೆ
*ಹಣ ಎರವಲು ತಂದು ಮಣ ಉರುವಲು ಕೊಂಡ
*ಹಣ್ಣು ತಿಂದೋನು ನುಣುಚಿ ಕೊಂಡ ಸಿಪ್ಪೆ ತಿಂದೋನು ಸಿಗ್ಹಾಕೊಂಡ
*ಹಣ್ಣೆಲೆ ಉದುರುವಾಗ ಚಿಗುರೆಲೆ ನಗುತಿತ್ತು
*ಹತ್ತರೊಟ್ಟಿಗೆ ಹನ್ನೊಂದು ಜಾತ್ರೆಯೊಟ್ಟಿಗೆ ಗೋವಿಂದು
*ಹತ್ತು ಕಟ್ಟುವಲ್ಲಿ ಒಂದು ಮುತ್ತು ಕಟ್ಟು
*ಹತ್ತು ಜನಕ್ಕೆ ಬಿದ್ದ ನ್ಯಾಯ ಬೇಗ ಸಾಯಕಿಲ್ಲ
*ಹತ್ತು ತಿಂಗಂಳ ಪುಟ್ಟ ಹಟ್ಟೆಲ್ಲಾ ಹೆಜ್ಜೆ
*ಹತ್ತು ಮಂದಿ ಹುಲ್ಲು ಕಡ್ಡಿ ಒಬ್ಬನ ತಲೆ ಭಾರ
*ಹತ್ತು ಮಕ್ಕಳ ತಾಯಾದರೂ ಸತ್ತ ಮಗನ್ನ ಮರೆಯೊದಿಲ್ಲ
*ಹದ ಬಂದಾಗ ಅರಗಬೇಕು ಬೆದೆ ಬಂದಾಗ ಬಿತ್ತಬೇಕು
*ಹಬ್ಬಕ್ಕೆ ಹೋಗಿ ತಬ್ಬಿಬ್ಬನಾದ
*ಹರ್ಷದ ಕೂಳು ನೆಚ್ಚಿಕೊಂಡು ವರ್ಷದ ಕೂಳು ತಪ್ಪಿಸ್ಕೊಂಡ
*ಹರ ಮುನಿದರೆ ಗುರು ಕಾಯ್ವ
*ಹರಕಿನಲ್ಲಿ ಇಲಿ ಕಡಿಯಿತು
*ಹರಿದಿದ್ದೇ ಹಳ್ಳ ನಿಂತಿದ್ದೇ ತೀರ್ಥ
*ಹರುವಯ್ಯನ ಎಲೆ ಇಂಬ, ಒಕ್ಕಲಿಗನ ಮನೆ ಇಂಬ
*ಹರೆ ಬಡಿದರೂ ಮದುವೆ ಮೊರ ಬಡಿದರೂ ಮದುವೆ
*ಹರೆಯಕ್ಕೆ ಬಂದಾಗ ಹಂದಿನೂ ಚಂದ
*ಹಲವು ದೇವರ ಮಾಡಿ ಹಾರುವಯ್ಯ ಕೆಟ್ಟ
*ಹಲ್ಲುಬಿದ್ದ ಮುದುಕಿ ಎಲ್ಲಿ ಬಿದ್ದರೇನು
*ಹಸನಾದ ಮಾತಿಗೆ ಜೀವ ಬೆಸನಾಯ್ತು
*ಹಸಿದ ಹೊಟ್ಟೆ ತೋರಿಸಿದರೆ ಮಸೆದ ಕತ್ತಿ ತೋರಿಸಿದರು
*ಹಸಿದು ಹಲಸಿನ ಹಣ್ಣು ತಿನ್ನು ಉಂಡು ಮಾವಿನ ಹಣ್ಣು ತಿನ್ನು
*ಹಳೆ ಮನೆಗೆ ಹೆಗ್ಗಣ ಸೇರಿಕೊಂಡಂಗೆ
*ಹಳ್ಳೀ ದೇವರ ತಲೆ ಒಡೆದು, ದಿಲ್ಲೀ ದೇವರ ಹೊಟ್ಟೆ ಹೊರೆದ ಹಾಗೆ
*ಹಾಕೋದು ಬಿತ್ತೋದು ನನ್ನಿಚ್ಛೆ; ಆಗೋದು ಹೋಗೋದು ದೇವರಿಚ್ಛೆ
*ಹಾಕ್ಮಣೆ, ನೂಕ್ಮಣೆ, ಯಾಕ್ಮಣೆ
*ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ
*ಹಾದರ ಹಾಲು ಸಕ್ಕರೆಯಂತೆ,ಬಯಲಾದರೆ, ಬೇವಿನ ಸಾರದಂತೆ
*ಹಾದಿ ತಪ್ಪಿದವನಿಗೆ ಹದಿನೆಂಟು ಹಾದಿ
*ಹಾದಿ ಹಣವಡ್ಡ ಹಾದರಗಿತ್ತಿ ಮನೆ ಯಾವುದು.
*ಹಾದೀಲಿ ಹೋಗುವವನ ಕೆಣಕ ಅವನು ಬಂದು ನಿನ್ನ ತದಕ
*ಹಾಯೋ ಎತ್ತು ಹಾಯ್ದರೂ ಬಂತು ಬಿಟ್ಟರೂ ಬಂತು
*ಹಾಯ್ದೆ ಇದ್ದರೂ ಎತ್ತಿನ ಕೊಂಬು ಉದ್ದ
*ಹಾರದ ಕೋತಿಗೆ ಮುಪ್ಪಾಗ ಬೆಲ್ಲ ತಿನ್ನಿಸಿದರಂತೆ
*ಹಾರಾಡೋ ಅಪ್ಪುಂಗೆ ತೂರಾಡೋ ಮಗ ಹುಟ್ದಂಗೆ
*ಹಾರುವ ಆಳಲ್ಲ, ಬಾಳೆ ದಡಿಯಲ್ಲ
*ಹಾರುವಯ್ಯನಿಗೆ ಹರಕೆ ಕಟ್ಟಿದಕ್ಕೆ ಹಳೇ ಪರಕೇಲಿ ಹೋಡ್ದ ಹಾಗೆ
*ಹಾರುವರ ಕೇರೀಲಿ ಹಬ್ಬ ಆದ್ರೆ ಮೂಳನಾಯಿಗೇನು ಓಡಾಟ
*ಹಾರುವರ ಮೋರೆಯಾದರೂ ನೀರಿನಲ್ಲಿ ತೊಳೆಯದಿದ್ದರೆ ನಾರದೆ ಇದ್ದೀತೆ.
