ಗಾದೆಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೭ ನೇ ಸಾಲು:
==ಗಾದೆಗಳನ್ನು ಇಲ್ಲಿ ಪಟ್ಟಿ ಮಾಡಿರಿ==
<poem>
ಅಕಾಲದಲ್ಲಿ ಬೆಳೆಯಿದ್ದಂತೆ ವೃದ್ಧಾಪ್ಯದಲ್ಲಿ ಮಕ್ಕಳು.
ಅಂಗ ತೋರಿಸಿ ಅರ್ಧಾಂಗಿಯಾದಳು.
ಅಂಗೈ ಹುಣಿಗೆ ಕನ್ನಡಿ ಏಕೆ.
ಅಂಗಳದಾಗೆ ಒದ್ದು ಅಡಿಗೆ ಮನೆಯಲ್ಲಿ ಕಾಲು ಹಿಡಿದ.
ಅಕ್ಕ ನನ್ನವಳಾದ್ರೆ ಬಾವ ನನ್ನವನೇನು
ಅಕ್ಕ ನನ್ನವಳಾದ್ರೆ ಬಾವ ನನ್ನವನೇನು
ಅಕ್ಕನ ಹಗೆ ಬಾವನ ನೆಂಟು
ಅಕ್ಕನ ಹಗೆ ಬಾವನ ನೆಂಟು
ಅಕ್ಕ ಬರಬೇಕು ಅಕ್ಕಿ ಮುಗೀಬಾರದು
ಅಕ್ಕ ಬರಬೇಕು ಅಕ್ಕಿ ಮುಗೀಬಾರದು
ಅಕ್ಕರ ಕಲ್ತು ತನ್ನ ಒಕ್ಕಲನ್ನೇ ತಿನ್ನೊದ್ ಕಲ್ತ
ಅಕ್ಕರೆಯ ಅಕ್ಕ ಬಂದಾಗೇ ಸಕ್ಕರೆಯೆಲ್ಲ ಕಹಿ ಆಯ್ತು
ಅಕ್ಕರೆಯ ಅಕ್ಕ ಬಂದಾಗೇ ಸಕ್ಕರೆಯೆಲ್ಲ ಕಹಿ ಆಯ್ತು
ಅಕ್ಕ ಸತ್ತರೆ ಅಮಾವಾಸ್ಯೆ ನಿಲ್ಲುತ್ತದೆಯೆ ?
ಅಕ್ಕ ಸತ್ತರೆ ಅಮಾಸೆ ನಿಲ್ಲದು, ಅಣ್ಣ ಸತ್ತರೆ ಹುಣ್ಣಿಮೆ ನಿಲ್ಲದು
ಅಕ್ಕಸಾಲಿ ಅಕ್ಕನ ಚಿನ್ನಾನೂ ಬಿಡ
ಅಕ್ಕಸಾಲಿಗನ ಮಗ ಚಿಮ್ಮಟ ಹಿಡಿಯುತ್ತಲೇ ಹೊನ್ನ ಕದ್ದ
ಅಕ್ಕಿ ಉಂಡವ ಹಕ್ಕಿ, ಜೋಳ ಉಂಡವ ತೋಳ
ಅಕ್ಕಿ ತಿಂದವರಿಗೆ ಅನ್ನಿಲ್ಲ, ಮೊಟ್ಟೆ ತಿಂದವರಿಗೆ ಮರಿ ಇಲ್ಲ.
ಅಕ್ಕಿ ಮೇಲೆ ಆಸೆ, ನೆಂಟರ ಮೆಲೆ ಪ್ರೀತಿ
ಅಕ್ಕಿ ಮೇಲೆ ಆಸೆ ನೆಂಟರ ಮೇಲೆ ಇಷ್ಟ.
ಅಕ್ಷರ ಕಲಿಯುವುದಕ್ಕೆ ಬೇಧಭಾವ ಬೇಡ.
ಅಕ್ಕಿ ಮೇಲೆ ಆಸೆ ನೆಂಟರ ಮೇಲೆ ಇಷ್ಟ.
ಅಗ್ನಿಗೆ ತಂಪುಂಟೆ, ವಿಷಕ್ಕೆ ರುಚಿಯುಂಟೆ, ದಾರಿಕೋರನಿಗೆ ಧರ್ಮವುಂಟೆ?
ಅಕ್ಕಿಯ ಮೇಗಳ ಆಸೆ, ನೆಂಟರ ಮೇಗಳ ಬಯಕೆ
ಅಕ್ಕಿಯ ಮೇಗಳ ಆಸೆ, ನೆಂಟರ ಮೇಗಳ ಬಯಕೆ
ಅಕ್ಕಿಲ್ಲ ಬ್ಯಾಳಿಲ್ಲ ಅಕ್ಕನ್ನ ಕರತರಬೇಕು
ಅಕ್ಕಿ ಸರಿಯಾಗ ಬಾರದು ಅಕ್ಕನ ಮಕ್ಕಳು ಬಡವಾಗ ಬಾರದು
ಅಕ್ಕಿ ಸರಿಯಾಗ ಬಾರದು ಅಕ್ಕನ ಮಕ್ಕಳು ಬಡವಾಗ ಬಾರದು
ಅಗಸನ ಬಡಿವಾರವೆಲ್ಲ ಹೆರರ ಬಟ್ಟೆ ಮೇಲೆ
ಅಗಸನ ಬಡಿವಾರವೆಲ್ಲ ಹೆರರ ಬಟ್ಟೆ ಮೇಲೆ
ಅಗಸನ ಸಿಟ್ಟು ಅನ್ಯರ ವಸ್ತ್ರದ ಮೇಲೆ.
ಅಗಸರ ಕತ್ತೆ ಕೊಂಡು ಹೋಗಿ, ಡೊಂಬರಿಗೆ ತ್ಯಾಗ ಹಾಕಿದ ಹಾಗೆ
ಅಗಸರ ಕತ್ತೆ ಕೊಂಡು ಹೋಗಿ, ಡೊಂಬರಿಗೆ ತ್ಯಾಗ ಹಾಕಿದ ಹಾಗೆ
ಅಗ್ಗದ ಆಸೆಗೆ ಗೊಬ್ಬರ ತಗೊಂಡರು
ಅಗ್ಗದ ಮಾಲು;ಮುಗ್ಗಿದ ಜೋಳ
ಅಜ್ಜ! ಮದುವೆ ಅಂದ್ರೆ ನನಗೋ ಅಂದ
ಅಜ್ಜ! ಮದುವೆ ಅಂದ್ರೆ ನನಗೋ ಅಂದ
ಅಜ್ಜಿಗೆ ಅಕ್ಕಿ ಚಿ೦ತೆಯಾದರೆ ಮೊಮ್ಮಗಳಿಗೆ ಮೂಗುತಿ ಚಿ೦ತೆ
ಅಜ್ಜಿಗೆ ಅರಿವೆ ಚಿಂತೆ ಮೊಮ್ಮಗಳಿಗೆ ಮಿಂ..ನ ಚಿಂತೆ
ಅಜ್ಜಿಗೆ ಅರಿವೆಯ ಚಿಂತೆ, ಮಗಳಿಗೆ ಗಂಡನ ಚಿಂತೆ, ಮೊಮ್ಮಗಳಿಗೆ ಕಜ್ಜಾಯದ ಚಿಂತೆ
ಅಜ್ಜಿಗೆ ಅರಿವೆಯ ಚಿಂತೆ, ಮಗಳಿಗೆ ಗಂಡನ ಚಿಂತೆ, ಮೊಮ್ಮಗಳಿಗೆ ಕಜ್ಜಾಯದ ಚಿಂತೆ
ಅಜ್ಜಿ ನೂತದ್ದೆಲ್ಲಾ ಅಜ್ಜನ ಉಡಿದಾರಕ್ಕೆ.
ಅಜ್ಜಿ ಸಾಕಿದ ಮಗ ಬೊಜ್ಜಕ್ಕೂ ಬಾರದು
ಅಜ್ಜಿ ಸಾಕಿದ ಮಗ ಬೊಜ್ಜಕ್ಕೂ ಬಾರದು
ಅಟ್ಟದ ಮೇಲಿಂದ ಬಿದ್ದವನಿಗೆ ದಡಿಗೆ ತಗೊಂಡು ಹೇರಿದರಂತೆ
ಅಟ್ಟದಿಂದ ಬಿದ್ದವನನ್ನು ದಡಿಗೆ ತೆಗೆದುಕೊಂಡು ಚಚ್ಚಿದರು.
ಅಟ್ಟ ಮೇಲೆ ಒಲೆ ಉರಿಯಿತು, ಕೆಟ್ಟ ಮೇಲೆ ಬುದ್ಧಿ ಬಂತು
ಅಟ್ಟಿಕ್ಕಿದೋಳಿಗಿನ್ನ ಬೊಟ್ಟಿಕ್ಕಿದೋಳು ಹೆಚ್ಚು
ಅಟ್ಟಿಕ್ಕಿದೋಳಿಗಿನ್ನ ಬೊಟ್ಟಿಕ್ಕಿದೋಳು ಹೆಚ್ಚು
ಅಡಕೆ ಕದ್ದು ಹೋದ ಮಾನ ಆನೆ ಕೊಟ್ಟರೂ ಬರದು
ಅಡವಿಯ ದೊಣ್ಣೆ ಪರದೇಸಿಯ ತಲೆ
ಅಡವಿಯ ದೊಣ್ಣೆ ಪರದೇಸಿಯ ತಲೆ
ಅಡಿ ಅನ್ನಕ್ಕೆ ಅವಳೇ ಇಲ್ಲೆ ; ಪಿಳ್ಳೆ ಪೇರು ರಾಮಕೃಷ್ನ !( ಇದು ತಮಿಳು ಭಾಷೆಯ ಗಾದೆಯಾದರೂ ಕನ್ನಡಿಗರಲ್ಲಿ ಹೆಚ್ಚು ಪ್ರಚಲಿತವಿದೆ)
ಅಡಿಕೆ ಕದ್ದ ಮಾನ ಆನೆ ಕೊಟ್ರೂ ಬರೊಲ್ಲ
ಅಡಿಕೆಕಾಯಿಯನ್ನು ಚೀಲದೊಳಗೆ ಹಾಕಬಹುದು, ಮರ ಆದ ನಂತರ ಹಾಕಬಹುದೇ?
ಅಡಿಕೆಗೆ ಹೋದ ಮಾನ ಆನೆ ಕೊಟ್ಟರು ಬರಲ್ಲ.
ಅಡಿಕೆಗೆ ಹೋದ ಮಾನ ಆನೆ ಕೊಟ್ಟರು ಬರಲ್ಲ.
ಅಡಿಗೆ ಬಿದ್ಫರೂ ಮೀಸೆ ಮೇಲೆ
ಅಡುಗೆ ಮಾಡಿದವಳಿಗಿಂತ ಬಡಿಸಿದವಳೇ ಮೇಲು
ಅಡೆ ಮಡಕೆಯಲ್ಲ ಇಡೆ ಸಟ್ಟುಗವಲ್ಲ
ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ
ಅಡ್ಡಗೋಡೆಯ ಮೇಲೆ ದೀಪ ಇಟ್ಟ ಹಾಗೆ.
ಅಡ್ಡಗೋಡೆಯ ಮೇಲೆ ದೀಪ ಇಟ್ಟ ಹಾಗೆ.
ಅಣ್ಣ ಹುಸಿಯಾದರೂ ತಮ್ಮ ತಂಪು ತರದೇ ಹೋಗಲ್ಲ.( ಪೂರ್ವಾಷಾಢ , ಉತ್ತರಾಷಾಢ ಮಳೆಗಳು )
ಅಣ್ಣಿಗೇರ್‍ಯಾಗ ಎಣ್ಣೆ ಮೊಣಕಾಲ ಮಟ್ಟ
ಅತಿ ಆಸೆ ಗತಿ ಕೇಡು
ಅತಿ ಆಸೆ ಗತಿಗೇಡು
ಅತಿ ಆಸೆ ಗತಿಗೇಡು
ಅತಿಯಾದರೆ ಅಮೃತವೂ ವಿಷ
ಅತಿ ಸ್ನೇಹ ಗತಿ ಕೆಡಿಸಿತು
ಅತಿ ಸ್ನೇಹ ಗತಿ ಕೇಡು
ಅತಿ ಸ್ನೇಹ ಗತಿ ಕೇಡು
ಅತೀ ಬುದ್ಧಿ, ಅ೦ಡು ಚಪ್ಪಟೆ!
ಅತ್ತ ದರಿ; ಇತ್ತ ಪುಲಿ
ಅತ್ತು ಹೆದರಿಸೋನೊಬ್ಬ ;ಹೇ.. ಹೆದರಿಸೋನೊಬ್ಬ
ಅತ್ತೂ ಕರೆದೂ ಔತಣ ಮಾಡಿಸಿಕೊಂಡಂತೆ
ಅತ್ತೂ ಕರೆದೂ ಔತಣ ಹೇಳಿಸಿಕೊಂಡರು
ಅತ್ತೆ ಆಸ್ತೀನ ಅಳಿಯ ದಾನ ಮಾಡಿದ
ಅತ್ತೆ ಒಡೆದ ಪಾತ್ರೆಗೆ ಬೆಲೆ ಇಲ್ಲ
ಅತ್ತೆ ಒಡೆದ ಪಾತ್ರೆಗೆ ಬೆಲೆ ಇಲ್ಲ
ಅತ್ತೆ ಒಡೆದ ಪಾತ್ರೆಗೆ ಬೆಲೆಯಿಲ್ಲ
ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ.
ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ.
ಅನುರಾಧ ಬಂದರೆ ನಮ್ಮ ರಾಗಿ ನಮ್ಮದು.
ಅತ್ತೆಗೊಂದು ಕಾಲ; ಸೊಸೆಗೊಂದು ಕಾಲ
ಅಪಕೀರ್ತಿ ತರುವ ಮಗನಿಗಿಂತ, ಸತ್ಕೀರ್ತಿ ತರುವ ಆಳೇ ಮೇಲು.
ಅತ್ತೆ ಮಾಡಿದ್ದು ಅಡಕಲಗೂಡಿಗೆ ಸೊಸೆ ಮಾಡಿದ್ದು ಬೆಳಕಿಗೆ
ಅಪದ್ದಕ್ಕೆ ಅಪ್ಪಣೆ ಕೊಟ್ರೆ ಬಾಯಿಗೆ ಬಂದದ್ದೇ ಮಾತು.
ಅತ್ತೆ ಮೇಲಿನ ಕೋಪ ಕೊತ್ತಿ ಮೇಲೆ
ಅಪಾಯ ತೀರಿತು, ದೇವರನ್ನು ಮರೆತಾಯಿತು.
ಅತ್ತೆಯ ಮನಿಯಾಗ ಮುತ್ತಾಗಿ ಇರಬೇಕು
ಅಪ್ಪನ ಮಾತು ಕೇಳದವನು ಅಮ್ಮನ ಮಾತು ಕೇಳಿಯಾನೆ?
ಅತ್ಯಾಶ ಬಹುದುಃಖಾಯ ಅತಿ ಸರ್ವತ್ರ ವರ್ಜಯೇತ್
ಅಪ್ಪನ ಸಾಲಕ್ಕೆ ಮಗನನ್ನು ತಿಪ್ಪೆ ಮೇಲೆ ಎಳೆದರು.
ಅತ್ಯಾಶ ಬಹುದುಃಖಾಯ ಅತಿ ಸರ್ವತ್ರ ವರ್ಜಯೇತ್
ಅಪ್ಪ ಮಾಡಿದ ಪುಣ್ಯ ಮಕ್ಕಳ ಕಾಲಕ್ಕೆ.
ಅದ್ನೇ ಉಂಡೇನ್ ಅತ್ತೆಮ್ನೋರೇ,ಕದ ತೆಗೀರಿ ಮಾವ್ನೋರೇ ಅಂದ್ರಂತೆ
ಅರಿತರೆ ಮಾತನಾಡು, ಮರೆತರೆ ಕೂತು ನೋಡು.
ಅಧರಕ್ಕೆ ಕಹಿ ಉದರಕ್ಕೆ ಸಿಹಿ
ಅನುಕೂಲ ಸಿಂಧು; ಅಭಾವ ವೈರಾಗ್ಯ
ಅನುಭವಿಗೆ ಬೇರೆ ಮತವಿಲ್ಲ
ಅನ್ನ ಇಕ್ಕಿ ಸಾಕು ಅನ್ನಿಸ ಬಹುದು, ದುಡ್ಡು ಕೊಟ್ಟು ಸಾಕು ಅನ್ನಿಸೋಕಾಗಲ್ಲ
ಅನ್ನ ಇಕ್ಕಿ ಸಾಕು ಅನ್ನಿಸ ಬಹುದು, ದುಡ್ಡು ಕೊಟ್ಟು ಸಾಕು ಅನ್ನಿಸೋಕಾಗಲ್ಲ
ಅನ್ನ ಹಾಕಿದ ಮನೆಗೆ ಕನ್ನ ಹಕಬೇಡ
ಅನ್ನ ಹಾಕಿದ ಮನೆಗೆ ಕನ್ನ ಹಾಕಬೇಡ
ಅನ್ನ ಹಾಕಿದ ಮನೆಗೆ ಕನ್ನ ಹಾಕಿದಂತೆ
ಅನ್ಯಾಯದಿಂದ ಗಳಿಸಿದ್ದು ಅಸಡ್ಡಾಳಾಗಿ ಹೋಯ್ತು
ಅನ್ಯಾಯದಿಂದ ಗಳಿಸಿದ್ದು ಅಸಡ್ಡಾಳಾಗಿ ಹೋಯ್ತು
ಅಪ್ಪ ಗುಡಿ ಕಟ್ಟಿದರೆ ಮಗ ಕಳಸ ಇಟ್ಟ
ಅಪ್ಪನ ಕಾಲಕ್ಕೆ ಅರಮನೆ, ಮಗನ ಕಾಲಕ್ಕೆ ಬರೀಮನೆ.
ಅಪ್ಪನ ಬಟ್ಟೆಯಾದರು ಚಿಪ್ಪಿಗ ಬಿಡ
ಅಪ್ಪನ ಮನೇಲಿ ಸೈ ಅನ್ನಿಸಿಕೊಂಡೋಳು, ಅತ್ತೆ ಮನೇಲೂ ಸೈ ಅನ್ನಿಸಿಕೊಣ್ತಾಳೆ
ಅಪ್ಪನ ಮನೇಲಿ ಸೈ ಅನ್ನಿಸಿಕೊಂಡೋಳು, ಅತ್ತೆ ಮನೇಲೂ ಸೈ ಅನ್ನಿಸಿಕೊಣ್ತಾಳೆ
ಅಪ್ಪನ್ನೇ ಅಪ್ಪ ಅನ್ನದೋನು,ಚಿಕ್ಕಪ್ಪನ್ನ ಅಪ್ಪಾ ಅಂತ ಕರೀತಾನಾ?
ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಂಡಂತೆ
ಅಪ್ಪಂತೋನಿಗೆ ಇಪ್ಪತ್ತೊಂದು ಕಾಯಿಲೆ
ಅಪ್ಪಂತೋನಿಗೆ ಇಪ್ಪತ್ತೊಂದು ಕಾಯಿಲೆ
ಅಪ್ಪಂತೋನಿಗೆ ಇಪ್ಪತ್ತೊಂದು ಕಾಯಿಲೆ
ಅಪ್ಪಂಥೋನಿಗೆ ಇಪ್ಪಂತ್ತೊಂದು ಕಾಯಿಲೆ
ಅಬದ್ಧಕ್ಕೆ ಅಪ್ಪಣೆಯೇ ಅಂದ್ರೆ ಬಾಯಿಗೆ ಬಂದಷ್ಟು
ಅಬದ್ಧಕ್ಕೆ ಅಪ್ಪಣೆಯೇ ಅಂದ್ರೆ ಬಾಯಿಗೆ ಬಂದಷ್ಟು
ಅಮ್ಮನ ಮನಸ್ಸು ಬೆಲ್ಲದ ಹಾಗೆ ; ಆರಿದ್ರಾ ಹನಿ ಕಲ್ಲಿನ ಹಾಗೆ.
ಅಮ್ಮನ ಮನಸ್ಸು ಬೆಲ್ಲದ ಹಾಗೆ, ಮಗಳ ಮನಸ್ಸು ಕಲ್ಲಿನ ಹಾಗೆ
ಅಮ್ಮನ ಮನಸ್ಸು ಬೆಲ್ಲದ ಹಾಗೆ, ಮಗಳ ಮನಸ್ಸು ಕಲ್ಲಿನ ಹಾಗೆ
ಅಮ್ಮನವರು ಪಟ್ಟಕ್ಕೆ ಬಂದಾಗ,ಅಯ್ಯನವರು ಚಟ್ಟಕ್ಕೇರಿದರು
ಅಯ್ಯಾ ಎಂದರೆ ಸ್ವರ್ಗ; ಎಲವೋ ಎಂದರೆ ನರಕ
ಅಯ್ಯೋ ಅಂದರೆ ಅರೆ ವಯಸ್ಸು
ಅಯ್ಯೋ ಅಂದವರಿಗೆ ಆರು ತಿಂಗಳು ಆಯಸ್ಸು ಕಮ್ಮಿ
ಅಯ್ಯೋ ಅಂದವರಿಗೆ ಆರು ತಿಂಗಳು ಆಯಸ್ಸು ಕಮ್ಮಿ
ಅಯ್ಯೋ ಪಾಪ ಅಂದ್ರೆ ಅರ್ಧ ಆಯುಸ್ಸು
ಅರಗಿನಂತೆ ತಾಯಿ, ಮರದಂತೆ ಮಕ್ಕಳು
ಅರಗಿನಂತೆ ತಾಯಿ, ಮರದಂತೆ ಮಕ್ಕಳು
ಅರಣೆ (= ಹಾವು ರಾಣಿ) ಕಡಿದರೆ ಭರಣಿ (=ಪಿಂಗಾಣಿ ಮಡಿಕೆ) ಮದ್ದು ಸಾಲದು
ಅರಮನೆಯ ಮುಂದಿರಬೇಡ, ಕುದರೆಯ ಹಿಂದಿರಬೇಡ
ಅರಮನೆಯ ಮುಂದಿರಬೇಡ, ಕುದರೆಯ ಹಿಂದಿರಬೇಡ
ಅರಮನೆಯ ಮುಂದಿರಬೇಡ ಕುದುರೆಯ ಹಿಂದಿರಬೇಡ
ಅರವತ್ತಕ್ಕೆ ಅರಳು ಮರಳು
ಅರವಲ್ಲದ್ದು (ಧರ್ಮವಲ್ಲದ್ದು) ಮಾಡಿದರೂ ತರವಲ್ಲದ್ದು ಮಾಡಬಾರದು
ಅರಸನ ಕುದರೆ ಲಾಯದಲ್ಲೆ ಮುಪ್ಪಾಯಿತು
ಅರಸನ ಕುದರೆ ಲಾಯದಲ್ಲೆ ಮುಪ್ಪಾಯಿತು
ಅರಸು ಆದೀಕ (=ಆದಾಯ) ತಿಂದ, ಪರದಾನಿ ಹೂಸು ಕುಡಿದ
ಅರಸು ಆದೀಕ (=ಆದಾಯ) ತಿಂದ, ಪರದಾನಿ ಹೂಸು ಕುಡಿದ
ಅರಸು ಒಲಿದರೆ ಸಿರಿ ದೆಸೆಯಾಯ್ತು
ಅರಿತರೆ ಮಾತನಾಡು ಮರೆತರೆ ಕೂತು ನೋಡು
ಅರಿತು ಮಾಡದ ದಾನ ತೆರೆದು ನೋಡದ ಕಣ್ಣಂತೆ
ಅರಿತು ಮಾಡಿದ ಪಾಪ ವಜ್ರದ ಸೆರೆಯಂತೆ
ಅರಿತೂ ಮಾಡಿದ ಪಾಪ ವಜ್ರದ ಸೆರೆಯಂತೆ
ಅರಿತೂ ಮಾಡಿದ ಪಾಪ ವಜ್ರಲೇಪ
ಅರಿವಿನ ಹಾದಿ ಬೇರೆ
ಅರುಗೆಟ್ಟ ನಿದ್ದೆ (=ಅರಿವಿಲ್ಲದೆ ಮಲಗಿರುವುದು) ಇರಗೆಟ್ಟು (=ಇರವು ಗೆಟ್ಟು) ಸತ್ತಂತೆ
ಅರೆಗೊಡದ ಅಬ್ಬರವೇ ಬಹಳ.