*ಹಾರೋ ಹಕ್ಕಿ ಪುಕ್ಕ ಎಣಿಸಿದಂತೆ
*ಹಾರೋ ಹಕ್ಕಿಗೆ ಹಾದರ ಕಟ್ಟಿದರು.
*ಹಾರ‍್ಸೋನೋ ತೀರ‍್ಸೋನೋ.
*ಹಾಲಪ್ಪ ಅಂತ ಹೆಸರಿದ್ದರೂ ಮಜ್ಜಿಗೆಗೆ ಗತಿ ಇಲ್ಲ
*ಹಾಲಲ್ಲಾದ್ರೂ ಅದ್ದು, ನೀರಲ್ಲಾದ್ರೂ ಅದ್ದು.
*ಹಾಲಿಗಿಂತ ಕೆನೆ ರುಚಿ
*ಹಾಲಿದ್ದಾಗ ಹಬ್ಬ ಮಾಡು ಹಲ್ಲಿದ್ದಾಗ ಕಡಲೆ ತಿನ್ನು
*ಹಾಲಿಲ್ಲ ಬಟ್ಟಲಿಲ್ಲ ಗುಟುಕ್ ಅಂದ
*ಹಾಲು ಕಾಯಿಸ್ಕೊಂಡು ನಾನಿದ್ದೆ ಹಲ್ಲು ಕಿರ‍್ಕೊಂಡು ನೀ ಬಂದೆ.
*ಹಾಲು ಕುಡಿದ ಮಕ್ಕಳೇ ಬದುಕಲಿಲ್ಲ ವಿಷ ಕುಡಿದ ಮಕ್ಕಳು ಬದುಕ್ಯಾರೆ
*ಹಾಲು ಬಿಟ್ಟವರ ಮನೆಗೆ ಸೀಬಿ ಅಂದಂಗೆ.
*ಹಾಲು ಮಾರಿದ್ದು ಹಾಲಿಗೆ ನೀರು ಮಾರಿದ್ದು ನೀರಿಗೆ
*ಹಾಲುಕ್ಕಿದ ಮನೇಲಿ ಮೇಲ್‍ಗರೀಲಿ.
*ಹಾವಿಗೆ ಹಾಲೆರೆದರೇನು ಫಲ
*ಹಾವೂ ಸಾಯಲಿಲ್ಲ ಕೋಲು ಮುರೀಲಿಲ್ಲ
*ಹಾಸಿಗೆ ಇದ್ದಷ್ಟು ಕಾಲು ಚಾಚು
*ಹಾಳೂರಿಗೆ ಉಳಿದವನೇ ಗೌಡ
*ಹಾಳೂರಿಗೆ ಉಳಿದೋನೇ ಗೌಡ, ಬೆಂಗಳೂರಿಗೆ ಬಂದೋನೇ ಬಹದ್ದೂರ
*ಹಿಂದಲ ಮಾತು ಮರಿ ಮುಂದಲ ಬಾಳು ಅರಿ
*ಹಿಟ್ಟು ಹಳಸಿತ್ತು ನಾಯೂ ಹಸಿದಿತ್ತು
*ಹಿಡಿದ ಕೆಲಸ ಕೈ ಹತ್ತಲ್ಲ, ತಿಂದ ಅನ್ನ ಮೈ ಹತ್ತಲ್ಲ
*ಹಿತವಿಲ್ಲದ ಗಂಡ ಹಿಂದಿದ್ದರೇನು ಮುಂದಿದ್ದರೇನು
*ಹಿತ್ತಲ ಗಿಡ ಮದ್ದಲ್ಲ ಹತ್ತರ ಮಾತು ರುಚಿಯಲ್ಲ
*ಹಿರಿದು ಪಾಪ ಮಾಡಿ ಗಂಗೆಗೆ ಹರಿದರು
*ಹಿರಿಯಕ್ಕನ ಚಾಳಿ ಮನೆಮಕ್ಕಳಿಗೆಲ್ಲ
*ಹಿರೀ‌ಅಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ
*ಹುಚ್ಚು ಹೊಳೇ ಬರುವಾಗ ಹೂವಿನ ತೋಟ ಇದಿರೇ
*ಹುಟ್ಟಿದ ಮನೆ ಹೋಳಿಹುಣ್ಣಿಮೆ ಕೊಟ್ಟ ಮನೆ ಶಿವರಾತ್ರಿ
*ಹುಟ್ಟಿದವಗೆ ಸಾವು ತಪ್ಪದು
*ಹುಟ್ಟಿದಾಗ ಬಂದದ್ದು ಹೂತಾಗ ಹೋದೀತೇನು
*ಹುಟ್ಟು ಗುಣ ಸುಟ್ಟರೂ ಹೊಗೊದಿಲ್ಲ
*ಹುಟ್ಟು ಸಾವು ದಿಟವೇ ಆದರೂ ಹೆಜ್ಜೆ ಹೆಜ್ಜೆಗೆ ಅಂಜೂದ್ ತಪ್ಪಲಿಲ್ಲ
*ಹುಟ್ಟುವವನ ಅಣ್ಣ ಬೆಳೆಯುವವನ ತಮ್ಮ
*ಹುಣಸೆ ಮರ ಮುಪ್ಪಾದರೂ ಹುಳಿ ಮುಪ್ಪಲ್ಲ
*ಹುಣ್ಣು ಮಾದರೂ ಕಲೆ ಮಾದೀತೇ
*ಹುತ್ತ ಬಡಿದರೆ ಹಾವು ಸಾಯುವುದೇ
*ಹುಬ್ಬೆ ಮಳೇಲಿ ಬಿತ್ತಿದರೆ ಹುಲ್ಲೂ ಇಲ್ಲ ಕಾಳೂ ಇಲ್ಲ