ಅರ್ಧ ಕಲಿತವನ ಆಬ್ಬರ ಹೆಚ್ಚು.
ಅರೆಪಾವಿನವರ ಅಬ್ಬರ ಬಹಳ
ಅಲ್ಪರ ಸಂಗ ಅಭಿಮಾನ ಭಂಗ.
ಅರೆಪಾವಿನವರ ಅಬ್ಬರ ಬಹಳ
ಅಶ್ವಿನೀ ಸಸ್ಯನಾಶಿನೀ.
ಅರ್ತಿಗೆ ಬಳೆ ತೊಟ್ಟು ಕೈ ಕೊಡವಿದರೆ ಹೋದೀತೆ
ಅಹಂಕಾರ ಇದ್ದ ಮನುಷ್ಯ ಏನನ್ನೂ ಸಾಧಿಸಲಾರ.
ಅರ್ತಿಗೆ ಬಳೆ ತೊಟ್ಟು ಕೈ ಕೊಡವಿದರೆ ಹೋದೀತೆ
ಆಕಳಿಲ್ಲದವ ಬೆಳೆಸು ಮಾಡ್ಯಾನ, ಆಕಳಿದ್ದವ ಮಕ್ಕಳ ಸಾಕ್ಯಾನ.
ಅರ್ಧ ಆದ ಕೆಲಸವನ್ನು ಅರಸನಿಗೂ ತೋರಿಸಬೇಡ
ಆಕಾಶ ನೋಡೋಕೆ ನೂಕಾಟವೇಕೆ?
ಅಲಗಿನ ಗಾಯಕ್ಕಿಂತ ಗಲಗಿನ ಗಾಯ ಹೆಚ್ಚು
ಆತ್ಮೀಯವಾದ ಪ್ರೇಮ ಅಮರವಾದದ್ದು.
ಅಲಾ ಬಲಾ ಪಾಪಿ ತಲೀ ಮ್ಯಾಲೆ
ಆದರೆ ಆರಿದ್ರಾ ಇಲ್ವಾದ್ರೆ ದರಿದ್ರ!
ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಯಲ್ಲಿ ಕೊಡೆ ಹಿಡಿದ.
ಆದರೆ ಒಂದಡಿಕೆ ಮರ, ಹೋದರೆ ಒಂದು ಗೋಟು.
ಅಲ್ಪನಿಗೆ ಐಶ್ವರ್ಯ ಬಂದ್ರೆ ಅರ್ಧ ರಾತ್ರೀಲಿ ಕೊಡೆ ಹಿಡಿದನಂತೆ
ಆದರೆ ಹಬ್ಬ, ಇಲ್ಲದಿದ್ದರೆ ಬರಗಾಲ.
ಅಲ್ಪರ ಸಂಗ ಅಭಿಮಾನ ಭಂಗ
ಆಪತ್ತಿಗಾದವನೇ ನಿಜವಾದ ಗೆಳೆಯ.
ಅಲ್ಪರ ಸಂಗ ಅಭಿಮಾನ ಭಂಗ
ಆರಕ್ಕೇರಲಿಲ್ಲ, ಮೂರಕ್ಕೀಳಿಯಲಿಲ್ಲ.
ಅಲ್ಪರ ಸಂಗ ಅಭಿಮಾನ ಭಂಗ
ಆರಿದ್ರೆ ಮಳೆಯಲ್ಲಿ ಆದವನೇ ಒಡೆಯ.
ಅಲ್ಪ ವಿದ್ಯಾ ಮಹಾಗರ್ವಿ
ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ
ಅಲ್ಲದವನ ಒಡನಾಟ ಮೊಳಕೈಗೆ ಕಲ್ಲು ಬಡಿದಂತೆ
ಆಸೆ ಆಕಾಶದಷ್ಟು, ಸಾಧನೆ ಸಾಸಿವೆಯಷ್ಟೇ.
ಅಲ್ಲುಂಟೆ, ಇಲ್ಲುಂಟೆ, ಕಲ್ಲಲ್ಲುಂಟೆ, ಶಿವದಾನ.
ಆಸೆ ಆಸ್ತಿ ಮಾಡ್ತು, ದುರಾಸೆ ನಾಶ ಮಾಡ್ತು.
ಅವರವರ ತಲೆಗೆ ಅವರವರದೇ ಕೈ
ಆಸೆಗೆ ತಕ್ಕ ಪರಿಶ್ರಮ ಬೇಕು.
ಅವರವರ ತಲೆಗೆ ಅವರವರದೇ ಕೈ
ಆಸೆಗೆ ಮಿತಿಯಿಲ್ಲ, ಆಕಾಶಕ್ಕೆ ಅಳತೆಯಿಲ್ಲ.
(ಅವರು) ಚಾಪೆ ಕೆಳಗೆ ತೂರಿದರೆ (ನೀನು) ರಂಗೋಲಿ ಕೆಳಗೆ ತೂರು.
ಆಸೆಯಿಲ್ಲದವನು ದೇಶಕ್ಕೆ ಶ್ರೀಮಂತ.
ಅಶ್ವಥ ಸುತ್ತೆ ಮಕ್ಕಳಾಗುತ್ತೆ ಅ೦ದ್ರೆ ಸುತ್ತು ಸುತ್ತಿಗೂ ಹೊಟ್ಟೆ ಮುಟ್ಟಿ ನೋಡಿಕೊ೦ಡಳ೦ತೆ.
ಆಸೆಯೇ ಜೀವನ, ಜೀವನವೇ ಆಸೆ.
ಅಹಂಕಾರಕ್ಕೆ ಉದಾಸೀನವೇ ಮಟ್ಟು.
ಆಳವಿಲ್ಲದ ನೀರು ಭಾರಿ ಶಬ್ದ ಮಾಡೀತು.
ಅಳಿದೂರಿಗೆ ಉಳಿದವನೇ ಗೌಡ
ಆಳಾಗದವ ಅರಸನಲ್ಲ, ಹಟ ಹಿಡಿದವ ಸಾಮ್ರಾಟನಲ್ಲ.
ಅಳಿಯ ಅಲ್ಲ,ಮಗಳ ಗಂಡ
ಆಳಾಗಬಲ್ಲವನು ಅರಸನಾಗಬಲ್ಲ.
ಅಳಿಯನ ಕುರುಡು ಬೆಳಗಾದರೆ ಗೊತ್ತಾಗತ್ತೆ
ಇತರರ ಕಣ್ಣಿನ ಕಸ ಕಾಣುವುದು, ತನ್ನ ಕಣ್ಣಿನ ಕಸ ಕಾಣುವುದಿಲ್ಲ.
ಅಳಿಯನಿಗೆ ದೀಪಾವಳಿ ಮಾವನಿಗೆ ಕೋಪಾವಳಿ.
ಇತ್ತಿತ್ತ ಬಾ ಎಂದರೆ ಹೆಗಲೇರಿ ಕುಳಿತ.
ಅಳಿಯ ಮನೆ ತೊಳಿಯ
ಇನ್ನೊಬ್ಬರ ಮಾತಿಗೆ ಕಿವಿಗೊಡಬೇಡ, ಚಾಡಿಹೇಳಿ ಜಗಳ ಹಚ್ಚಬೇಡ.
ಅಳಿಲ ಸೇವೆ, ಮಳಲ ಭಕ್ತಿ
ಇಬ್ಬರು ಒಪ್ತಾರೆ ಮೂವರು ವಿರೋಧಿಸುತ್ತಾರೆ ಎಂದಂತೆ!
ಅಳಿಲು ಏರಿದರೆ ಅರಳಿಮರ ಅಲ್ಲಾಡೀತೆ ?
ಇರೋದು ಕಲಿಸುತ್ತೆ, ಇಲ್ಲದ್ದು ನಾಚಿಸುತ್ತೆ.
ಅಳಿವುದೇ ಕಾಯ ಉಳಿವುದೇ ಕೀರ್ತಿ
ಇಲಿ ಬೇಟೆಗೆ ತಮಟೆ ಬಡಿದಂಗೆ.
ಅಳಿವುದೇ ಕಾಯ ಉಳಿವುದೇ ಕೀರ್ತಿ
ಇಲಿ ಸಿಕ್ಕರೆ ಬೆಕ್ಕು ಆಗುವುದು ಹುಲಿ.
ಅಳೋ ... ಮೇಲೆ ಗಳು ಬಿತ್ತು
ಇಂದಿನ ಸೋಲು ನಾಳಿನ ಗೆಲುವು.
ಅಂಕೆ ಇಲ್ಲದ ಕಪಿ ಲಂಕೆ ಸುಟ್ಟಿತು
ಈರುಳ್ಳಿ, ಬೆಳ್ಳುಳ್ಳಿಯನ್ನು ತಿನ್ನು, ರೋಗವನ್ನು ದೂರವಿಡು.
ಅಂಕೆ ಇಲ್ಲದ ಚತುರೆ, ಲಗಾಮು ಇಲ್ಲದ ಕುದುರೆ
ಉಗಮವಾಗದಿರಲಿ ಹಿಂಸೆ, ಹೆಚ್ಚಿಗೆಯಾಗದಿರಲಿ ಆಸೆ.
ಅಂಕೆ ಇಲ್ಲದ ಚತುರೆ, ಲಗಾಮು ಇಲ್ಲದ ಕುದುರೆ
ಉಗುಳಿ ಉಗುಳಿ ರೋಗ, ಬೊಗಳಿ ಬೊಗಳಿ ರಾಗ.
ಅಂಕೆಯಲ್ಲಿದ್ದ ಹೆಣ್ಣು, ಮಜ್ಜಿಗೆಯಲ್ಲಿದ್ದ ಬೆಣ್ಣೆ ಕೆಡೊಲ್ಲ
ಉಣಬೇಕು- ಉಡಬೇಕು ಎಂಬೋದಾದ್ರೆ ಎಮ್ಮೆ ಕಟ್ಟಬೇಕು.
ಅಂಗಾಂಗದಲ್ಲಿ ಪಾಪ ಮಡಗಿಕೊಂಡು ಗಂಗೇಲಿ ಮಿಂದು ಬಂದ
ಉತ್ತಮವಾದ ನಗು ನೇಸರನ ಮಗು.
ಅಂಗೈ ತೋರಿಸಿ ಅವಲಕ್ಷಣ ಅಂತ ಅನ್ನಿಸಿಕೊಂಡರಂತೆ
ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ.
ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?
ಉದ್ದುದ್ದ ಮಾತಿನವರ ಮೊಳಕೈ ಮೊಂಡ.
ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?
ಉರುಳುವ ಕಲ್ಲಿಗೆ ಏನೂ ಅಂಟುವುದಿಲ್ಲ.
ಅಂಗೈ ಹುಣ್ಣಿಗೆ ಕನ್ನಡಿ ಬೇಕೇ?
ಉಳಿ ಸಣ್ಣದಾದರು ಕುಳಿ ತೋಡದೆ ಬಿಡಲಾರದು.
ಅಂಗೈ ಹುಣ್ಣಿಗೆ ಕನ್ನಡಿ ಯಾಕೆ
ಉಂಡಿದ್ದು ಹೊಟ್ಟೆಗಾಗಿ, ಮಾಡಿದ್ದು ಬಟ್ಟೆಗಾಗಿ.
ಅಂಜುತ್ತಾ ಅಳುಕುತ್ತಾ ತಿಂದ ಅಮೃತ ನಂಜು
ಊಟಕ್ಕೆ ಮೊದಲು ಉಪ್ಪಿನ ಕಾಯಿ, ಮಾತಿಗೆ ಮೊದಲು ಗಾದೆ.
ಅಂತೂ ಇಂತೂ ಕುಂತಿ ಮಕ್ಕಳಿಗೆ ರಾಜ್ಯವಿಲ್ಲ
ಊಟವಿಲ್ಲದ ಉಪದೇಶಿ ಊರಿಗೆಲ್ಲಾ ನಿವಾಸಿ.
ಅಂದು ಬಾ ಅಂದ್ರೆ ಮಿಂದು ಬಂದ
ಊಟವೆಂದರೆ ಊರು ಬಿಟ್ಟುಹೋದಂತೆ.
ಅಂದು ಬಾ ಅಂದ್ರೆ ಮಿಂದು ಬಂದ
ಊರಿಗೆ ದೊರೆ ಆದರೂ ತಾಯಿಗೆ ಮಗನೆ.
ಅಂಬಲಿ ಕುಡಿಯುವವನಿಗೆ, ಮೀಸೆ ಹಿಡಿಯುವವನೊಬ್ಬ
ಊರೆಲ್ಲ ದೋಚಿಕೊಂಡು ಹೋದಮೇಲೆ ದೊಡ್ಡಿ (ಕೋಟೆ) ಬಾಗಿಲು ಹಾಕಿದರಂತೆ.
ಅಂಬಲಿಗೆ ಗತಿಇಲ್ಲದವ ಕಟ್ಟಾಣಿ ರಂಬೆಯ ಬಯಸಿದ
ಎಚ್ಚರ ತಪ್ಪಿ ಮಾತನಾಡಬಾರದು, ಹುಚ್ಚನಂತೆ ವರ್ತಿಸಬಾರದು.
ಎಡಗಣ್ಣು ಹೊಡೆದರೆ ನಾರಿಗೆ ಶುಭ.
ಎಡವಿದ ಕಾಲೇ ಎಡವುದು ಹೆಚ್ಚು.
ಎಣ್ಣೆ ಚೆಲ್ಲಿದವನೂ ಅತ್ತ, ಕಾಯಿ ಚೆಲ್ಲಿದವನೂ ಅತ್ತ.
ಎಣ್ಣೆ ತಣ್ಣಗಾದರೆ ಬೆಣ್ಣೆಯ ಹಾಗೆ ಇದ್ದೀತೆ?
ಎಣ್ಣೆ ಬರುವಾಗ ಗಾಣ ಮುರೀತು.
ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡಂತೆ.
ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರಂತೆ.
ಎತ್ತು ಏರಿಗೆಳೀತು, ಕೋಣ ನೀರಿಗೆಳೀತು.
ಎರೆ-ತೆರೆ ಬಂಗಾರ, ಮರಳು ಬರೀ ಸಿಂಗಾರ!
ಎಲ್ಲ ಕೆಡುಕಿಗೂ ಮೂಲ ಹೊಟ್ಟೆಕಿಚ್ಚು.
ಎಲ್ಲ ಮುಗಿದ ಮೇಲೆ ತೀರ್ಥಯಾತ್ರೆಗೆ ಹೊರಟಂತೆ.
ಎಲ್ಲರಿಗೂ ಹಿಡಿಸುವ ಸಂಪ್ರದಾಯ ಯಾವುದೂ ಇಲ್ಲ.
ಏನಾದರೂ ಆಗು ಮೊದಲು ಮಾನವನಾಗು.
ಏನು ಬೇಡಿದರೊಬ್ಬ ದಾನಿಯನ್ನು ಬೇಡು, ದೀನನಾ ಬೇಡಿದರೆ ಆ ದೀನ ಏನು ಕೊಟ್ಟಾನು?
ಒಕ್ಕಣ್ಣ ತನಗೆ ಹತ್ತು ಕಣ್ಣು ಅಂತಿದ್ನಂತೆ.
ಒಗ್ಗಟ್ಟಿಲ್ಲದ ಊರಲ್ಲಿ ಒಪ್ಪತ್ತೂ ಇರಬೇಡ.
ಒಗ್ಗಿದರೆ ಮನೆಯಾದರೇನು, ಸ್ಮಶಾನವಾದರೇನು?
ಒಣ ಮಾತು ಒಣಗಿದ ಹುಲ್ಲು, ಒಳ್ಳೆಯ ಮಾತು ಬೆಳ್ಳಗಿನ ಹಾಲು.
ಒಬ್ಬನ ಗಡ್ಡಕ್ಕೆ ಬೆಂಕಿ ಹತ್ತಿದಾಗ, ಮತ್ತೊಬ್ಬ ಕೈ ಕಾಯಿಸಿದ.
ಒಲೆಯಮೇಲೆ ಇಟ್ಟಾಗ ಉಕ್ಕಿದಂತೆ ಹಾಲು, ಒಗ್ಗಟ್ಟಿಲ್ಲದ ಮನೆ ಬೀದಿಪಾಲು.
ಒಳಿತಾಗಿ ಮುಗಿದಿದ್ದೆಲ್ಲವೂ ಒಳ್ಳೆಯದೇ.
ಒಳ್ಳೆಯ ಕೆಲಸಕ್ಕೆ ವಿಘ್ನ ಹೆಚ್ಚು.
ಓಡಿದವನಿಗೆ ಓಣಿ ಕಾಣಲಿಲ್ಲ, ಹಾಡಿದವನಿಗೆ ಹಾದಿ ಕಾಣಲಿಲ್ಲ.
ಕಜ್ಜಿ ಕೆರೆದಷ್ಟು ಹಿತ, ಚಾಕೂ ಮಸೆದಷ್ಟೂ ಹರಿತ.
ಕಡಲೆಗೆ ಮುಂದು ಕಡಿವಾಣಕ್ಕೆ ಹಿಂದು.
ಕಡಲೆ ತಿಂದು ಕೈತೊಳೆದ ಹಾಗೆ.
ಕಣ್ಣಿಗೂ ಮೂಗಿಗೂ ಮೂರು ಗಾವುದ.
ಕಣ್ಣಿಗೆ ಕಂಡದ್ದೆಲ್ಲಾ ನುಣ್ಣಗಿರುವುದಿಲ್ಲ.
ಕತ್ತಿ ಬಂಗಾರದ್ದಾಗಿದೆಯೆಂದು ಕತ್ತು ಕೊಯ್ದುಕೊಳ್ಳಲು ಸಾಧ್ಯವೇ?
ಕತ್ತೆಗೆ ತಿಪ್ಪೆಯೇ ತವರುಮನೆ.
ಕತ್ತೆಗೆ ಯಾಕೆ ಹತ್ತಿಕಾಳು?
ಕತ್ತೆಯ ಹಿಂದೆ ಹೋಳಿಹುಣ್ಣಿಮೆಯಲ್ಲಿ ಮಾತ್ರ ಹೋಗು.
ಕತ್ತೆಯಾಗಬೇಡ ಕಾಗೆಯಾಗು.
ಕರೆದುಣ್ಣುವ ಕೆಚ್ಚಲನ್ನು ಕೊರೆದುಂಡ ಹಾಗೆ.
ಕರ್ಪೂರವ ತಿಪ್ಪೇಲಿಟ್ರೂ ತನ್ನ ಸುವಾಸನೆ ಬಿಡದು.
ಕಲಹವೇ ಕೇಡಿಗೆ ಮೂಲ.
ಕಲಿತವನಿಗಿಂತ ನುರಿತವನೇ ಮೇಲು.
ಕಲ್ಲಾದರು ಕರಗಬಹುದು, ಕಪಟಿಯ ಮನಸ್ಸು ಕರಗದು.
ಕಷ್ಟಗಳು ಹೇಳದೆ ಕೇಳದೆ ಬರೋ ನೆಂಟರ ಹಾಗೆ.
ಕಷ್ಟದಂತೆ ಫಲ, ಮನದಂತೆ ಮಹಾದೇವ.
ಕಸದಲ್ಲಿ ಮಲಗಿ ಅರಮನೆ ಕನಸು ಕಂಡಂತೆ.
ಕಹಿ ಪದಾರ್ಥ ತಿಂದು ಸಿಹಿ ಮಾತನಾಡು.
ಕಳೆದ ದಿನಗಳು ಬರೆದ ಪುಟಗಳಂತೆ.
ಕಳ್ಳ ಹೊಕ್ಕ ಮನೆಗೆ ಎಣ್ಣೆ ದಂಡ.
ಕಾಗೆಗೆ ಯಜಮಾನನ ಸ್ಥಾನ ಕೊಟ್ಟರೆ ಮನೆ ತುಂಬಾ ಪಿಷ್ಟ.
ಕಾಗೆಯ ಕೈಯಲ್ಲಿ ಕೊಟ್ಟರೆ ಕಾರಭಾರ, ಅದು ಮಾಡುವುದೇ ಉಪಕಾರ?
ಕಾಯಕವನ್ನು ಸದಾ ಮಾಡು, ಸೋಮಾರಿತನವನ್ನು ಬಿಡು.
ಕಾಲಿದ್ದವನಿಗೆ ಆಟ, ಕಣ್ಣಿದ್ದವನಿಗೆ ನೋಟ.
ಕಿಡಿ ಸಣ್ಣದಾದರೂ ಕಾಡೆಲ್ಲವನ್ನು ಸುಡುತ್ತದೆ.
ಕೀಟ ಸಣ್ಣದಾದರೂ ಕಾಟ ಬಹಳ.
ಕೀಳನ ಕೆಣಕಬೇಡ, ಮೇಗಾಲು ತುರಿಸಬೇಡ.
ಕುಡಿಗೆ ಕುಂಬಳಕಾಯಿ ಭಾರವೇ?
ಕುದುರೆ ಕುರುಡಾದರೂ ಕಡಿಮೆಯೇನೂ ತಿನ್ನುವುದಿಲ್ಲ!
ಕುರಿ ಹಿಂಡಲ್ಲಿ ತೋಳ ಹೊಕ್ಕಂತೆ.
ಕುಲ ಬಿಟ್ಟರೂ ಛಲ ಬಿಡಬೇಡ.
ಕುಂಬಾರನ ಮಗಳು ಲಾಭ ಬಂದ ಹೊರತು ಮಡಿಕೆ ಒಡೆಯುವುದಿಲ್ಲ.
ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ.
ಕೂಳಿಗೆ ಮೂಲ ಭೂಮಿಗೆ ಭಾರ.
ಕೃತಿ ಇಲ್ಲದ ಮಾತು ಕಸ ಬೆಳೆದ ತೋಟವಿದ್ದಂತೆ.
ಕೃತಿಯಿಲ್ಲದ ಮಾತು, ಕಸ ಬೆಳೆದ ತೋಟವಿದ್ದಂತೆ.
ಕೆಟ್ಟದಲ್ಲದ ಮೇಲೆ ಪಿಸುಗುಟ್ಟೋದು ಯಾಕೆ?
ಕೆಟ್ಟದ್ದನ್ನು ಬಯಸಬೇಡ, ಒಳ್ಳೆಯದನ್ನು ಬಿಡಬೇಡ.
ಕೆಡುವವರು ಮನೇಲಿದ್ರು ಕೆಡುತ್ತಾರೆ.
ಕೇಳುವವರ ಮುಂದೆ ಹೇಳುವವರು ದಡ್ಡರು.
ಕೈ ಕೆಸರಾದರೆ ಬಾಯಿ ಮೊಸರು.
ಕೊಟ್ಟು ಕೆಟ್ಟವರಿಲ್ಲ, ತಿಂದು ಬದುಕಿದವರಿಲ್ಲ.
ಕೋಟಿಗೆ ಒಬ್ಬ ಕುಬೇರ, ನೋಟಕ್ಕೆ ಒಬ್ಬ ಸುಂದರ.
ಕೋಣನಾಗಿರುವುದಕ್ಕಿಂತ ಜಾಣನಾಗಿರುವುದು ಲೇಸು.
ಕೋಣನಿಗೆ ಏನು ಗೊತ್ತು ಲತ್ತೆ ಪೆಟ್ಟು.
ಕೋಪ ಕೆಲಸ ಕೆಡಿಸುತ್ತೆ, ಶಾಂತಿ ಮುಂದೆ ನಡೆಸುತ್ತೆ.
ಕೋಳಿಯ ಕಾಲಿಗೆ ಗೆಜ್ಜೆ ಕಟ್ಟಿದರೆ ತಿಪ್ಪೆ ಕೆದರುವುದನ್ನು ಬಿಟ್ಟೀತೆ?