*ಹುಯ್ಯಂತ ಕೊಡ ಬೇಡ ಸುಮ್ಮನೆ ಕೂರಲು ಬೇಡ
*ಹುಳ್ಳಿಕಾಳೂ ತಿನ್ನೊ ಮುಕ್ಕ ಒಬ್ಬಟ್ಟಿನ ಹೂರ್ಣ ಕೇಳಿದಂಗೆ
*ಹೂವ ತರುವ ಮನೆಗೆ ದೇವ ಹುಲ್ಲು ಹೊರುವ
*ಹೃದಯಶೂನ್ಯರ ಒಲವಿಗಿಂತ ಬಲ್ಲವರ ಕದನವೇ ಲೇಸು
*ಹೆಂಡತಿಯಿಲ್ಲದ ಮನೆ ತಂತಿಯಿಲ್ಲದ ವೀಣೆ
*ಹೆಂಡ್ರ ಅವಾಂತರ ತಡಿಲಾರದೆ ಗಂಡ ದೇಶಾಂತರ ಹೋದ
*ಹೆಂಡ್ರನ್ನ ಸಸಾರ (=ತಾತ್ಸಾರ) ಮಾಡಿದ್ರೆ ಸಂಸಾರ ನಿಸ್ಸಾರವಾಗ್ತದೆ
*ಹೆಂದತಿಯಿಲ್ಲದ ಮನೆ ದೇವರಿಲ್ಲದ ಗುಡಿ
*ಹೆಡ್ಡಾಳಾದ್ರೂ ದೊಡ್ಡಾಳು ಮೇಲು
*ಹೆಣು ಮಕ್ಕಳು ಇದ್ದ ಮನೆ ಕನ್ನಡಿಯಂಗೆ
*ಹೆಣ್ಣಿಂದ ರಾವಣ ಕೆಟ್ಟ ಮಣ್ಣಿಂದ ಕೌರವ ಕೆಟ್ಟ
*ಹೆಣ್ಣಿದ್ದ ಮನೆಗೆ ಎಡತಾಕಿ ಅಣ್ಣಯ್ಯ ಮಣ್ಣಾಗಿ ಹೋದ
*ಹೆಣ್ಣಿನ ಬಗೆ/ಮನಸ್ಸ ಬಲ್ಲೋರಿಲ್ಲ
*ಹೆಣ್ಣಿನ ಬಾಳು ಕಣ್ಣೀರಿನ ಗೋಳು
*ಹೆಣ್ಣಿನ ಸೊಬಗನು ಕಣ್ಣಾರೆ ಕಂಡು ಬಯಸದ ಅಣ್ಣಗಳು ಅದಾರು
*ಹೆಣ್ಣು ಉರಿಸಿದ ಮನೆಯ ಹೆಗ್ಗಂಬ ಉರಿಯಿತು
*ಹೆಣ್ಣು ಚಂದ ಕಣ್ಣು ಕುಲ್ಡು ಅಂದಂಗೆ
*ಹೆಣ್ಣು ಜಲ್ಮಕ್ಕೆ ಹೆಜ್ಜೆಗೊಂದು ಮುಳ್ಳು
*ಹೆಣ್ಣು ಹಡೆದವರ ಮನೆ ನುಣ್ಣಗೆ ಗಂಡು ಹಡೆದವರ ಮನೆ ತಣ್ಣಗೆ
*ಹೆಣ್ಣು ಹುಟ್ಟಿದರೊಂದು ಹುಣ್ಣು ಹುಟ್ಟಿದ ಹಾಗೆ
*ಹೆಣ್ಣು ಹೊನ್ನು ಮಣ್ಣು ಇನ್ನೊಬರ ಕೈ ಸೇರಿದರೆ ಹೋದಂತೆ
*ಹೆತ್ತ ಅಮ್ಮನ್ನ ತಿನ್ನೋಳು ಅತ್ತೆಯಮ್ಮನ್ನ ಬಿಟ್ಟಾಳ
*ಹೆತ್ತವರಿಗೆ ಅಂಬಲಿ ಬಿಡದಿದ್ದರೂ, ಹಂಬಲ ಬಿಡದಿದ್ದರೆ ಸಾಕು
*ಹೆತ್ತವರು ಹೆಸರಿಕ್ಕ ಬೇಕು
*ಹೆರಿಗೆ ಬೇನೆ ಕೆಲ ಗಂಟೆ ಗಂಟ, ಬಂಜೆ ಬೇನೆ ಬದುಕಿನ ಗಂಟ
*ಹೆಸರಿಗೆ ಹೊನ್ನ ಹೆಗ್ಗಡೆ, ಎಸರಿಗೆ ಅಕ್ಕಿ ಇಲ್ಲ
*ಹೇಮಗೇಡಿ ನೇಮ ಬೆಳಗಿದ
*ಹೇಳಿಕೆ ಮಾತು ಕೇಳಿ ಹೆಂಡ್ರನ್ನ ಬಿಟ್ಟ
*ಹೇಳೊದು ವೇದ ಹಾಕೊದು ಗಾಳ
*ಹೊಕ್ಕು ಬಳಸಿದರೆ ನಂಟು
*ಹೊಟ್ಟೆ ಉರಿದು ಕೊಳ್ಳೋದು ಒಂದೇಯ, ಹೊಟ್ಟೆ ಇರಿದು ಕೊಳ್ಳೋದು ಒಂದೇಯ
*ಹೊಟ್ಟೆ ತುಂಬಿದ ಮೇಲೆ ಹುಗ್ಗಿ ಮುಳ್ಳು ಮುಳ್ಳು
*ಹೊಟ್ಟೆ ತುಂಬಿದೋರಿಗೆ ಹುಡುಗಾಟ, ಹೊಟ್ಟೆಗಿಲ್ಲದೋರಿಗೆ ಮಿಡುಕಾಟ
*ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು
*ಹೊತ್ತನ್ನು ಕೊಲ್ಲುವ ಮೈಗಳ್ಳಗಿಂತ ಸತ್ತ ಹೆಣ ಲೇಸು
*ಹೊತ್ತಿರುವಾಗಲೇ ಗೊತ್ತು ಸೇರಬೇಕು
*ಹೊತ್ತು ಕಳೆದರೆ ಮತ್ತೆ ಬಾರದು
*ಹೊತ್ತು ಮೀರಿದ ಮಾತು ತನಗೇ ಕುತ್ತು ತಂತು
*ಹೊನ್ನಿನ ಶೃತಿ ಕೇಳಿ ಎಂಥೆಂಥಾವರೆಲ್ಲ ಭ್ರಮೆಗೆ ಬಿದ್ದರು
*ಹೊರೆ ಹೊತ್ತುಕೊಂಡು ಗ್ರಹಗತಿ ಕೇಳ್ದಂದೆ
*ಹೊಲಬನರಿತು ನುಡಿದ ಮಾತು ಫಲ ಪಕ್ವವಾದಂತೆ
*ಹೊಲಬನರಿಯದ (ರೀತಿಯಲ್ಲದ) ಮಾತು ತಲೆ ಬೇನೆ
*ಹೊಳೆಗೆ ಸುರಿದರೂ ಅಳೆದು ಸುರಿ
*ಹೋದ ಬದುಕಿಗೆ ಹನ್ನೆರಡು ದೇವರು
*ಹೋದಾ ಪುಟ್ಟಾ, ಬಂದಾ ಪುಟ್ಟಾ, ಪುಟ್ಟನ ಕಾಲಿಗೆ ನೀರಿಲ್ಲ
*ಹೋದ್ರೆ ಒಂದು ಕಲ್ಲು, ಬಂದ್ರೆ ಒಂದು ಹಣ್ಣು
*ಹೌದಪ್ಪನ ಮನೇಲಿ ಹೌದಪ್ಪ, ಇಲ್ಲಪ್ಪನ ಮನೇಲಿ ಇಲ್ಲಪ್ಪ
*ಹಾಳೂರಿಗೆ ಉಳಿದೋನೇ ಗೌಡ, ಬೆಂಗಳೂರಿಗೆ ಬಂದೋನೇ ಬಹದ್ದೂರ
*ಹಾಳೂರಿಗೆ ಉಳಿದವನೇ ಗೌಡ
*ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ
*ಹಾಕೋದು ಬಿತ್ತೋದು ನನ್ನಿಚ್ಛೆ; ಆಗೋದು ಹೋಗೋದು ದೇವರಿಚ್ಛೆ
*ಹಾಕ್ಮಣೆ, ನೂಕ್ಮಣೆ, ಯಾಕ್ಮಣೆ
*ಹಾಲಪ್ಪ ಅಂತ ಹೆಸರಿದ್ದರೂ ಮಜ್ಜಿಗೆಗೆ ಗತಿ ಇಲ್ಲ
*ಹಾಲಿದ್ದಾಗ ಹಬ್ಬ ಮಾಡು ಹಲ್ಲಿದ್ದಾಗ ಕಡಲೆ ತಿನ್ನು
*ಹಾಲಿಲ್ಲ ಬಟ್ಟಲಿಲ್ಲ ಗುಟುಕ್ ಅಂದ
*ಹಾಲು ಕುಡಿದ ಮಕ್ಕಳೇ ಬದುಕಲಿಲ್ಲ ವಿಷ ಕುಡಿದ ಮಕ್ಕಳು ಬದುಕ್ಯಾರೆ
*ಹಾಲು ಮಾರಿದ್ದು ಹಾಲಿಗೆ ನೀರು ಮಾರಿದ್ದು ನೀರಿಗೆ
*ಹಾರುವರ ಕೇರೀಲಿ ಹಬ್ಬ ಆದ್ರೆ ಮೂಳನಾಯಿಗೇನು ಓಡಾಟ
*ಹಾವೂ ಸಾಯಲಿಲ್ಲ ಕೋಲು ಮುರೀಲಿಲ್ಲ
*ಹೇಳಿಕೆ ಮಾತು ಕೇಳಿ ಹೆಂಡ್ರನ್ನ ಬಿಟ್ಟ
*ಹೇಳೊದು ವೇದ ಹಾಕೊದು ಗಾಳ
*ಹೋದಾ ಪುಟ್ಟಾ, ಬಂದಾ ಪುಟ್ಟಾ, ಪುಟ್ಟನ ಕಾಲಿಗೆ ನೀರಿಲ್ಲ
*ಹೋದ ಬದುಕಿಗೆ ಹನ್ನೆರಡು ದೇವರು
*ಹೋದ್ರೆ ಒಂದು ಕಲ್ಲು, ಬಂದ್ರೆ ಒಂದು ಹಣ್ಣು
*ಹಳ್ಳೀ ದೇವರ ತಲೆ ಒಡೆದು, ದಿಲ್ಲೀ ದೇವರ ಹೊಟ್ಟೆ ಹೊರೆದ ಹಾಗೆ
*ಹಳೆ ಮನೆಗೆ ಹೆಗ್ಗಣ ಸೇರಿಕೊಂಡಂಗೆ
*ಹಂದಿ ತನ್ನ ಚಂದಕ್ಕೆ ವೃಂದಾವನ ಆಡ್ಕೊಣ್ತು
*ಹಣ್ಣೆಲೆ ಉದುರುವಾಗ ಚಿಗುರೆಲೆ ನಗುತಿತ್ತು
*ಹಣ್ಣು ತಿಂದೋನು ನುಣುಚಿ ಕೊಂಡ ಸಿಪ್ಪೆ ತಿಂದೋನು ಸಿಗ್ಹಾಕೊಂಡ
*ಹಣ ಅಂದ್ರೆ ಹೆಣವೂ ಬಾಯಿ ಬಿಡ್ತದೆ
*ಹಣ ಎರವಲು ತಂದು ಮಣ ಉರುವಲು ಕೊಂಡ
*ಹಣ ಇದ್ದೋರಿಗೆ ಏನೆಲ್ಲ, ಗುಣ ಇದ್ದೋರಿಗೆ ಏನಿಲ್ಲ
*ಹಣ ಇಲ್ದೋರು ಎದ್ದೂ ಬಿದ್ದಂಗೆ, ಗುಣ ಇಲ್ದೋರು ಇದ್ದೂ ಇಲ್ದಂಗೆ
*ಹಣ ಇಲ್ಲದವ ಹೆಣಕ್ಕಿಂತ ಕಡೆ
*ಹದ ಬಂದಾಗ ಅರಗಬೇಕು ಬೆದೆ ಬಂದಾಗ ಬಿತ್ತಬೇಕು
*ಹಗಲು ಅರಸನ ಕಾಟ ಇರುಳು ದೆವ್ವದ ಕಾಟ
*ಹಗೆ ಮಾತು ಆತುಕೊಂಡ, ತುಟಿ ಬಿಚ್ಚದೆ ಕೂತುಕೊಂಡ
*ಹಗೆಯೋನ ಕೊಲ್ಲಾಕೆ ಹಗಲೇನು ಇರುಳೇನು
*ಹಗ್ಗ ಹರಿಯಲಿಲ್ಲ ಕೋಲು ಮುರಿಯಲಿಲ್ಲ
*ಹಗ್ಗ ತಿನ್ನೋ ಹನುಮಂತ ರಾಯನಿಗೆ ಜ್ವಾಳದ ಶಾವಿಗೆ ಎಷ್ಟು ಕೊಟ್ಟೀಯ
*ಹಲವು ದೇವರ ಮಾಡಿ ಹಾರುವಯ್ಯ ಕೆಟ್ಟ
*ಹಲ್ಲುಬಿದ್ದ ಮುದುಕಿ ಎಲ್ಲಿ ಬಿದ್ದರೇನು
*ಹರೆ ಬಡಿದರೂ ಮದುವೆ ಮೊರ ಬಡಿದರೂ ಮದುವೆ
*ಹರೆಯಕ್ಕೆ ಬಂದಾಗ ಹಂದಿನೂ ಚಂದ
*ಹರಿದಿದ್ದೇ ಹಳ್ಳ ನಿಂತಿದ್ದೇ ತೀರ್ಥ
*ಹರುವಯ್ಯನ ಎಲೆ ಇಂಬ, ಒಕ್ಕಲಿಗನ ಮನೆ ಇಂಬ
*ಹಸಿದ ಹೊಟ್ಟೆ ತೋರಿಸಿದರೆ ಮಸೆದ ಕತ್ತಿ ತೋರಿಸಿದರು
*ಹಸಿದು ಹಲಸಿನ ಹಣ್ಣು ತಿನ್ನು ಉಂಡು ಮಾವಿನ ಹಣ್ಣು ತಿನ್ನು
*ಹತ್ತರೊಟ್ಟಿಗೆ ಹನ್ನೊಂದು ಜಾತ್ರೆಯೊಟ್ಟಿಗೆ ಗೋವಿಂದು
*ಹತ್ತು ಜನಕ್ಕೆ ಬಿದ್ದ ನ್ಯಾಯ ಬೇಗ ಸಾಯಕಿಲ್ಲ
*ಹತ್ತು ಕಟ್ಟುವಲ್ಲಿ ಒಂದು ಮುತ್ತು ಕಟ್ಟು
*ಹತ್ತು ಮಕ್ಕಳ ತಾಯಾದರೂ ಸತ್ತ ಮಗನ್ನ ಮರೆಯೊದಿಲ್ಲ
*ಹತ್ತು ತಿಂಗಂಳ ಪುಟ್ಟ ಹಟ್ಟೆಲ್ಲಾ ಹೆಜ್ಜೆ
*ಹೌದಪ್ಪನ ಮನೇಲಿ ಹೌದಪ್ಪ, ಇಲ್ಲಪ್ಪನ ಮನೇಲಿ ಇಲ್ಲಪ್ಪ
*ಹೆಡ್ಡಾಳಾದ್ರೂ ದೊಡ್ಡಾಳು ಮೇಲು
*ಹೆಂಡ್ರ ಅವಾಂತರ ತಡಿಲಾರದೆ ಗಂಡ ದೇಶಾಂತರ ಹೋದ
*ಹೆಂಡ್ರನ್ನ ಸಸಾರ (=ತಾತ್ಸಾರ) ಮಾಡಿದ್ರೆ ಸಂಸಾರ ನಿಸ್ಸಾರವಾಗ್ತದೆ
*ಹೆಣ್ಣು ಚಂದ ಕಣ್ಣು ಕುಲ್ಡು ಅಂದಂಗೆ
*ಹೆಣು ಮಕ್ಕಳು ಇದ್ದ ಮನೆ ಕನ್ನಡಿಯಂಗೆ
*ಹೆರಿಗೆ ಬೇನೆ ಕೆಲ ಗಂಟೆ ಗಂಟ, ಬಂಜೆ ಬೇನೆ ಬದುಕಿನ ಗಂಟ
*ಹೆಸರಿಗೆ ಹೊನ್ನ ಹೆಗ್ಗಡೆ, ಎಸರಿಗೆ ಅಕ್ಕಿ ಇಲ್ಲ
*ಹೆತ್ತ ಅಮ್ಮನ್ನ ತಿನ್ನೋಳು ಅತ್ತೆಯಮ್ಮನ್ನ ಬಿಟ್ಟಾಳ
*ಹೆತ್ತವರಿಗೆ ಅಂಬಲಿ ಬಿಡದಿದ್ದರೂ, ಹಂಬಲ ಬಿಡದಿದ್ದರೆ ಸಾಕು