ಕಂಚು ಕಡೆಯಲ್ಲ, ಹಂಚು ದ್ರವ್ಯವಲ್ಲ.
ಖೀರು ಕುಡಿದವ ಓಡಿಹೋದ, ನೀರು ಕುಡಿದವ ಸಿಕ್ಕಿಬಿದ್ದ.
ಗಣೇಶನ್ನ ಮಾಡು ಅಂದ್ರೆ ಅವರ ಅಪ್ಪನ ಮಾಡಿದನಂತೆ.
ಗದ್ದೆ ಸುಟ್ಟರೂ ಹಾಳಾಗದು ಗಾದೆ.
ಗಿಡ ಮೂರು ಮೊಳ, ಕಾಯಿ ಆರು ಮೊಳ.
ಗಿಡವಾಗಿ ಬಗ್ಗದ್ದು, ಮರವಾಗಿ ಬಗ್ಗೀತೇ?
ಗುರಿಯಿಟ್ಟು ಗುಂಡು ಹಾಕು, ಸಮಯ ಸಾಧಿಸಿ ಬೇಟೆಯಾಡು.
ಗುರುಕೊಟ್ಟ ಜೋಳಿಗೆ ಅಂತ ಗೂಟಕ್ಕೆ ಹಾಕಿದರೆ ಊಟ ಹಾಕೀತೆ?
ಗುರುವಿಲ್ಲದೇ ಮಠವಿಲ್ಲ, ಹಿರಿಯರಿಲ್ಲದೆ ಮನೆಯಿಲ್ಲ.
ಗೆಳೆತನದಲ್ಲಿ ಮೋಸಮಾಡಬೇಡ.
ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ.
ಚರ್ಮ ಹೋದರೂ ಪರವಾಗಿಲ್ಲ, ಕಾಸು ಹೋಗಬಾರದು ಎಂದಂತೆ.
ಚಾತುರ್ಯ ಬಲ್ಲವನಿಗೆ ಚಾಚೂ ಚಿಂತಿಲ್ಲ.
ಚಿತ್ತಾ ಮಳೆ ವಿಚಿತ್ರ ಬೆಳೆ!
ಚಿನ್ನದ ಸೂಜಿ ಅಂತ ಕಣ್ಣು ಚುಚ್ಚಿಕೊಂಡಾರೆ?
ಚಿಂತೆ ಇಲ್ಲದವನಿಗೆ ಸನ್ತೇಲು ನಿದ್ದೆ.
ಚಿಂತೆ ಮಾಡಿದರೆ ಸಂತೆ ಸಾಗೀತೆ?
ಜಲ ಶೋಧಿಸಿ ನೀರು ತರ್ಬೇಕು, ಕುಲ ಶೋಧಿಸಿ ಹೆಣ್ಣು ತರ್ಬೇಕು.
ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು.
ಜಾಣನಿಗೆ ಮೂರು ದಾರಿ, ಕೋಣನಿಗೆ ಒಂದೇ ದಾರಿ.
ಜಾತಿ ಜಾತಿಗೆ ವೈರಿ, ನಾಯಿ ನಾಯಿಗೆ ವೈರಿ.
ಜಾತಿ ನೀತಿಯಿಲ್ಲ, ಮಾರಿಗೆ ಕರುಣೆ ಇಲ್ಲ.
ಜಾರುವುದು ತಪ್ಪಿದರೆ ಏರುವುದು ಸಾಧ್ಯ.
ಜ್ಞಾನಿ ಬಂದರೆ ಗೌರವಿಸು, ಹೀನ ಬಂದರೆ ತ್ಯಜಿಸು.
ಟೊಳ್ಳು ಮಾತು ಸುಳ್ಳಿಗಿಂತ ಕಡೆ.
ಟ್ಟಿನಿಂದಲೇ ವಕ್ರವಾದದ್ದು, ಪೋಷಣೆಯ ಮೂಲಕ ಸರಿಯಾದಂತೆ.
ಠಕ್ಕು ಇರುವವನಿಗೆ ಠಿಕಾಣಿ ಸಿಗದು.
ತತ್ವದಲ್ಲಿ ಸತ್ವ ಹುಡುಕು, ವ್ಯಥೆಯಲ್ಲಿ ಕಥೆ ಹುಡುಕು.
ತನ್ನ ಮೊಸರನ್ನು ಯಾರೂ ಹುಳಿ ಅನ್ನುವುದಿಲ್ಲ.
ತನ್ನ ಯಂತ್ರಕ್ಕೆ ಎಣ್ಣೆ ಹಾಕಲೂ ಆಗದವ ಇನ್ನೊಬ್ಬರಿಗೆ ಉಪದೇಶ ನೀಡಿದಂತೆ.
ತಾಯಿ ಬೇಕು ಇಲ್ಲವೇ ಬಾಯಿ ಬೇಕು.
ತಾಯಿಯನ್ನು ನಿಂದಿಸಬೇಡ, ಒಳ್ಳೆಯವರನ್ನು ಬಂಧಿಸಬೇಡ.
ತಾಯಿಯನ್ನು ಹೊಡೆಯಬಾರದು, ಗುಬ್ಬಿಯ ಗೂಡನ್ನು ತೆಗೆಯಬಾರದು.
ತಾಯಿಯ ಪ್ರೀತಿ ಸುಖವಾದದ್ದು, ತಂದೆಯ ಪ್ರೀತಿ ಮಧುರವಾದದ್ದು.
ತಿನ್ನಲು, ಉಣ್ಣಲು ಇದ್ದರೆ ಯಾವತ್ತೂ ನೆಂಟರು.
ತೀರ್ಥ ಎಂದು ಎಲ್ಲೆಲ್ಲೋ ನೀರು ಕುಡಿದಂತೆ!
ತುಪ್ಪ ತಿಂದ ಮಾತಿಗಷ್ಟು ತಪ್ಪು ಮಾತು ಬಂತು.
ತುಂಟ ಮಂಟಪಕ್ಕೋದರೂ ತುಂಟತನ ಬಿಡಲಿಲ್ಲ.
ತುಂಬಿದ ಕೊಡ ತುಳುಕುವುದಿಲ್ಲ.
ತೂಕ ಸರಿಯಿದ್ದರೆ ವ್ಯಾಪಾರ.
ತೆಂಗು ಬೆಳೆದವನಿಗೂ ಗಂಡು ಹೆಡೆದವಳಿಗೂ ಚಿಂತೆಯಿಲ್ಲ.
ತೇರಾದ ಮೇಲೆ ಜಾತ್ರೆ ಸೇರಿತು.
ತೋಟ ಮಾಡಿದವನಿಗೆ ಕೋಟಲೆಯಿಲ್ಲ.
ತಂದೆ, ತಾಯಿ ಸತ್ತರೂ ಸೋದರ ಮಾವ ಇರಬೇಕು.
ದಕ್ಷಿಣೆಗಾದರೆ ಮಾತು ಹಿಡಿದಾನು, ಮಂತ್ರಕ್ಕಾದರೆ ಬೆನ್ನು ತೋರ್ಸಿಯಾನು.
ದಡ್ಡನಿಗೆ ಹಗಲು ಕಳೆಯುವುದಿಲ್ಲ, ಒಳ್ಳೆಯವನಿಗೆ ರಾತ್ರಿ ಸಾಲುವುದಿಲ್ಲ.
ದಡ್ಡ ಮನುಷ್ಯ ನೆಲಕ್ಕೆ ಭಾರ, ಅನ್ನಕ್ಕೆ ಖಾರ.
ದಯವಿಲ್ಲದ ಧರ್ಮವಿಲ್ಲ.
ದರಿದ್ರ ಏಳಗೊಡುವುದಿಲ್ಲ, ಆಲಸ್ಯ ಉಣಗೊಡುವುದಿಲ್ಲ.
ದುಡಿಯೋ ತನಕ ಮಡದಿ.
ದುಡ್ಡನ್ನು ಕಾದಿಟ್ಟುಕೊಳ್ಳದವನು ಹಣವಂತನು ಹೇಗೆ ಆದಾನು?
ದುಡ್ಡಿಗಿಂತ ದೊಡ್ಡ ಹೆಸರೇ ಉತ್ತಮ.
ದುರುಳನಿಂದಲೇ ದುರುಳುತನ.
ದುಷ್ಟರ ಸಂಗದಿ ನೆರಳು ಕೊಯ್ಯದೆ ಬಿಡದು ಕೊರಳು.
ದೂರವಿದ್ದ ಮಗನಿಗೂ, ಹತ್ತಿರವಿದ್ದ ಮಗನಿಗೂ ಸರಿಬಾರದು.
ದೇವರನ್ನು ಬಯ್ಯುವವರು ಅರ್ಚಕನನ್ನು ಬಿಟ್ಟಾರೆ?
ದೇವರು ವರ ಕೊಟ್ಟರು ಪೂಜಾರಿ ಕೊಡೆಬೇಕಲ್ಲ.
ದೇಶ ತಿರುಗಬೇಕು, ಭಾಷೆ ಕಲಿಯಬೇಕು.
ದೇಹಕ್ಕೆ ಮುಪ್ಪಾದರೇನಾಯ್ತು, ಅಧ್ಯಯನಕ್ಕೆ ಮುಪ್ಪಿದೆಯೇ?
ದೈವ ಕಾಡುವುದು ವಿಧಿಗಾಗಿ, ನೀರು ಸಮುದ್ರ ಸೇರುವುದು ನದಿಗಾಗಿ.
ದೊಂಬರಾಟ ಆಡಬಹುದು ಮಕ್ಕಳಾಟ ಆಡೊಕ್ಕಾಗಲ್ಲ.
ಧೂಳಿ ಧೂಪವಾದೀತೆ, ಮಾಳಿಗೆ ಸ್ವರ್ಗವಾದೀತೆ?
ಧೈರ್ಯವಿದ್ದವನಿಗೆ ದೈವವೂ ಅನುಕೂಲ.
ನಗುವೇ ಆರೋಗ್ಯದ ಗುಟ್ಟು.
ನಡೆದಷ್ಟು ನೆಲ, ಪಡೆದಷ್ಟು ಫಲ.
ನನಗೆ ನಿನಗೆ ಹಿತ ಇಲ್ಲ, ನಿನ್ನ ಬಿಟ್ಟು ನನಗೆ ಗತಿ ಇಲ್ಲ ಎಂದಂತೆ.
ನಮ್ಮಬುದ್ಧಿ ಪರರ ಕೈಯಲ್ಲಿದ್ದಂತೆ.
ನರಗುಂದಕ್ಕೆ ಹೊದರೆ ಕುರು ತಪ್ಪೀತೆ?
ನಾಚಿಕೆ ಬಿಟ್ಟವ ಊರಿಗೇ ದೊಡ್ಡವ.
ನಾನು ಅಗೆಯುವಲ್ಲಿ ಕಲ್ಲು, ಅಜ್ಜ ಅಗೆಯುವಲ್ಲಿ ಮಣ್ಣು.
ನಾಮವಿದ್ದವನಿಗೆ ಕಾಮ ಕಡಿಮೆಯೇ?
ನಾಯಿನ ಕರೆದುಕೊಂಡು ಹೋಗಿ ಸಿಂಹಾಸಾನದ ಮೇಲೆ ಕೂರಿಸಿದ ಹಾಗಯ್ತು.
ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ತ?
ನಾಯಿಯು ನಮ್ಮನ್ನು ಕಚ್ಚಿದರೆ ನಾಯಿಯನ್ನು ಕಚ್ಚಲು ನಮ್ಮಿಂದ ಆಗುವುದೇ?
ನಾಲಿಗೆಯಿಂದ ಕೆಳಗೆ ಬಿದ್ದರೆ ನರಕ.
ನಾಳೆ ಎಂದವನಿಗೆ ಹಾಳು, ಇಂದೇ ಎಂದವನಿಗೆ ಬೀಳಾಗದು ಬಾಳು.
ನಿದ್ದೆಗೆ ಮದ್ದಿಲ್ಲ, ವಜ್ರಕ್ಕೆ ಬೆಲೆಯಿಲ್ಲ.