*ಹೆತ್ತವರು ಹೆಸರಿಕ್ಕ ಬೇಕು
*ಹಿಡಿದ ಕೆಲಸ ಕೈ ಹತ್ತಲ್ಲ, ತಿಂದ ಅನ್ನ ಮೈ ಹತ್ತಲ್ಲ
*ಹಿಟ್ಟು ಹಳಸಿತ್ತು ನಾಯೂ ಹಸಿದಿತ್ತು
*ಹಿರೀ‌ಅಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ
*ಹಿರಿಯಕ್ಕನ ಚಾಳಿ ಮನೆಮಕ್ಕಳಿಗೆಲ್ಲ
*ಹಿತವಿಲ್ಲದ ಗಂಡ ಹಿಂದಿದ್ದರೇನು ಮುಂದಿದ್ದರೇನು
*ಹಿತ್ತಲ ಗಿಡ ಮದ್ದಲ್ಲ ಹತ್ತರ ಮಾತು ರುಚಿಯಲ್ಲ
*ಹೊಳೆಗೆ ಸುರಿದರೂ ಅಳೆದು ಸುರಿ
*ಹೊಟ್ಟೆ ತುಂಬಿದೋರಿಗೆ ಹುಡುಗಾಟ, ಹೊಟ್ಟೆಗಿಲ್ಲದೋರಿಗೆ ಮಿಡುಕಾಟ
*ಹೊಟ್ಟೆ ತುಂಬಿದ ಮೇಲೆ ಹುಗ್ಗಿ ಮುಳ್ಳು ಮುಳ್ಳು
*ಹೊಟ್ಟೆ ಉರಿದು ಕೊಳ್ಳೋದು ಒಂದೇಯ, ಹೊಟ್ಟೆ ಇರಿದು ಕೊಳ್ಳೋದು ಒಂದೇಯ
*ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು
*ಹೊರೆ ಹೊತ್ತುಕೊಂಡು ಗ್ರಹಗತಿ ಕೇಳ್ದಂದೆ
*ಹುಳ್ಳಿಕಾಳೂ ತಿನ್ನೊ ಮುಕ್ಕ ಒಬ್ಬಟ್ಟಿನ ಹೂರ್ಣ ಕೇಳಿದಂಗೆ
*ಹುಣ್ಣಿಮೆ ಬರುವನಕ ಅಮಾಸೆ ನಿಲ್ಲದು, ಅಮಾಸೆ ಬರುವನಕ ಹುಣ್ಣಿಮೆ ನಿಲ್ಲದು
*ಹುಣಸೆ ಮರ ಮುಪ್ಪಾದರೂ ಹುಳಿ ಮುಪ್ಪಲ್ಲ
*ಹುಟ್ಟಿದಾಗ ಬಂದದ್ದು ಹೂತಾಗ ಹೋದೀತೇನು
*ಹುಟ್ಟಿದ ಮನೆ ಹೋಳಿಹುಣ್ಣಿಮೆ ಕೊಟ್ಟ ಮನೆ ಶಿವರಾತ್ರಿ
*ಹುಟ್ಟು ಗುಣ ಸುಟ್ಟರೂ ಹೊಗೊದಿಲ್ಲ
*ಹುಬ್ಬೆ ಮಳೇಲಿ ಬಿತ್ತಿದರೆ ಹುಲ್ಲೂ ಇಲ್ಲ ಕಾಳೂ ಇಲ್ಲ
*ಹುತ್ತ ಬಡಿದರೆ ಹಾವು ಸಾಯುವುದೇ
*ಹಾಡಿದ್ದೇ ಹಾಡಿದ ಕಿಸಬಾಯಿ ದಾಸ
*ಹಾಡ್ತಾ ಹಾಡ್ತಾ ರಾಗ , ನರಳ್ತಾ ನರಳ್ತಾ ರೋಗ
*ಹಾಡ್ತಾ ಹಾಡ್ತಾ ರಾಗ; ಉಗುಳ್ತಾ ಉಗುಳ್ತಾ ರೋಗ
*ಹಾಳೂರಿಗೆ ಉಳಿದವನೇ ಗೌಡ
*ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ
*ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ.
*ಹಾಕು ಮಣೆ,ನೂಕು ಮಣೆ,ತಳ್ಳು ಮಣೆ
*ಹಾಲಿದ್ದಾಗ ಹಬ್ಬ ;ನೀರಿದ್ದಾಗ ನೇಮ
*ಹಾಲಿನ ದುಡ್ಡು ಹಾಲಿಗೆ;ನೀರಿನ ದುಡ್ಡು ನೀರಿಗೆ
*ಹಾಲಿನಲ್ಲಿ ಹುಳಿ ಹಿಂಡಿದಂತೆ
*ಹಾಲು ಕುಡಿದ ಮಕ್ಕಳೇ ಬದುಕೊಲ್ಲ; ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತವೇ ?