ನಿನ್ನದಲ್ಲ ಸರ್ವ ಆಸ್ತಿ, ಒಳ್ಳೆಯದಲ್ಲ ಗರ್ವ ಜಾಸ್ತಿ.
ನಿನ್ನಲ್ಲಿ ನೀ ಹುಡುಕು, ಅರಿಷಡ್ವರ್ಗಗಳ ಹೊರ ಹಾಕು.
ನಿನ್ನಲ್ಲಿರುವ ಮಾನ ನಿನಗೆ ಕೊಡುವುದು ಬಹುಮಾನ.
ನಿನ್ನಿಂದ ಆದ ಪಾಪ, ಅದೇ ನಿನಗೆ ಶಾಪ.
ನಿಂತ ನೀರಿನಲ್ಲಿ ಕ್ರಿಮಿ ಹುಟ್ಟುತ್ತವೆ, ಕೆಲಸವಿಲ್ಲದ ಮನುಷ್ಯನಲ್ಲಿ ಕೆಟ್ಟ ವಿಚಾರಗಳು ಜನಿಸುತ್ತವೆ.
ನೀನಾಗದೆ ರಣಹೇಡಿ, ಕೀರ್ತಿ ಪಡೆ ಪ್ರಾಣ ನೀಡಿ.
ನೀರುಗಣ್ಣಿನ ಹೆಂಗಸು ಊರು ಹಾಳು ಮಾಡಿದಳಂತೆ.
ನೂರಾರು ರೋಗಿಗಳನ್ನು ಕೊಂದು ಒಬ್ಬ ವೈದ್ಯ ಆದಂತೆ !
ನೂಲಿನಂತೆ ಸೀರೆ, ಬೀಜದಂತೆ ವೃಕ್ಷ.
ನೆಂಟರನ್ನು ಲಕ್ಷಿಸದಿರಲು, ಸ್ನೇಹಿತರನ್ನು ಅಲಕ್ಷಿಸದಿರು.
ನೆಂಟ್ರು ಮನೆಗೆ ಮೂಲ, ಕುಂಟೆತ್ತು ಹೊಲಕ್ಕೆ ಮೂಲ.
ನೇಯುವ ಕಾಲ ತಪ್ಪಿದರೂ, ಸಾಯುವ ಕಾಲ ತಪ್ಪದು.
ನೋಡಿ ನಡೆದವನಿಗೆ ಕೇಡಿಲ್ಲ.
ನೋಡಿ ನಡೆದವರಿಗೆ ಕೇಡಿಲ್ಲ.
ನೋಡಿ ನಡೆದಾಗ ಎಡವೋದು ತಪ್ಪುತ್ತೆ.
ಪಡಿತಿಂದು ಗುಡಿಯಲ್ಲಿ ಉರುಳಾಡಿದ.
ಪದವಿ ಬಂದ ಬಳಿಕ ಮದವೂ ಬರತಕ್ಕದ್ದೆ.
ಪದವೂ ಮುಗಿಯಿತು, ತಂತಿಯೂ ಹರಿಯಿತು.
ಪರಿಚಿತರ ಮರೆಯಬೇಡ, ಅಪರಿಚಿತರ ನಂಬಬೇಡ.
ಪರಿಸರ ಮಾಲಿನ್ಯ ವಿನಾಶಕ್ಕೆ ಕಾರಣ.
ಪಾದಕ್ಕೆ ತಕ್ಕಂತೆ ಚಪ್ಪಲಿ ತಗೊ, ಬಾಗಿಲಿನೆತ್ತರಕ್ಕೆ ತಕ್ಕಂತೆ ಬಗ್ಗಿ ನಡಿ.
ಪಾಪಕ್ಕೆ ಹೆದರು, ತಾಪಕ್ಕೆ ಹೆದರದಿರು.
ಪೀತಾಂಬರ ಉಟ್ಟರೂ ಕೊತ್ತಂಬರಿ ಮಾರೋದು ತಪ್ಪಲಿಲ್ಲ.
ಪುಷ್ಪ ಡೊಂಕಾದರೇನು, ಪರಿಮಳ ಡೊಂಕೇ?
ಪುಷ್ಪವಿಲ್ಲದ ಪೂಜೆ, ಅಶ್ವವಿಲ್ಲದ ಅರಸನಿಗೆ ಸಮ.
ಪೂರ್ವಾಷಾಢ-ಉತ್ತರಾಷಾಢ ಬೇಡವೇ ಬೇಡ.
ಪೇಚಾಟದಲ್ಲಿ ಬಿದ್ದವನಿಗೆ ಪೀಕಲಾಟವೇ ಗತಿ.
ಪಂಗಡವಾದವ ಸಂಗಡ ಬಂದಾನೆ?
ಪಂಜರದಲ್ಲಿ ಕಾಗೆ ಇಟ್ಟರೆ ಪಂಚಮ ಸ್ವರ ಕೊಟ್ಟೀತೆ?
ಪ್ರಯತ್ನಕ್ಕೆ ಪರಮೇಶ್ವರನೂ ಸಹಾಯ ಮಾಡುವನು.
ಪ್ರಾಮಾಣಿಕತೆಯಿಂದಲೇ ಪಾರಮಾರ್ಥ.
ಪ್ರೀತಿಗೊಂದು ಮುತ್ತು, ಹಸಿವಿಗೊಂದು ತುತ್ತು.
ಪ್ರೇಮಿಗಳಿಲ್ಲದ ನಾಡು ಬರೀ ಶೂನ್ಯದ ಬೀಡು.
ಬಕ್ಕಳ ಹೊನ್ನಿದ್ದರೆ ಊರೆಲ್ಲಾ ನೆಂಟರು.
ಬಡವರ ಕಣ್ಣೀರಿಗೆ ಕರುಣೆ ಬಂದೀತೆ ಬೆಣ್ಣೆಗೆ?
ಬರ ಬಂದಾಗ ಮಗ ಉಣ್ಣೊದು ಕಲಿತ.
ಬರಿಗೈಯವರ ಬಡಿವಾರ ಬಹಳ.
ಬಲ್ಲಿದವನಿಗೆ ಕಬ್ಬು.
ಬಸವನ ಹಿಂದೆ ಬಾಲ, ಲಗ್ನದ ಹಿಂದೆ ಸಾಲ.
ಬಾಡಿಗೆ ಎತ್ತು ಅಂತ ಹೊಡಿದು ಬಡಿಬಾರದು.
ಬಾಯಲೆಲ್ಲಾ ವೇದಾಂತ, ಮಾಡುವುದೆಲ್ಲಾ ರಾದ್ಧಾಂತ.
ಬಾಯಿ ಬಂಗಾರ, ಮನ ಅಂಗಾರ.
ಬಾಯಿಯಲ್ಲಿ ಬೆಲ್ಲ ಎದೆಯಲ್ಲಿ ನೀಚತನ.
ಬಾಯಿಯಿದ್ದ ಮಗ ಬದುಕುವನು.
ಬಾಲ್ಯವಿಲ್ಲದೆ ಯೌವ್ವನವಿಲ್ಲ, ಯೌವ್ವನವಿಲ್ಲದೆ ಮುಪ್ಪಿಲ್ಲ.
ಬಾವಿ ತೋಡದೆ ನೀರು ಸಿಗದು, ಪ್ರಯತ್ನ ಮಾಡದೆ ಫಲ ಸಿಗದು.
ಬಾವಿಯ ಬಾಯನ್ನು ಮುಚ್ಚಬಹುದು, ಜನಗಳ ಬಾಯನ್ನಲ್ಲ.
ಬಾಳುವ ಮನೆಗೊಂದು ಬೊಗಳುವನಾಯಿ. (ಅತ್ತೆ).
ಬಾಳೆಗೊಂದು ಗೊನೆ, ಬಾಳಿಗೊಂದು ಮಾತು.
ಬಾಳೆ ಬೆಳೆದವ ಬಾಳಿಯಾನು.
ಬಾಳೆಂಬ ಬಂಧನದಲ್ಲಿ ಈಜಬೇಕು, ಸಂಸಾರ ಎಂಬ ಸಾಗರದಲ್ಲಿ ತೇಲಬೇಕು.
ಬಿಡುಕು ಮಾತಿಗೆ ಮಾಡಿಕೊಳ್ಳದಿರು ಕೆಡುಕು.
ಬಿಸಿಯಾದರೆ ಮಾತ್ರ ಬೆಣ್ಣೆ ಕರಗುವುದು.
ಬೀಜದಂತೆ ವೃಕ್ಷ, ವೃಕ್ಷದಂತೆ ಬೀಜ.
ಬುದ್ಧಿ ಇದ್ದವನಲ್ಲಿ ಶ್ರದ್ಧೆ, ನಿದ್ದೆ ಬಾರದವನಲ್ಲಿ ವಿದ್ಯೆ.
ಬುದ್ಧಿಗಳ್ಳನಿಗೆಲ್ಲಿ ಸತ್ಯ, ಸದಾಚಾರ!
ಬುದ್ಧಿಯಿಲ್ಲದವನ ಐಶ್ವರ್ಯ, ಕಡಿವಾಣ ಇಲ್ಲದ ಕುದುರೆಯಂತೆ.
ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ.
ಬೆಕ್ಕು ಕಣ್ಮುಚ್ಚಿ ಹಾಳು ಕುಡಿದರೆ ಜಗತ್ತಿಗೆ ಗೊತ್ತಾಗಲ್ವಾ?
ಬೆಕ್ಕು ನಮ್ಮನೇದು, ಹಾಲು ಪಕ್ಕದ ಮನೇದು.
ಬೆಲ್ಲ ಇದ್ದಲ್ಲಿ ನೊಣ ತಿರುಗಾಡಿದಂತೆ.
ಬೆಲ್ಲವಿದ್ದಲ್ಲಿ ನೊಣ, ಕೆಂಡವಿದ್ದಲ್ಲಿ ಕಾವು.
ಬೆಳ್ಳಗಿರೋದೆಲ್ಲ ಹಾಲಲ್ಲ, ಹೊಳೆಯೋದೆಲ್ಲ ಚಿನ್ನ ಅಲ್ಲ.
ಬೇಕಾದ ಮಾತು, ಬೆಲ್ಲಕ್ಕಿಂತ ಸವಿ.
ಬೇಸರವಿರಬಾರದು, ಅವಸರ ಮಾಡಬಾರದು.
ಬ್ಬರ ಕೂಳು ಇನ್ನೊಬ್ಬರ ಕುತ್ತು.
ಭರಣಿ ಮಳೆ ಧರಣಿ ಬೆಳೆ.
ಭಾರವಾದ ಪಾಪಕ್ಕೆ ಘೋರವಾದ ನರಕ.
ಭಾವಿಸಿದರೆ ಬಳಗ, ಕೂಡಿಸಿದರೆ ಕಾಸು.
ಭಾಷೆ ಕೊಟ್ಟವನು ಪೋಷಣೆ ಮಾಡನೇ?
ಭಾಷೆ ತಿಳಿಯದಿದ್ದರೂ ಹಾಸ್ಯಕ್ಕೆ ಕಡಿಮೆಯಿಲ್ಲ.
ಭಿಕಾರಿಯಾದವ ಕಾಶಿಗೆ ಹೋದರೂ, ಭಿಕ್ಷಾನ್ನವಲ್ಲದೆ ಪಕ್ವಾನ್ನ ಉಂಡಾನೇ?
ಭೂಮಿಯಿಂದ ಆಕಾಶಕ್ಕೆ ಏಣಿಯನ್ನು ಇಟ್ಟ.
ಮಕ್ಕಳ ಬಾಯಿಗೆ ಹಣ್ಣು ಕೊಟ್ಟು ಮಣ್ಣು ಬಿಡಿಸು.
ಮಗ ಸಣ್ಣವನಾದರೂ, ಮಾತು ಸಣ್ಣದಲ್ಲ.
ಮಣದಷ್ಟು ಮಾತಿಗಿಂತ ಕಣದಷ್ಟು ಕೆಲಸ ಲೇಸು.
ಮದುವೆ ಸಾಲ ಮಸಣಾದವರೆಗೂ.