*ಹಾಸಿಗೆ ಇದ್ದಷ್ಟು ಕಾಲು ಚಾಚು
*ಹಾವು ಸಾಯಬಾರದು , ಕೋಲು ಮುರೀಬಾರದು
*ಹೇಳೋದು ಶಾಸ್ತ್ರ, ಹಾಕೋದು ಗಾಣ
*ಹೇಳೋದು ಶಾಸ್ತ್ರ,ತಿನ್ನೋದು ಬದನೆಕಾಯಿ
*ಹೇಳೋರು ಹೆಡ್ಡರಾದರೆ ,ಕೇಳೋರು ಕಿವುಡರೇ?
*ಹೀನ ಸುಳಿ ಬೋಳಿಸಿದರೂ ಹೋಗೋದಿಲ್ಲ
*ಹೋದ ಪುತ್ತ ಬಂದ ಪುತ್ತ ಪುಟ್ಟನ ಕಾಲಿಗೆ ನೀರಿಲ್ಲ
*ಹೋದೆಯಾ ಪಿಶಾಚಿ ಅಂದರೆ ಬಂದೆ ಗವಾಕ್ಷೀಲಿ ಅಂದಂತೆ
*ಹೂಸಿದವರು ‌ಯಾರು ಅಂದರೆ ಮಾಸಿದ ಸೀರೆಯವರು
*ಹೂವಿನ ಜೊತೆ ದಾರ ಮುಡಿಯೇರಿತು
*ಹೂವಿನಿಂದ ನಾರಿಗೂ ಸ್ವರ್ಗ
*ಹಳೇ ಗಂಡನ ಪಾದವೇ ಗತಿ
*ಹಳೆ ಚಪ್ಪಲಿ, ಹೊಸಾ ಹೆಂಡತಿ ಕಚ್ಚೊಲ್ಲ
*ಹಂಚಿದವರಿಗೆ ಹಲ್ಲು ಬಾಯಿ
*ಹಂಚು ಕಾಣದ ಕೈ ಕಂಚು ಕಾಣ್ತು
*ಹಂಗಿನ ಅರಮನೆಗಿಂತಾ ಗುಡಿಸಿಲೇ ಮೇಲು
*ಹಣ್ಣು ತಿಂದವನು ನುಣುಚಿಕೊಂಡ; ಸಿಪ್ಪೆ ತಿಂದವನು ಸಿಕ್ಕಿ ಹಾಕಿಕೊಂಡ
*ಹಣ ಅಂದರೆ ಹೆಣಾನೂ ಬಾಯಿ ಬಿಡುತ್ತದೆ
*ಹಣವಿದ್ದ ಗಂಡನನ್ನು ಮದುವೆಯಾದರೂ ಋಣವಿದ್ದಷ್ಟೇ
*ಹಬ್ಬದ ದಿನವೂ ಹಳೇ ಗಂಡನೇ ?
*ಹದರಿದವರ ಮೇಲೆ ಕಪ್ಪೆ ಎಸೆದರು
*ಹಲವು ಸಲ ಸಾಯುವವನು ಹೇಡಿ,ವೀರಯೋಧನಿಗೊಂದೇ ಸಲ ಸಾವು
*ಹಲ್ಲಿದ್ದಾಗ ಕಡ್ಲೆ ಇಲ್ಲ; ಕಡ್ಲೆ ಇದ್ದಾಗ ಹಲ್ಲಿಲ್ಲ
*ಹಲ್ಲಿದ್ರೆ ಕಡಲೆ ಇಲ್ಲ;ಕಡಲೆ ಇದ್ರೆ ಹಲ್ಲಿಲ್ಲ
*ಹನಿಹನಿಗೂಡಿದರೆ ಹಳ್ಳ; ತೆನೆತೆನೆಗೂಡಿದರೆ ಬಳ್ಳ
*ಹನುಮಂತರಾಯ ಹಗ್ಗ ತಿನ್ನುವಾಗ ಪೂಜಾರಿ ಶಾವಿಗೆ ಬೇಡಿದನಂತೆ
*ಹರಯದಲ್ಲಿ ಹಂದಿ ಕೂಡ ಚೆನ್ನಾಗಿರುತ್ತೆ.
*ಹಸಿ ಗೋಡೆ ಮೇಲೆ ಹರಳು ಎಸೆದಂತೆ
*ಹತ್ತಾರು ಜನ ಓಡಾಡೋ ಕಡೇಲಿ ಹುಲ್ಲು ಬೆಳೆಯೊಲ್ಲ
*ಹತ್ತಿರಕ್ಕೆ ಬಂದರೆ ಹಡಿಕ್ ನಾತ
*ಹೌದಪ್ಪನ ಚಾವಡಿಯಲ್ಲಿ ಅಲ್ಲಪ್ಪನನ್ನು ಕೇಳುವವರಾರು ?
*ಹೆಂಡ ಕುಡಿದ ಕಪಿಗೆ ಚೇಳು ಕಡಿದ ಹಾಗೆ
*ಹೆಂಡ ಕುಡಿಯುವ ದೇವರಿಗೆ ಹೇ.. ತಿನ್ನುವ ಪೂಜಾರಿ
*ಹೆಂಗಸರ ಬುದ್ಧಿ ಮೊಣಕಾಲ ಕೆಳಗೆ
*ಹೆಣ್ಣಿಗೆ ಹೆಣ್ಣೇ ವೈರಿ
*ಹೆಣ್ಣು ಚಂದ,ಕಣ್ಣು ಕುರುಡು
*ಹೆದರುವವರ ಮೇಲೆ ಕಪ್ಪೆ ಎಸೆದಂತೆ
*ಹೆತ್ತೋರ್ಗೆ ಹೆಗ್ಗಣ ಮುದ್ದು, ಕಟ್ಗೊಂಡೋರ್ಗೆ ಕೋಡಂಗಿ ಮುದ್ದು.