ಮದುವೆ ಸಂಭ್ರಮದಲ್ಲಿ ತಾಳಿ ಕಟ್ಟುವುದನ್ನೇ ಮರೆತಂತೆ.
ಮಧ್ಯಾಹ್ನದ ಊಟವಾದಮೇಲೆ ಮುಳ್ಳಿನ ಮೇಲಾದರೂ ಮಲಗು, ರಾತ್ರಿ ಊಟವಾದ ಮೇಲೆ ಅರ್ಧ ಮೈಲಿ ನಡೆ.
ಮನಸಿದ್ದರೆ ಮಾರ್ಗ.
ಮನಸ್ಸನ್ನು ನಿಯಂತ್ರಿಸಿ ಜೀವನ ಸಾಗಿಸಿ.
ಮನಸ್ಸು ಇಲ್ಲದಿದ್ದರೆ ಗಟ್ಟಿ, ಎಲ್ಲವೂ ಮೂರಾಬಟ್ಟಿ.
ಮನುಜನಾಗಿ ಹುಟ್ಟಿ ಪಶುವಿನಂತೆ ಬದುಕಿದಂತೆ!
ಮನೆ ಗೆದ್ದು ಮಾರು ಗೆಲ್ಲು.
ಮನೆಗೆ ಮಾರಿ, ಊರಿಗೆ ಉಪಕಾರಿ.
ಮನೆ ಬೆಳಗಲಿ ದೀಪ ಬೇಕು, ಮಾನವ ಬೆಳಗಲು ಅಕ್ಷರ ಬೇಕು.
ಮನೆ ಮಕ್ಕಳು ಮಾಣಿಕ್ಯ, ನೆರೆಮನೆ ಮಕ್ಕಳು ಕಸಿವಿಸಿ.
ಮನೆ, ಮನ ಓಡೆದರೆ ಅಂಟಿಸಲಾಗದ ಕನ್ನಡಿಯಂತೆ.
ಮನೆಯ ಕಷ್ಟಕ್ಕೆ ನೆರೆಮನೆಯವರು ಹೊಣೆ ಏನು?
ಮನೆಯ ಬಾಗಿಲಿಗೆ ಬೀಗ ಹಾಕಿಕೋ, ಮನದ ಬಾಗಿಲನ್ನು ತೆರೆದಿಡು.
ಮನೆಯಲ್ಲಿ ರಾಮಣ್ಣನಂತೆ, ಬೀದಿಯಲ್ಲಿ ಕಾಮಣ್ಣನಂತೆ.
ಮನೆಯೆಂಬ ಮರ ಮುರಿಯಬಾರದು, ಮನಸ್ಸೆಂಬ ಮಾರ್ಗ ಕತ್ತರಿಸಬಾರದು.
ಮನೆಯೊಡತಿ ಮುಖದ ಮೇಲೆ ಉಗುಳಿದರೂ ಹೊರಗೆ ಬಂದು ನಾನು ಬೆವತಿದ್ದೇನೆ ಅಂದಂತೆ!
ಮನೇಲಿ ಕತ್ತಲೆ, ಪರರಿಗೆ ದೀಪ ದಾನ ಮಾಡಿದ.
ಮಮತೆಯ ಮಡಿಲಲ್ಲಿ ತೂಗಬೇಕು, ಮನಸ್ಸೆಂಬ ಬಂಧನದಲ್ಲಿ ಬೀಳಬೇಕು.
ಮರ ನೆಟ್ಟು ಪಾಪವನ್ನು ಕಳೆದುಕೋ.
ಮರಿ ಮಾಡುವ ಮೊದಲೇ ಮೊಟ್ಟೆಗಳನ್ನು ಎಣಿಸಬೇಡ.
ಮಳೆ ನೀರನ್ನು ಬಿಟ್ಟು ಮಂಜಿನ ನೀರಿಗೆ ಕೈಯೊಡ್ಡಿದ ಹಾಗೆ.
ಮಾಟ ಮಾಡಿದೋನ ಮನೆ ಹಾಳು.
ಮಾಡಿ ಉಣ್ಣು ಬೇಡಿದಷ್ಟು, ತಗಾದೆ ಮಾಡದೇ ಉಣ್ಣು ನೀಡಿದಷ್ಟು.
ಮಾಡಿದ ರಾಗಿ ಕೊಟ್ರೂ ಮೂರ್ಖನ ಸಹವಾಸ ಬೇಡವೆಂದಂತೆ.
ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ.
ಮಾತಿಗೆ ನೆಲೆಯಿಲ್ಲ, ಪ್ರೇಮಕ್ಕೆ ಬೆಲೆಯಿಲ್ಲ.
ಮಾತಿಗೆ ಸಿಕ್ಕಿದರೆ ಮಳೆಗೆ ಸಿಕ್ಕಂತೆ.
ಮಾತು ಅಂಗಾರ ಮೌನ ಬಂಗಾರ
ಮಾತು ಆಡಿದರೆ ಮುತ್ತಿನ ಹಾರದಂತಿರಬೇಕು.
ಮಾತು ಚಿಕ್ಕದಾಗಿರಲಿ, ಕೆಲಸ ಚೊಕ್ಕವಾಗಿರಲಿ.
ಮಾತು ಬೆಳ್ಳಿ, ಮೌನ ಬಂಗಾರ.
ಮಾತು ಮನೆ ಮುರಿತು, ತೂತು ಓಲೆ ಕೆಡಿಸಿತು.
ಮಾತು ಮೊಳದುದ್ದ, ಕೆಲಸ ಕಿರುಬೆರಳುದ್ದ.
ಮಾನವನಾದ ಮೇಲೆ ಮೂರು ಆಕ್ಷರ ಮೊದಲು ಕಲಿ.
ಮಾನ ಹೋದ ಮೇಲೆ ಮರಣ ಬಂದ ಹಾಗೆ.
ಮಾವನು ಇಲ್ಲದ ಮನೆಯೇಕೆ, ಹೆಂಡತಿಯಿಲ್ಲದ ಒಡವೆಯೇಕೆ?
ಮುಖಕ್ಕೆ ಮೂಗು ಚೆಂದ, ಮೂಗಿಗೆ ಮೇಲೆರಡು ಕಣ್ಣು ಚೆಂದ.
ಮುಖ ನೋಡಿ ಮನ ತಿಳಿ.
ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು.
ಮುಳ್ಳು ಬಿತ್ತಿದವನಿಗೆ ನೀನು ಹೂಬಿತ್ತು.
ಮೂಕವೇದನೆಯು ಸತ್ಯಕ್ಕಿಂತ ಮೇಲು.
ಮೂರು ಕಾಸಿನ ಮಾಂಸವಿಲ್ಲದಿದ್ದರೂ, ಮಾತು ಮಾತ್ರ ಜೋರು.
ಮೂರು ವರ್ಷದ ಬುದ್ಧಿ ನೂರು ವರುಷದ ತನಕ.
ಮೃತ್ಯು ಬಂದ ಮೇಲೆ ವೈದ್ಯ ಬಂದ.
ಮೆತ್ತಗಿದ್ರೆ ತುಳೀತಾರೆ, ಜೋರಾಗಿದ್ರೆ ಹೆದ್ರತಾರೆ.
ಮೈತುಂಬ ಕಣ್ಣಿರಲಿ, ಕೈಯಲ್ಲಿ ಪೆನ್ನಿರಲಿ.
ಮೊದಲು ಕಣ್ಣು ಬಿಡು, ನಂತರ ಕೈ ಮಾಡು.
ಮೊಸರು ಇಟ್ಟುಕೊಂಡು ಮಜ್ಜಿಗೆಗೆ ಅತ್ತಹಾಗೆ.
ಮಂಗ ಮೊಸರು ತಿಂದು ಮೇಕೆ ಬಾಯಿಗೆ ಸವರಿದ ಹಾಗಾಯಿತು.
ಮಂತ್ರಕ್ಕಿಂತ ಉಗುಳೇ ಹೆಚ್ಚು.
ಮಂತ್ರ ಸ್ವಲ್ಪ, ಉಗುಳೇ ಬಹಳ.
ಯಾದವೇಂದ್ರ ದನ ಕಾದ, ರಾಘವೇಂದ್ರ ರಾಜ್ಯವಾಳಿದ.
ರಸ್ತೇಲಿ ಕುತ್ಕೊಂಡು ಗಳಗಳನೆ ಅತ್ತರೆ ಹೋದ ಪ್ರಾಯ ಬಂದೀತೆ?
ರಾವಣನ ಮಾತಿಗೆ ಮನಸೋತವ, ರಾಮನ ಮಾತಿಗೆ ಜಾಣನಾಗುವನೇ?
ರೈತನ ಮುಗ್ಗು ನಾಡಿನ ಕುಗ್ಗು.
ರೊಕ್ಕ ಕೊಟ್ಟು ರಟ್ಟೆ ಮುರಿಸಿಕೊಂಡಂತೆ.
ರೋಹಿಣಿ ಮಳೆ ಓಣಿಯೆಲ್ಲಾ ಕೆಸರು.
ಲಾಭ ನೋಡಿ ಬಾಳೆ ಹಣ್ಣು ತಿಂದಂತೆ.
ಲೆಕ್ಕಕ್ಕಿಂತ ಹೆಚ್ಚು ಹೊರಬಾರದು, ಲೆಕ್ಕಕ್ಕಿಂತ ಹೆಚ್ಚು ದೂರೆಬಾರದು.
ಲೋಕ ತಿಳೀಬೇಕು ಲೆಕ್ಕ ಕಲೀಬೇಕು.
ವಯಸ್ಸಿಗೆ ತಕ್ಕ ಬುದ್ಧಿ ಕಲಿ.
ವಿದ್ಯಾವಂತನಾದರೆ ಜಗತ್ತಿನ ಆಡಳಿತವನ್ನೇ ನಡೆಸಬಹುದು.
ವಿನಯದಿಂದ ವಿಶ್ವವನ್ನು ಗೆಲ್ಲು, ಪರನಿಂದೆ ಮಹಾಪಾಪ.
ವಿವಿಧ ರೋಗಗಳಿಗೆ ಮದ್ದಿವೆ, ಹೊಟ್ಟೆ ಉರಿಗೆ ಮದ್ದಿಲ್ಲ.
ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.
ವಿಶ್ವಾಸಿ ನೀನಾಗು, ಘಾತುಕಕ್ಕೆ ಬಗ್ಗದೆ ಮುನ್ನುಗ್ಗು.
ವೇದ ಸುಳ್ಳಾದರು ಗಾದೆ ಸುಳ್ಳಾಗದು.
ವೇದ ಸುಳ್ಳು ಆದರು ಗಾದೆ ಸುಳ್ಳಾಗದು.
ವೈಕುಂಠಕ್ಕೆ ಹೋಗಲಿಕ್ಕೆ ಕುಂಟು ದಾಸಯ್ಯನ ಮಧ್ಯಸ್ತಿಕೆಯೇ?
ವೈರತ್ವ ನಾಶಕ್ಕೆ ವಾತ್ಸಲ್ಯವೇ ಮದ್ದು.
ಶರಣು ಆದವನಿಗೆ ಮರಣವಿಲ್ಲ.
ಶರೀರಕ್ಕೆ ಸುಖ, ಹೊಟ್ಟೆಗೆ ದುಃಖ.
ಶಸ್ತ್ರದಿಂದಾದ ಗಾಯ ಮಾಯುತ್ತದೆ, ನಾಲಿಗೆಯಿಂದಾದ ಗಾಯ ಮಾಯುವುದಿಲ್ಲ.
ಶ್ರೀಮಂತನ ಮನೆ ಸೀಮಂತಕ್ಕೆ ಬಡವ ಬಡಬಡಿಸಿದ ಹಾಗೆ.
ಸಜ್ಜನರ ಮಾತು ಸಿಹಿ, ದುರ್ಜನರ ತುತ್ತು ಕಹಿ.
ಸಣ್ಣದಿರುವಾಗ ಕತ್ತೆಯೂ ಬಹಳ ಸುಂದರ.
ಸತ್ತವರಿಗೆ ಸಂಗವಿಲ್ಲ, ಕೆಟ್ಟವರಿಗೆ ನೆಂಟರಿಲ್ಲ.
ಸದಾಚಾರಣೆಯ ಉದಾಹರಣೆಯೇ ಉತ್ತಮವಾದ ಉಪದೇಶ.
ಸಮಯಕ್ಕೆ ಬಾರದ ಬುದ್ಧಿ, ಸಾವಿರ ಇದ್ದರು ಲದ್ದಿ,
ಸಲುಗೆ ಕೊಟ್ಟರೆ ಸಾಕೂ ಹೆಗ್ಗಣವೂ ಸಹ ಏರುವುದು ಹೆಗಲಿಗೆ.
ಸಾಲಗಾರನ ಹೆಂಡತಿ ಶೋಕಿಮಾಡಿದರೇನು?
ಸಾಲ್ಗಾರ ಸುಮ್ಮನಿದ್ರು ಸಾಕ್ಷಿಗಾರ ಸುಮ್ಮನಿರ.
ಸಾವಿಲ್ಲದ ಮನೆಯಿಲ್ಲ, ಸೋಲಿಲ್ಲದ ಮನುಷ್ಯನಿಲ್ಲ.
ಸೀರಿಗೇಡಿಗೆ ಸೀರೆ ಉಡಿಸಿದರೆ ಕೆರಿ ದಂಡಿ ಮ್ಯಾಗ ನಿಂತು ಕೇಕೆ ಹಾಕಿದಳು.
ಸುಡುಗಾಡಿನಲ್ಲಿ ಕುಳಿತು ಸುಖ ಬಯಸಿದಂತೆ.
ಸುಣ್ಣ ತಿಂದ ಮಂಗ ಹಲ್ಲು ಕಿಸಿದಂತೆ.
ಸುಳ್ಳು ಹೇಳುವುದಕ್ಕಿಂತ ಸುಮ್ಮನಿರುವುದು ಲೇಸು.
ಸೆಗಣಿ ಮೇಲೆ ಕಲ್ಲು ಹಾಕಿ, ಮುಖಕ್ಕೆ ಸಿಡಿಸಿಕೊಂಡಂತೆ.
ಸೊಸೆ ಸತ್ತರೆ ಸೊಬಾನ ಮಗ ಸತ್ತರೆ ಮನೆ ಹಾಳು.
ಸೋಲಿಲ್ಲದ ಸರದಾರನಿಲ್ಲ, ಸಂಗಮವಿಲ್ಲದ ಸಾವಿಲ್ಲ.
ಸಂಕೋಚ ಮಾಡಿದರೆ ಸಂಕಪಾಷಾಣವೂ ಸಿಗದು.
ಸಂತೋಷವೇ ಯೌವನ, ಚಿಂತೆಯೇ ಮುಪ್ಪು.
ಸಂಸಾರದಲ್ಲಿ ಸುಖವಿದೆ, ಬಾಳೆಂಬ ಬಂಧನದಲ್ಲಿ ಕಷ್ಟವಿದೆ.
ಸ್ನೇಹ ಎಂಬ ಸಂಪಿಗೆ ಸುಮಧುರವಾದದ್ದು.
ಸ್ವರ್ಗದಲ್ಲಿ ಸೇವೆಗೈಯುವುದಕ್ಕಿಂತ ನರಕದಲ್ಲಿ ಆಳುವುದೇ ಲೇಸು.
ಸ್ವಾತಿ ಮಳೆ ಬಿದ್ರೆ ಮುತ್ತಿನಂಥ ಜೋಳ.
ಸ್ವಾತಿ ಮಳೆ ಮುತ್ತಿನ ಬೆಳೆ.
ಸ್ವಾರ್ಥ ಉಳಿಸಿದವ ಪಾಪಾತ್ಮ, ನಿಸ್ವಾರ್ಥ ಗಳಿಸಿದವ ಪುಣ್ಯಾತ್ಮ.
ಹಟ್ಟಿ ತುಂಬಾ ಹಸು, ಹಾಲು ಮಾತ್ರ ತುಸು.
ಹಡಗಿನ ವ್ಯಾಪರ, ಉಪ್ಪಿಗೆ ಬಡತನ.
ಹಣದಲ್ಲಿ ಬಡವನಾದರೂ ಬುದ್ಧಿಯಲ್ಲಿ ಬಡವನಾಗಬಾರದು.
ಹಣವಿಲ್ಲದ ಮನುಷ್ಯ, ರೆಕ್ಕೆ ಇಲ್ಲದ ಪಕ್ಷಿಯಂತೆ.
ಹಣ ಹಾದರ ಬಿತ್ತು ಹೊನ್ನು ತೊನ್ನು ಮುತ್ತು.
ಹತ್ತು ಕಟ್ಟೋ ಕಡೆ ಒಂದು ಮುತ್ತು ಕಟ್ಟು.
ಹತ್ತು ಜನರ ಹುಲ್ಲು ಕಡ್ಡಿ ಒಬ್ಬನಿಗೆ ತಲೆ ಹೊರೆ.
ಹತ್ತು ಮಕ್ಕಳ ತಾಯಿ ದಾರಿಯಲ್ಲಿ ಸಿಕ್ಕಿದ್ದನ್ನು ತಿಂದಂತೆ.
ಹತ್ತೋಕ್ ಮೊದ್ಲು ಕುದರೆ ನೋಡು, ಬಿತ್ತೊಕ್ ಮೊದ್ಲು ಹೊಲ ನೋಡು.
ಹನಿ ಹನಿ ಸೇರಿದರೆ ಹಳ್ಳ, ತೆನೆ ತೆನೆ ಸೇರಿದರೆ ಬಳ್ಳ.
ಹನುಮಂತಾನೆ ಬಾಲ ಕಡಿತಿರುವಾಗ, ಇವನ್ಯಾವನೋ ಶಾವಿಗೆ ಕೇಳಿದನಂತೆ.
ಹರಿದಿದ್ದೇ ಹಳ್ಳ, ನಿಂತಿದ್ದೇ ತೀರ್ಥ.
ಹಲ್ಲಿರುವ ತನಕ ಊಟ ಕಣ್ಣಿರುವ ತನಕ ನೋಟ.
ಹಲ್ಲಿಲ್ಲದಿದ್ದರೂ ಚಕ್ಕುಲಿ ತಿನ್ನೋ ಚಪಲ.
ಹಲ್ಲಿ ಶಕುನ ಕೇಳಿ ಕಲ್ಲಿಂದ ಹೊಡೆಸಿಕೊಂಡಂತೆ.
ಹಸಿದವನಿಗೆ ಹಳಸಿದ್ದೇ ಪಾವನ.
ಹಸಿದವರ ಮುಂದೆ ಭಾಷಣ ಮಾಡಿದ ಹಾಗೆ.
ಹಸ್ತ ಇಲ್ದಿದ್ರೆ ಒಕ್ಕಲಿಗ ಹಲ್ಲು ಕಿಸ್ದ.
ಹಳೆಯ ಕೋಟು ಧರಿಸಿ, ಹೊಸ ಪುಸ್ತಕ ಕೊಳ್ಳಿ.
ಹಳೇ ಚಪ್ಪಲಿ ಆದ್ರೂ ಪರವಾಗಿಲ್ಲ, ಬರಿಗಾಲಲ್ಲಿ ನಡೀಬೇಡ.
ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಹೇಳಿದ ಹಾಗೆ.
ಹಾರುವನ ತೊತ್ತಾಗಬೇಡ ಗಾಣಿಗನ ಎತ್ತಾಗಬೇಡ.
ಹಾಲಿಗೆ ಹುಳಿ ಹಿಂಡಿದರೆ ಮೊಸರು, ಮಣ್ಣಿಗೆ ನೀರು ಹಾಕಿದರೆ ಕೆಸರು.
ಹಾಲು ಕುಡಿದು ಹಾಗಲಕಾಯಿ ತಿಂದಂತೆ.
ಹಿಡಿ ತುಂಬ ಹಣವಿದ್ದರು ಗುಡಿ ಚೆನ್ನಾಗಿರಬೇಕು.
ಹಿಮಾಲಯದಲ್ಲಿ ಹಿಮ ಹೆಚ್ಚಂತೆ, ವೀರಭದ್ರನಲ್ಲಿ ಅವತಾರ ಹೆಚ್ಚಂತೆ.
ಹಿರಿಯರ ಮಾತಿಗೆ ಕಿವಿಗೊಡು, ಚುಚ್ಚುಮಾತಿಗೆ ಬೆನ್ನು ಕೊಡು.
ಹಿರಿಯರಿಗೆ ಶಿರಬಾಗು, ಗುರುವಿಗೆ ತಲೆಬಾಗು.
ಹುಚ್ಚರ ಮದುವೆಯಲ್ಲಿ ಉನ್ಡೋನೆ ಜಾಣ.
ಹುಟ್ಟಿದ ಮಗು ತರುವುದು ತೊಟ್ಟಲಿಗೆ ನಗು.
ಹುಣಸೆ ಹುಳಿಯೆಂದು ಅಂಬಡೆ ತಿಂದ ಹಾಗೆ.
ಹುಲಿಗಲ್ಲ, ಸಿಂಹಕ್ಕಲ್ಲ, ಮನೆಯ ಹೆಂಡತಿಯ ನೆರಳಿಗಂಜಿದ.
ಹುಲಿಯ ಬಣ್ಣವನ್ನು ಮೆಚ್ಚಿ, ನರಿ ತನ್ನ ಕೂದಲನ್ನು ಭಸ್ಮ ಮಾಡಿಕೊಂಡಂತೆ.
ಹುಲಿ ಹಸಿದಾಗ ಹುಲ್ಲು ತಿಂದೀತೆ?
ಹೂಡಿದರೆ ಒಲೆ, ಮಡಿದರೆ ಮನೆ.
ಹೆಣ್ಣಿಗೆ ಹಟವಿರಬಾರದು, ಗಂಡಿಗೆ ಚಟವಿರಬಾರದು.
ಹೆಣ್ಮಕ್ಕಳಿಗೆ ತಾಯಿ ಶಿಕ್ಷೆ,, ಗಂಡ್ಮಕ್ಕಳ್ಳಿಗೆ ತಂದೆ ಶಿಕ್ಷೆ.
ಹೆತ್ತವರಿಗೆ ಹೆಗ್ಗಣ ಮುದ್ದು.
ಹೆಸರು ಸಂಪತ್ತು, ಕೂಳಿಗಿಲ್ಲ ಒಪ್ಪತ್ತು.
ಹೆಂಡತಿ ಮುಂದಿರಬೇಕು, ಮಗ ಹಿಂದಿರಬೇಕು.
ಹೆಂಡತಿಯ ಮಾತು ಆಗದಿರಲಿ ಕೊಯ್ದುಕೊಳ್ಳುವಂತೆ ಕತ್ತು.
ಹೊಟ್ಟೆ ತುಂಬಿದ ಮೇಲೆ ಕಜ್ಜಾಯವೂ ವಿಷ
ಹೊರಗೆ ಝಗ ಝಗ, ಒಳಗೆ ಭಗ ಭಗ.
ಹೊಸ ಮಂಜು ಹಳೆಯದನ್ನು ಕೊಚ್ಚದಿದ್ದೀತೆ.
ಹೊಳೆಗೆ ಸುರಿದರೂ ಅಳೆದು ಸುರಿ ಎಂದಂತೆ.
ಹೊಳೆಯುವುದೆಲ್ಲಾ ಚಿನ್ನವಲ್ಲ.
ಹೋಗುವುದು ಮೂಡಿದ ಹೊತ್ತು, ಹೋಗೋದಿಲ್ಲ ಆಡಿದ ಮಾತು.
ಹಂಪಿಗೆ ಹೋಗುವುದಕ್ಕಿಂತ ಕೊಂಪೆಯಲ್ಲಿರುವುದೇ ಲೇಸು.
ಆಕಳ ಹೊಟ್ಟೆಯಲ್ಲಿ ಅಚ್ಚೇರು ಬ೦ಗಾರ.
ಆಕಳಿದ್ದವನಿಗೆ ವ್ಯಾಕುಲವಿಲ್ಲ.
"https://kn.wikiquote.org/wiki/ಗಾದೆಗಳು" ಇಂದ ಪಡೆಯಲ್ಪಟ್ಟಿದೆ