*ಹಿಟ್ಟು ಹಳಸಿತ್ತು;ನಾಯಿ ಹಸಿದಿತ್ತು
*ಹಿರೀಮಗ ಆಗಬೇಡ,ಹಿತ್ತಿಲ ಕದ ಆಗಬೇಡ
*ಹಿತ್ತಿಲ ಗಿಡ ಮದ್ದಲ್ಲ
*ಹೊಳೆ ದಾಟಿದ ಮೇಲೆ ಅಂಬಿಗನ ಹಂಗೇಕೆ ಎಂದರಂತೆ
*ಹೊಳೆ ನೀರಿಗೆ ದೊಣೆನಾಯ್ಕನ ಅಪ್ಪಣೆ ಏಕೆ ?
*ಹೊಳೆಯಲ್ಲಿ ಹುಣಿಸೇ ಹಣ್ಣು ಕಿವಿಚಿದಂತೆ
*ಹೊಳೆಯುವುದೆಲ್ಲಾ ಚಿನ್ನವಲ್ಲ
*ಹೊಟ್ಟೇಲಿರೋ ಸಿಟ್ಟು ರಟ್ಟೇಲಿಲ್ಲ
*ಹೊಟ್ಟೆ ತುಂಬಿದ ಮೇಲೆ ಹಿಟ್ಟೂ ಕಲ್ಲು
*ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು
*ಹೊರಗೆ ಥಳುಕು, ಒಳಗೆ ಹುಳುಕು
*ಹೊಸ ಡಾಕ್ಟರ್‌ಗಿಂತ ಹಳೇ ಕಾಂಪೌಂಡರ್ ವಾಸಿ
*ಹೊಸ ವೈದ್ಯನಿಗಿಂತ ಹಳೆ ರೋಗಿಯೇ ಮೇಲು
*ಹೊಸದರಲ್ಲಿ ಅಗಸ ಗೋಣಿಯನ್ನು ಎತ್ತಿ ಎತ್ತಿ ಒಗೆದನಂತೆ
*ಹೊತ್ತಿಗಿಲ್ಲದ ಗಾದೆ, ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ.
*ಹುಡುಕುತ್ತಿದ್ದ ಬಳ್ಳಿ ಕಾಲಿಗೇ ತೊಡರಿಕೊಂಡಿತು
*ಹುಣ್ಣಿನ ಮೇಲೆ ಉಪ್ಪು ಸವರಿದಂತೆ
*ಹುಣಿಸೆ ಮರ ಮುದಿಯಾದ್ರೂ ಕಾಯಿ ಹುಳಿ ಹೋಗಲ್ಲ
*ಹುಣಿಸೆ ಮುಪ್ಪಾದರೂ ಹುಳಿ ಮುಪ್ಪೆ ? ಆಕಳು ಕಪ್ಪಾದರೂ ಹಾಲು ಕಪ್ಪೆ ?
*ಹುಟ್ಟಿಸಿದ ದೇವರು ಹುಲ್ಲು ಮೇಯಿಸುತ್ತಾನೆಯೆ ?
*ಹುಟ್ಟು ಗುಣ ಸುಟ್ಟರೂ ಹೋಗಲ್ಲ
*ಹುಟ್ತಾ ಹುಟ್ತಾ ಅಣ್ಣ ತಮ್ಮಂದಿರು; ಬೆಳೀತಾ ಬೆಳೀತಾ ದಾಯಾದಿಗಳು
*ಹುಚ್ಚಲ್ಲ,ಬೆಪ್ಪಲ್ಲ,ಶಿವಲೀಲೆ
*ಹುಚ್ಚು ಬಿಟ್ಟ ಹೊರತು ಮದುವೆ ಆಗೋಲ್ಲ; ಮದುವೆ ಆದ ಹೊರತು ಹುಚ್ಚು ಬಿಡಲ್ಲ
*ಹುಚ್ಚು ಮನಸಿಗೆ ಹತ್ತು ಹಲವು ಮುಖಗಳು
*ಹುಚ್ಚುಮುಂಡೆ ಮದುವೇಲಿ ಉಂಡವನೇ ಜಾಣ
*ಹುಲಿಗೆ ಹುಣ್ಣು ಎದ್ದ ಹಾಗೆ
*ಹುಲ್ಲಿನ ಬಣವೇಲಿ ಸೂಜಿ ಹುಡುಕಿದ ಹಾಗೆ
*ಹೋಗು ಎನ್ನಲಾರದೇ ಹೊಗೆ ಹಾಕಿದರು
*ಹಂಚು ಕಾಣದ ಮುದುಕಿ ಕಂಚು ಕಂಡರೆ ಮೂರು ಸಲ ಬೆಳಗಿ ನೋಡಿದ್ದಳು
 
<br />[[#ವಿಷಯ ಪೋಣಿಕೆ|ವಿಷಯ-ಪೋಣಿಕೆಗೆ ಹಿಂತಿರುಗಿ]]<br />
 
==ಗಾದೆಗಳ ಬಗ್ಗೆ ಇನ್ನೂ ಕೆಲವು ಪುಟಗಳು==
 
[http://kn.wikipedia.org/wiki/%E0%B2%97%E0%B2%BE%E0%B2%A6%E0%B3%86 ವಿಕಿಪೀಡಿಯ ಕನ್ನಡ ಗಾದೆಗಳು]<br />
[http://en.wikiquote.org/wiki/Kannada_proverbs ವಿಕಿಪೀಡಿಯ ಕನ್ನಡ ಗಾದೆಗಳು (ಆಂಗ್ಲ) / wikipedia kannada proverbs (English)]<br />
[http://www.ourkarnataka.com/kannada/gade/gade_main.htm ಅವರ್-ಕರ್ನಾಟಕ ಗಾದೆಗಳು]<br />
[http://sampada.net/category/16 ಸಂಪದ ಗಾದೆಗಳ ಸಂಗ್ರಹ]<br />
 
 
{{ಗಾದೆ}}
"https://kn.wikiquote.org/wiki/ಗಾದೆಗಳು" ಇಂದ ಪಡೆಯಲ್ಪಟ್ಟಿದೆ